National
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ. ರಾಧಾಕೃಷ್ಣನ್
 
																								
												
												
											ನವದೆಹಲಿ: ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇದೀಗ ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ.
ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು.

ಬಿಆರ್ಎಸ್, ಬಿಜೆಡಿ ಹಾಗೂ ಶಿರೋಮಣಿ ಅಕಾಲಿ ದಳ ಸೇರಿದಂತೆ ಹಲವು ಪಕ್ಷಗಳು ಮತದಾನದಿಂದ ದೂರ ಉಳಿದರೂ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಿದರು.
ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 9 ಗಂಟೆ ಸಂಜೆ 5 ಗಂಟೆವರೆಗೆ ಮತದಾನ ನಡೆದಿತ್ತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. ಸಂಜೆ 6 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆದಿತ್ತು. ಅಂತಿಮವಾಗಿ ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು.
ಜಗದೀಪ್ ಧನ್ಕರ್ ಅವರು ಆರೋಗ್ಯ ಕಾರಣಗಳನ್ನು ನೀಡಿ ಕಳೆದ ಜುಲೈ 21 ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
National
Vice President Election 2025: ಮತದಾನ ಪ್ರಕ್ರಿಯೆ ಆರಂಭ, ಪ್ರಧಾನಿ ಮೋದಿ-ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ
 
														ಉಪರಾಷ್ಟ್ರಪತಿ ಚುನಾವಣೆಗಾಗಿ ಇಂದು (ಸೆ.9-ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಮೊದಲ ಮತದಾರರಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರ್ಜುನ್ ರಾಮ್ ಮೇಘವಾಲ್ ಮತ್ತು ಕಿರಣ್ ರಿಜಿಜು ಸೇರಿದ್ದಾರೆ. ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತು ಎಸ್ಪಿ ನಾಯಕ ರಾಮ್ ಗೋಪಾಲ್ ಯಾದವ್ ಸೇರಿದಂತೆ ಇತರರು ಮತ ಚಲಾಯಿಸಿದರು.
ಉಪರಾಷ್ಟ್ರಪತಿ ಚುನಾವಣೆಗಾಗಿ ಇಂದು (ಸೆ.9-ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
ಸಂಸತ್ತಿನ ಉಭಯ ಸದನಗಳ ಸದಸ್ಯರು ಇಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ಮತ ಚಲಾಯಿಸಲಿದ್ದಾರೆ. ಮತ ಎಣಿಕೆ ಸಂಜೆ 6 ಗಂಟೆಗೆ ಆರಂಭವಾಗಲಿದ್ದು, ಫಲಿತಾಂಶಗಳನ್ನು ಸಂಜೆ ತಡವಾಗಿ ಪ್ರಕಟಿಸಲಾಗುವುದು.
ಈ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಗೊಂಡ ಮತ್ತು ನಾಮನಿರ್ದೇಶನಗೊಂಡ ಎಲ್ಲಾ ಸಂಸದರು ಮತ ಚಲಾಯಿಸಲಿದ್ದಾರೆ. ಸಾಯಂಕಾಲ 5 ಗಂಟೆ ಬಳಿಕ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ಉಪರಾಷ್ಟ್ರಪತಿ ಆಯ್ಕೆಗೆ ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 781 ಸಂಸದರು ಮತದಾನದ ಹಕ್ಕನ್ನು ಹೊಂದಿದ್ದು, ನಿರ್ದಿಷ್ಟ ಅಭ್ಯರ್ಥಿಯ ಗೆಲುವಿಗೆ 391 ಮತಗಳ ಅಗತ್ಯವಿದೆ.
ಜುಲೈ 21ರಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದಿಢೀರ್ ರಾಜೀನಾಮೆ ನೀಡಿದ್ದರು. ಈ ಹುದ್ದೆಗೆ ಇದೀಗ ಎನ್ಡಿಎ ಮೈತ್ರಿಕೂಟದಿಂದ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದಾರೆ.
ಏತನ್ಮಧ್ಯೆ ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು, ಗೆಲವಿನ ಭರವಸೆ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಚುನಾವಣೆಯಲ್ಲಿ ಭಾರತದ ರಾಷ್ಟ್ರೀಯತೆಗೆ ಗೆಲುವು ನಿಶ್ಚಿತ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
“ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆಚುನಾವಣೆ ನಡೆಯುತ್ತಿದೆ. ಇದು ಭಾರತೀಯ ರಾಷ್ಟ್ರೀಯತೆಗೆ ದೊಡ್ಡ ಜಯ ತಂದುಕೊಡಲಿದೆ. ನಾವೆಲ್ಲರೂ ಒಂದಾಗಿದ್ದು, ವಿಕಸಿತ ಭಾರತ ನಿರ್ಮಾಣ ಮಾಡುವ ದೃಢಸಂಕಲ್ಪದೊಂದಿಗೆ ಹೆಜ್ಜೆ ಹಾಕುತ್ತಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಸಿಪಿ ರಾಧಾಕೃಷ್ಣನ್ ಅವರು ದೆಹಲಿಯ ಲೋಧಿ ರಸ್ತೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ನಡುವೆ ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಬಿ. ಸುದರ್ಶನ್ ರೆಡ್ಡಿ ಕೂಡ, ಗೆಲುವಿನ ಆತ್ಮವಿಶ್ವಾಸದಲ್ಲಿದ್ದಾರೆ.
National
5 ವರ್ಷದಲ್ಲಿ BCCI ಬ್ಯಾಂಕ್ ಬ್ಯಾಲೆನ್ಸ್ 20 ಸಾವಿರ ಕೋಟಿ ರೂ.ಗೂ ಹೆಚ್ಚಳ
 
														ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯೂ (BCCI) ಪ್ರಪಂಚದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿದ್ದು, ಖಜಾನೆಯಲ್ಲಿ ಭಾರೀ ಮೊತ್ತದ ಹಣ ಏರಿಕೆಯಾಗಿದೆ. 2023-24ರ ಆರ್ಥಿಕ ವರ್ಷದ ವರದಿಯ ಪ್ರಕಾರ ಮಂಡಳಿಯ ಬ್ಯಾಂಕ್ ಬ್ಯಾಲೆನ್ಸ್ 20 ಸಾವಿರ ಕೋಟಿ ರೂ. ದಾಟಿದೆ ಎಂದು ತಿಳಿದು ಬಂದಿದೆ.
ಕಳೆದ ಐದು ವರ್ಷಗಳಲ್ಲಿ 14,627 ಕೋಟಿ ರೂ. ಉಳಿಕೆ ಹಣವಿತ್ತು. ಅದಕ್ಕೆ ಕಳೆದ ಹಣಕಾಸು ವರ್ಷದಲ್ಲಿ 4,193 ಕೋಟಿ ರೂಪಾಯಿ ಸೇರ್ಪಡೆಯಾಗಿದೆ. ಅಲ್ಲದೇ ಬಿಸಿಸಿಐನ ಸಾಮಾನ್ಯ ನಿಧಿ ಕೂಡ ಅಧಿಕವಾಗಿದೆ. 2019ರಲ್ಲಿ 3,906 ಕೋಟಿ ರೂ. ಇದ್ದದ್ದು, 2024 ರಲ್ಲಿ 7,988 ಕೋಟಿ ರೂ. ಏರಿಕೆಯಾಗಿದೆ. ಅಂದರೆ 4,082 ಕೋಟಿ ರೂಪಾಯಿ ಅಧಿಕವಾಗಿದೆ.

ಬಿಸಿಸಿಐ ಬಳಿ ಇರುವ ಮೀಸಲು ಹಣಕ್ಕೆ ಸಿಗುವ ಬಡ್ಡಿಯೇ ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ. ಇನ್ನೂ 2024-25ರ ಹಣಕಾಸು ವರ್ಷದ ಲೆಕ್ಕಪತ್ರವನ್ನು ಸೆ.28 ರಂದು ಮುಂಬೈನಲ್ಲಿ ನಡೆಯುವ ವಾರ್ಷಿಕ ಸಭೆಯಲ್ಲಿ ಈ ವರದಿ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿ ಐಪಿಎಲ್ನಲ್ಲಿ ಆರ್ಸಿಬಿ ಗೆದ್ದಿರುವುದರಿಂದ ಬಿಸಿಸಿಐ ಆದಾಯದಲ್ಲೂ ಮತ್ತಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ.
National
BCCI ಬ್ಯಾಂಕ್ ಬ್ಯಾಲೆನ್ಸ್ ಎಷ್ಟಿದೆ ಗೊತ್ತಾ?; ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೂ 2,000 ಕೋಟಿ ರೂ.ಗೂ ಹೆಚ್ಚು ವಿತರಣೆ ನಿರೀಕ್ಷೆ
 
														ಪ್ರಸಾರ ಹಕ್ಕುಗಳಿಂದ ಬಿಸಿಸಿಐನ ಆದಾಯದಲ್ಲಿನ ಏರಿಳಿತಗಳ ಹೊರತಾಗಿಯೂ, ಸಂಸ್ಥೆಯ ಒಟ್ಟಾರೆ ಆರ್ಥಿಕ ಬೆಳವಣಿಗೆ ಹಿಂದೆಂದಿಗಿಂತಲೂ ವೇಗವಾಗಿದೆ. ಈ ಆದಾಯವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗಳೊಂದಿಗೂ ಹಂಚಿಕೊಳ್ಳಲಾಗಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತೊಮ್ಮೆ ಹಣಕಾಸಿನ ವಿಚಾರದಲ್ಲಿ ಮೇಲುಗೈ ಸಾಧಿಸಿದೆ. ಮಂಡಳಿಯ ಮೀಸಲು ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದೆ. ಕ್ರಿಕ್ಬಜ್ ವರದಿ ಪ್ರಕಾರ, 2024ರ ಸೆಪ್ಟೆಂಬರ್ ಹೊತ್ತಿಗೆ ಮಂಡಳಿಯ ಬ್ಯಾಂಕ್ ಬ್ಯಾಲೆನ್ಸ್ 20,686 ಕೋಟಿಗಳಷ್ಟಿತ್ತು. ಕಳೆದ ಐದು ವರ್ಷಗಳಲ್ಲಿ ಇದು 14,600 ಕೋಟಿಗಿಂತ ಹೆಚ್ಚಾಗಿದೆ.

ಪ್ರಸಾರ ಹಕ್ಕುಗಳಿಂದ ಬಿಸಿಸಿಐನ ಆದಾಯದಲ್ಲಿನ ಏರಿಳಿತಗಳ ಹೊರತಾಗಿಯೂ, ಸಂಸ್ಥೆಯ ಒಟ್ಟಾರೆ ಆರ್ಥಿಕ ಬೆಳವಣಿಗೆ ಹಿಂದೆಂದಿಗಿಂತಲೂ ಬಲವಾಗಿ ಮತ್ತು ವೇಗವಾಗಿದೆ. ಈ ಆದಾಯವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗಳೊಂದಿಗೂ ಹಂಚಿಕೊಳ್ಳಲಾಗಿದೆ. 2023-24 ರಲ್ಲಿ 1,990.18 ಕೋಟಿಯನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗಳೊಂದಿಗೆ ಹಂಚಿಕೊಂಡಿದ್ದು, 2024-25ಕ್ಕೆ 2,013.97 ಕೋಟಿ ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
ಮಾಧ್ಯಮ ಹಕ್ಕುಗಳು ಕುಸಿದರೂ ಬಿಸಿಸಿಐನ ಆರ್ಥಿಕ ಬೆಳವಣಿಗೆ
ವರದಿ ಪ್ರಕಾರ, 2023-24ರಲ್ಲಿ ಬಿಸಿಸಿಐನ ಹೆಚ್ಚುವರಿ ಮೊತ್ತ 1,623.08 ಕೋಟಿಗಳಾಗಿದ್ದು, ಹಿಂದಿನ ವರ್ಷ 1,167.99 ಕೋಟಿಗಳಷ್ಟಿತ್ತು. ಇದಕ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮತ್ತು ಐಸಿಸಿ ವಿತರಣೆಗಳು ಹೆಚ್ಚಿನ ಕಾರಣವಾಗಿದ್ದು, ಅಂತರರಾಷ್ಟ್ರೀಯ ಮಾಧ್ಯಮ ಹಕ್ಕುಗಳಲ್ಲಿನ ತೀವ್ರ ಕುಸಿತವನ್ನು ಸರಿದೂಗಿಸಿದೆ. ವಿಶ್ವಕಪ್ ವರ್ಷದಲ್ಲಿ ದ್ವಿಪಕ್ಷೀಯ ಸರಣಿಗಳು ಕಡಿಮೆ ಇದ್ದ ಕಾರಣ, ಹಿಂದಿನ ವರ್ಷದಲ್ಲಿ 2,524.80 ಕೋಟಿಗಳಿಗೆ ಹೋಲಿಸಿದರೆ, 2023-24ರಲ್ಲಿ ತವರಿನ ಪಂದ್ಯಗಳಿಂದ ಬಂದ ಒಟ್ಟು ಆದಾಯ 813.14 ಕೋಟಿಗೆ ಇಳಿದಿದೆ.
ಪ್ರಮುಖ ಅಂಶವೆಂದರೆ, ಹೂಡಿಕೆಗಳಿಂದಲೂ ಬಿಸಿಸಿಐಗೆ ಆದಾಯ ಬರುತ್ತದೆ. ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಲ್ಲಿನ ಠೇವಣಿಗಳಿಂದ ಮಂಡಳಿಯು 986.45 ಕೋಟಿ ಬಡ್ಡಿಯನ್ನು ಗಳಿಸಿದೆ. ಇದು 2022-23 ರಲ್ಲಿ ಗಳಿಸಿದ್ದ 533.05 ಕೋಟಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಕನಿಷ್ಠ ಅಪಾಯದೊಂದಿಗೆ ಗರಿಷ್ಠ ಆದಾಯವನ್ನು ಖಚಿತಪಡಿಸಿಕೊಳ್ಳಲು ಬಿಸಿಸಿಐನ ಹಣಕಾಸು ಕಾರ್ಯತಂತ್ರವನ್ನು ಮುನ್ನಡೆಸಿದ ಕೀರ್ತಿ ಮಾಜಿ ಕಾರ್ಯದರ್ಶಿ ಜಯ್ ಶಾ ಅವರಿಗೆ ಸಲ್ಲುತ್ತದೆ.
‘2019 ರಿಂದ ಬಿಸಿಸಿಐನ ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್ ಗಮನಾರ್ಹವಾಗಿ ಬೆಳೆದಿದೆ. ಆಗ, ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಯಾವುದೇ ಹಣವನ್ನು ನೀಡುವ ಮೊದಲು, ಅದು ₹6,059 ಕೋಟಿಗಳನ್ನು ಹೊಂದಿತ್ತು. ಈಗ, ಆ ಸಂಘಗಳಿಗೆ ಬಾಕಿ ಇರುವ ಎಲ್ಲ ಹಣವನ್ನು ವಿತರಿಸಿದ ನಂತರವೂ, ಬಿಸಿಸಿಐ ಬಳಿ ಇನ್ನೂ 20,686 ಕೋಟಿಗಳಿಗೆ ಏರಿಕೆಯಾಗಿದೆ.
2019 ರಿಂದ, ಬಿಸಿಸಿಐ ಕಳೆದ ಐದು ವರ್ಷಗಳಲ್ಲಿ ತನ್ನ ಒಟ್ಟು ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್ ಅನ್ನು 14,627 ಕೋಟಿ ಹೆಚ್ಚಿಸಿಕೊಂಡಿದೆ. ಅದರಲ್ಲಿ 4,193 ಕೋಟಿಗಳನ್ನು ಕಳೆದ ಹಣಕಾಸುವ ವರ್ಷವೊಂದರಲ್ಲಿಯೇ ಗಳಿಸಿದೆ. ಬಿಸಿಸಿಐನ ಸಾಮಾನ್ಯ ನಿಧಿ (ಒಟ್ಟಾರೆ ಕಾರ್ಯಾಚರಣೆಗಳು ಮತ್ತು ವೆಚ್ಚಗಳಿಗೆ ಬಳಸಲಾಗುತ್ತದೆ) ಕೂಡ 2019 ರಲ್ಲಿ 3,906 ಕೋಟಿಯಿಂದ ಈಗ 7,988 ಕೋಟಿಗೆ ಏರಿದೆ. ಅದು ಕೂಡ 4,082 ಕೋಟಿಯ ಹೆಚ್ಚಳವಾಗಿದೆ.
ತೆರಿಗೆ ನಿಬಂಧನೆಗಳು ಮತ್ತು ಕ್ರಿಕೆಟ್ ಅಭಿವೃದ್ಧಿ
ಬಿಸಿಸಿಐ ಸರ್ಕಾರಕ್ಕೆ ತೆರಿಗೆ ಪಾವತಿಸುವುದಿಲ್ಲ ಎಂದು ಕ್ರಿಕೆಟ್ ವಲಯದಲ್ಲಿ ಕೆಲವರು ನಂಬುತ್ತಾರೆ. ಆದರೆ, ಇದು ನಿಜವಲ್ಲ. ಇದನ್ನು ತಪ್ಪು ಎಂದು ಸಾಬೀತುಪಡಿಸಲು, ಬಿಸಿಸಿಐ 2023–24ರ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ಪಾವತಿಸಲು 3,150 ಕೋಟಿ ಮೀಸಲಿಟ್ಟಿದೆ. ಆದರೂ, ಅದು ಇನ್ನೂ ಕೆಲವು ತೆರಿಗೆ ವಿಷಯಗಳನ್ನು ನ್ಯಾಯಮಂಡಳಿಗಳಲ್ಲಿ ಮೇಲ್ಮನವಿ ಸಲ್ಲಿಸುವುದನ್ನು ಮುಂದುವರೆಸಿದೆ.
ಈಮಧ್ಯೆ, ಮಂಡಳಿಯು ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ 1,200 ಕೋಟಿ, ಪ್ಲಾಟಿನಂ ಜುಬಿಲಿ ಬೆನೆವೊಲೆಂಟ್ ಫಂಡ್ಗೆ 350 ಕೋಟಿ ಮತ್ತು ತಳಮಟ್ಟದ ಕ್ರಿಕೆಟ್ ಅಭಿವೃದ್ಧಿಗೆ 500 ಕೋಟಿ ಮೀಸಲಿಟ್ಟಿದೆ. ಈ ಹಂಚಿಕೆಗಳು, ರಾಜ್ಯ ಅಸೋಸಿಯೇಷನ್ ವಿತರಣೆಗಳೊಂದಿಗೆ ಸೇರಿಕೊಂಡು, ಆಟಗಾರರಿಗೆ ದೀರ್ಘಾವಧಿಯ ಬೆಳವಣಿಗೆ ಮತ್ತು ಬೆಂಬಲದ ಮೇಲೆ ಬಿಸಿಸಿಐನ ನಿಗಾವನ್ನು ತೋರಿಸುತ್ತದೆ.
- 
																	   Mysore24 hours ago Mysore24 hours agoಅರ್ಧವೃತ್ತಾಕಾರದ ಬೆಂಜ್ ಜೋಡಣೆ ಸಮಾನ ಕಲಿಕೆಗೆ ಪೂರಕ: ಸಂಶೋಧಕ ಸಂಜಯ್ ಸಿಂಗಮಾರನಹಳ್ಳಿ 
- 
																	   Mysore9 hours ago Mysore9 hours agoರಾಜಕೀಯ ಪಕ್ಷಗಳು ಜನಕಲ್ಯಾಣದ ಪರ್ಯಾಯ ಶಕ್ತಿ: ಡಾ.ಬಿಜೆವಿ 
- 
																	   Mandya23 hours ago Mandya23 hours agoಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ 
- 
																	   Manglore3 hours ago Manglore3 hours agoಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ‘ಸ್ಕೈವಾಕರ್’ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲಭ್ಯ 
- 
																	   Kodagu6 hours ago Kodagu6 hours agoಚನ್ನಪಟ್ಟಣದಲ್ಲಿ ಅಪಘಾತ: ಕೊಡಗಿನ ದಂಪತಿ ದುರ್ಮರಣ 
- 
																	   Hassan5 hours ago Hassan5 hours agoಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ 
- 
																	   Kodagu2 hours ago Kodagu2 hours agoವಿರಾಜಪೇಟೆ ಸುತ್ತಮುತ್ತ ಸೆ.11 ರಂದು ವಿದ್ಯುತ್ ವ್ಯತ್ಯಯ 
- 
																	   Hassan23 hours ago Hassan23 hours agoಆಚಾರ್ಯ ವಾಣಿಜ್ಯ ಪಿ.ಯು. ಕಾಲೇಜಿನಲ್ಲಿ ಹಾಸನ ಜಿಲ್ಲಾ ಚಟುಕು ಸಾಹಿತ್ಯ ಪರಿಷತ್ತಿನಿಂದ ಜಿಲ್ಲಾಮಟ್ಟದ ಕವಿಗೋಷ್ಠಿ 

 
									 
																	 
									 
																	 
									 
																	 
									 
																	 
									 
																	 
									 
																	 
											 
											 
											