Mysore
ಮುಖ್ಯಮಂತ್ರಿ ಆದಾಗ ಅಭಿವೃದ್ಧಿ ಮಾಡಲಿಲ್ಲ, ಈಗ ಯಾವ ಅಭಿವೃದ್ಧಿ ಮಾಡುತ್ತಾರೋ ಮಾಜಿ ಸಿ.ಎಂ, : ಕೃಷಿ ಸಚಿವ ಚೆಲುವರಾಯ ಸ್ವಾಮಿ, ಪ್ರಶ್ನೆ

ಸಾಲಿಗ್ರಾಮ : ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಮಂಡ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ ಈಗ ಯಾವ ಅಭಿವೃದ್ಧಿ ಮಾಡುತ್ತಾರೆ ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಪ್ರಶ್ನಿಸಿದರು.
ಅವರು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರವಾಗಿ ಮತ ಪ್ರಚಾರ ನಡೆಸಿ ಮಾತನಾಡಿದರು. ಅಧಿಕಾರದಲ್ಲಿ ಇದ್ದಾಗ ಬೇಕಾದಷ್ಟು ಕೆಲಸ ಕಾರ್ಯ ಗಳನ್ನು ಮಾಡಿ ಅಭಿವೃದ್ಧಿ ಪಡಿಸಬಹುದಿತ್ತು, ಆದರೆ ಈಗ ಸುಳ್ಳು ಭರವಸೆ ನೀಡುತ್ತಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಸುಳ್ಳು ಹೇಳಿಕೊಂಡು ಬಿಜೆಪಿ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ನಡೆಯುತ್ತಿದೆ,ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಾಗಿದ್ದ ತೆರಿಗೆ ಪಾಲಿನ ಹಣವನ್ನು ನೀಡಿಲ್ಲ, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.ಬಿಜೆಪಿ ಪಕ್ಷ ಮತ್ತು ಅದರ ನಾಯಕರುಗಳನ್ನು ಅತಿ ಹೆಚ್ಚು ಟೀಕೆ ಮಾಡುತ್ತಿದ್ದ ಎಚ್.ಡಿ.ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಚುನಾವಣೆಯಲ್ಲಿ ಅವರೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.ಲೋಕಸಭಾ ಚುನಾವಣೆ ಮುಗಿದ ನಂತರ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ, ಎಂದು ವಿರೋಧಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆದರೆ ನಮ್ಮದು ಜನಪರ ಸರ್ಕಾರ, ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಬಂದ ಕೆಲವು ದಿನಗಳಲ್ಲಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ಅವುಗಳನ್ನು ಮುಂದೆಯೂ ನಡೆಸಿಕೊಂಡು ಹೋಗುತ್ತೇವೆ ಎಂದರು.ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ರಾಜ್ಯದ ಜನತೆ ತಿರಸ್ಕಾರ ಮಾಡಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಶಾಸಕ ಡಿ.ರವಿಶಂಕರ್ ಮಾತನಾಡಿ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕುಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ. ಈಗಾಗಲೇ ಸಾಲಿಗ್ರಾಮಕ್ಕೆ ಅಗತ್ಯವಿರುವ ಹಲವು ಕೆಲಸಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು ಮುಂದಿನ ದಿನಗಳಲ್ಲಿ ಅವುಗಳನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಮಾಡಲಾಗುವುದು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಅಧಿಕ ಮತಗಳಿಂದ ಆಯ್ಕೆ ಮಾಡುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಲು ಕ್ಷೇತ್ರದ ಜನರು ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ ನಾನೊಬ್ಬ ಮಂಡ್ಯ ಜಿಲ್ಲೆಯ ರೈತನ ಮಗನಾಗಿದ್ದು ಜನಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡುವ ಮೂಲಕ ತಮ್ಮಗಳ ಸೇವೆಯನ್ನು ಮಾಡಲು ನನಗೊಂದು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಸಾಲಿಗ್ರಾಮ ಪಟ್ಟಣಕ್ಕೆ ಆಗಮಿಸಿದ ಸಚಿವರು, ಶಾಸಕರು ಹಾಗೂ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಳನ್ನು ಬೃಹತ್ ಗಾತ್ರದ ಮೋಸಂಬಿ ಹಾರವನ್ನು ಹಾಕುವುದರ ಮೂಲಕ ಸ್ವಾಗತಿಸಿದರು.ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜಯ ಘೋಷಣೆಗಳನ್ನು ಮೊಳಗಿಸಿ, ಪಟಾಕಿ ಸಿಡಿಸಿ, ವಾದ್ಯ ಮೇಳಗಳೊಂದಿಗೆ ಸಂಭ್ರಮದಿಂದ ಕಾಂಗ್ರೆಸ್ ಪಕ್ಷದ ನಾಯಕರುಗಳನ್ನು ಸ್ವಾಗತಿಸಿದರು.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತೀಬ್ಬೆಗೌಡ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಸದಸ್ಯ ಸಿ.ಪಿ.ರಮೇಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಸ್.ಎಸ್.ಸಂದೇಶ, ಜಿ. ಪಂ. ಮಾಜಿ ಸದಸ್ಯರುಗಳಾದ ಸಿದ್ದಪ್ಪ, ರಾಜಯ್ಯ, ತಾ.ಪಂ. ಮಾಜಿ ಅಧ್ಯಕ್ಷರುಗಳಾದ ಹಾಡ್ಯ ಮಹದೇವಸ್ವಾಮಿ, ಹೆಚ್.ಟಿ.ಮಂಜಪ್ಪ, ಮಾಜಿ ಸದಸ್ಯರಾದ ಎ.ಟಿ.ಗೋವಿಂದೇಗೌಡ, ಸಣ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಉದಯ್ ಶಂಕರ್, ಮಹದೇವ್, ವಕ್ತಾರ ಜಾಬೀರ್, , ಮುಖಂಡರುಗಳಾದ ಕೋಳಿ ಪ್ರಕಾಶ್, ಜಿ.ಕೆ.ತೋಟಪ್ಪನಾಯಕ, ಮಂಚನಹಳ್ಳಿ ನಹಳ್ಳಿ ರಾಘು, ಹೆಬ್ಬಾಳು ನಾಗೇಂದ್ರ, ಗೀತಾ, ಮಿರ್ಲೆ ರಾಣಿ,ಸುನೀತಾ, ರಶ್ಮಿ, ಸರಿತಾ, ಕಳ್ಳಿಮುದ್ದನಹಳ್ಳಿ ಚಂದ್ರು, ಪರೀಕ್ಷಿತ್, ಗಿರೀಶ್, ಪೂರ್ಣಚಂದ್ರಗೌಡ, ಅರುಣ್ ರಾಜ್, ಬಲಾರಾಮೇಗೌಡ, ಲಕ್ಕಿಕುಪ್ಪೆ ಮಂಜೇಗೌಡ,
ಡಿ.ತಮ್ಮಯ್ಯ, ಪ್ರಶಾಂತ್, ಪುರಿಗೋವಿಂದರಾಜು ಸೇರಿದಂತೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರುಗಳು ಇದ್ದರು
Mysore
ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Mysore
ಎಚ್ಸಿಎಂ ಮನೆಗೆ ದಸಂಸ ಮುಖಂಡರಿಂದ ಮುತ್ತಿಗೆ ಯತ್ನ

ಮೈಸೂರು: ಸಚಿವ ಡಾ. ಹೆಚ್ ಸಿ ಮಹದೇವಪ್ಪ ನಿವಾಸಕ್ಕೆ ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ದಸಂಸ ಕಾರ್ಯಕರ್ತರು ರಾಜ್ಯ ಸರ್ಕಾರರವನ್ನು ಎಷ್ಟೇ ಮನವಿ ಮಾಡಿದರೂ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಬೇಸತ್ತು ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ ಮಹದೇವಪ್ಪ ನಿವಾಸಕ್ಕೆ ಕೂಡಲೇ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.
ದಲಿತ ಸಂಘರ್ಷ ಸಮಿತಿ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದು ಎಲ್ಲರನ್ನು ಪೊಲೀಸರು ಬಂಧಿಸಿದ್ದಾರೆ.
Mysore
ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿ

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್,ಸದಸ್ಯರಾದ ಗೌತಮ್ ಸಾಲೇಚ ಮತ್ತು ರಿತೇಶ್ ಗೌಡ ಭೇಟಿ ಮಾಡಿ ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಬೇಸ್ ಮೆಂಟ್ನಲ್ಲಿ ನಿಲ್ಲಿಸಿದ್ದು ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿಸಿದರು .
ಕಾಮಗಾರಿ 2019 ರಲ್ಲಿ ಆದೇಶ ಪಡೆದ ಗುತ್ತಿಗೆದಾರರು 2021 ರಲ್ಲಿ ಬೇಸ್ ಮೆಂಟ್ ವರೆಗೆ ಮಾತ್ರ ಮಾಡಿ ನಿಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಮಳೆಗೆ ಶಿಥಿಲವಾಗುತ್ತಿದೆ. ಕೇಂದ್ರ ಸರ್ಕಾರದ 3 ಕೋಟಿ ರೂಪಾಯಿ
ರಾಜ್ಯ ಸರ್ಕಾರದ 1 ಕೋಟಿ ರೂಪಾಯಿ ಮೈಸೂರು ಕೈಗಾರಿಕೆಗಳ ಸಂಘದ 50 ಲಕ್ಷ ರೂಪಾಯಿ ಕೆ.ಐ.ಎ.ಡಿ.ಬಿ.ಗೆ ವಿ.ಐ.ಪಿ.ಸಿ ಮೂಲಕ ನೀಡಿ 20020 ರಲ್ಲಿ ಕಟ್ಟಡ ಪೂರ್ಣ ಗೊಳಿಸುವ ಭರವಸೆ ಹುಸಿಯಾಗಿದೆ.
ಕೂಡಲೇ ಕಾಮಗಾರಿ ಪುನಾರಂಬಿಸುವಂತೆ ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯ ನಿರ್ವಾಹಕ ಮಹೇಶ್ ಅವರಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೂರವಾಣಿಯಲ್ಲಿ ಸೂಚಿಸಿದರು.
ಜಿತೋ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಸ್ಟಾರ್ ಏರ್ ಲೈನ್ಸ್ ಮಾಲೀಕ ಶ್ರೀ ಸಂಜಯ್ ಗೋದಾವತ್ ಮೈಸೂರಿನಲ್ಲಿ ಅವರ ವಿಮಾನ ಸೇವೆಯನ್ನು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಪೂರ್ಣಗೊಂಡ ಬಳಿಕ ಒದಗಿಸಲಾಗುವುದು ಎಂದು ತಿಳಿಸಿದ ವಿಷಯವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಇತು.
ಇದಕ್ಕೆ ಪ್ರಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು ವಿಮಾನಗಳ ಸದ್ಭಳಕೆ ದಿಕ್ಕಿನಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಸೂಕ್ತ ಪ್ರಚಾರ ಮಾಡಬೇಕೆಂದರು.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ