Mandya
ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಸ್ವರ್ಣ ಲೇಪಿತ ಛಾಮರ ಕೊಡುಗೆ
ವೈರಮುಡಿಯಂದೇ ಮನೆ ದೇವರಿಗೆ ಕೊಡುಗೆ ನೀಡಿದ ಎನ್.ಚಲುವರಾಯಸ್ವಾಮಿ
ಮಂಡ್ಯ: ವೈರಮುಡಿ ದಿನದಂದೇ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಏಳು ಅಡಿ ಎತ್ತರದ ಸ್ವರ್ಣ ಲೇಪಿತ ಛಾಮರ(ಛತ್ರಿ)ವನ್ನ ಕೊಡುಗೆಯಾಗಿ ನೀಡಿದರು.
ಶುಕ್ರವಾರ ರಾತ್ರಿ ನಡೆದ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸಿದ ಸಚಿವ ಚಲುವರಾಯಸ್ವಾಮಿ ಅವರು, 5.5 ಕೆ.ಜಿ ಬೆಳ್ಳಿ ಮೇಲೆ ಸ್ವರ್ಣ ಲೇಪಿತವಾದ ಛಾಮರವನ್ನು ಪತ್ನಿ ಧನಲಕ್ಷ್ಮಿ ಜೊತೆಗೂಡಿ ಸರ್ಮಪಿಸಿ ಭಕ್ತಿ ಮೆರೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೇಲುಕೋಟೆ ಚಲುವನಾರಾಯಣಸ್ವಾಮಿ ನಮ್ಮ ಮನೆ ದೇವರು. ಪುರಾತನ ಕಾಲದಿಂದಲೂ ನಮ್ಮ ಕುಟುಂಬಕ್ಕೆ ಚಲುವನಾರಾಯಣಸ್ವಾಮಿ ಕುಟುಂಬದ ಕುಲದೇವರು. ಈ ದೇವಸ್ಥಾನಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಆಲೋಚನೆಯಲ್ಲಿದ್ದಾಗ ಇಲ್ಲಿನ ಶ್ರೀನಿವಾಸ್ ನರಸಿಂಹನ್ ಗುರೂಜಿ ಹಾಗೂ ಇತರರು ಚೆಲುವನಾರಾಯಣಸ್ವಾಮಿಗೆ ಪೂಜೆ ಮಾಡುವುದು ಸರ್ವೇ ಸಾಮಾನ್ಯ. ಸ್ವಾಮಿಗೆ ಛಾಮರ ಇಲ್ಲ, ಅದರ ಅವಶ್ಯಕತೆ ಇದೆ ಎಂದಿದ್ದಕ್ಕೆ ಆ ಭಗವಂತನ ಸನ್ನಿಧಾನಕ್ಕೆ ಈ ಛಾಮರ ಸರ್ಮಪಿಸಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಂತರ ಮಾತನಾಡಿದ ಶ್ರೀನಿವಾಸ್ ನರಸಿಂಹನ್ ಗುರೂಜಿ, ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾಗಿರುವ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಸಮರ್ಪಿಸಿರುವ ಛಾಮರವನ್ನು(ಸ್ವರ್ಣ ಛತ್ರಿ) ಯತಿರಾಜರ ಗುರುಪೀಠದ ಮಾರ್ಗದರ್ಶನದಂತೆ 5.5 ಕೆ.ಜಿ.ಬೆಳ್ಳಿಯ ಮೇಲೆ ಸ್ವರ್ಣಲೇಪಿತವಾದ 7ಕೆ.ಜಿ.ಛತ್ರಿ ನೀಡಿದ್ದಾರೆ ಎಂದರು.

ಈ ಛತ್ರಿಯನ್ನ ಸಾರ್ವಭೌಮತ್ವ ಎನ್ನಬಹುದು? ಹಿಂದೆ ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕದ ವೇಳೆ ಕಿರೀಟ ಧಾರಣೆ ಜತೆಗೆ ಛತ್ರಿ ಸಮರ್ಪಣೆಗೆ ನಿಗದಿಯಾಗಿತ್ತಾದರೂ ರಾಮನಿಗೆ ಅಂದು ಪಟ್ಟಾಭಿಷೇಕವಾಗಲಿಲ್ಲ, ಆಗ ಅಲ್ಲೇ ಇದ್ದ ಲಕ್ಷ್ಮಣ, ಕಲಿಯುಗದಲ್ಲಿ ರಾಮಾನುಜಾಚಾರ್ಯನಾಗಿ ಅವತಾರವೆತ್ತಿ ಅದೇ ದಿನ ಮೇಲುಕೋಟೆಯ ಚಲುವನಾರಾಯಣಸ್ವಾಮಿಗೆ ವೈರಮುಡಿ ವಜ್ರ ಕಿರೀಟ ಧಾರಣೆ ಮಾಡಿದರು. ಆಗ ಛತ್ರಿ ಇರಲಿಲ್ಲ. ಇದೀಗ ಸಚಿವರು ಕಿರೀಟ ಧಾರಣೆಗಾಗಿ ಛತ್ರಿ ನೀಡುವ ಮೂಲಕ ವೈರಮುಡಿ ಉತ್ಸವ ಪೂರ್ಣತ್ವಗೊಳಿಸಿರುವುದು ವಿಶೇಷ ಎಂದು ಶ್ಲಾಘಿಸಿದರು.
ಪ್ರಧಾನಿ ನರೇಂದ್ರ ಮೋದಿ ಮಾತ್ರ ಶ್ರೀರಾಮನಿಗೆ ಛಾಮರವನ್ನು ಕೊಟ್ಟಿದ್ದರು. ಈಗ ರಾಮ, ಕೃಷ್ಣ ಪೂಜೆ ಮಾಡಿದ ಶ್ರೀ ಚೆಲುವನಾರಾಯಣಸ್ವಾಮಿಗೆ ಸಚಿವ ಚಲುವರಾಯಸ್ವಾಮಿ ಛಾಮರ(ಛತ್ರಿ) ಕೊಡುಗೆ ನೀಡಿದ್ದು ವಿಶೇಷ ಎಂದು ಸ್ಮರಿಸಿದರು.
ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆಪಿಸಿಸಿ ಸದಸ್ಯ ಎಚ್.ತ್ಯಾಗರಾಜು ಭಾಗವಹಿಸಿದ್ದರು.
Mandya
ಮದ್ದೂರು ಬಳಿ ಭೀಕರ ಅಪಘಾತ : ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮದ್ದೂರು : ಮದ್ದೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಪಲ್ಟಿ ಹೊಡೆದು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ಜರುಗಿದೆ.
ಮಳವಳ್ಳಿಯ ಶ್ರೀ ಕ್ಷೇತ್ರ ಶಿಂಷಾ ಮಾರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುವಾಗ ಮದ್ದೂರು ತಾಲೂಕಿನ ತೈಲೂರು ಕೆರೆ ಸಮೀಪ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ತೇರಳುವಾಗ ರಸ್ತೆ ಬದಿ ಇದ್ದ ಸಿಮೆಂಟ್ ಬ್ಲಾಕ್ ಗೆ ಡಿಕ್ಕಿ ಹೊಡೆದು ಬಸ್ ನ ಹಿಂಬದಿ ಆಕ್ಸಲ್ ಕಟ್ಟಾಗಿ ಪಲ್ಟಿ ಹೊಡೆದಿದೆ.

ಬಸ್ ನಲ್ಲಿದ್ದ 30 ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣವೇ ಹೆದ್ದಾರಿ ವಾಹನ ಸವಾರರು, ಸ್ಥಳೀಯರು ಹಾಗೂ ಮದ್ದೂರು ಸಂಚಾರ ಪೊಲೀಸರು ಬಸ್ ನಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆದು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Mandya
ಕಾವ್ಯಗಳ ಮಹತ್ವವನ್ನು ಯುವ ಜನಾಂಗ ಹಾಗೂ ವಿದ್ಯಾರ್ಥಿಗಳಿಗೆ ತಲುಪಿಸಬೇಕು : ಪ್ರೊ.ಶಂಕರೇ ಗೌಡ
ಮಂಡ್ಯ: ಪ್ರಾಚೀನ ಶ್ರೇಷ್ಠ ಕಲೆಯಾದ ಗಮಕ ಸಾಹಿತ್ಯ ದ ಮಹತ್ವವನ್ನು ಇವತ್ತು ಜನರಿಗೆ, ವಿದ್ಯಾರ್ಥಿ ಗಳಿಗೆ ತಲುಪಿಸುವ ಕ್ರಮದ ಬಗ್ಗೆ ಕನ್ನಡ ಪರ ಹೋರಾಟ ಸಂಘಟನೆಗಳು ಮತ್ತು ಸಾಹಿತ್ಯ ಪ್ರೇಮಿಗಳು ತಮ್ಮನ್ನು ಕಾಳಜಿಯಿಂದ ತೊಡಗಿಸಿಕೊಳ್ಳಬೇಕಾದ ಅಗತ್ಯತೆ ಹೆಚ್ಚಾಗಿದೆ ಎಂದು ನಿವೃತ್ತ ಪ್ರಾಶುಪಾಲ ಪ್ರೊ. ಎಸ್. ಬಿ. ಶಂಕರೇ ಗೌಡ ಅಭಿಪ್ರಾಯಪಟ್ಟರು
ನಗರದ ಕರ್ನಾಟಕ ಸಂಘದ ಕೆ. ವಿ. ಶಂಕರೇಗೌಡ ಸಭಾಂಗಣ ದಲ್ಲಿ ಹಿರಿಯ ಗಮಕಿ ಗಾಯಕ ಕಲಾಶ್ರೀ ವಿದ್ಯಾಶಂಕರ್ ನೇತೃತ್ವದ ಶ್ರೀ ರಂಜಿನಿ ಕಲಾವೇದಿಕೆ, ಕರ್ನಾಟಕ ಸಂಘ, ಪುತಿನ ಟ್ರಸ್ಟ್, ಜೈ ಕರ್ನಾಟಕ ಪರಿಷತ್, ಎಲ್ಲರೂಳಗೊಂದಾಗೂ, ಮಂಕುತಿಮ್ಮ ಟ್ರಸ್ಟ್, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ನ ಸಹಯೋಗದಲ್ಲಿ ಆಯೋಜಿಸಿದ್ದ 2 ದಿನಗಳ ವಿಶಿಷ್ಟ ಕಾವ್ಯಗಳ ಗಮಕ ಸಂಭ್ರಮ ಕಾರ್ಯಕ್ರಮ ದ ಸಮಾರೋಪ ಭಾಷಣ ದಲ್ಲಿ ಅಭಿಪ್ರಾಯಿಸಿದರು.

ಕರ್ನಾಟಕ ಕದ ಸಾಹಿತ್ಯ ಸಂಪತ್ತು, ಸಂಸ್ಕೃತಿ ಅತ್ಯಂತ ಶ್ರೇಷ್ಠ ವಾಗಿದ್ದು ಗಮಕ ಕಲೆಯ ಮೂಲಕ ಸಾಹಿತ್ಯದ ಸೊಬಗು, ಮಹತ್ವದ ಕುರಿತು ಎಲ್ಲರನ್ನು ತಲುಪಿ ಎಲ್ಲಸ್ರು ಕನ್ನಡ ಭಾಷೆಯ ಬಗ್ಗೆ ಜಾಗೃತಿ, ಅಭಿಮಾನ ಬೆಳೆಸಿಕೊಳ್ಳಬೇಕಾಗಿದೆ.
ಮುಂದುವರಿದ ತಾಂತ್ರಿಕ ಯುಗದಲ್ಲಿ ಓದುವ, ಆಲಿಸುವ ಆಸ್ವಾದಿಸುವ.ಪ್ರವೃತ್ತಿ, ತಾಳ್ಮೆ ಇಂದಿನ ಯುವ ಜನಾಂಗಕ್ಕೆ ವಿದ್ಯಾರ್ಥಿಗಳಿಗೆ ಇಲ್ಲವಾಗಿದೆ ಎಂದು ಬೇಸರಿಸಿದ ಅವರು ಇದನ್ನು ಹೋಗಲಾಡಿಸಲು ಮನೆ ಮನೆಗಳ್ಳಲ್ಲಿ ಗಮಕ, ಹಾಗೂ ಸಾಹಿತ್ಯ ಸಂಬಂಧಿತ ಕಾರ್ಯಕ್ರಮ ಗಳನ್ನು ಆಯೋಜಿಸಿ ಪೋಷಕರನ್ನು ಮತ್ತು ವಿದ್ಯಾರ್ಥಿ ಗಳಲ್ಲಿ ಆಸಕ್ತಿ ಮೂಡಿಸುವಂತಹ ಕಾರ್ಯವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಶ್ರೀ ರಂಜಿನಿ ಕಲಾ ವೇದಿಕೆ ಯ ಕಾಳಜಿ ಮೆಚ್ಚುವಂತದ್ದು ಇಂತಹ ಕಾರ್ಯಕ್ರಮ ಗಳಿಗೆ ಕರ್ನಾಟಕ ಸಂಘ ಒತ್ತಾಸೆ ಯಾಗಿ ನಿಲ್ಲ ಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಜೈ ಕರ್ನಾಟಕ ಪರಿಷತ್ ನ ರಾಜ್ಯಾಧ್ಯಕ್ಷ ಡಾ.ಎಸ್. ನಾರಾಯಣ್ ವಹಿಸಿದ್ದರು.
ಎರಡನೇ ದಿನವಾದ ಶನಿವಾರ ರಾಜ್ಯದ 5 ಜಿಲ್ಲೆಗಳಿಂದ ಆಗಮಿಸಿದ್ದ ಖ್ಯಾತ ಗಮಕಿಗಳಿಂದ ತುಳಸಿ ರಾಮಾಯಣ, ಯುಗ ಸಂಧ್ಯಾ,ದಶಾವತಾರ, ಮಂಕುತಿಮ್ಮ ನ ಕಗ್ಗ ರನ್ನ ನ ಗದಾ ಯುದ್ಧ, ಕನಕದಾಸರ ಕೃತಿ ಗಾಯನ, ಗಿಟಾರ್ ವಾ ದನ, ವಿದ್ಯಾರ್ಥಿ ಗಳು ನಡೆಸಿಕೊಟ್ಟ ಜೈಮಿನಿ ಭಾರತದ ವೀರ ಲವ ವಾಚನ ವ್ಯಾ ಖ್ಯಾನ ಕಾರ್ಯಕ್ರಮ ಗಳು ಸೇರಿದ್ದ ಅಪಾರ ಸಂಖ್ಯೆಯ ರಸಿಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು.
ಇದೇ ಸಂದರ್ಭದಲ್ಲಿ ಖ್ಯಾತ ಗಮಕಿ ವ್ಯಾಖ್ಯಾನ ಕಾರ ಡಾ. ಕೃ. ಪಾ. ಮಂಜುನಾಥ್ ಅವರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.
ವೇದಿಕೆಯ ಅಧ್ಯಕ್ಷ ಕಲಾಶ್ರೀ ವಿದ್ಯಾಶಂಕರ್ ಸ್ವಾಗತಿಸಿದರು. ನಾರಾಯಣ ಸ್ವಾಮಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Mandya
ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆ ಉದ್ಘಾಟಿಸಿದ ಡಾ.ನಿರ್ಮಲಾನಂದ ಸ್ವಾಮೀಜಿ
ಮಂಡ್ಯ : ಅದಿಚುಂಚನಗಿರಿ ಮಠದ ಜಗದ್ಗುರು ಡಾ.ನಿರ್ಮಲಾನಂದ ಸ್ವಾಮೀಜಿ ಅವರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಮಂಡ್ಯ ದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳ-2025, ಮಂಡಳಿ, ಜೈವಿಕ ಇಂಧನ ಉದ್ಯಾನ, ಹಾಸನ, ಜೈವಿಕ ಇಂಧನ ಮಾಹಿತಿ, ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರ, ಪಿಇಎಸ್ ಮಂಡ್ಯ ಸಹಯೋಗದಲ್ಲಿ ನಿರ್ಮಿಸಿರುವ ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ಗಳು ತಮ್ಮ ಆಶೀರ್ವಚನದಲ್ಲಿ ಮಾತನಾಡಿ, ಆಹಾರ ಮತ್ತು ಇಂಧನ ಭದ್ರತೆಯು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು ಕೃಷಿಯು ಜೈವಿಕ ಇಂಧನಗಳ ಉತ್ಪಾದನೆಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತಿದೆ ಎಂದು ತಿಳಿಸುತ್ತಾ ಕೃಷಿ ಹೇಗೆ ಲಾಭದಾಯಕವಾಗಿದೆ ಎಂಬುದಕ್ಕೆ ಬೆಂಗಳೂರಿನ ಒರ್ವ ಐಪಿಎಸ್ ಅಧಿಕಾರಿಯ ತಾಯಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ನಿರೂಪಿಸಿರುವುದನ್ನು ಉದಾಹರಿಸಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್ ಈ ಸುಧೀಂದ್ರ ಅವರು ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಪ್ರಪ್ರಥಮ ಕೃಷಿ ಮೇಳ – 2025 ರ ಘೋಷವಾಕ್ಯ ‘ ಸಮಗ್ರ ಕೃಷಿಯಿಂದ ಸುಸ್ಥಿರತೆ’ ಈ ಘೋಷ ವಾಕ್ಯವು ಕೃಷಿಯು ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆಯಲ್ಲಿ ಪೂರಕವಾಗಿರುವುದರ ಕುರಿತು ಅಭಿಪ್ರಾಯ ವ್ಯಕ್ತ ಪಡಿಸಿದರು. ರಾಷ್ಟ್ರದ ಜೈವಿಕ ಇಂಧನ ಉತ್ಪಾದನೆಯಲ್ಲಿ ಮಂಡ್ಯ ಜಿಲ್ಲೆಯು 1939 ರ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಮೊಟ್ಟಮೊದಲ ಬಾರಿಗೆ ಬ್ರಿಟಿಷ್ ವಸಾಹತುವಾಗಿದ್ದ ಬಾಂಬೆ ಪ್ರೆಸಿಡೆನ್ಸಿ ಎಂದು ಕರೆಯಲ್ಪಡುತ್ತಿದ್ದ ಮುಂಬೈ ಯಲ್ಲಿನ ಸಾರ್ವಜನಿಕ ಸಾರಿಗೆ ರೆಡ್ ಬಸ್ ಗಳಿಗೆ ಎಥನಾಲ್ ಪೂರೈಕೆ ಮಾಡಿದ್ದನ್ನು ಪ್ರಸ್ಥಾಪಿಸಿ ಇಂದು ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ನಲ್ಲಿ ಶೇ 20ರ ಮಿಶ್ರಣ ಗುರಿಯನ್ನು 2025 ರಲ್ಲಿ ಸಾಧಿಸಿರುವುದಕ್ಕೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೊಡುಗೆಯು ಅಮೂಲ್ಯವಾಗಿದೆ ಎಂದು ತಿಳಿಸಿದರು.
ಜೈವಿಕ ಇಂಧನಗಳ ಕುರಿತ ಪ್ರಾತ್ಯಕ್ಷಿಕೆ ಮಳಿಗೆಯು ಮಂಡಳಿಯ ಪ್ರಸ್ತುತ ಚಾಲ್ತಿಯಲ್ಲಿರುವ ಜೈವಿಕ ಇಂಧನ ಕಾರ್ಯ ಯೋಜನೆಗಳು ಹಾಗೂ ಉದ್ದೇಶಿತ ನೂತನ ಜೈವಿಕ ಇಂಧನ ನೀತಿ ಮತ್ತು ಕಾರ್ಯಯೋಜನೆಗಳ ಅನುಷ್ಠಾನದ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು. ಮಂಡಳಿಯ ಅಧ್ಯಕ್ಷರು ಮಂಡಳಿ ಕೈಗೊಂಡಿರುವ ಜೈವಿಕ ಇಂಧನ ಕಾರ್ಯಕ್ಷೇತ್ರಗಳ ಕುರಿತು ಅರಿವು, ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗಳು ಮುಂದಿನ ದಿನಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆಯಲ್ಲಿ ಪ್ರಮುಖವಾಗಿ ಅಗತ್ಯ ಸಂಪನ್ಮೂಲಗಳ ಶೇಖರಣೆ, ಸಂಗ್ರಹಣೆ, ಸಾಗಣೆಯಲ್ಲಿ ರೈತರು, ಉತ್ಪಾದನಾ ಘಟಕಗಳ ನಿರ್ಮಾಣದಲ್ಲಿ ಬಂಡವಾಳ ಹೂಡಿಕೆದಾರರು ಮತ್ತು ಬಳಕೆದಾರರ ನಡುವೆ ಸಹಯೋಗ ಏರ್ಪಡಿಸುವ ಸೇತುವೆಗಳಾಗಲಿವೆ ಎಂದು ಅಭಿಪ್ರಾಯ ಪಟ್ಟರು.

ಈ ಪ್ರಪ್ರಥಮ ಕೃಷಿ ಮೇಳದಲ್ಲಿ ಆಯೋಜಿಸಲಾಗಿರುವ ಜೈವಿಕ ಇಂಧನ ಮಳಿಗೆಯು ಇಡೀ ರಾಜ್ಯದ ರೈತರು ಹಾಗೂ ದೇಶ ವಿದೇಶಗಳಲ್ಲಿನ ಬಂಡವಾಳ ಹೂಡಿಕೆದಾರರಿಗೆ ಈ ಹಸಿರು ಇಂಧನ ಕ್ಷೇತ್ರದಲ್ಲಿ ಭಾಗಿಯಾಗಿ, ಈ ಕ್ಷೇತ್ರದ ಉನ್ನತೀಕರಣ ಹಾಗೂ ವಾಣಿಜ್ಯೀಕರಣದಲ್ಲಿ ಪಾಲುದಾರರಾಗಲಿ ಎಂದು ಆಶಿಸುತ್ತಾ, ಈ ಕೃಷಿ ಮೇಳ ಹಾಗೂ ಜೈವಿಕ ಇಂಧನ ಮಳಿಗೆಯ ಉದ್ದೇಶಗಳು ಸಫಲವಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಸೂಪರಿಟೆಂಡೆಂಟ್ ಆಫ್ ಪೋಲಿಸ್ ಮಲ್ಲಿಕಾರ್ಜುನ್ ಬಲದಂಡಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎಲ್, ಕ.ಸ.ಸೇ, ಜೈವಿಕ ಇಂಧನ ಉದ್ಯಾನದ ಸಂಯೋಜಕ ಡಾ.ಎ.ಸಿ.ಗಿರೀಶ್, ಬಿಆರ್ ಐಡಿಸಿ ಸಂಯೋಜಕರಾದ ಡಾ.ರೂಪೇಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
-
Mysore11 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore14 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Special9 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Hassan13 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Chikmagalur14 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur14 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
State15 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Mysore19 hours agoಕೊಲ್ಕತ್ತಾದ ಮೈಸೂರು ಉದ್ಯಾನಕ್ಕೆ 10ನೇ ಚಾಮರಾಜ ಒಡೆಯರ್ ನಾಮಫಲಕ ಅಳವಡಿಸಲು ಪತ್ರ
