State
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 300 ಕೋಟಿ ರೂ. ಮೌಲ್ಯದ ಅಕ್ರಮ

ನವದೆಹಲಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ300 ಕೋಟಿ ರೂ. ಮೌಲ್ಯದ ಅಕ್ರಮ ಆರೋಪ ಸಂಬಂಧ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದೆ.
ದೇಶಾದ್ಯಂತ ಹಾಗೂ ವಿದೇಶದಲ್ಲೂ ಮೈಸೂರು ಮೂಲದ ಕೆ.ಎಸ್.ಓ.ಯು ನಿಯಮ ಉಲ್ಲಂಘಿಸಿ ಸಹಯೋಗ ಸಂಸ್ಥೆಗಳನ್ನು ತೆರೆದಿತ್ತು ಎಂದು ಉಲ್ಲೇಖಿಸಲಾಗಿದೆ.
ಈ ಸಹಯೋಗ ಸಂಸ್ಥೆಗಳು ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಸೇರಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಕೆ.ಎಸ್.ಓ.ಯು ಗೆ ಭರಿಸುತ್ತಿದ್ದವು. ಆದರೆ ಆಡಿಟ್ ನಲ್ಲಿ, 2013-14 ಮತ್ತು 2014-15 ಹಣಕಾಸು ವರ್ಷದಲ್ಲಿ ಈ ಸಹಯೋಗ ಸಂಸ್ಥೆಗಳು ಭರಿಸಿರುವ 50 ಕೋಟಿ ರೂ. ನಾಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಅಡಿಟ್ ನಲ್ಲಿ, 2009-10 ರಿಂದ 2012-13 ಹಣಕಾಸು ವರ್ಷಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕದಲ್ಲಿ 250 ಕೋಟಿ ರೂ. ಕಾಣೆಯಾಗಿದೆ ಇದಕ್ಕೆ ಸೂಕ್ತ ದಾಖಲೆಗಳಿಲ್ಲ.
ಒಟ್ಟು 300 ಕೋಟಿ ರೂ.ಗಳ ಅಕ್ರಮ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೆ ಎಸ್ ಓ ಯು ನಿರ್ದೇಶಕರ ಮಂಡಳಿಯು ಸಿಬಿಐ ತನಿಖೆಗೆ ಒತ್ತಾಯಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ.
State
‘ಗೃಹಲಕ್ಷ್ಮೀ’ ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ಬೇಗ ಈ ದಾಖಲೆ ರೆಡಿ ಮಾಡಿ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಗೃಹಲಕ್ಷ್ಮೀ ಯೋಜನೆ (Gruhalakshmi scheme) ಹಣ ಜಮೆ ಮಾಡಲು ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸುಧಾರಣ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.
ರಾಜ್ಯದ ಎಲ್ಲಾ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಕಚೇರಿಯಿಂದಲೇ ಯೋಜನೆ ಹಣ ಬಿಡುಗಡೆಯ ಮಾಡಲು ತಯಾರಿ ನಡೆಸುತ್ತಿದೆ. ಇದರ ಜೊತೆಗೆ,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯು ಅಂಗನವಾಡಿ ಕಾರ್ಯಕರ್ತೆಯರನ್ನು ಮನೆ ಭೇಟಿಗೆ ಸೂಚನೆ ನೀಡಿದ್ದು, ಈ ಮೂಲಕ ಫಲಾನುಭವಿಗಳಿಗೆ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ.ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗೃಹಲಕ್ಷ್ಮೀ ಯೋಜನೆ ಹಣವನ್ನು ಫಲಾನುಭವಿಗಳಿಗೆ ಪ್ರತಿ ತಿಂಗಳ 20 ತಾರೀಖಿನೊಳಗೆ ಹಣ ವರ್ಗಾವಣೆ ಮಾಡಲು ಸೂಚಿಸಿದೆ.
ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಹಣ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖೆ ಜವಾಬ್ದಾರಿ ನೀಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮನೆಗೆ ಭೇಟಿ ಫಲಾನುಭವಿಗಳಿಗೆ ಗೃಹಲಲಕ್ಷ್ಮೀ ಯೋಜನೆ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಅರ್ಹರಿಗೆ ಯೋಜನೆಯ ಹಣ ಬಾರದಿದ್ದರೆ, ಆಗಿರುವ ಸಮಸ್ಯೆಯನ್ನು ಬಗೆಹರಿಸಲು ತಿಳಿಸಲಾಗಿದೆ.
State
ಪಂಚಭೂತಗಳಲ್ಲಿ ಕ್ಯಾ| ಪ್ರಾಂಜಲ್ ಲೀನ

ಮೂರು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾಳಗದಲ್ಲಿ ಹುತಾತ್ಮರಾದ ಕ್ಯಾ| ಪ್ರಾಂಜಲ್
ಅವರು ಇಂದು ಪಂಚಭೂತಗಳಲ್ಲಿ ಲೀನರಾದರು. ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸಹಿತ ಗಣ್ಯರು ಉಪಸ್ಥಿತರಿದ್ದು ಅಂತಿಮ ಗೌರವ ನಮನ ಸಲ್ಲಿಸಿದರು. ಎಚ್ಎಎಲ್ ಏರ್ಪೋರ್ಟ್ಗೆ ಆಗಮಿಸಿದ ಸಂದರ್ಭ ಪಾರ್ಥಿವ ಶರೀರಕ್ಕೆ ಅಲ್ಲಿ ಮಿಲಿಟರಿ ಗೌರವ ಸಲ್ಲಿಸಲಾಯಿತು. ಕ್ಯಾ| ಪ್ರಾಂಜಲ್ ಅವರ ತಂದೆ ಎಂ. ವೆಂಕಟೇಶ್, ತಾಯಿ ಅನುರಾಧಾ, ಪತ್ನಿ ಅದಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ಚಂದ್ ಗೆಹೊÉàಟ್ ಗೌರವ ಅರ್ಪಿಸಿದರು. ಬಳಿಕ ಜಿಗಣಿಯ ಸ್ವಗೃಹಕ್ಕೆ ಪ್ರಾಂಜಲ್ ಪಾರ್ಥಿವ ಶರೀರವನ್ನು ತರಲಾಯಿತು. . ಇಂದು ಬೆಳಗ್ಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತಂದು ಭಾರತೀಯ ಸೇನೆ ಮತ್ತು ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮಸುಂದರ ಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಕಣ್ಣೀರಿನ ಭಾವಪೂರ್ಣ ವಿದಾಯ ಸಲ್ಲಿಸಲಾಯಿತು.
Location
ಲೂಟಿ ಮಾಡೋರಿಗೆ ನಮ್ಮ ಸರ್ಕಾರ ಅಂತ ಪ್ರೂವ್ ಮಾಡಿದ್ದಾರೆ – ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತೆ ಎಂದ HDK

– ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯುವ ಸರ್ಕಾರದ ನಡೆಗೆ ಮಾಜಿ ಸಿಎಂ ಖಂಡನೆ
– ಸಿಎಂ ವಿರುದ್ಧವೂ ವಾಗ್ದಾಳಿ
ರಾಮನಗರ: ಈ ಸರ್ಕಾರದಲ್ಲಿ ಬಡವರಿಗೆ ರಕ್ಷಣೆ ಇಲ್ಲ, ಲೂಟಿ ಮಾಡುವವರಿಗೆ, ಕೊಳ್ಳೆ ಒಡೆದು ಬದುಕುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ. ಈ ನಡವಳಿಕೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ.
ಡಿಕೆಶಿ ವಿರುದ್ಧದ ಸಿಬಿಐ ಕೇಸ್ (CBI Case) ವಾಪಸ್ ಪಡೆಯುವ ಸರ್ಕಾರದ ನಡೆಗೆ ಕುಮಾರಸ್ವಾಮಿ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಹಲವಾರು ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ಆಗಿದೆ. ಎರಡು ಬಾರಿ ಅರ್ಜಿ ವಜಾಕ್ಕೆ ಮನವಿ ಸಲ್ಲಿಸಿದ್ರೂ ಕೋರ್ಟ್ನಲ್ಲಿ ತಿರಸ್ಕಾರ ಆಗಿದೆ. ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಈ ರೀತಿಯ ಸರ್ಕಾರ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವುದು ತಪ್ಪು. ಕಾನೂನನ್ನ ಧಿಕ್ಕರಿಸಿ, ಕಾನೂನಿಗಿಂತ ನಾವೇ ದೊಡ್ಡವರು ಎಂಬುದನ್ನ ಪ್ರದರ್ಶನ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬಡವರಿಗೆ ರಕ್ಷಣೆ ಇಲ್ಲ, ಲೂಟಿ ಮಾಡುವವರಿಗೆ, ಕೊಳ್ಳೆ ಒಡೆದು ಬದುಕುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ. ಡಿಸಿಎಂ ಎಂತಹಾ ದೊಡ್ಡತನ ತೋರಿಸಿದ್ದಾರೆ ಅಂದ್ರೆ, ಈ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತೆ. ಪಾಪ ನಿನ್ನೆ ದಿನ ಡಿಸಿಎಂ ಸಂಪುಟ ಸಭೆಗೂ ಹೋಗಿಲ್ಲ. ಕಳೆದ 3 ದಿನಗಳ ಹಿಂದೆ ಸೀನಿಯರ್ ಅಡ್ವೋಕೇಟ್ಗಳನ್ನ ಕರೆದು ಸಭೆಮಾಡಿ ಇದರಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಅಂತ ಚರ್ಚೆ ಮಾಡಿದ್ದಾರೆ. ನಮಗೆ ಎಲ್ಲಾ ಮಾಹಿತಿ ಇದೆ. ಮೊನ್ನೆಯೇ ಈ ವಿಚಾರ ಗಮನಕ್ಕೆ ಬಂತು. ಸರ್ಕಾರದ ನಿನ್ನೆಯ ತೀರ್ಮಾನ, ಈ ನಡವಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತೆ. ಈ ವಿಚಾರ ಮುಂದಿನ ಸದನದಲ್ಲಿ ಚರ್ಚೆ ಮಾಡ್ತೀನಿ ಎಂದು ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಸರ್ಕಾರಕ್ಕೆ ಡಿಕೆಶಿ (DK Shivakumar) ಒತ್ತಡ ಹಾಕಿದ್ರಾ ಪ್ರಶ್ನೆಗೆ ಉತ್ತರಿಸಿ, ಇಲ್ಲಿ ಒತ್ತಡದ ಪ್ರಶ್ನೆಯೇ ಇಲ್ಲ. ಸರ್ಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡೋದಕ್ಕೆ. ತಿಳಿವಳಿಕೆ ಇರುವವರೇ ಇಂತಹ ನಿರ್ಣಯ ಮಾಡಿರೋದು ಸರ್ಕಾರಕ್ಕೆ ಛೀಮಾರಿ ಹಾಕಿದಂತೆ. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗಲ್ಲ. ಸಿಬಿಐ ನಿಂದ ವಾಪಸ್ಸ್ ತಗೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ಇದನ್ನ ತನಿಖೆ ಮಾಡಲು ಆಗುತ್ತಾ? ಲೋಕಾಯುಕ್ತ ಅಥವಾ ಪೊಲೀಸರು ಇದನ್ನ ಮಾಡಲು ಸಾಧ್ಯವೇ? ಹಿಂದಿನ ಸರ್ಕಾರ ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೇ, ಇವರು ಸ್ಪೀಕರ್ ನಿಂದ ಅನುಮತಿ ಪಡೆದಿದ್ದಾರಾ? ಇದೆಲ್ಲಾ ಕೇವಲ ಸಬೂಬುಗಳು ಅಷ್ಟೇ. ಈಗಾಗಲೇ ತನಿಖೆ ಮುಂದುವರಿಸಿ ಅಂತಾ ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದ್ರೂ ಕೇಸ್ ವಾಪಸ್ಸ್ ಪಡೆಯಲು ಆಗುತ್ತಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದೇ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ರದ್ದು ಮಾಡಿ, ಅಕ್ರಮ ಮುಚ್ಚಿಹಾಕಿದ್ರು. ಇದರಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆಹಾಕಲು ಹೊರಟಿದ್ದಾರೆ ಎಂದು ಸಿಎಂ ವಿರುದ್ಧವೂ ಕಿಡಿ ಕಾರಿದ್ದಾರೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ