National - International
ಚೀನಾ ವಿವಾದಿತ ಗಡಿಯಲ್ಲಿ 218 ಕೋಟಿ ರೂ. ವೆಚ್ಚದ ಏರ್ಫಿಲ್ಡ್ ನಿರ್ಮಾಣಕ್ಕೆ ಭಾರತ ಸಜ್ಜು

ನವದೆಹಲಿ: ಚೀನಾ ಹಾಗೂ ಭಾರತದ (India) ಗಡಿ ಭಾಗದ ಪೂರ್ವ ಲಡಾಖ್ನ (Ladakh) ನ್ಯೋಮಾ ಬೆಲ್ಟ್ನಲ್ಲಿ 218 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಏರ್ಫಿಲ್ಡ್ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (Border Roads Organisation) ಸಜ್ಜಾಗಿದೆ. ಇದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೆಪ್ಟೆಂಬರ್ 12 ರಂದು ಶಂಕುಸ್ಥಾಪನೆ ಮಾಡಲಿದ್ದಾರೆ. ಅಲ್ಲದೇ ಇದೇ ವೇಳೆ 2,941 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳನ್ನು ಸಿಂಗ್ ಉದ್ಘಾಟಿಸಲಿದ್ದಾರೆ.
ಸೇನಾ ಚಾಪರ್ಗಳು ಮತ್ತು ವಿಶೇಷ ಕಾರ್ಯಾಚರಣೆಯ ವಿಮಾನಗಳನ್ನು ಲ್ಯಾಂಡ್ ಮಾಡಲು ಅನುಕೂಲವಾಗುವಂತೆ ಈ ಏರ್ಫಿಲ್ಡ್ ನಿರ್ಮಾಣ ಮಾಡಲಾಗುತ್ತದೆ. ಈ ಭಾಗದಲ್ಲಿ ಚೀನಾದೊಂದಿಗೆ ಇರುವ ಗಡಿ ವಿವಾದಗಳಿಂದ ಈ ಯೋಜನೆ ಮಹತ್ವ ಪಡೆದಿದೆ. ಅಲ್ಲದೇ ಭಾರತದ ವಾಯುಪಡೆಯ ಸಾಮರ್ಥ್ಯವನ್ನು ಇದು ಹೆಚ್ಚಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆಗಳಿಂದ ಉತ್ತರದ ಗಡಿಗಳಲ್ಲಿನ ಸಮಸ್ಯೆಗಳನ್ನು ಎದುರಿಸಲು ಸಹಕಾರಿಯಾಗಿದೆ. ಇದರೊಂದಿಗೆ ವಾಣಿಜ್ಯ ಉದ್ದೇಶಕ್ಕೂ ಬಳಸಬಹುದಾಗಿದೆ. ಈ ನಿಟ್ಟಿನಲ್ಲಿ ಭಾರತದ ಗಡಿ ಪ್ರದೇಶಗಳಲ್ಲಿನ ನೆರೆಯ ದೇಶಗಳೊಂದಿಗೆ ಸ್ನೇಹ ಸಂಬಂಧಕ್ಕಾಗಿ ರಸ್ತೆ ಜಾಲಗಳನ್ನು ಅಭಿವೃದ್ಧಿ ಪಡೆಸುವ ಉದ್ದೇಶ ಸಹ ಇದರಲ್ಲಿ ಕೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
National - International
ಒಂದೇ ದಿನ ಜನ್ಮದಿನ ಆಚರಿಸಿಕೊಂಡ ಮಾಜಿ ಪ್ರಧಾನಿ ಎಚ್ಡಿಡಿ, ಜಗದೀಪ್ ಧನಕರ್

ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಒಂದೇ ದಿನ ಜನ್ಮದಿನ ಆಚರಿಸಿಕೊಂಡು ಪರಸ್ಪರ ಶುಭಾಶಯ ಕೋರಿದ್ದಾರೆ.
ಉಪ ರಾಷ್ಟ್ರಪತಿ ಜಗದೀಪ ಧನಕರ್ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರುಗಳಿಬ್ಬರ ಹುಟ್ಟುಹಬ್ಬದ ದಿನ ಮೇ 18. ನಿನ್ನೆಯ ದಿನ (ಸೋಮವಾರ) ಈ ಇಬ್ಬರೂ ನಾಯಕರು ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು ಹಾಗೂ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡಿದ್ದರು.
ಮಂಗಳವಾರ ಬೆಳಗ್ಗೆ ನವದೆಹಲಿಯಲ್ಲಿ ಸಪ್ತರ್ ಜಂಗ್ ಲೇನ್ ರಸ್ತೆಯಲ್ಲಿರುವ ಮಾಜಿ ಪ್ರಧಾನಮಂತ್ರಿಗಳ ನಿವಾಸಕ್ಕೆ ತಮ್ಮ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಭೇಟಿ ನೀಡಿದ ಉಪ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳಿಗೆ ಜನ್ಮದಿನದ ಶುಭಾಶಯ ಕೋರಿದರು.
ಇದೇ ವೇಳೆ ಮಾಜಿ ಪ್ರಧಾನಿಗಳು ಕೂಡ ಉಪ ರಾಷ್ಟ್ರಪತಿಗಳಿಗೆ ಜನ್ಮದಿನದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ರಾಷ್ಟ್ರದ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ ಉಭಯ ನಾಯಕರು, ಮುಖ್ಯವಾಗಿ ರೈತರ ಸಮಸ್ಯೆಗಳು, ಅವರಿಗಾಗಿ ನರೇಂದ್ರ ಮೋದಿ ಅವರ ಸರಕಾರ ರೂಪಿಸಿ ಜಾರಿಗೆ ತಂದಿರುವ ಕೃಷಿಪರ ಯೋಜನೆಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು.
ತಮ್ಮ ಹಾಗೂ ಮಾಜಿ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಉಪ ರಾಷ್ಟ್ರಪತಿಗಳು ಸ್ಮರಿಸಿಕೊಂಡರು. ರಾಜ್ಯಸಭೆಯಲ್ಲಿ ರೈತರು ಹಾಗೂ ರಾಷ್ಟ್ರ ಹಿತಾಸಕ್ತಿಯ ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಚರ್ಚೆ ನಡೆಸಲು ಅವಕಾಶ ಕಲ್ಪಿಸುತ್ತಿರುವ ಉಪ ರಾಷ್ಟ್ರಪತಿಗಳಿಗೆ ವಿಶೇಷವಾಗಿ ಮಾಜಿ ಪ್ರಧಾನಿಗಳು ಕೃತಜ್ಞತೆ ಸಲ್ಲಿಸಿದರು.
ತಮ್ಮ ನಿವಾಸಕ್ಕೆ ಆಗಮಿಸಿ ಜನ್ಮದಿನ ಶುಭ ಕೋರಿದ ಉಪ ರಾಷ್ಟ್ರಪತಿ ದಂಪತಿಗೆ ಮಾಜಿ ಪ್ರಧಾನಿಗಳು ಅಭಿವಂದನೆ ಅರ್ಪಿಸಿದರು.
ಈ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಾತನಾಡಿ, ನನ್ನ ಜನ್ಮದಿನ ಮತ್ತು ಮಾನ್ಯ ಉಪ ರಾಷ್ಟ್ರಪತಿಗಳು ಜನ್ಮದಿನ ಮೇ 18. ನನ್ನ ಜನ್ಮದಿನಕ್ಕೆ ಅವರು ಮೊದಲೇ ದೂರವಾಣಿ ಕರೆ ಮಾಡಿ ಶುಭಾಶಯ ಹೇಳಿದ್ದರು ಹಾಗೂ ಎಕ್ಸ್ ಖಾತೆಯಲ್ಲಿ ಶುಭಾಶಯವನ್ನೂ ಕೋರಿದ್ದರು. ಮಂಗಳವಾರ ಬೆಳಗ್ಗೆ ಉಪ ರಾಷ್ಟ್ರಪತಿಗಳು ನವದೆಹಲಿಯಲ್ಲಿರುವ ನನ್ನ ನಿವಾಸಕ್ಕೆ ತಮ್ಮ ಧರ್ಮಪತ್ನಿಯವರ ಸಮೇತ ಆಗಮಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.
National - International
ಜಮ್ಮು-ಕಾಶ್ಮೀರ| ಪುಲ್ವಾಮಾದಲ್ಲಿ ಭದ್ರತಾ ಪಡೆ, ಉಗ್ರರ ಮಧ್ಯೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ಮಧ್ಯೆ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಭದ್ರತಾ ಪಡೆಗಳು ಇಂದು(ಮೇ.15) ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರ ಪ್ರದೇಶದ ನಾದರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತ ಪಡೆದ ಬಳಿಕ ಶೋಧ ಕಾರ್ಯಾಚರಣೆ ನಡೆಸಿದ್ದವು.
ಈ ಸಂದರ್ಭದಲ್ಲಿ ಉಗ್ರರು, ಭದ್ರತಾಪಡೆಗಳ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಹೀಗಾಗಿ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ಮಾಡಿ ಮಾಹಿತಿ ಪಡೆಯಲಿದ್ದಾರೆ.
National
‘ಉಗ್ರವಾದ – ಶಾಂತಿ ಮಾತುಕತೆ,’ ‘ರಕ್ತ – ನೀರು’ ಒಟ್ಟಿಗೇ ಸಾಗವು: ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರ್ ಕೇವಲ ಒಂದು ಕಾರ್ಯಾಚರಣೆಯಲ್ಲ ಅದು ನಮ್ಮ ಕೋಟ್ಯಂತರ ಭಾರತೀಯರ ಭಾವನೆಗಳ ಪ್ರತೀಕ. ಇನ್ನು ನಾವು ಪಾಕಿಸ್ತಾನವನ್ನು ಹಾಗೂ ಭಯೋತ್ಪಾದನೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವೆರಡೂ ನಮಗೆ ಒಂದೇ ಆಗಿರುತ್ತದೆ. ಹಾಗಾಗಿ, ಇನ್ನು ಮುಂದೆ ಉಗ್ರವಾದ – ಮಾತುಕತೆ, ಉಗ್ರವಾದ – ವ್ಯಾಪಾರ ಹಾಗೂ ರಕ್ತ ಮತ್ತು ನೀರು ಒಟ್ಟೊಟ್ಟಿಗೆ ಸಾಗುವುದಿಲ್ಲ. ಪಾಕಿಸ್ತಾನದ ಜೊತೆ ಮಾತುಕಥೆಯಾದರೆ ಅದು ಪಾಕ್ ಆಕ್ರಮಿತ ಕಾಶ್ಮೀರ ( POK) ಮತ್ತು ಭಯೋತ್ಪಾದನೆ ಬಗ್ಗೆ ಮಾತ್ರ ಎಂದು ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
-
Hassan21 hours ago
ಮುಹೂರ್ತ ಮುಗಿಸಿ ಪರೀಕ್ಷೆ ಬರೆಯಲು ಬಂದ ವಧು
-
Hassan20 hours ago
ಹಾಸನ : ಹೃದಯಾಘಾತದಿಂದ ಯುವಕ-ಯುವತಿ ಸಾ*ವು
-
Kodagu18 hours ago
ನಂದಿನೆರವಂಡ ಉತ್ತಪ್ಪ ನಿಧನ
-
Mandya16 hours ago
ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ : ಕೆ. ಆರ್ ನಂದಿನಿ
-
Kodagu17 hours ago
ಜಾತಿಗಣತಿ ಸಮೀಕ್ಷೆ ಲೋಪದೋಷ : ಅಧಿಕಾರಿಗಳಿಗೆ ತಹಸೀಲ್ದಾರ್ ಕ್ಲಾಸ್..!
-
Hassan15 hours ago
ಸಾಹಿತಿ ಭಾನುಮುಷ್ತಾಕ್ ರವರಿಗೆ ಬೂಕರ್ ಪ್ರಶಸ್ತಿ : ನಗರದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಸಂಭ್ರಮ
-
Kodagu19 hours ago
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್ ಗಳಲ್ಲಿ)
-
Kodagu19 hours ago
ಸಮಸ್ಯೆ ಆಲಿಸಿದ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ