Connect with us

National - International

ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅರೆಸ್ಟ್

Published

on

ಹೈದ್ರಾಬಾದ್ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ

ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿರುವ ನಾಯ್ಡು ಅವರ ನಿವಾಸಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿದ್ದಾರೆ.

ಈ ಸಮಯದಲ್ಲಿ ಚಂದ್ರಬಾಬು ನಾಯ್ದು ವಿಶ್ರಾಂತಿ ಪಡೆಯುತ್ತಿದ್ದರು. ಪೊಲೀಸರು ವಶಕ್ಕೆ ಪಡೆಯಲು ಬಂದ ವಿಚಾರ ತಿಳಿದು ಭಾರೀ ಸಂಖ್ಯೆಯಲ್ಲಿ ನಾಯ್ಡು ಮನೆ ಬಳಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳ ಪ್ರತಿಭಟನೆಯಿಂದ ಪೊಲೀಸರಿಗೆ ನಾಯ್ದು ಅವರನ್ನು ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ

ನಾಯ್ಡು ಅವರ ರಕ್ಷಣೆಗೆ ನಿಯೋಜನೆಗೊಂಡಿದ್ದ ಎಸ್‌ಪಿಜಿ ಪಡೆಗಳು ಸಹ ಪೊಲೀಸರಿಗೆ ಅನುಮತಿ ನೀಡಿರಲಿಲ್ಲ. ಕೊನೆಗೆ 6 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದರು

ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ (ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದರು.

ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

National - International

ಪಾಕ್‌ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್‌ ಲಿಬರೇಶನ್‌ ಆರ್ಮಿ

Published

on

ಇಸ್ಲಾಮಾಬಾದ್:‌ ಪಾಕಿಸ್ತಾನದ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ ಹೇಳಿಕೊಂಡಿದೆ.

ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಸೈನಿಕರಿದ್ದ ಬಸ್ಸಿಗೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆದಿದೆ.

ವಿಶೇಷವೆಂದರೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ಸೈನಿಕರನ್ನು ಉಗ್ರರು ಹೇಗೆ ಗುರಿ ಮಾಡಿ ಕೃತ್ಯ ಎಸಗಿದ್ದರೋ ಅದೇ ರೀತಿಯಾಗಿ ಇಂದು ಪಾಕಿಸ್ತಾನದಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಬಸ್ಸಿಗೆ ಡಿಕ್ಕಿಯಾದ ಬೆನ್ನಲ್ಲೇ ಕಾರು ತೀವ್ರವಾಗಿ ಸ್ಫೋಟಗೊಂಡಿದೆ. ಸ್ಫೋಟಗೊಳ್ಳುತ್ತಿದ್ದಂತೆ ಛಿದ್ರಗೊಂಡಿರುವ ಬಸ್ಸಿನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ಘಟನೆಯಲ್ಲಿ 90 ಮಂದಿ ಪಾಕ್‌ ಸೈನಿಕರು ಮೃತಪಟ್ಟಿದ್ದಾರೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ ಹೇಳಿಕೊಂಡಿದ್ದು, ಇದನ್ನು ಪಾಕ್‌ ಸೇನೆ ನಿರಾಕರಿಸಿದೆ. ಘಟನೆಯಲ್ಲಿ ಕೇವಲ 12 ಮಂದಿ ಸೈನಿಕರು ಮೃತರಾಗಿದ್ದಾರೆ ಎಂದು ಪಾಕ್‌ ಸೇನೆ ಹೇಳಿಕೊಂಡಿದೆ.

Continue Reading

National - International

ಮಧ್ಯ ಅಮೇರಿಕಾದಲ್ಲಿ ಭಾರೀ ಚಂಡಮಾರುತ: ಕನಿಷ್ಠ 32 ಸಾವು

Published

on

ವಾಷಿಂಗ್ಟನ್‌: ಭೀಕರ ಸುಂಟರಗಾಳಿಗತೆ ತತ್ತರಿಸಿದ ಮಧ್ಯ ಅಮೇರಿಕಾದಲ್ಲಿ ಕನಿಷ್ಠ 32 ಮಂದಿ ಮೃತರಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಭೀಕರ ಸುಂಟರಗಾಳಿಗೆ ಮನೆ ಛಾವಣಿಗಳು ಹರಿದು ಹೋಗಿದ್ದು, ಬೃಹತ್‌ ಟ್ರಕ್‌ಗಳು ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.

ಭಾರಿ ಗಾಳಿಯಿಂದ ಎದ್ದ ಧೂಳಿನಿಂದ ಕಾನ್ಸಾಸ್‌ನಲ್ಲಿ 50ಕ್ಕೂ ಹೆಚ್ಚು ವಾಹನಗಳು ಸಂಪರ್ಕ ಕಡಿತಗೊಂಡು ಸರಣಿ ಅಪಘಾತ ಸಂಭವಿಸಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂಡಮಾರುತದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಿಸೌರಿ ರಾಜ್ಯದ ಹೆದ್ದಾರಿ ಗಸ್ತು ಪೊಲೀಸರು ದೃಢಪಡಿಸಿದ್ದಾರೆ. ಮರಗಳು ಮತ್ತು ವಿದ್ಯುತ್‌ ತಂತಿಗಳು ಉರುಳಿ ಬಿದ್ದಿದೆ. ಗಾಳಿಯ ರಭಸಕ್ಕೆ ಮರೀನಾ ಬಂದರಲ್ಲಿ ಒಂದೆಡೆ ರಾಶಿ ಬಿದ್ದಿರುವ ದೋಣಿಗಳ ಚಿತ್ರವನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.

ಇದು ನಾನು ಅನುಭವಿಸಿದ ಅತ್ಯಂತ ಭಯಾನಕ ವಿಷಯ. ಚಂಡಮಾರತುದ ವೇಗ ಅತ್ಯಂತ ಭೀಕರವಾಗಿತ್ತು. ಅದರ ವೇಗಕ್ಕೆ ನಮ್ಮ ಕಿವಿಗಳು ಸಿಡಿಯುತ್ತಿದ್ದವು ಎಂದು ಮಿಸೌರಿಯ ನಿವಾಸಿ ಅಲಿಸಿಯಾ ವಿಲ್ಸನ್‌ ಚಂಡಮಾರುತದ ಭೀಕರತೆಯನ್ನು ತೆರೆದಿಟ್ಟರು.

ಮಿಸೌರಿಯ ವೇಯ್ನ್‌ ಕೌಂಟ್‌ನಲ್ಲಿ 6, ಒಝಾರ್ಕ್‌ ಕೌಂಟಿಯಲ್ಲಿ 3 ಹಾಗೂ ಲೂಯಿಸ್‌ ಕೌಂಟಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟೆಕ್ಸಾಸ್‌ನ ದಕ್ಷಿಣ ಭಾಗದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್‌ ಭಾಗದಲ್ಲಿ ಮೂವರು ಮೃತಪಟ್ಟು 29 ಮಂದಿ ಗಾಯಗೊಂಡಿದ್ದಾರೆ. ಮಧ್ಯ ಅಮೇರಿಕಾದ ಕನಿಷ್ಠ 2 ಲಕ್ಷ ಮನೆ ಹಾಗೂ ಕಚೇರಿಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

National - International

ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಅಧಿಕಾರ ಸ್ವೀಕಾರ

Published

on

ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಇದಕ್ಕೂ ಮೊದಲು ಮಾರ್ಕ್‌ ಕಾರ್ನಿ ಬ್ಯಾಂಕ್‌ ಆಫ್‌ ಇಂಗ್ಲೆಂಡ್‌ ಮತ್ತು ಬ್ಯಾಂಕ್‌ ಆಫ್‌ ಕೆನಡಾದ ಅಧ್ಯಕ್ಷರಾಗಿದ್ದರು.

ಕಳೆದ ಜನವರಿಯಲ್ಲಿ ಜಸ್ಟಿನ್‌ ಟ್ರುಡೊ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ನಿ ಅವರು ಲಿಬರಲ್‌ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಅವರು ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಬಗ್ಗೆ ಮಾತನಾಡಿದ ಕಾರ್ನಿ ಅವರು, ನಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದೆ. ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Continue Reading

Trending

error: Content is protected !!