Sports
ಮುಂದಿನ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ
ನವದೆಹಲಿ: ನಾಳೆ ಜಾತಿ ಗಣತಿ ವರದಿಯನ್ನು ಸಂಪುಟದಲ್ಲಿ ಮಂಡಿಸಬೇಕಾಗಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಈ ಬಾರಿ ಅಲ್ಲ, ಮುಂದಿನ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನವದೆಹಲಿಯಲ್ಲಿ ಕನ್ನಡ ಚಾನೆಲ್ಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ವರದಿಯೂ ಕ್ಯಾಬಿನೇಟ್ನಲ್ಲಿ ಚರ್ಚೆಯೇ ಆಗಿಲ್ಲ. ಅದು ಸಾರ್ವಜನಿಕರಿಗೆ ಮುಕ್ತವಾಗಿಲ್ಲ. ಜಾತಿಗಣತಿ ವರದಿಯಲ್ಲೇನಿದೆ ಎಂಬುದು ನನಗೆ ಗೊತ್ತಿಲ್ಲ. ಊಹಾಪೋಹಗಳು ನಡೆಯುತ್ತಿದ್ದು, ವರದಿ ಸಂಬಂಧ ಈವರೆಗೆ ಯಾವುದೇ ಅಂಕಿಅಂಶಗಳು ಬಂದಿಲ್ಲ. ಈ ಬಗ್ಗೆ ಕ್ಯಾಬಿನೇಟ್ನಲ್ಲಿ ಚರ್ಚೆ ಮಾಡಿ ಎಲ್ಲರ ಅಭಿಪ್ರಾಯದೊಂದಿಗೆ ಮುಂದುವರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೋಹನ್ ಭಾಗವತ್ ಅವರು ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕಿದ್ದು, 1947 ರಲ್ಲಿ ಅಲ್ಲ ರಾಮಮಂದಿರ ನಿರ್ಮಾಣವಾದ ಬಳಿಕ ಎಂದು ನೀಡಿದ ಹೇಳಿಕೆಗೆ ಕಿಡಿಕಾರಿದ ಸಿದ್ದರಾಮಯ್ಯ ಅವರು, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಈ ಬಗ್ಗೆ ಅವರಿಗೆ ಕೇಳಿದರೇ ಏನು ಹೇಳುತ್ತಾರೆ. ದೇಶದ ಸ್ವಾತಂತ್ರ್ಯದಲ್ಲಿ ಅವರು ಭಾಗಿಯಾಗಿರಲಿಲ್ಲ. ಬದಲಾಗಿ ಆರ್ಎಸ್ಎಸ್ ಅಂದಿನ ಕಾಲದಲ್ಲಿಯೇ ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು. ಹಾಗಾಗಿ ಅವರು ಆ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.
ಈ ಬಗ್ಗೆ ಟ್ವೀಟ್ ಕೂಡಾ ಮಾಡಿರುವ ಸಿಎಂ ಸಿದ್ದರಾಮಯ್ಯ, “ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಹೋರಾಟಗಾರರಿಗೆ ಮಾಡಿದ ಅವಮಾನ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ ಆರ್ಎಸ್ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು.
ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಸುದೀರ್ಘವಾಗಿ ಬರೆದುಕೊಂಡು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
Sports
ಮೌನ ಮುರಿದು ಮದುವೆ ವಂದತಿಗಳಿಗೆ ಫುಲ್ಸ್ಟಾಪ್ ಇಟ್ಟ ಸ್ಮೃತಿ ಮಂದಾನ
ಮುಂಬೈ: ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರೊಂದಿಗಿನ ಮದುವೆ ಮುಂದೂಡಿಕೆ ಬಗ್ಗೆ ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ತೆರೆ ಎಳೆದಿದ್ದಾರೆ.
ಮದುವೆಯನ್ನು ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವರೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್ಸ್ಟಾಪ್ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಸ್ಮೃತಿಮಂದಾನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಏನಿದೆ?
ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತ ಭಾವಿಸಿ ಮಾತನಾಡ್ತಿದ್ದೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಅದನ್ನ ಹಾಗೆಯೇ ಇಡಲು ಬಯಸುತ್ತೇನೆ. ಆದರೆ ಮದುವೆಯನ್ನ ರದ್ದುಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ.
ಈ ವಿಚಾರವನ್ನು ಇಲ್ಲಿಗೆ ಮುಗಿಸಲು ನಾನು ಬಯಸುತ್ತೇನೆ, ನೀವೂ ಕೂಡ ಈ ವಿಷಯವನ್ನ ಇಲ್ಲಿಗೆ ಬಿಡಬೇಕೆಂದು ಮನವಿ ಮಾಡುತ್ತೇನೆ. ದಯವಿಟ್ಟು ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ. ನಮ್ಮದೇ ಹಾದಿಯಲ್ಲಿ ಮುಂದುವರಿಯಲು ನಮಗೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಳ್ಳುತ್ತೇನೆ.
ನಮ್ಮೆಲ್ಲರನ್ನೂ ಮತ್ತು ನನ್ನನ್ನು ಮುನ್ನಡೆಸುವ ಒಂದು ಉನ್ನತ ಉದ್ದೇಶವಿದೆ ಎಂದು ನಾನು ನಂಬುತ್ತೇನೆ. ಅದು ಯಾವಾಗಲೂ ನನ್ನ ದೇಶವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸುತ್ತಿದೆ. ಸಾಧ್ಯವಾದಷ್ಟು ಕಾಲ ಭಾರತಕ್ಕಾಗಿ ಆಟವಾಡುವುದನ್ನ ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಬೇಕೆಂದು ನಾನು ಭಾವಿಸುತ್ತೇನೆ. ಅದರ ಕಡೆಗೆಯೇ ನನ್ನ ಗಮನ ಶಾಶ್ವತವಾಗಿರುತ್ತದೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಇದು ಮುಂದುವರಿಯುವ ಸಮಯ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಹಿಂದೆ ನಡೆದಿದ್ದು ಏನು?
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ನ.23ರಂದು ಸ್ಮೃತಿ-ಪಲಾಶ್ ಮುಚ್ಚಲ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ. ಮದುವೆಗೆ ಕೆಲ ಗಂಟೆಗಳು ಬಾಕಿಯಿರುವಾಗಲೇ ಮಂಧಾನ ತಂದೆಗೆ ಲಘು ಹೃದಯಾಘಾತವಾಗಿತ್ತು. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ಮುಂದೂಡಲು ಸ್ಮೃತಿ ನಿರ್ಧರಿಸಿದ್ದರು. ಈ ಬೆನ್ನಲ್ಲೇ ಸ್ಮೃತಿ ಮಂಧಾನ ತನ್ನ ಇನ್ಸ್ಟಾಗ್ರಾಂ ಖಾತೆಯಿಂದ ಪಲಾಶ್ ಹಾಗೂ ವಿವಾಹಕ್ಕೆ ಸಂಬಂಧಿಸಿದ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿದ್ದರು.
ಇದರ ಮಧ್ಯೆ ಸ್ಮೃತಿ ಅವರ ಜೊತೆ ಮದುವೆ ನಿಶ್ಚಯವಾಗಿದ್ದರೂ ಪಲಾಶ್ ಮುಚ್ಚಲ್ ಬೇರೊಬ್ಬ ಯುವತಿ ಜೊತೆ ಚಾಟ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬಳಿಕ ಪಲಾಶ್ ತನ್ನ ಎಕ್ಸ್ ಗರ್ಲ್ಫ್ರೆಂಡ್ ಪ್ಲಾಸ್ಟಿಕ್ ಸರ್ಜನ್ ಬಿರ್ವಾ ಶಾ ಅವರಿಗೆ ಪ್ರಪೋಸ್ ಮಾಡಿದ್ದ ಫೋಟೋಗಳು ಹಾಗೂ ಆಕೆಯೊಂದಿಗೆ ರೊಮ್ಯಾಂಟಿಕ್ ಮೂಡ್ನಲ್ಲಿದ್ದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಬಳಿಕ ಮದುವೆ ರದ್ದಾಗಿದೆ ಎಂಬ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಲೇ ಇತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಖುದ್ದು ಸ್ಮೃತಿ ಮಂದಾನ ಅವರೇ ತೆರೆ ಎಳೆದಿದ್ದಾರೆ.
Sports
ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟ ಡಿಕೆಶಿ : ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಡಿಸಿಎಂ ಘೋಷಣೆ
ಬೆಂಗಳೂರು : ಫ್ಯಾನ್ಸ್ಗೆ ಗುಡ್ನ್ಯೂಸ್ ಒಂದನ್ನು ಡಿಕೆಶಿ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಎಂದು ಸ್ವತಃ ಡಿಸಿಎಂ ಘೋಷಣೆ ಮಾಡಿದ್ದಾರೆ.
ಹೌದು, 19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. 2026ರ ಐಪಿಎಲ್ಗೆ ಆರ್ಸಿಬಿ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಕೆಎಸ್ಸಿಎ ಚುನಾವಣೆಯ ಮತದಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಾನು ಕ್ರಿಕೆಟ್ ಲವರ್, ಆರ್ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೂ ನಮ್ಮಿಂದ ಐಪಿಎಲ್ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತೆ, ನಾನ್ ಎಲ್ಲಾ ಮಾತನಾಡ್ತೀನಿ ಅಂತ ತಿಳಿಸಿದ್ದಾರೆ.
Sports
IND vs SA ODI: 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ
ಆಂಧ್ರ ಪ್ರದೇಶ: ವಿಶಾಖಪಟ್ಟಣಂನಲ್ಲಿ ಇಂದು ನಡೆದ ಟೀಂ ಇಂಡಿಯಾ ಮತ್ತು ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 9 ವಿಕೆಟ್ಗಳಿಂದ ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಭರ್ಜರಿ ಗೆಲುವು ಸಾಧಿಸಿದೆ.
ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದಲ್ಲಿ ಇಂದು ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ತಂಡ ಪೂರ್ಣ 50 ಓವರ್ಗಳನ್ನು ಆಡದೆ 47.5 ಓವರ್ಗಳಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 270 ರನ್ ಕಲೆಹಾಕಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 1 ವಿಕೆಟ್ ಕಳೆದುಕೊಂಡು 39.5 ಓವರ್ಗಳಲ್ಲಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಿದೆ.
-
Kodagu23 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Chamarajanagar23 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Mysore23 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Mandya23 hours agoಮಂಡ್ಯ ಇತಿಹಾಸದಲ್ಲಿ ಮೈಶುಗರ್ ಶಾಲೆಗೆ ವಿಶೇಷ ಸ್ಥಾನವಿದೆ : ಎಲ್ಲರೂ ಸೇರಿ ಶಾಲೆ ಉಳಿಸೋಣ – ಹೆಚ್ಡಿಕೆ
-
Mysore23 hours agoಕಳಲೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
-
Hassan23 hours agoಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
-
Kodagu24 hours agoಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
-
Mysore24 hours agoನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
