Chikmagalur
ಕಳೆದು ಹೋಗಿದ್ದ ಮೊಬೈಲ್ ಪತ್ತೆಹಚ್ಚಿ ಹಿಂತಿರುಗಿಸುತ್ತಿರುವ ಸೆನ್ ಠಾಣೆಯ ಪೊಲೀಸರ ಕಾರ್ಯ ಶ್ಲಾಘನೀಯ : ಎಸ್ಪಿ ವಿಕ್ರಮ ಅಮಟೆ

ಚಿಕ್ಕಮಗಳೂರು: ಕದ್ದ ಮತ್ತು ಕಳೆದುಹೋದ ಮೊಬೈಲ್ ಫೋನ್ ಗಳನ್ನು ಸಿಇಐಆರ್ ವ್ಯವಸ್ಥೆಯ ಮೂಲಕ ಪತ್ತೆಹಚ್ಚಿ, ಮೊಬೈಲ್ಗಳನ್ನು ಮಾಲೀಕರಿಗೆ ಹಿಂತಿರುಗಿಸುವಲ್ಲಿ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ವಿಕ್ರಮ ಅಮಟೆ ತಿಳಿಸಿದರು.
ಇಂದು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ CEIR ಪೋರ್ಟಲ್ ಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೋನ್ಗಳನ್ನು ಪತ್ತೆ ಹಚ್ಚುವಲ್ಲಿ ಕೇಂದ್ರ ಸಲಕರಣೆ ಗುರುತಿಸುವಿಕೆ ನೋಂದಣಿ (Central Equipment Identity Register- CEIR) ವ್ಯವಸ್ಥೆ ಸಹಕಾರಿಯಾಗಿದ್ದು, ಈ ಸೇವೆಯನ್ನು ಬಳಸಿಕೊಂಡು ಪೊಲೀಸರು ಇಂತದ್ದೊಂದು ಯಶಸ್ವಿ ಕಾರ್ಯಚರಣೆ ಮಾಡಿದ್ದಾರೆ. ಅದಲ್ಲದೇ ಈ ತಂತ್ರಜ್ಞಾನ ಫೋನ್ ಕಳ್ಳರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.
ಈ ಪೋರ್ಟಲ್ ಮೂಲಕ ಕಳೆದು ಹೋದ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ ನಮ್ಮ ಎಲ್ಲಾ ಠಾಣಾಧಿಕಾರಿಗಳು, ಅದರಲ್ಲೂ ಮುಖ್ಯವಾಗಿ CEIR ಠಾಣೆಯ ಪೊಲೀಸರು ಮೊಬೈಲ್ ಟ್ರೇಸ್ ಮಾಡುವುದಲ್ಲಿ ಯಶಸ್ವಿಯಾಗಿದ್ದಾರೆ. 2022 ರ ನಂತರ CEIR ಪೋರ್ಟಲ್ ನಲ್ಲಿ ಕಳೆದುಹೋದ ಮೊಬೈಲ್ ನ ದಾಖಲೆಗಳನ್ನು ಹಾಕಿದರೆ ಆ ದಾಖಲೆಗಳ ಅನುಸಾರ ಮೊಬೈಲ್ ನನ್ನು ಹುಡುಕಲು ಸಹಾಯ ಆಗುತ್ತದೆ. ಈ ಮೂಲಕ ಕಳೆದುಹೋದ ಮೊಬೈಲ್ ನನ್ನ ಟ್ರೇಸ್ ಮಾಡಬಹುದು ಅಲ್ಲದೆ ಅದು ಯಾವುದೇ ಕ್ರಿಮಿನಲ್ ಪ್ರಕರಣಗಳಿಗೆ ಬಳಸಿದಂತೆ ಅದನ್ನು ಬ್ಲಾಕ್ ಮಾಡಬಹುದು ಎಂದು ತಿಳಿಸಿದರು.
ಹಿಂದೆ ಮೊಬೈಲ್ ಕಳೆದುಕೊಂಡವರಿಗೆ ಮೊಬೈಲ್ ಫೋನ್ ಮರಳಿ ಸಿಗುವುದೇ ಕಷ್ಟ ಆಗಿತ್ತು ಆದರೆ ಈ ವಿಶೇಷವಾದ ಪೋರ್ಟಲ್ ನಿಂದ ಪೊಲೀಸರು ಮೊಬೈಲ್ ಗಳನ್ನ ಟ್ರೇಸ್ ಮಾಡಿ ವಾರಸುದಾರರಿಗೆ ಹಿಂತಿರುಗಿಸುತ್ತಿದ್ದಾರೆ. ಒಂದು ವೇಳೆ ಯಾವುದಾದರೂ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದು ಹೋದರೆ ಅದರ ವಾರಸುದಾರರು ತಕ್ಷಣ CEIR ಪೋರ್ಟಲ್ ನಲ್ಲಿ ಮೊಬೈಲ್ ಮಾಹಿತಿಯನ್ನು ದಾಖಲಿಸಬೇಕು. ಅವರಿಗೆ ಅದು ಸಾಧ್ಯವಾಗದಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಬೇಕು. ಅದನ್ನು ಹುಡುಕಿ ಕೊಡುವುದರ ಜೊತೆಗೆ ಅದು ಯಾವುದೇ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರು.
ಈ ಕಾರ್ಯಾಚರಣೆಯಲ್ಲಿ ಪಿಐ ಗವಿರಾಜ್, ಪಿಎಸ್ ಐ ಗಳಾದ ರಘುನಾಥ್, ವಿಶ್ವನಾಥ್, ಸಿಬ್ಬಂದಿಗಳಾದ ಅನ್ವರ್, ಹರಿಪ್ರಸಾದ್, ಹರೀಶ್, ಮಹೇಂದ್ರ, ರಮೇಶ್, ಶಿವು, ಧರ್ಮರಾಜ್, ಶೀಲಾ, ಮಾನಸ, ಸವಿತ ಪಾಲ್ಗೊಂಡಿದ್ದರು.
Chikmagalur
ಜನರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರುವ ಅಂತರ್ಜಾಲ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ದಿನ ನಿತ್ಯ ಜೀವನದಲ್ಲಿ ಅಂತರ್ಜಾಲವನ್ನು ಉಪಯೋಗಿಸಿಕೊಂಡೆ ತಮ್ಮ ಎಲ್ಲಾ ಕೆಲಸವನ್ನು ಕುಳಿತ ಜಾಗದಲ್ಲೇ ಮಾಡುತ್ತಿದ್ದಾರೆ. ಆದರೆ ಈ ಅಂತರ್ಜಾಲ ಜನರನ್ನು ಮೋಸದ ಬಲೆಗೆ ಬೀಳಿಸುವ ಮಾಯಜಾಲವಾಗಿ ಪರಿವರ್ತನೆಯಾಗಿದೆ ಎಂದು ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಹೇಳಿದರು.
ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಯುವ ಜನತೆಯಂತೂ ಪ್ರತೀಕ್ಷಣವೆಂಬಂತೆ ಅಂತರ್ಜಾಲದಲ್ಲಿ ಜಾಲಾಡುವುದನ್ನು ಕಾಣಬಹುದು. ಇದೊಂದು ರೀತಿಯ ಮಾಯಾಜಾಲ. ಇಂದು ಪ್ರತಿಯೊಬ್ಬರೂ ಸ್ಮಾರ್ಟ್ಫೋನ್ ಹೊಂದಿದ್ದು, ಇಂಟರ್ನೆಟ್ ಕೂಡಾ ಬಳಸುತ್ತಿರುತ್ತಾರೆ. ಆದರೆ ಇಂಟರ್ನೆಟ್ ಬಳಸುವ ಪ್ರತಿಯೊಬ್ಬರಿಗೂ ಸುರಕ್ಷತೆಯ ಅಂತರ್ಜಾಲ ಬಳಕೆಯ ಕುರಿತು ತಿಳಿದಿರುವುದಿಲ್ಲ. ಈ ಪ್ರಭಾವಿ ಅಂತರ್ಜಾಲ ಪ್ರಪಂಚ ಮಕ್ಕಳಿಂದ ಹಿಡಿದು ಹಿರಿಯರವರೆಗೂ ವ್ಯಾಪಿಸಿದೆ.
ಸದ್ಯ ಕಚೇರಿ ಕೆಲಸಗಳನ್ನು ಕುಳಿತಲ್ಲಿಂದಲೇ ಮಾಡುವ ಪರಿಣತಿಯನ್ನು ಹೊಂದಿದ ಬಳಕೆದಾರರು ಅನೇಕರಿದ್ದಾರೆ. ಅಷ್ಟರ ಮಟ್ಟಿಗೆ ಇಂಟರ್ನೆಟ್ ಬಳಕೆ ಮತ್ತು ಅದರ ಉಪಯೋಗವಾಗುತ್ತಿದೆ. ಆದರೆ ಇಷ್ಟೆಲ್ಲಾ ಪ್ರಯೋಜನ ಒದಗಿಸುವ ಇಂಟರ್ನೆಟ್ನಿಂದ ತೊಂದರೆಯೂ ಇದೆ ಎಂದು ಹೇಳಿದರು.
ಪೇಜ್ಗಳಿಂದ ಯಾವುದೇ ಆಪ್ಗಳನ್ನು ಡೌನಲೋಡ್ ಮಾಡಿಕೊಳ್ಳದಿರಿ. ನೀವು ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಉತ್ತಮ. ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಿಗೆ ಅಸುರಕ್ಷಿತ ಆಪ್ಗಳಿಂದ ಅಪಾಯ ಸಾಧ್ಯತೆ ಹೆಚ್ಚು. ಆದ್ದರಿಂದ ಇಂಥ ಅಸುರಕ್ಷಿತ ಆಪ್ಗಳನ್ನು ದೂರವಿಡಿ ಎಂದರು.
ಸುರಕ್ಷತೆಯ ಕುರಿತು ಪೋಷಕರು ಮಕ್ಕಳೊಂದಿಗೆ ಮುಕ್ತ ಸಂವಾದ ನಡೆಸಿ. ಸೈಬರ್ ವಂಚಕರು ತಮ್ಮ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಲು ಮಕ್ಕಳನ್ನು ಪ್ರಚೋದಿಸಬಹುದು. ಹುಟ್ಟಿದ ದಿನಾಂಕ ಅಥವಾ ವಿಳಾಸದಂತಹ ವೈಯಕ್ತಿಕ ಮಾಹಿತಿಯನ್ನು ವಿಶೇಷವಾಗಿ ಅಪರಿಚಿತರಿಗೆ ಬಹಿರಂಗಪಡಿಸದಂತೆ ಮಕ್ಕಳಿಗೆ ತಿಳಿಸಿ. ನಿಮ್ಮ ಮಕ್ಕಳಿಗೆ ಅನುಮಾನಾಸ್ಪದ ಚಟುವಟಿಕೆ ಬಗ್ಗೆ ತಿಳಿದರೆ , ತಕ್ಷಣವೇ ನಿಮಗೆ ಹೇಳಲು ತಿಳಿಸಬೇಕು. ನಿಮ್ಮ ಸ್ಮಾರ್ಟ್ಫೋನ್ಗೆ ಪಾಸ್ವರ್ಡ್ ಸ್ಟ್ರಾಂಗ್ ಇರಲಿ,. ಫೇಸ್ಬುಕ್, ಯೂಟ್ಯೂಬ್, ಜೀಮೇಲ್, ಗೂಗಲ್ ಮ್ಯಾಪ್ ಮತ್ತು ಗೂಗಲ್ ಅಕೌಂಟ್ ಸೇರಿದಂತೆ ನೀವು ಬಳಸುವ ಎಲ್ಲ ಸಾಮಾಜಿಕ ತಾಣಗಳಲ್ಲಿ ನಿಮ್ಮ ಮಾಹಿತಿ ಇರುತ್ತದೆ. ಹೀಗಾಗಿ ಈ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಕಠಿಣ ಪಾರ್ಸ್ವರ್ಡ್ ಇಡಬೇಕು. ಇದರಿಂದ ನಿಮ್ಮ ಅಂತರ್ಜಾಲ ಮಾಹಿತಿ ಸೋರಿಕೆ ತಡೆಯಬಹುದು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ಎನ್.ಐ.ಸಿಯ ಸೂಚನಾಧಿಕಾರಿ ಚಂದ್ರುಪ್ರಕಾಶ ಮಾತನಾಡಿ ಆನ್ಲೈನ್ ಮತ್ತು ವಿಡಿಯೋ ಕರೆ ಮಾಡಿ. ಪೋಷಕರಿಗೆ ಅಥವಾ ಮಕ್ಕಳಿಗೆ ಡಿಜಿಟಲ್ ಬಂಧನವೆಂದು ನಿಮ್ಮನ್ನು ಭಯಪಡಿಸಬಹುದು ಅದರಿಂದ ಅಪರಿಚಿತ ಸಂಖ್ಯೆಯಿಂದ ಕರೆಗಳು ಬಂದರೆ ನಿರ್ಲಕ್ಷಿಸಿ ಯಾವುದಾದರು ಆಪ್ ಅಥವಾ ವೆಬ್ಸೈಟ್ ಬಳಸಬೇಕಾದರೇ ಅವರು ನಿಮ್ಮ ಕಡೆಯಿಂದ ನಿಮ್ಮ ಕಾಂಟ್ಯಾಕ್ಟ್ಸ್, ಲೊಕೇಷನ್, ಕ್ಯಾಲೆಂಡರ್, ಕ್ಯಾಮೆರಾ ಹೀಗೆ ಕೆಲವು ಮಾಹಿತಿಗಳನ್ನು ಹಂಚಿಕೊಳ್ಳಲು ಅನುಮತಿ ಕೋರುತ್ತಾರೆ. ಆಗ ಅನಗತ್ಯವಾಗಿ ಎಲ್ಲ ಡಾಟಾ ಮಾಹಿತಿ ಹಂಚಿಕೆಗೆ ಅನುಮತಿ ನೀಡಬೇಡಿ. ಇದರಿಂದ ನಿಮ್ಮ ವೈಯಕ್ತಿಕ ದಾಖಲೆಗಳು ಸೋರಿಕೆಯಾಗುತ್ತದೆ ಹಾಗೂ ವ್ಯಕ್ತಿಯ ಖಾಸಗಿ ಮಾಹಿತಿ, ಬ್ಯಾಂಕ್ ಹಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
ಕಾರ್ಯಗಾರದಲ್ಲಿ ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಜಿಲ್ಲಾ ಸಹಾಯಕ ಕಾರ್ಯದರ್ಶಿ ನಯನ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
Chikmagalur
ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾ*ವು

ಚಿಕ್ಕಮಗಳೂರು :
ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು
ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ಘಟನೆ
ಪ್ರತಾಪ್ (28) ಗೋವಿಂದ (30) ಮೃತ ದುರ್ದೈವಿಗಳು
ಅಜ್ಜಂಪುರದ ಐತಿಹಾಸಿಕ ಅಂತರಘಟ್ಟೆ ಜಾತ್ರೆಗೆ ಹೋಗುವಾಗ ಘಟನೆ
11 ದಿನದ ಅಂತರಘಟ್ಟೆ ಜಾತ್ರೆಯಲ್ಲಿ ಇಂದು ಕಡೇ ದಿನ
ಮೃತರು ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಮೂಲದವರು
ಓವರ್ ಸ್ಪೀಡ್ ನಲ್ಲಿ ಹೋಗಿ ಮರಕ್ಕೆ ಡಿಕ್ಕಿಯೊಡೆದ ಬೈಕ್
ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು
Chikmagalur
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರೀಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಸಖರಾಯಪಟ್ಟಣ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿ ಸೇರಿದಂತೆ ಸಖರಾಯಪಟ್ಟಣ ವ್ಯಾಪ್ತಿಯ ರಸ್ತೆ, ದೇವಸ್ಥಾನ, ಸಮುದಾಯ ಭವನ, ಕಾಂಪೌಂಡ್ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮಾಂತರ ಭಾಗವನ್ನು ಒಳಗೊಂಡಂತೆ ಕ್ಷೇತ್ರಕ್ಕೆ ಒಟ್ಟು ೨೫ ಕೋಟಿ ರೂ.ಗಳ ವಿಶೇಷ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ದೇವಸ್ಥಾನ, ಆಟೋ ನಿಲ್ದಾಣ ಹಾಗೂ ರಸ್ತೆ ಸೇರಿದಂತೆ ಸುಮಾರು ೨ ಕೋಟಿಗೂ ಹೆಚ್ಚಿನ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ೪ ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಗುಬ್ಬಿಹಳ್ಳಿ ಗೇಟ್ನಿಂದ ದೇವನೂರುವರೆಗೂ ಒಟ್ಟು ೨೯ ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದ ಅವರು ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯಗಳನ್ನು ನಿಷ್ಠೆಯಿಂದ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರವು ಸಮಾಜದ ಎಲ್ಲಾ ಬಡವರು, ಹಿಂದುಳಿದ ವರ್ಗ ಹಾಗೂ ಶೋಷಿತ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿ ಅವರ ಏಳಿಗೆಗಾಗಿ ದುಡಿಯುವುದಲ್ಲದೇ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಯೋಜನಾ ವ್ಯಾಪ್ತಿಯಲ್ಲಿ ನಮ್ಮ ಕ್ಷೇತ್ರ ಇಲ್ಲದಿದ್ದರು ಸಹ ಮನವಿ ಮೇರೆಗೆ ಹಳೇಬೀಡು, ದೇವನೂರು, ಬೆಳವಾಡಿ ಕೆರೆಗಳನ್ನು ಭರ್ತಿಗೊಳಿಸಿರುವುದು ಇಲ್ಲಿನ ರೈತರ ಸಂತಸಕ್ಕೆ ಕಾರಣವಾಗಿದೆ ಹೇಳಿದರು.
ಈ ಸಂದರ್ಭದಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿ ಮನೆ ಸತೀಶ್, ಗಣೇಶ್, ರಾಜಣ್ಣ, ಕಿರಣ್, ಲೋಕೇಶ್, ಸಚಿನ್ಎತ್ತಿನ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
-
Hassan20 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Kodagu15 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Kodagu12 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu12 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Mysore20 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan16 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State13 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan20 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ