Mandya
ಚೆಕ್ ಪೋಸ್ಟ್ಗಳಲ್ಲಿ ಎಲ್ಲಾ ವಾಹನಗಳ ತಪಾಸಣೆ ಕಡ್ಡಾಯ: ಡಾ: ಕುಮಾರ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಣಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನಗಳ ತಪಾಸಣೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ:ಕುಮಾರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ನೋಟೀಸ್ ಜಾರಿ ಕೆಲವು ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲವು ವಾಹನಗಳನ್ನು ತಪಾಸಣೆ ಮಾಡದೇ ಇರುವುದು ಹಾಗೂ ರಾತ್ರಿ ವೇಳೆ ನಿದ್ದೆ ಮಾಡುತ್ತಿರುವ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರು ಗಮನಿಸಿರುವ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಲೋಪ ಕಂಡು ಬಂದಲ್ಲಿ ಆರ್.ಪಿ ಆಕ್ಟ್ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿ ದಿನ ಸಹಾಯಕ ಚುನಾವಣಾಧಿಕಾರಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸ ಬೇಕು. ಜಿಲ್ಲಾಧಿಕಾರಿ ಗಳ ಕಚೇರಿಯ ದೂರು ನಿರ್ವಾಹಣಾ ಕೇಂದ್ರದಲ್ಲಿ ಚೆಕ್ ಪೋಸ್ಟ್ ಗಳ ಕಾರ್ಯನಿರ್ವಾಹಣೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಕಾರ್ಯನಿರ್ವಹಣೆ ಯಲ್ಲಿ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಏ.16 ರಿಂದ 18 ರವರೆಗೆ ಮನೆ ಮತದಾನ ಮಂಡ್ಯ ಲೋಕಸಭಾ ಕ್ಷೇತ್ರಷ ವ್ಯಾಪ್ತಿಯಲ್ಲಿ ಏಪ್ರಿಲ್ 16 ರಿಂದ 18 ರವರೆಗೆ 85 ವರ್ಷ ಹಾಗೂ ಮೇಲ್ಪಟ್ಟ 2570 ಮತದಾರರಿಗೆ ಹಾಗೂ 885 ವಿಕಲಚೇತನರಿಗೆ ಮನೆಯಿಂದ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದರು.
ಈಗಾಗಲೇ ಮತದಾರರಿಗೆ ಮನೆ ಮತದಾನ ಕುರಿತು ಮಾಹಿತಿ ನೀಡಲಾಗಿದೆ. ಸೆಕ್ಟರ್ ಅಧಿಕಾರಿಗಳು ರೂಟ್ ಮ್ಯಾಪ್ ಸಿದ್ಧಪಡಿಸಿಕೊಳ್ಳಬೇಕು. ಕಡ್ಡಾಯವಾಗಿ ಜಿ.ಪಿ.ಎಸ್ ವಾಹನವನ್ನು ಮನೆ- ಮನೆ ಮತದಾನಕ್ಕೆ ನಿಯೋಜಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ:ಹೆಚ್.ಎಲ್ ನಾಗರಾಜು ಅವರು ಮಾತನಾಡಿ, ಮನೆ ಮತದಾನದಲ್ಲಿ ಗೌಪ್ಯತೆ ಕಾಪಾಡಿ. ಮತದಾನದ ಸಂದರ್ಭದಲ್ಲಿ ಕಂಪಾಟ್೯ಮೆಂಟ್ ಬಳಸಿ ಎಂದರು.
ಬ್ಯಾಲೆಟ್ ಪೇಪರ್ ಗಳನ್ನು ಕ್ರಮ ಸಂಖ್ಯೆ ಅನುಸಾರ ವಿತರಿಸಿ. ಉಳಿಯುವ ಬ್ಯಾಲೆಟ್ ಪೇಪರ್ ಗಳನ್ನು ಹಿಂದಿರುಗಿಸಬೇಕು. ಮೃತಪಟ್ಟ ಮತದಾರರಿದ್ದಲ್ಲಿ ಅದನ್ನು ಸಹ ಗೈರು ಹಾಜರಿ ಮೃತ ಪಟ್ಟಿರುತ್ತಾರೆ ಎಂದು ಸರಿಯಾಗಿ ನಮೂದಿಸಿ. ವಿಡಿಯೋ ಗ್ರಾಫರ್ ಗಳಿಗೆ ಸರಿಯಾದ ತರಬೇತಿ ನೀಡಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಉಪವಿಭಾಗಾಧಿಕಾರಿ ಮಹೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್