Mandya
ಮೈಸೂರು ಕೊಡಗು ಚತುಷ್ಪಥ ರಸ್ತೆ… ಭೂ ಸ್ವಾದೀನ ಪ್ರಕ್ರಿಯೆ ಚಾಲನೆ…. ಕೆಲವೇ ತಿಂಗಳಲ್ಲಿ ಕಾಮಗಾರಿ ಆರಂಭ
ಮೈಸೂರು-ಕೊಡಗು ಚತುಷ್ಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಭೂಸ್ವಾದೀನ ಪೂರ್ಣಗೊಂಡ ಕೂಡಲೇ ಕಾಮಗಾರಿ ಆರಂಭವಾಗಲಿದೆ.
ಭಾರತಮಾಲಾ ಪರಿಯೋಜನಾ ಹಂತ-1 ಕಾರ್ಯಕ್ರಮದ ಅಡಿಯಲ್ಲಿ ನಿರ್ಮಿಸಲು ಯೋಜಿಸಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದರು.
ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಪ್ರಾರಂಭವಾಗಿ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಸವನಹಳ್ಳಿ ಬಳಿ ಕೊನೆಗೊಒಟ್ಟು 92.3 ಕಿಮೀ ಉದ್ದದ 4,129 ಕೋಟಿ ರೂ. ವೆಚ್ಚದ ಈ ಮೆಗಾ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಕ್ತಾಯವಾಗಿದ್ದು ಭೂಸ್ವಾದೀನ ನ ಕೆಲಸಗಳು ಆರಂಭಗೊoಡಿದೆ.
ನಾಲ್ಕು ಹಂತಗಳಿಗೆ ಟೆಂಡರ್ ಮುಕ್ತಾಯ:
ಒಟ್ಟು 5 ಹಂತಗಳನ್ನೊಳಗೊAಡಿರುವ ಈ ಯೋಜನೆಯಲ್ಲಿ ಮಡಿಕೇರಿಯಿಂದ ಶ್ರೀರಂಗಪಟ್ಟಣದ ವರೆಗೆ ಪ್ರತ್ಯೇಕ ಚತುಷ್ಪಥ ಹೆದ್ದಾರಿ ನಿರ್ಮಿಸುವ ಗುರಿ ಹೊಂದಲಾಗಿದೆ. ಮೊದಲಿಗೆ ಶ್ರೀರಂಗಪಟ್ಟಣದಿoದ ಕುಶಾಲನಗರದ ಬಸವನಹಳ್ಳಿವರೆಗೆ 92.3 ಕಿ.ಮೀ ರಸ್ತೆ
ನಿರ್ಮಾಣವಾಗಲಿದ್ದುö, ಇದನ್ನು ನಾಲ್ಕು ಹಂತಗಳಾಗಿ ವಿಂಗಡಿಸಲಾಗಿದೆ. ಮತ್ತೊಂದು ಹಂತದಲ್ಲಿ ಬಸವನಹಳ್ಳಿಯಿಂದ ಮಡಿಕೇರಿ ವರೆಗೆ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ. ಈಗಾಗಲೇ ಮೊದಲ 4 ಹಂತಗಳಿಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದುö, ಗುತ್ತಿಗೆ ಪಡೆದ ಸಂಸ್ಥೆಗಳು ಕಾಮಾಗಾರಿ ಆರಂಭಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಿಕೊಂಡಿವೆ. ಭೂಸ್ವಾದೀನ ಪ್ರಕ್ರಿಯೆ ಪೂರ್ಣಗೊಳ್ಳುತ್ತಲೇ ರಸ್ತೆ ಕಾಮಗಾರಿಯೂ ಸದ್ಯದಲ್ಲಿಯೇ ಆರಂಭಗೊಳ್ಳಲಿದೆ.
ಮೊದಲ 4 ಹಂತಗಳು ಯಾವುವು?
ಒಟ್ಟು 5 ಹಂತಗಳ ಕಾಮಗಾರಿಯನ್ನು ಪಿ1, ಪಿ2 ಹೀಗೆ ಪಿ5 ವರೆಗೆ ಗುರುತಿಸಲಾಗಿದ್ದುö, ಪಿ1 ಮಡಿಕೇರಿಯಿಂದ ಬಸವನಹಳ್ಳಿ ವರೆಗಿನ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಇನ್ನಷ್ಟೇ ಟೆಂಡರ್ ಪ್ರಕ್ರಿಯೆ ನಡೆಯಬೇಕಿತ್ತುö. ಕುಶಾಲನಗರದಿಂದ ಶ್ರೀರಂಗಪಟ್ಟಣದ ವರೆಗೆ ಕಾಮಗಾರಿ ಮುಕ್ತಾಯವಾದ ಬಳಿಕ ಪಿ1 ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.
ಅದರಂತೆ, ಪಿ-5 ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಿಂದ ಇಲವಾಲ ಕೆ.ಆರ್ ನಗರ ರಸ್ತೆ ಜಂಕ್ಷನ್ 18.98 ಕಿ.ಮೀ ವರೆಗಿನ ಕಾಮಗಾರಿಯಾಗಿದೆ. ಈ ಕಾಮಗಾರಿಯ ಟೆಂಡರನ್ನು ಸಂಸ್ಥೆಯೊದು 690.30 ಕೋಟಿ ರೂಗಳಿಗೆ ಪಡೆದುಕೊಂಡಿದೆ. ಪಿ-4 ಇಲವಾಲ ಕೆ.ಆರ್ನಗರ ಜಂಕ್ಷನ್ನಿoದ ಹುಣಸೂರು ಕೆ.ಆರ್ನಗರ ರಸ್ತೆ ಜಂಕ್ಷನ್ ವರೆಗಿನ 26.5 ಕಿ.ಮೀ ರಸ್ತೆಯಾಗಿದ್ದು ಈ ಕಾಮಗಾರಿಯ ಟೆಂಡರ್ ಅದೇ ಸಂಸ್ಥೆ 650 ಕೋಟಿ ರೂ.ಗೆ ಪಡೆದಿದೆ. ಪಿ-3 ಕಾಮಗಾರಿಯು ಹುಣಸೂರು ಕೆ.ಆರ್ನಗರ ರಸ್ತೆ ಜಂಕ್ಷನ್ ನಿಂದ ಪಿರಿಯಾಪಟ್ಟಣ-ಹಾಸನ ರಸ್ತೆಯ ಹೆಮ್ಮಿಗೆ ಗ್ರಾಮದ ವರೆಗಿನ 24.1 ಕಿ.ಮೀ ಆಗಿದ್ದುö, ಈ ಕಾಮಗಾರಿಯನ್ನು 575 ಕೋಟಿ ರೂ.ಗೆ ಮತ್ತೊಂದು ಸಂಸ್ಥೆ ಪಡೆದಿದೆ. ಪಿ-2 ಕಾಮಗಾರಿ ಪಿರಿಯಾಪಟ್ಟಣದ ಹಾಸನ ರಸ್ತೆ ಜಂಕ್ಷನ್ನಿoದ 22.7 ಕಿ.ಮೀ ಸಾಗಿ ಕುಶಾಲನಗರದ ಗುಡ್ಡೆಹೊಸೂರು ಸಮೀದ ಬಸವನಹಳ್ಳಿ ಬಳಿ ತಲುಪಲಿದೆ. ಈ ಕಾಮಗಾರಿಯ ಟೆಂಡರನ್ನು ಸಂಸ್ಥೆ ಯೊಂದು 585.84 ಕೋಟಿ ರೂ.ಗಳಿಗೆ ಪಡೆದುಕೊಂಡಿದೆ.
ಹೆದ್ದಾರಿ ವಿಸ್ತರಣೆಯಲ್ಲ ಇದು ಹೊಸ ರಸ್ತೆ
ಈ ಹಿಂದೆ ರಾಷ್ಟಿçÃಯ ಹೆದ್ದಾರಿ 275 ಅನ್ನು ಎರಡೂ ಬದಿಗಳಲ್ಲಿ ವಿಸ್ತರಿಸುವ ಯೋಜನೆ ಇತ್ತು. ಎನ್ಎಚ್ 275 ಅನ್ನು ಅಗಲಗೊಳಿಸಬೇಕಾದರೆ, ಆರ್ಎಂಪಿ ಮತ್ತು ಅರಣ್ಯ ಇಲಾಖೆ ಭೂಮಿಯನ್ನು ನೀಡಬೇಕು. ಇದು ದೀರ್ಘಾವಯ ಪ್ರಕ್ರಿಯೆಯಾಗಿರುವುದರಿಂದ ಈಗಿರುವ ರಸ್ತೆಯ ಅಗಲೀಕರಣ ಯೋಜನೆ ಕೈಬಿಡಲಾಗಿದೆ. ಇದರ ಬದಲು ಸಂಪೂರ್ಣ ಹೊಸ ಎಕ್ಸ್ಪ್ರೆಸ್ವೇ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ರಸ್ತೆಯು ಕೆಲವು ಕಡೆಗಳಷ್ಟೇ ರಾಷ್ಟ್ರೀಯ ಹೆದ್ದಾರಿ 275 ರ ಸಂಪರ್ಕಕ್ಕೆ ಬರಲಿದ್ದು, ಉಳಿದಂತೆ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿಯೂ ಬೈಪಾಸ್ ಆಗಿ ಹಾದು ಹೋಗುವ ಸಂಪೂರ್ಣ ಹೊಸ ರಸ್ತೆಯಾಗಿದೆ.
ಎಲ್ಲಿಂದ ಎಲ್ಲಿಯವರೆಗೆ:
ಕುಶಾಲನಗರದ ಗುಡ್ಡೆಹೊಸೂರು – ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ
ಒಟ್ಟು ಯೋಜನಾ ವೆಚ್ಚ: 4,129 ಕೋಟಿ ರೂ.
ಒಟ್ಟು ಉದ್ದ : 92.3 ಕಿ.ಮೀ
ಪೂರ್ಣಗೊಳಿಸುವ ಗುರಿ: 2026ಕ್ಕೆ
ಪ್ರತಿಕ್ರಿಯೆ
ಮೈಸೂರು-ಕೊಡಗು ಚತುಷ್ಪತ ಎಕ್ಸ್ಪ್ರೆಸ್ ವೇ ಒಟ್ಟು 5 ಹಂತಗಳ ಯೋಜನೆಯಾಗಿದ್ದುö, ಸದ್ಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಿಂದ ಕುಶಾಲನಗರದ ಗುಡ್ಡೆಹೊಸೂರಿನ ವರೆಗೆ 4 ಹಂತಗಳ ಕಾಮಗಾರಿ ನಡೆಯಲಿದೆ. ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಕ್ತಾಯವಾಗಿದ್ದು , ಭೂಸ್ವಾದೀನ ಪೂರ್ಣಗೊಂಡ ತಕ್ಷಣ ಕಾಮಗಾರಿ ಆರಂಭವಾಗಲಿದೆ. ಇದಕ್ಕಾಗಿ ಗುತ್ತಿಗೆದಾರರು ಈಗಾಗಲೇ ಸಾಮಾಗ್ರಿಗಳ ದಾಸ್ತಾನು, ಲೇಬರ್ ಕ್ಯಾಂಪ್ ಕೂಡಾ ಮಾಡಿಕೊಂಡಿದ್ದಾರೆ.
ಎಂದು ಗಿರೀಶ್ ಜಿ.ಎಚ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ರಾಷ್ಟಿಯ ಹೆದ್ದಾರಿ ವಿಭಾಗ ಮಡಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore24 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Mysore9 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu10 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore6 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu10 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu7 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
State24 hours ago
ಬೆಂಗಳೂರು ಅರಮನೆ ಮೈದಾನದ ಜಾಗಕ್ಕೆ ಟಿ.ಡಿ.ಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ: ಎಚ್.ಕೆ ಪಾಟೀಲ
-
Mysore7 hours ago
ಮತದಾನದ ಮಹತ್ವ ಸಾರಲು ಪರಿಣಾಮಕಾರಿ ಜನ ಜಾಗೃತಿ ಕಾರ್ಯಕ್ರಮ ಆಯೋಜನೆ ಅವಶ್ಯಕ ಬಿ.ಜಿ.ದಿನೇಶ್