Connect with us

Hassan

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಎರಿಕೆ ಖಂಡಿಸಿ ಬಿಜೆಪಿಯಿಂದ ಜೂನ್ 17 ರಂದು ಉಗ್ರ ಹೋರಾಟ ಬಿ.ವೈ. ವಿಜಯೇಂದ್ರ ಹೇಳಿಕೆ

Published

on

ಹಾಸನ : ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಎರಿಕೆ ಜೊತೆಗೆ ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಜನರ ಮೇಲೆ ಬರೆ ಎಳೆಯಲು ಹೊರಟಿರುವ ರಾಜ್ಯ ಸರಕಾರದ ವಿರುದ್ಧ ನಾವು ಸೋಮವಾರದಿಂದಲೇ ಜಿಲ್ಲಾ ಮಟ್ಟದಲ್ಲಿ ಉಗ್ರವಾದ ಹೋರಾಟ ನಡೆಸಿ ನಂತರ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಸಭೆ ಮಾಡಿ ನಿರ್ಧರಿಸಲಾಗುವುದು ಎಂದು ಹಾಸನದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ನಗರದ ರಿಂಗ್ ರಸ್ತೆ ಬಳಿ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷ ಹತಾಷವಾಗಿ ಸರ್ಕಾರ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದೆ. ನೆನ್ನೆ ಯಾರೂ ಕೂಡ ಊಹಿಸದ ರೀತಿಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನರ ಮೇಲೆ ಬರೆ ಎಳೆಯೊ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಜನರು ಶಾಪಹಾಕುತ್ತಿದ್ದಾರೆ. ಬರಗಾಲದ ಬೇಗೆಯಿಂದ ಇನ್ನೂ ಹೊರ ಬರಲು ಸಾದ್ಯವಾಗಿಲ್ಲ. ಈಗ ಪೆಟ್ರೋಲ್ ಡೀಸೆಲ್ ದರ ಹೆಚ್ಚು ಮಾಡಿದಾರೆ. ಇದರಿಂದ ಸಾಗಣೆ ವೆಚ್ಚ ಜಾಸ್ತಿ ಆಗುತ್ತೆ, ತರಕಾರಿ ಬೆಲೆ ಜಾಸ್ತಿ ಆಗುತ್ತದೆ. ರೈತರಿಗೂ ಅನಾನುಕೂಲ ಆಗಲಿದೆ. ರೈತರ ಪಂಪ್ ಸೆಟ್ ಟ್ರ್ಯಾಕ್ಟರ್ ಬಳಸೋರಿಗೆ ಹೊರೆಯಾಗಲಿದೆ. ಬೆಲೆ ಏರಿಕೆಯಿಂದ ಪ್ರತಿಯೊಬ್ಬರಿಗು ಹೊರೆ ಆಗುತ್ತೆ ಎಂದು ಆಕ್ರೋಶವ್ಯಕ್ತಪಡಿಸಿದರು. ಈ ರೀತಿಯಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿತನದಿಂದ ನಡೆದುಕೊರ್ಳಳುತಿರುವುದರಿಂದ ಈ ಬಗ್ಗೆ ಖಂಡಿಸಲು ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ಜೂನ್ ೧೭ ರಂದು ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡುತ್ತೇವೆ. ಮತ್ತೆ ಏನು ಮಾಡಬೇಕೆಂದು ನಾಳೆ ಚರ್ಚೆ ಮಾಡಿ ತೀರ್ಮಾನ ಮಾಡ್ತೇವೆ.

ನಿಮ್ಮ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸಾದ್ಯವಾಗದೆ ಇಂತಹ ತೀರ್ಮಾನ ಮಾಡಿದ್ರೆ ಎಲ್ಲ ವರ್ಗದ ಜನರಿಗೆ ಅನಾನುಕೂಲ ಆಗಲಿದೆ. ಈಗಲು ಕಾಲ ಮಿಂಚಿಲ್ಲ. ಪೆಟ್ರೋಲ್ ಮೇಲೆ ೩ ರೂ ಡೀಸಲ್ ಮೇಲೆ ೩.೫ ರೂ ಜಾಸ್ತಿ ಮಾಡಿದಿರಿ ಕೂಡಲೆ ಇದನ್ನ ಹಿಂಪಡೆಯಿರಿ ಎಂದು ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇವೆ. ಇಷ್ಟೆಲ್ಲಾ ಬೆಲೆ ಏರಿಕೆ ಮಾಡಿದರೂ ಸಿಎಂ ಅವರು ತಮ್ಮ ಕೈಯನ್ನು ಕಟ್ಟಾಕಿಕೊಂಡಿದಾರೆ.

ಕಳೆದ ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಆಗಿರುವುದಿಲ್ಲ. ಯಾವುದೆ ಹೊಸ ಯೋಜನೆ ಕೊಡಲು ಸಾಧ್ಯವಾಗಿಲ್ಲ. ಗ್ಯಾರಂಟಿ ಗ್ಯಾರಂಟಿ ಎಂದು ಹೇಳಿಕೊಂಡು ಹಣ ಹೊಂದಿಸಲು ಆಗುತ್ತಿಲ್ಲ. ಒಂದು ಕಡೆ ಯಥೇಚ್ಛವಾಗಿ ಸಾಲ ೭೦ ರಿಂದ ೮೦ ಸಾವಿರ ಕೋಟಿ ಸಾಲ ಮಾಡಿ ರಾಜ್ಯದ ಜನರಿಗೆ ಹೊರೆ ಹಾಕುತ್ತಿದ್ದಾರೆ ಎಂದು ದೂರಿದರು. ಇನ್ನೊಂದು ಕಡೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿ ಬರೆ ಎಳೆದಿದ್ದಾರೆ. ಇದೆಲ್ಲವನ್ನು ನಾವು ಬೇರೆ ಬೇರೆ ಸಂಘಟನೆ ಮಾತಾಡಿ ಮುಂದಿನ ಹೋರಾಟ ತೀರ್ಮಾನ ಮಾಡುವುದಾಗಿ ಎಚ್ಚರಿಸಿದರು. ತೆರಿಗೆ ಮೂಲಕ ಬಂದ ಹಣ ಅಭಿವೃದ್ಧಿಗೆ ಬಳಕೆ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕಳೆದ ಒಂದು ವರ್ಷದಲ್ಲಿ ಯಾವ ಅಭಿವೃದ್ಧಿ ಆಗಿದೆ? ಒಂದು ವರ್ಷದಲ್ಲಿ ಸಿಎಂ ಸೇರಿ ಯಾವುದೇ ಶಂಕುಸ್ಥಾಪನೆ ಮಾಡಿಲ್ಲ ಮತ್ತು ಅಭಿವೃದ್ಧಿ ಅಗಿರುವುದಿಲ್ಲ. ಹೊಸ ಯೋಜನೆಯನ್ನು ಇನ್ನು ಘೋಷಣೆ ಮಾಡಿರುವುದಿಲ್ಲ. ಯಾಕೆ ಮಾಡೋಕೆ ಸಾದ್ಯವಾಗಿಲ್ಲ ಎಂದು ಪ್ರಶ್ನೆ ಮಾಡಿದರು. ರಾಜ್ಯದ ಜನರು ನಿಮ್ಮ ಮೇಲೆ ಎಷ್ಟೊಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೊಸ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಆಗುತ್ತೆ ಎಂದು ಕನಸು ಕಾಣ್ತಾ ಇದಾರೆ. ಯಾವುದೇ ಶಾಸಕರ ಕ್ಷೇತ್ರದಲ್ಲಿ ಒಂದೇ ಒಂದು ಶಾಲಾ ಕೊಠಡಿ ಕಟ್ಟೋಕೆ ಸಾದ್ಯವಾಗಿಲ್ಲ. ಆಸ್ಪತ್ರೆ ರಸ್ತೆ ಮಾಡೋಕೆ ಸಾದ್ಯವಾಗ್ತಾ ಇಲ್ಲ. ಯಾವುದೇ ಪಕ್ಷದ ಶಾಸಕರು ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲು ಆಗದ ಪರಿಸ್ಥಿತಿ ಈ ಸರ್ಕಾರ ಬಂದ ನಂತರ ಆಗಿದೆ. ಇನ್ನು ಇವರು ಗ್ಯಾರಂಟಿ ಗ್ಯಾರಂಟಿ ಎಂದು ಜನರ ಮೇಲೆ ಬರೆ ಎಳೆಯಲು ಹೊರಟಿದಾರೆ ಎಂದು ಬೇಸರವ್ಯಕ್ತಪಡಿಸಿದ ಅವರು, ಇದಕ್ಕೆ ನಾವು ಉಗ್ರ ಹೋರಾಟ ಮಾಡ್ತೇವೆ ಎಂದು ಎಚ್ಚರಿಕೆ ಕೊಟ್ಟರು.

ಕಾಂಗ್ರೆಸ್ ಸರ್ಕಾರ ಬಂದ ಎಲ್ಲಾ ಹಣವನ್ನು ಗ್ಯಾರಂಟಿಗೆ ಬಳಸುತ್ತಿದೆ. ಹಿಂದೆ ಎಸ್ಸಿಪಿ ಟಿಎಸ್ಪಿ ಹಣವನ್ನು ಸಂಪೂರ್ಣವಾಗಿ ಗ್ಯಾರಂಟಿಗೆ ವರ್ಗಾವಣೆ ಮಾಡಿದ್ರು. ಈಗ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಣ ಕೂಡ ಅದಕ್ಕೆ ಹೋಗುತ್ತದೆ. ಅದರಿಂದಲೂ ಇವರು ಅಭಿವೃದ್ಧಿ ಮಾಡಲು ಹೊರಟಿಲ್ಲ. ಇವರ ಆಡಳಿತ ವೈಖರಿ ಹೇಗಿದೆ ಎಂದರೆ ಅಭಿವೃದ್ಧಿ ಶೂನ್ಯವಾಗಿದೆ. ಅಭಿವೃದ್ಧಿ ಶೂನ್ಯ ರಾಜ್ಯ ಸರ್ಕಾರ ಜನರ ಮೇಲೆ ಬರೆ ಎಳೆಯಲು ಹೊರಟಿದೆ. ತಮ್ಮ ಗ್ಯಾರಂಟಿ ಗಾಗಿ ಪ್ರಾಪರ್ಟಿ ತೆರಿಗೆ ಹೆಚ್ಚಳ,ಎಲ್ಲವೂ ಈ ಸರ್ಕಾರ ಬಂದ ಮೇಲೆ ದುಬಾರಿ ಆಗಿದೆ. ಗ್ಯಾರಂಟಿ ಉಳಿಸಿಕೊಳ್ಳೋದು ನಂತರದ ಮಾತು ಆದರೆ ಅಭಿವೃದ್ಧಿ ಎಲ್ಲಿದೆ?

ಯಾವುದೇ ಶಾಸಕರು ಏನೂ ಮಾಡಲು ಆಗುತ್ತಿಲ್ಲ ಎಂದರು. ಹೊಸ ಸರ್ಕಾರ ಬಂದಮೇಲೆ ಒಂದೇ ಒಂದು ಹೊಸ ಯೋಜನೆ ಜಾರಿ ಮಾಡೋಕೆ ಆಗಿಲ್ಲ? ಎಂದು ಗುಡುಗಿದರು.

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಬಂಧನ ವಿಚಾರವಾಗಿ ಮಾತನಾಡಿ, ಇಂತಹ ಹೇಯ ಕೃತ್ಯ ಮಾಡಿದವರು ಯಾರೇ ಆದರೂ ತಕ್ಕ ಶಿಕ್ಷೆ ಆಗಬೇಕು. ನಮ್ಮ ರಾಜ್ಯದಲ್ಲಿ ನಡೆಯುತ್ತಿರೊ ಘಟನೆ ನೋಡಿದರೆ ಯಾರೂ ತಲೆ ಎತ್ತಿ ಓಡಾಡಲು ಆಗದಂತಾಗಿದೆ. ಯಾರೇ ಪ್ರಭಾವಿ ಶಕ್ತಿ ಶಾಲಿ ಇದ್ದರೂ ಕೂಡ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.

ಇದೆ ವೇಳೆ ಶಾಸಕ ಹೆಚ್.ಕೆ. ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಅಮಿತ್ ಶೆಟ್ಟಿ, ಹೆಚ್.ಎನ್. ನಾಗೇಶ್,ಇನ್ನಿತರು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನದಲ್ಲಿ ವಿಪ್ರ ಸಮಾಗಮ: ಡಿಸೆಂಬರ್ 27, 28ರಂದು ಅದ್ಧೂರಿ ‘ಜಿಲ್ಲಾ ವಿಪ್ರ ಸಮ್ಮೇಳನ’

Published

on

ಹಾಸನ: ಜಿಲ್ಲೆಯ ಸಮಸ್ತ ವಿಪ್ರ ಬಾಂಧವರನ್ನು ಒಂದುಗೂಡಿಸುವ ಮತ್ತು ಸಂಸ್ಕಾರದ ಅರಿವು ಮೂಡಿಸುವ ಉದ್ದೇಶದಿಂದ ಡಿಸೆಂಬರ್ 27 ಮತ್ತು 28ರಂದು ನಗರದ ಮಲೆನಾಡು ಎಂಜಿನಿಯರಿಂಗ್ ಕಾಲೇಜು (MCE) ಆವರಣದಲ್ಲಿ ‘ಜಿಲ್ಲಾ ವಿಪ್ರ ಸಮ್ಮೇಳನ’ ಹಮ್ಮಿಕೊಳ್ಳಲಾಗಿದೆ. ಈ ಬೃಹತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಭಾನುವಾರ ಸಂಜೆ ನಗರದ ಶಂಕರ ಮಠದಲ್ಲಿ ಯಶಸ್ವಿಯಾಗಿ ಜರುಗಿತು.

ಕೋಟಿ ಗಾಯತ್ರಿ ಜಪದ ಸಂಕಲ್ಪ: ಭರದಿಂದ ಸಾಗಿದ ಸಿದ್ಧತೆ

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಮಂಜುನಾಥ ಮೂರ್ತಿ ಅವರು, ಸಮ್ಮೇಳನದ ಅಂಗವಾಗಿ ಹಮ್ಮಿಕೊಂಡಿರುವ ‘ಕೋಟಿ ಗಾಯತ್ರಿ ಜಪ’ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ ಎಂದರು.
ಈಗಾಗಲೇ ಸುಮಾರು 1 ಕೋಟಿ17 ಲಕ್ಷ ಜಪ ಪೂರ್ಣಗೊಂಡಿದ್ದು, ಮುಂದಿನ ಒಂದು ವಾರದಲ್ಲಿ ಈ ಸಂಖ್ಯೆ 50 ಲಕ್ಷ ದಾಟುವ ನಿರೀಕ್ಷೆಯಿದೆ ಎಂದರು.

ಸಮ್ಮೇಳನದ ಪ್ರಚಾರಕ್ಕಾಗಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಾಗ ವಿಪ್ರ ಬಾಂಧವರಿಂದ ಭವ್ಯ ಸ್ವಾಗತ ಹಾಗೂ ಬೆಂಬಲ ದೊರೆತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

*ಸಮ್ಮೇಳನದ ಪ್ರಮುಖ ಆಕರ್ಷಣೆಗಳು


ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಸಮಾಜದ ಎಲ್ಲಾ ವರ್ಗದವರನ್ನು ತಲುಪಲು ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ:*

ಗಾಯತ್ರಿ ಹೋಮ: ಡಿಸೆಂಬರ್ 27ರಂದು 30 ಹೋಮ ಕುಂಡಗಳಲ್ಲಿ 600 ಜನ ಋತ್ವಿಜರಿಂದ ಗಾಯತ್ರಿ ಹೋಮ ನಡೆಯಲಿದ್ದು, ಮಧ್ಯಾಹ್ನ 12:30ಕ್ಕೆ ಪೂರ್ಣಾಹುತಿ ನೆರವೇರಲಿದೆ.

* ವೈವಿಧ್ಯಮಯ ಉತ್ಸವಗಳು: ಸಮ್ಮೇಳನದಲ್ಲಿ ಗಾಳಿಪಟ ಉತ್ಸವ, ಮೆಹಂದಿ , ವಿವಿಧ ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆಯಲಿವೆ.

* ರಾಜ್ಯಮಟ್ಟದ ಗಣ್ಯರ ಆಗಮನ: ರಾಜ್ಯದ ವಿವಿಧ ಜಿಲ್ಲೆಗಳ ವಿಪ್ರ ಸಭೆಗಳಿಗೆ ಆಮಂತ್ರಣ ನೀಡಲಾಗಿದ್ದು, ನೂರಾರು ಗಣ್ಯರು ಭಾಗವಹಿಸಲಿದ್ದಾರೆ.

ಮಕ್ಕಳಿಗೆ ಸಂಸ್ಕಾರದ ಅಡಿಪಾಯ

“ಇಂದಿನ ಪೀಳಿಗೆಗೆ ಸಂಸ್ಕಾರ ನೀಡುವುದು ಈ ಸಮ್ಮೇಳನದ ಮುಖ್ಯ ಉದ್ದೇಶ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನಮ್ಮ ಪರಂಪರೆಯ ಅರಿವು ಮೂಡಿಸಬೇಕು” ಎಂದು ಅಧ್ಯಕ್ಷರು ಮನವಿ ಮಾಡಿದರು. ಅಲ್ಲದೆ, ಸಮ್ಮೇಳನಕ್ಕೆ ಸ್ಥಳಾವಕಾಶ ನೀಡಿ ಸಹಕರಿಸುತ್ತಿರುವ ಮಲೆನಾಡು ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.

ತನು-ಮನ-ಧನದ ಸಹಕಾರಕ್ಕೆ ಕರೆ

ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿಪ್ರ ಬಾಂಧವರು ತನು-ಮನ-ಧನದಿಂದ ಸಹಕರಿಸಬೇಕೆಂದು ಕೋರಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಬ್ರಾಹ್ಮಣ ಸಭಾದ ಕಾರ್ಯದರ್ಶಿ ಸುರೇಶ್ ಹಾಗೂ ಖಜಾಂಚಿ ಅಶ್ವಿನಿ ಉಪಸ್ಥಿತರಿದ್ದರು.

Continue Reading

Hassan

ಜಿಲ್ಲಾ ಸರ್ಕಾರಿ ನೌಕರರ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ 2026 ರ ಕ್ಯಾಲೆಂಡರ್ ಬಿಡುಗಡೆ

Published

on

ಹಾಸನ: ನಗರದ ಖಾಸಗೀ ಹೋಟೆಲೊಂದರಲ್ಲಿ ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಜಿಲ್ಲಾ ಸರಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ 2026 ರ ನೂತನ ಕ್ಯಾಲೆಂಡರ್ ಬಿಡುಗಡೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಇದೇ ವೇಳೆ ಪತ್ರಕರ್ತರ ಸಂಘದ ಅಧ್ಯಕ್ಷ ಕೆಂಚೇಗೌಡ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡುತ್ತಾ, ಈ ಸಂಘವನ್ನು ಯಶಸ್ವಿಯಾಗಿ ಹುಟ್ಟುಹಾಕಲಾಗಿದ್ದು, ಸಂಘ-ಸಂಸ್ಥೆಯನ್ನು ಉತ್ಸಹದಲ್ಲಿ ಪ್ರಾರಂಭ ಮಾಡಬಹುದು, ಆದರೇ ಯಾವುದೇ ಸಂಘ ಸಂಸ್ಥೆಯಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಅಲ್ಲಿನ ಸಮತೋಲನವನ್ನು ಸರಿದೂಗಿಸಿಕೊಂಡು ಸಂಘವನ್ನು ಬಹಳ ವರ್ಷಗಳ ಕಾಲ ಹಿಡಿದಿಟ್ಟುಕೊಳ್ಳುವುದು ಬಹಳ ಕಷ್ಟದ ಕೆಲಸ. ಎಲ್ಲಾ ಸಂಘ ಸಂಸ್ಥೆಯಲ್ಲೂ ಪರ-ವಿರೋಧ, ಜಾತಿ ಎಲ್ಲಾವು ಕೆಲಸ ಮಾಡುವುದರಿಂದ ಸರಿದೂಗಿಸಿಕೊಂಡು ಹೋಗುವುದು ಕಷ್ಟದ ಕೆಲಸ. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎರಡು ಸಂಘವನ್ನು ಸಂಯೋಜನೆ ಮಾಡಿಕೊಂಡು ಕೆಲಸ ಮಾಡುತ್ತಿರುವುದು ಸಂತೋಷದ ವಿಚಾರ ಎಂದು ಹೇಳಿದರು.

ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಾವುಗಳು ಸಂಘ ಸ್ಥಾಪಿಸಿ ಅನೇಕ ಸೇವಾ ಚಟುವಟಿಕಕೆಗಳನ್ನ ಮಾಡಲಾಗಿದೆ. ಅದರಲ್ಲಿ ಗಿಡಗಳನ್ನು ನೆಡುವುದು, ಕ್ರೀಡೆಯನ್ನ ಸಾಧನೆ ಮಾಡಿದ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರೋತ್ಸಹ ಧನ ಕೊಡುವುದು, ಹಸಿರು ಭೂಮಿ ಪ್ರತಿಷ್ಠಾನದ ಕೆಲಸಗಳಿಗೆ ನಾವು ಅಲ್ಲಿಯೂ ಕೂಡ ಕೈಜೋಡಿಸುತ್ತಿದ್ದೇವೆ. ಹಲವಾರು ಸಾಮಾಜಿಕ ಕಳಾಕಳಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು. .

ನಮ್ಮ ಗೃಹ ನಿರ್ಮಾಣ ಸಹಕಾರ ಸಂಘ ಪ್ರಾರಂಭವಾಗಿ ಏಳು ವರ್ಷಗಳೇ ಕಳೆದಿದೆ. ಹಲವಾರು ಬಡಾವಣೆ ನಿರ್ಮಿಸಿ ಸಾರ್ವಜನಿಕವಾಗಿ ಮತ್ತು ನಮ್ಮ ಸಿ ಗ್ರೂಪ್ ನೌಕರರಿಗೆ ಕೈಗೆಟಕುವ ಧರದಲ್ಲಿ ನಿವೇಶನಗಳನ್ನು ಸದಸ್ಯರಿಗೆ ಕೊಡುತ್ತಾ ಬಂದಿದ್ಧೇವೆ. ಈಗಾಗಲೇ 500 ನಿವೇಶನಗಳನ್ನು ಸದಸ್ಯರಿಗೆ ನೀಡಿದ್ದು, ಯಾವುದೇ ದಲ್ಲಾಳಿಗಳ ಹಾವಳಿ ಇಲ್ಲದೇ ಹೆಚ್ಚಿನ ಬೆಲೆ ನೀಡದ ರೀತಿ ಕಂತಿನ ಬೆಲೆಯಲ್ಲಿ ಕೊಡಲು ನೋಡಿಕೊಂಡಿದ್ದೇವೆ. ಮುಂದೆ ಇನ್ನು ಹಲವಾರು ನಿವೇಶನ ಕೊಡುವ ಗುರಿ ಹೊಂದಿದ್ದೇವೆ. ಇವತ್ತು 4 ಕೋಟಿ ಸಾಲವನ್ನು ನಮ್ಮ ಕೋ-ಆಪರೇಟಿವ್ ಸೊಸೈಟಿ ನೀಡಿದೆ. ಮುಂದಿನ ದಿನಗಳಲ್ಲಿ ಎರಡು ಬಡಾವಣೆಗಳಲ್ಲೂ ಕಡಿಮೆ ಧರದಲ್ಲಿ ನಿವೇಶನ ಕೊಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉದಯ ವರದಿ ಕನ್ನಡ ದಿನ ಪತ್ರಿಕೆ ಸಂಪಾದಕ ಹಾಗೂ ದತ್ತಿ ಪ್ರಶಸ್ತಿ ವಿಜೇತ ವೆಂಕಟೇಶ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಹರೀಶ್, ಕೋ. ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಎನ್. ಪರಮೇಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರು ಟಿ. ರಾಜು, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಜಿ.ಪಿ. ವಿಶ್ವನಾಥ್, ಎಸ್. ಮಧು, ಸಂಘದ ಪದಾಧಿಕಾರಿಗಳು ಗೋಪಾಲಕೃಷ್ಣ, ಆರ್.ಸಿ. ಸತೀಶ್, ಬೈರಪ್ಪ, ಸಾವಿತ್ರಮ್ಮ, ದಾಕ್ಷಾಯಿಣಿ, ನಿರ್ದೇಶಕರುಗಳು ವೆಂಕಟೇಶ್ ಇತರರು ಭಾಗವಹಿಸಿದ್ದರು.

Continue Reading

Hassan

ಫೋನ್‌ನಲ್ಲಿ ಮಾತನಾಡಲು ಹೋಗಿ ಒಂದು ಕಾಲು ಕಳೆದುಕೊಂಡ ಯುವಕ

Published

on

ಹಾಸನ: ಯುವಕನೋರ್ವ ತನ್ನ ಫೋನ್‌‌ಗೆ ಬಂದ ಕರೆ ಸ್ವೀಕರಿಸಿ ಮಾತನಾಡಲು ಹೋಗಿ ಒಂದು ಕಾಲುನ್ನು ಕಳೆದುಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬಾಗೂರು ಹೋಬಳಿ, ಕುರದಹಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಗ್ರಾಮದ ಪ್ರಸನ್ನ (25) ಫೋನ್ ಕರೆಯಿಂದ ಕಾಲು ಕಳೆದುಕೊಂಡ ಯುವಕ. ಟಿಟಿ ವಾಹನ ಚಾಲಕನಾಗಿರುವ ಚಾಲಕ ಇಂದು ಗ್ರಾಮಕ್ಕೆ ಬಂದಿದ್ದ. ತನ್ನ ಸ್ನೇಹಿತ ಟ್ರ್ಯಾಕ್ಟರ್‌ನಲ್ಲಿ ಜಮೀನು ಉಳುಮೆ‌ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ. ಈ ವೇಳೆ ಪ್ರಸನ್ನ ಫೋನ್‌ಗೆ ಕರೆ ಬಂದಿದ್ದು ಟ್ರ್ಯಾಕ್ಟರ್ ಶಬ್ದದಿಂದ ಮಾತನಾಡುವುದು ಸರಿಯಾಗಿ ಕೇಳಿಸಲ್ಲ ಎಂದು ಕೆಳಗೆ ಇಳಿದಿದ್ದು ಈ ವೇಳೆ ಆಯತಪ್ಪಿ ರೋಟರ್‌ಗೆ ಸಿಲುಕಿ ಪ್ರಸನ್ನನ ಒಂದು ಕಾಲು ನಜ್ಜುಗುಜ್ಜಾಗಿ ತುಂಡಾಗಿದೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಪ್ರಸನ್ನ ಚಿಕಿತ್ಸೆ ಪಡೆಯುತ್ತಿದ್ದು ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Continue Reading

Trending

error: Content is protected !!