Connect with us

Chamarajanagar

ನಾನಂಥವನಲ್ಲಾ ಎಂದ ನಂದಕುಮಮಾರ್‌: ಚಾಮರಾಜನಗರ ಹಿರಿಕಾಟಿ ಕ್ರಷರ್‌ ವಿವಾದಕ್ಕೆ ಸ್ಪಷ್ಟನೆ

Published

on

ಚಾಮರಾಜನಗರ ಜಿಲ್ಲೆ ಹಿರಿಕಾಟಿ ಬಳಿ ಕ್ರಷರ್‌ ವಿಚಾರವಾಗಿ ಉದ್ಯಮಿಗಳಿಗೆ ಬೆದರಿಕೆ ಹಾಕಿರುವ ಆರೋಪ ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್‌ ಅವರ ಮೇಲೆ ಕೇಳಿ ಬಂದಿದೆ. ಚಾಮರಾಜನಗರದ  ಸಂಸದ ಸುನಿಲ್‌ ಬೋಸ್‌ ಅವರ ಹೆಸರು ಕೂಡ ಪ್ರಸ್ತಾಪಿಸಿರುವ ನಂದಕುಮಾರ್‌, ನನಗೆ ಸಂಸದರ ಬೆಂಬಲವಿದೆ. ನನ್ನ ಪೊಲಿಟಿಕಲ್‌ ಒವರ್‌ ಏನು ಅಂತ ತೋರಿಸುತ್ತೇನೆ ಅಂತ ಉದ್ಯಮಿಗಳಿಗೆ ಬೆದರಿಕೆ ಹಾಕಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಯಮಿಗಳು ನಂದಕುಮಾರ್‌ ಸೇರಿ ಇತರರ ವಿರುದ್ಧ ಆರೋಪಗಳನ್ನು ಮಾಡಿದ್ದರು. ಹಿರಿಕಾಟಿ ಬಳಿ ಕ್ರಷರ್‌ ಉದ್ಯಮವನ್ನು ಕಾನೂನು ನೀತಿ ನಿಯಾಮವಳಿ ಅನ್ವಯವೇ, ಯಾವುದೇ ಉಲ್ಲಂಘನೆ ಅಗದಂತೆ ನಡೆಸುತ್ತ ಬಂದಿದ್ದೇವೆ. ನಮ್ಮ ಕ್ರಷರ್‌ ಪಕ್ಕದಲ್ಲೇ ನಂದಕುಮಾರ್ ಅವರ ಕ್ರಷರ್‌ ಕೂಡ ಇದೆ. ನಮಗೆ ಕಿರುಕುಳ ನೀಡಿ ಇಲ್ಲಿಂದ ನಮ್ಮ ಕ್ರಷರ್‌ ಅನ್ನ ಬೇರೆಡೆ ಸ್ಥಳಾಂತರ ಮಾಡಲು ಈ ರೀತಿ ಕಿರುಕಳ ನೀಡಿದ್ದಾರೆ ಅಂತ ಬಹಿರಂಗವಾಗಿ ಮಾಧ್ಯಮಗಳೆದುರು ಗಂಭೀರ ಆರೋಪಗಳನ್ನ ಮಾಡಿದ್ದರು.

ಇನ್ನು ಉದ್ಯಮಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ನಂದಕುಮಾರ್‌ ನಾನಂಥವನಲ್ಲಾ, ನಾನು ಯಾವುದೇ ಪೊಲಿಟಿಕಲ್‌ ಪವರ್‌ ಯೂಸ್‌ ಮಾಡುವುದಾಗಿ ಹೇಲಿಲ್ಲ. ಅವರು ವಿನಾಕಾರಣ ಸುಳ್ಳು ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

Chamarajanagar

ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾ*ವು

Published

on

ಹನೂರು : ಕುಡಿಯುವ ನೀರು ತೆಗೆದುಕೊಳ್ಳಲು ಹೋಗಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಿದ್ದರಾಜಮ್ಮ ಮೃತ ದುರ್ದೈವಿ.

ಘಟನೆ ವಿವರ : ಮಧುವನಹಳ್ಳಿ ಗ್ರಾಮದಿಂದ ಲೊಕ್ಕನಹಳ್ಳಿ ಗ್ರಾಮದ ಜಮೀನೊಂದಕ್ಕೆ ಕೂಲಿಗಾಗಿ ಬಂದಿದ್ದ ಸಂದರ್ಭದಲ್ಲಿ ಕುಡಿಯಲು ನೀರು ತೆಗೆದುಕೊಳ್ಳಲು ಜಮೀನಿನಲ್ಲಿ ಇದ್ದಂತಹ ಕೃಷಿ ಹೊಂಡಕ್ಕೆ ತೆರಳಿದ್ದಾಗ ಆಯಾ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿರುತ್ತಾರೆ ಎಂದು ತಿಳಿದುಬಂದಿದೆ.

ಘಟನಾಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ

Continue Reading

Chamarajanagar

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿ ಬಂಧನ

Published

on

ಚಾಮರಾಜನಗರ: ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಲಿಯಾಸ್ ಪಾಷಾ(40) ಬಂಧಿತ ಆರೋಪಿ. ಈತ ಆಟೋದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Published

on

ಚಾಮರಾಜನಗರ: ಕೇರಳ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 96 ಲಾಟರಿ ಟಿಕೆಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಲೂಕಿನ ಅಮಚವಾಡಿ ಗ್ರಾಮದ ಸಿದ್ದಶೆಟ್ಟಿ(60) ಬಂಧಿತ ಆರೋಪಿ. ಈತ ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಬಂಧಿತನ ಬಳಿ ಇದ್ದ 4,800 ರೂ. ಮೌಲ್ಯದ 96 ಲಾಟರಿ ಟಿಕೇಟ್ ಹಾಗೂ 300 ರೂ ನಗದು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!