Connect with us

State

ಧರ್ಮಸ್ಥಳಕ್ಕೆ ಹೊರಟ ಕಾರು ಇಪ್ಪತ್ತು ಅಡಿ ಆಳಕ್ಕೆ ಬಿದ್ದು ಜಖಂ; ಪ್ರಯಾಣಿಕರು ಪಾರು

Published

on

Dharmasthala: ಧರ್ಮಸ್ಥಳಕ್ಕೆಂದು ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಹೊಳೆಗೆ ಬಿದ್ದಿರುವ ಘಟನೆಯೊಂದು ಚಾರ್ಮಾಡಿ ಘಾಟ್‌ನ ಮಲಯ ಮಾರುತ ಬಳಿ ಸೋಮವಾರ ಸಂಭವಿಸಿರು ಕುರಿತು ವರದಿಯಾಗಿದೆ.

ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು. ನಾಲ್ವರು ಈ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾನ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಪ್ಪತ್ತು ಅಡಿ ಕೆಳಗೆ ಬಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Continue Reading
Click to comment

Leave a Reply

Your email address will not be published. Required fields are marked *

State

ಎಚ್‌ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್‌

Published

on

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.

Continue Reading

State

ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್‌

Published

on

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್‌ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.

ನವೆಂಬರ್.‌16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.

ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

State

ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಮತ್ತೊಂದು ಶಾಕ್‌: ಯೂನಿಟ್‌ಗೆ 36 ಪೈಸೆ ವಿದ್ಯುತ್‌ ದರ ಹೆಚ್ಚಿಸಿದ ಸರ್ಕಾರ

Published

on

ಬೆಂಗಳೂರು: ಗುರುವಾರ ಕರ್ನಾಟಕದ ಜನತೆಗೆ ಬಿಗ್‌ ಶಾಕ್‌. ರಾಜ್ಯ ಸರ್ಕಾರ ಜನರಿಗೆ ಎರಡೆರೆಡು ಬಿಗ್‌ ಶಾಕ್‌ ಒಂದೇ ದಿನ ನೀಡಿದ್ದು, ಜನರಿಗೆ ದಿಕ್ಕೇ ತೋಚದಂತಾಗಿದೆ.

ಹಾಲಿನ ದರ ಪರಿಷ್ಕರಣೆ ಮಾಡಿ ಬೆಳಿಗ್ಗೆ ಶಾಕ್‌ ನೀಡಿದ್ದ ಸರ್ಕಾರ, ಈಗ ವಿದ್ಯುತ್‌ ದರ ಹೆಚ್ಚಿಸಿ ಮತ್ತೊಂದು ಶಾಕ್‌ ನೀಡಿದೆ.

ಇದೇ ಏ.1 ರಿಂದ ಪ್ರತಿ ಯೂನಿಟ್‌ ವಿದ್ಯುತ್‌ ಮೇಲೆ 36 ಪೈಸೆ ಹೆಚ್ಚಿಸಲಾಗುವುದು ಎಂದು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಗುರುವಾರ ಆದೇಶ ಹೊರಡಿಸಿದೆ.

ವಿದ್ಯುತ್‌ ಪ್ರಸರಣ ಹಾಗೂ ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರ್ಯಾಚುರಿ ಪಾವತಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಏಂದು ಕೆಇಆರ್‌ಸಿ ತಿಳಿಸಿದೆ.

 

 

 

Continue Reading

Trending

error: Content is protected !!