Mandya
ಮೈಸೂರು ಕೊಡಗು ಚತುಷ್ಪಥ ರಸ್ತೆ… ಭೂ ಸ್ವಾದೀನ ಪ್ರಕ್ರಿಯೆ ಚಾಲನೆ…. ಕೆಲವೇ ತಿಂಗಳಲ್ಲಿ ಕಾಮಗಾರಿ ಆರಂಭ

ಮೈಸೂರು-ಕೊಡಗು ಚತುಷ್ಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಭೂಸ್ವಾದೀನ ಪೂರ್ಣಗೊಂಡ ಕೂಡಲೇ ಕಾಮಗಾರಿ ಆರಂಭವಾಗಲಿದೆ.
ಭಾರತಮಾಲಾ ಪರಿಯೋಜನಾ ಹಂತ-1 ಕಾರ್ಯಕ್ರಮದ ಅಡಿಯಲ್ಲಿ ನಿರ್ಮಿಸಲು ಯೋಜಿಸಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದರು.
ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಪ್ರಾರಂಭವಾಗಿ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಸವನಹಳ್ಳಿ ಬಳಿ ಕೊನೆಗೊಒಟ್ಟು 92.3 ಕಿಮೀ ಉದ್ದದ 4,129 ಕೋಟಿ ರೂ. ವೆಚ್ಚದ ಈ ಮೆಗಾ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಕ್ತಾಯವಾಗಿದ್ದು ಭೂಸ್ವಾದೀನ ನ ಕೆಲಸಗಳು ಆರಂಭಗೊoಡಿದೆ.
ನಾಲ್ಕು ಹಂತಗಳಿಗೆ ಟೆಂಡರ್ ಮುಕ್ತಾಯ:
ಒಟ್ಟು 5 ಹಂತಗಳನ್ನೊಳಗೊAಡಿರುವ ಈ ಯೋಜನೆಯಲ್ಲಿ ಮಡಿಕೇರಿಯಿಂದ ಶ್ರೀರಂಗಪಟ್ಟಣದ ವರೆಗೆ ಪ್ರತ್ಯೇಕ ಚತುಷ್ಪಥ ಹೆದ್ದಾರಿ ನಿರ್ಮಿಸುವ ಗುರಿ ಹೊಂದಲಾಗಿದೆ. ಮೊದಲಿಗೆ ಶ್ರೀರಂಗಪಟ್ಟಣದಿoದ ಕುಶಾಲನಗರದ ಬಸವನಹಳ್ಳಿವರೆಗೆ 92.3 ಕಿ.ಮೀ ರಸ್ತೆ
ನಿರ್ಮಾಣವಾಗಲಿದ್ದುö, ಇದನ್ನು ನಾಲ್ಕು ಹಂತಗಳಾಗಿ ವಿಂಗಡಿಸಲಾಗಿದೆ. ಮತ್ತೊಂದು ಹಂತದಲ್ಲಿ ಬಸವನಹಳ್ಳಿಯಿಂದ ಮಡಿಕೇರಿ ವರೆಗೆ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ. ಈಗಾಗಲೇ ಮೊದಲ 4 ಹಂತಗಳಿಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದುö, ಗುತ್ತಿಗೆ ಪಡೆದ ಸಂಸ್ಥೆಗಳು ಕಾಮಾಗಾರಿ ಆರಂಭಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಿಕೊಂಡಿವೆ. ಭೂಸ್ವಾದೀನ ಪ್ರಕ್ರಿಯೆ ಪೂರ್ಣಗೊಳ್ಳುತ್ತಲೇ ರಸ್ತೆ ಕಾಮಗಾರಿಯೂ ಸದ್ಯದಲ್ಲಿಯೇ ಆರಂಭಗೊಳ್ಳಲಿದೆ.
ಮೊದಲ 4 ಹಂತಗಳು ಯಾವುವು?
ಒಟ್ಟು 5 ಹಂತಗಳ ಕಾಮಗಾರಿಯನ್ನು ಪಿ1, ಪಿ2 ಹೀಗೆ ಪಿ5 ವರೆಗೆ ಗುರುತಿಸಲಾಗಿದ್ದುö, ಪಿ1 ಮಡಿಕೇರಿಯಿಂದ ಬಸವನಹಳ್ಳಿ ವರೆಗಿನ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಇನ್ನಷ್ಟೇ ಟೆಂಡರ್ ಪ್ರಕ್ರಿಯೆ ನಡೆಯಬೇಕಿತ್ತುö. ಕುಶಾಲನಗರದಿಂದ ಶ್ರೀರಂಗಪಟ್ಟಣದ ವರೆಗೆ ಕಾಮಗಾರಿ ಮುಕ್ತಾಯವಾದ ಬಳಿಕ ಪಿ1 ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.
ಅದರಂತೆ, ಪಿ-5 ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಿಂದ ಇಲವಾಲ ಕೆ.ಆರ್ ನಗರ ರಸ್ತೆ ಜಂಕ್ಷನ್ 18.98 ಕಿ.ಮೀ ವರೆಗಿನ ಕಾಮಗಾರಿಯಾಗಿದೆ. ಈ ಕಾಮಗಾರಿಯ ಟೆಂಡರನ್ನು ಸಂಸ್ಥೆಯೊದು 690.30 ಕೋಟಿ ರೂಗಳಿಗೆ ಪಡೆದುಕೊಂಡಿದೆ. ಪಿ-4 ಇಲವಾಲ ಕೆ.ಆರ್ನಗರ ಜಂಕ್ಷನ್ನಿoದ ಹುಣಸೂರು ಕೆ.ಆರ್ನಗರ ರಸ್ತೆ ಜಂಕ್ಷನ್ ವರೆಗಿನ 26.5 ಕಿ.ಮೀ ರಸ್ತೆಯಾಗಿದ್ದು ಈ ಕಾಮಗಾರಿಯ ಟೆಂಡರ್ ಅದೇ ಸಂಸ್ಥೆ 650 ಕೋಟಿ ರೂ.ಗೆ ಪಡೆದಿದೆ. ಪಿ-3 ಕಾಮಗಾರಿಯು ಹುಣಸೂರು ಕೆ.ಆರ್ನಗರ ರಸ್ತೆ ಜಂಕ್ಷನ್ ನಿಂದ ಪಿರಿಯಾಪಟ್ಟಣ-ಹಾಸನ ರಸ್ತೆಯ ಹೆಮ್ಮಿಗೆ ಗ್ರಾಮದ ವರೆಗಿನ 24.1 ಕಿ.ಮೀ ಆಗಿದ್ದುö, ಈ ಕಾಮಗಾರಿಯನ್ನು 575 ಕೋಟಿ ರೂ.ಗೆ ಮತ್ತೊಂದು ಸಂಸ್ಥೆ ಪಡೆದಿದೆ. ಪಿ-2 ಕಾಮಗಾರಿ ಪಿರಿಯಾಪಟ್ಟಣದ ಹಾಸನ ರಸ್ತೆ ಜಂಕ್ಷನ್ನಿoದ 22.7 ಕಿ.ಮೀ ಸಾಗಿ ಕುಶಾಲನಗರದ ಗುಡ್ಡೆಹೊಸೂರು ಸಮೀದ ಬಸವನಹಳ್ಳಿ ಬಳಿ ತಲುಪಲಿದೆ. ಈ ಕಾಮಗಾರಿಯ ಟೆಂಡರನ್ನು ಸಂಸ್ಥೆ ಯೊಂದು 585.84 ಕೋಟಿ ರೂ.ಗಳಿಗೆ ಪಡೆದುಕೊಂಡಿದೆ.
ಹೆದ್ದಾರಿ ವಿಸ್ತರಣೆಯಲ್ಲ ಇದು ಹೊಸ ರಸ್ತೆ
ಈ ಹಿಂದೆ ರಾಷ್ಟಿçÃಯ ಹೆದ್ದಾರಿ 275 ಅನ್ನು ಎರಡೂ ಬದಿಗಳಲ್ಲಿ ವಿಸ್ತರಿಸುವ ಯೋಜನೆ ಇತ್ತು. ಎನ್ಎಚ್ 275 ಅನ್ನು ಅಗಲಗೊಳಿಸಬೇಕಾದರೆ, ಆರ್ಎಂಪಿ ಮತ್ತು ಅರಣ್ಯ ಇಲಾಖೆ ಭೂಮಿಯನ್ನು ನೀಡಬೇಕು. ಇದು ದೀರ್ಘಾವಯ ಪ್ರಕ್ರಿಯೆಯಾಗಿರುವುದರಿಂದ ಈಗಿರುವ ರಸ್ತೆಯ ಅಗಲೀಕರಣ ಯೋಜನೆ ಕೈಬಿಡಲಾಗಿದೆ. ಇದರ ಬದಲು ಸಂಪೂರ್ಣ ಹೊಸ ಎಕ್ಸ್ಪ್ರೆಸ್ವೇ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ರಸ್ತೆಯು ಕೆಲವು ಕಡೆಗಳಷ್ಟೇ ರಾಷ್ಟ್ರೀಯ ಹೆದ್ದಾರಿ 275 ರ ಸಂಪರ್ಕಕ್ಕೆ ಬರಲಿದ್ದು, ಉಳಿದಂತೆ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿಯೂ ಬೈಪಾಸ್ ಆಗಿ ಹಾದು ಹೋಗುವ ಸಂಪೂರ್ಣ ಹೊಸ ರಸ್ತೆಯಾಗಿದೆ.
ಎಲ್ಲಿಂದ ಎಲ್ಲಿಯವರೆಗೆ:
ಕುಶಾಲನಗರದ ಗುಡ್ಡೆಹೊಸೂರು – ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ
ಒಟ್ಟು ಯೋಜನಾ ವೆಚ್ಚ: 4,129 ಕೋಟಿ ರೂ.
ಒಟ್ಟು ಉದ್ದ : 92.3 ಕಿ.ಮೀ
ಪೂರ್ಣಗೊಳಿಸುವ ಗುರಿ: 2026ಕ್ಕೆ
ಪ್ರತಿಕ್ರಿಯೆ
ಮೈಸೂರು-ಕೊಡಗು ಚತುಷ್ಪತ ಎಕ್ಸ್ಪ್ರೆಸ್ ವೇ ಒಟ್ಟು 5 ಹಂತಗಳ ಯೋಜನೆಯಾಗಿದ್ದುö, ಸದ್ಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಿಂದ ಕುಶಾಲನಗರದ ಗುಡ್ಡೆಹೊಸೂರಿನ ವರೆಗೆ 4 ಹಂತಗಳ ಕಾಮಗಾರಿ ನಡೆಯಲಿದೆ. ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಕ್ತಾಯವಾಗಿದ್ದು , ಭೂಸ್ವಾದೀನ ಪೂರ್ಣಗೊಂಡ ತಕ್ಷಣ ಕಾಮಗಾರಿ ಆರಂಭವಾಗಲಿದೆ. ಇದಕ್ಕಾಗಿ ಗುತ್ತಿಗೆದಾರರು ಈಗಾಗಲೇ ಸಾಮಾಗ್ರಿಗಳ ದಾಸ್ತಾನು, ಲೇಬರ್ ಕ್ಯಾಂಪ್ ಕೂಡಾ ಮಾಡಿಕೊಂಡಿದ್ದಾರೆ.
ಎಂದು ಗಿರೀಶ್ ಜಿ.ಎಚ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ರಾಷ್ಟಿಯ ಹೆದ್ದಾರಿ ವಿಭಾಗ ಮಡಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Mandya
ಜು.11 ‘ಸೆಪ್ಟೆಂಬರ್ 10’ ಕನ್ನಡ ಚಲನಚಿತ್ರ ಬಿಡುಗಡೆ : ಓಂ ಸಾಯಿಪ್ರಕಾಶ್

ಮಂಡ್ಯ: ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂಬ ಧ್ಯೇಯದೊಂದಿಗೆ `ಸೆಪ್ಟೆಂಬರ್ ೧೦’ ಶೀರ್ಷಿಕೆಯೊಂದಿಗೆ ಚಲನಚಿತ್ರ ನಿರ್ಮಿಸಲಾಗಿದ್ದು, ಜುಲೈ.11ರಂದು ಬಿಡುಗಡೆಯಾಗಲಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತವರಿಗೆ ಬಾ ತಂಗಿ, ಮುದ್ದಿನ ಮಾವ, ಅಣ್ಣ ತಂಗಿ, ಸೋಲಿಲ್ಲದ ಸರದಾರದಂತಹ ಯಶಸ್ವಿ ಚಲನಚಿತ್ರಗಳ ನಿರ್ದೇಶನ ಮಾಡಿದ್ದು, `ಸೆಪ್ಟೆಂಬರ್ 10೦’ ನನ್ನ 105ನೇ ಚಲನಚಿತ್ರವಾಗಿದೆ ಎಂದರು.
ಸೆಪ್ಟೆಂಬರ್.10 ರೈತ ಆತ್ಮಹತ್ಯೆ ತಡೆ ದಿನವಾಗಿದ್ದು, ಆತ್ಮಹತ್ಯೆಯನ್ನೇ ಮೂಲವನ್ನಾಗಿಸಿಕೊಂಡು ಚಲನಚಿತ್ರ ನಿರ್ಮಿಸಲಾಗಿದೆ. ದುರ್ಬಲ ಹಾಗೂ ಸಂಕುಚಿತ ಮನಸ್ಸನವರಿಗೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡುವ ಪ್ರಯತ್ನ ಚಿತ್ರದಲ್ಲಿದೆ. ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿದ ರೈತ, ಪ್ರೇಮಿಗಳು, ವ್ಯಾಪಾರಿಗಳು, ಪರೀಕ್ಷೆ ಎದುರಿಸಲಾಗದ, ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳ ಆತ್ಮಹತ್ಯೆಯ ಸತ್ಯ ದರ್ಶನವನ್ನು ಚಿತ್ರದ ಮೂಲಕ ತೋರ್ಪಡಿಸಲಾಗುತ್ತಿದೆ ಎಂದು ಹೇಳಿದರು.
ಚಿತ್ರದ ಚಿತ್ರೀಕರಣವನ್ನು ಬೆಂಗಳೂರಿನಲ್ಲೇ ಮಾಡಲಾಗಿದ್ದು, 60 ಲಕ್ಷ ರೂ.ಗಳನ್ನು ವ್ಯಯಿಸಲಾಗಿದೆ. ನಿಮಾನ್ಸ್ನ ವೈದ್ಯರೂ ಮಾನಸಿಕವಾಗಿ ಕುಗ್ಗಿದವರಿಗೆ ಮಾನಸಿಕ ಸ್ಥೈರ್ಯ ನೀಡಲಿದೆ ಎಂದು ಹೇಳಿರುವುದಾಗಿ ಅವರು ತಿಳಿಸಿದರು.
2020೨೦೨೦ರಲ್ಲೇ ಚಲನಚಿತ್ರ ಪ್ರಾರಂಭಿಸಿ ಮುಗಿಸುವಷ್ಟರಲ್ಲಿ ಕೊರೋನದಿಂದಾಗಿ ಬಿಡುಗಡೆ ಮಾಡಲಾಗಿರಲಿಲ್ಲ, ಚಿತ್ರಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಂಗೀತ, ಜೆ.ಜಿ.ಕೃಷ್ಣರ ಛಾಯಾಗ್ರಹಣ, ಬಿ.ಎ.ಮಧು ಅವರ ಸಂಭಾಷಣೆಯಿದೆ. ಚಲನಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಬಿಬಿಎಂಪಿ ಮಾಜಿ ಸದಸ್ಯ ಡಾ.ರಾಜು ಅವರ ಸಹಕಾರದಿಂದ ಚಲನಚಿತ್ರ ಬಿಡುಗಡೆಯಾಗುತ್ತಿದ್ದು, ಚಲನಚಿತ್ರ ಪ್ರಿಯರು ಚಿತ್ರ ವೀಕ್ಷಿಸಿ, ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಹ ನಿರ್ದೇಶಕ ಶಶಿಕಿರಣ್, ಹಿರಿಯ ನಟ ಮೀಸೆ ಆಂಜನಪ್ಪ (ಶಂಖನಾದ ಆಂಜಿನಪ್ಪ), ನಟರಾದ ತುಳಸಿ, ಜಯಸಿಂಹ, ಪತ್ರಕರ್ತ ಹಲ್ಲೆಗೆರೆ ಗುರುಸ್ವಾಮಿ, ಜಯರಾಮ್ ಇದ್ದರು.
Mandya
ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

ಮಂಡ್ಯ : “ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.
ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ. ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದ ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.
ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ ಎಂದು ಹೇಳಿದರು.
ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.
ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ. ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್ಎಸ್ಎಚ್ಎಂ ಜ್ಞಾನ ಕ್ಯಾಂಪಸ್ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ, ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಉಪಸ್ಥಿತರಿದ್ದರು.
Mandya
ಶ್ರಮಜೀವಿ ರೈತರಿಗೆ ಭೂತಾಯಿ ಮೋಸ ಮಾಡುವುದಿಲ್ಲ : ಸಚಿವ ಎನ್.ಚಲುವರಾಯಸ್ವಾಮಿ

ನಾಗಮಂಗಲ : ಶ್ರಮ ಜೀವಿ ರೈತರಿಗೆ ಭೂತಾಯಿ ಯಾವಾಗಲೂ ಮೋಸ ಮಾಡುವುದಿಲ್ಲ. ರೈತರ ಏಳಿಗೆಗಾಗಿ ಪ್ರತಿಫಲ ನೀಡುವ ಭೂಮಿಗೆ ನಾವುಗಳು ಚಿರಋಣಿಯಾಗಿ ಇರಬೇಕೆಂದು ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ಅವರು ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ ರೈತ ಉದ್ಪಾದಕರ ಕಂಪನಿಯ ನೂತನ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿ ಪೂರಕ ಸಂಸ್ಥೆಗಳು ಇದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವ ಮುಖಾಂತರ ಆರ್ಥಿಕವಾಗಿ ಸದೃಢರಾಗಬೇಕು ಎಂದರು.
ತಾವೇ ಉತ್ಪಾದಕ ಕಂಪನಿಗಳ ನಿರ್ವಹಣೆ ಮಾಡುವ ವ್ಯವಸ್ಥೆ ಇದ್ದರೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಸಿಗಲಿದ್ದು, ರೈತರು ಇಂತಹ ಕೃಷಿ ಪೂರಕ ವ್ಯವಸ್ಥೆಗಳಿಗೆ ಹಾಗೂ ಕೃಷಿ ಭೂಮಿಯ ಬೆಳವಣಿಗೆ ಮಾಡಲು ಅನೇಕ ಯೋಜನೆಗಳು ರೂಪಿಸಿದ್ದು ಕೃಷಿ ಅವಲಂಬಿತ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಸಂಘದ ಅಧ್ಯಕ್ಷರಾದ ಹಾಗೂ ರಾಜ್ಯ ನಿರ್ದೇಶಕರಾದ. ರಾಜೇಶ್ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ತಹಸೀಲ್ದಾರ್ ಆದರ್ಶ್, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್, ಕಾರಸವಾಡಿ ಮಹದೇವ, ನೇಗಿಲು ಯೋಗಿ ಬಸವರಾಜು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ರೈತ ಉತ್ಪಾದಕರ ಸಂಘದ ಅಧ್ಯಕ್ಷರುಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ಕರಡಹಳ್ಳಿ ಗ್ರಾಮದಲ್ಲಿ ನೂತನವಾಗಿ ಪಶು ಸಂಗೋಪನ ಚಿಕಿತ್ಸಾಲಯ ಉದ್ಘಾಟನೆ ಹಾಗೂ ದೇವಲಾಪುರ ಹ್ಯಾಂಡ್ ಪೋಸ್ಟ್ ಪಾಲಿಟೆಕ್ನಿಕ್ ಪ್ರಯೋಗಾಲಯ ಹಾಗೂ ಪ್ರಥಮ ದರ್ಜೆ ಕಾಲೇಜು ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅರೆ ಅಲ್ಪಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಗುದ್ದಲಿ ಪೂಜೆ ಹಾಗೂ ಅಲ್ಪಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದರು.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State20 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan21 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State22 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu24 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ