Connect with us

State

ಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ

Published

on

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಅವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಪ್ರಜ್ವಲ್ ರೇವಣ್ಣ ಅವರು ಪೆರೋಲ್ ಕೋರಿ ಅರ್ಜಿ ಸಲ್ಲಿಸದೇ, ವಿಡಿಯೋ ಕಾನ್ಫರೆನ್ಸ್‌ (ವಿ.ಸಿ.) ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮಾತ್ರ ಅನುಮತಿ ಕೋರಿದ್ದರು. ಈ ಮನವಿಯನ್ನು ಪರಿಶೀಲಿಸಿದ ಜೈಲು ಅಧಿಕಾರಿಗಳು, ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಕುಟುಂಬದ ಈ ದುಃಖದ ಸಂದರ್ಭದಲ್ಲಿ ವರ್ಚುವಲ್‌ ಮೂಲಕ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Continue Reading

State

ರಾಷ್ಟ್ರಪತಿ ಭವನದತ್ತ ಶಿರಸಿಯ ಯುವ ವಿಜ್ಞಾನಿ!

Published

on

ದೇಶದ 26 ನವೋದ್ಯಮಿಗಳಲ್ಲಿ ಅಕ್ಷಯ್ ಮಾಶೇಲ್ಕರ್ಗೆ ಸ್ಥಾನ ಶಿಕ್ಷಣ ಕ್ಷೇತ್ರದ ಸಂಶೋಧನೆಗೆ ‘Grassroots Innovator Recognition – 2026’ ರಾಷ್ಟ್ರೀಯ ಗೌರವ
ಶಿರಸಿ: ಉತ್ತರ ಕನ್ನಡದ ಪುಟ್ಟ ಪಟ್ಟಣ ಶಿರಸಿಯಿಂದ ಆರಂಭವಾದ ಕನಸು ಈಗ ರಾಷ್ಟ್ರಪತಿ ಭವನದವರೆಗೆ ತಲುಪಿದೆ. ಗ್ರಾಮೀಣ ಮಕ್ಕಳಿಗೂ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ದೊರೆಯಬೇಕು ಎಂಬ ಧ್ಯೇಯದೊಂದಿಗೆ ಹಲವು ವರ್ಷಗಳಿಂದ ಸಂಶೋಧನೆ ನಡೆಸುತ್ತಿರುವ ಯುವ ವಿಜ್ಞಾನಿ ಅಕ್ಷಯ್ ಜಯವಂತ್ ಮಾಶೇಲ್ಕರ್ ಅವರಿಗೆ ದೇಶದ ಪ್ರತಿಷ್ಠಿತ ‘Grassroots Innovator Recognition – 2026’ ಗೌರವ ಲಭಿಸಿದೆ.


ನಿತಿ ಆಯೋಗದ ಅಟಲ್ ಇನೋವೇಶನ್ ಮಿಷನ್ (AIM) ವತಿಯಿಂದ ನೀಡಲಾಗುವ ಈ ರಾಷ್ಟ್ರೀಯ ಗೌರವಕ್ಕೆ ದೇಶದಾದ್ಯಂತ ಆಯ್ಕೆಯಾದ ಕೇವಲ 26 ಗ್ರಾಸ್ರೂಟ್ಸ್ ಇನೋವೇಟರ್ಗಳಲ್ಲಿ ಅಕ್ಷಯ್ ಕೂಡ ಒಬ್ಬರಾಗಿರುವುದು ಉತ್ತರ ಕನ್ನಡ ಜಿಲ್ಲೆಗೆ ಹೆಮ್ಮೆಯ ಕ್ಷಣವಾಗಿದೆ. ಜುಲೈ 31ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಯವರಿಂದ ಅವರಿಗೆ ಈ ಪ್ರಶಸ್ತಿ ಪ್ರದಾನವಾಗಲಿದೆ.

ಶಿಕ್ಷಣವನ್ನು ಬದಲಿಸುವ ಸಂಶೋಧನೆಗೆ ರಾಷ್ಟ್ರದ ಮನ್ನಣೆ
ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳಲ್ಲೇ ಸೀಮಿತಗೊಳಿಸದೆ, ಅನುಭವಾತ್ಮಕ ಹಾಗೂ ಆಸಕ್ತಿದಾಯಕವಾಗಿಸುವ ಉದ್ದೇಶದಿಂದ ಅಕ್ಷಯ್ ಹಲವು ನವೀನ ಸಂಶೋಧನೆಗಳನ್ನು ನಡೆಸಿದ್ದಾರೆ. ಶಿಕ್ಷಣ ಸಂಶೋಧನಾ ಕ್ಷೇತ್ರದಲ್ಲಿ ಅವರು ರೂಪಿಸಿರುವ ಹಲವು ತಂತ್ರಜ್ಞಾನ ಆಧಾರಿತ ಕಲಿಕಾ ಮಾದರಿಗಳು ಈ ರಾಷ್ಟ್ರೀಯ ಗೌರವಕ್ಕೆ ಅವರನ್ನು ಪಾತ್ರರನ್ನಾಗಿಸಿವೆ.
ಪ್ರಸ್ತುತ ಬೆಂಗಳೂರಿನ ಆರ್.ವಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಸಂಶೋಧನಾ ಕ್ಷೇತ್ರದಲ್ಲಿ ಪಿಎಚ್.ಡಿ. ವ್ಯಾಸಂಗ ಮಾಡುತ್ತಿರುವ ಅಕ್ಷಯ್, ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

AI, AR, VR ಮೂಲಕ ಹೊಸ ಶಿಕ್ಷಣ ಕ್ರಾಂತಿ
ಅಕ್ಷಯ್ ಅಭಿವೃದ್ಧಿಪಡಿಸಿರುವ ಶೈಕ್ಷಣಿಕ ತಂತ್ರಜ್ಞಾನಗಳಲ್ಲಿ AR (Augmented Reality), VR (Virtual Reality) ಆಧಾರಿತ ಕಲಿಕಾ ಪರಿಹಾರಗಳು, STEM ಶಿಕ್ಷಣ ಸಾಧನಗಳು, ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ಉಪಕರಣಗಳು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಹಲವು ಶಿಕ್ಷಣ ಆಟಿಕೆಗಳು ಸೇರಿವೆ. ಅವರ ಸಂಶೋಧನೆಗಳು ಮಕ್ಕಳಿಗೆ ವಿಜ್ಞಾನ ಮತ್ತು ಗಣಿತವನ್ನು ಕೇವಲ ಓದುವ ವಿಷಯವಲ್ಲ, ಅನುಭವಿಸಿ ಕಲಿಯುವ ವಿಷಯವನ್ನಾಗಿ ರೂಪಿಸುವತ್ತ ಗಮನಹರಿಸಿವೆ.

‘Geomagic’ಗೆ ನಾಲ್ಕು ಪೇಟೆಂಟ್
ಅಕ್ಷಯ್ ರೂಪಿಸಿರುವ ‘Geomagic’ ಎಂಬ ಗಣಿತ ಶಿಕ್ಷಣ ಸಂಶೋಧನೆಗೆ ಇತ್ತೀಚೆಗೆ ನಾಲ್ಕು ಪೇಟೆಂಟ್ಗಳು ದೊರೆತಿವೆ. ಆಟದ ಮೂಲಕ ಗಣಿತವನ್ನು ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ರೂಪಿಸಲಾದ ಈ ಸಂಶೋಧನೆ ಈಗಾಗಲೇ ಶಿಕ್ಷಣ ಕ್ಷೇತ್ರದ ತಜ್ಞರಿಂದ ಮೆಚ್ಚುಗೆ ಪಡೆದಿದೆ.


ಶಿರಸಿಯಿಂದ ರಾಷ್ಟ್ರಪತಿ ಭವನದವರೆಗೆ…
ಒಂದು ಸಣ್ಣ ಪಟ್ಟಣದ ಯುವ ವಿಜ್ಞಾನಿಯ ಸಂಶೋಧನೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಹೊಸ ಪ್ರೇರಣೆ. ಶಿಕ್ಷಣ ಕ್ಷೇತ್ರದಲ್ಲಿ ನವೋದ್ಯಮದ ಮೂಲಕ ಸಮಾಜದಲ್ಲಿ ಬದಲಾವಣೆ ತರಬಹುದು ಎಂಬುದನ್ನು ಅಕ್ಷಯ್ ಮಾಶೇಲ್ಕರ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಜುಲೈ 31ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಗೌರವ ಸಮಾರಂಭವು ಕೇವಲ ಅಕ್ಷಯ್ ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ವೈಜ್ಞಾನಿಕ ಪ್ರತಿಭೆಗೆ ದೊರೆತ ರಾಷ್ಟ್ರೀಯ ಮನ್ನಣೆಯೂ ಆಗಿದೆ.

Continue Reading

Special

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ–2026ಕ್ಕೆ ನಾಮನಿರ್ದೇಶನ ಆಹ್ವಾನ!!

Published

on

ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ–2026’ (Pradhan Mantri Rashtriya Bal Puraskar) ಪ್ರಶಸ್ತಿಗಾಗಿ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪೋಷಕರು, ಶಿಕ್ಷಕರು, ಸಂಸ್ಥೆಗಳು ಅಥವಾ ಮಕ್ಕಳು ಸ್ವತಃ (Self-Nomination) ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಕ್ಷೇತ್ರಗಳಲ್ಲಿ ಪ್ರಶಸ್ತಿ?
ಈ ಪ್ರಶಸ್ತಿಗೆ ಕೆಳಕಂಡ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳು ಅರ್ಹರಾಗಿರುತ್ತಾರೆ.
•ಶೌರ್ಯ (Bravery)
•ಸಮಾಜ ಸೇವೆ (Social Service)
•ಪರಿಸರ ಸಂರಕ್ಷಣೆ (Environment)
•ಕ್ರೀಡೆ (Games & Sports)
•ಕಲೆ ಮತ್ತು ಸಂಸ್ಕೃತಿ (Art)
•ವಿಜ್ಞಾನ ಮತ್ತು ತಂತ್ರಜ್ಞಾನ (Science & Technology)
ದೇಶಕ್ಕೆ ಮಾದರಿಯಾಗುವಂತಹ ಸಾಧನೆ ಮಾಡಿದ ಮಕ್ಕಳನ್ನು ಈ ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತದೆ.

ಅರ್ಹತಾ ಮಾನದಂಡಗಳು:
2026ರ ಜುಲೈ 31ರ ವೇಳೆಗೆ 5 ವರ್ಷಕ್ಕಿಂತ ಮೇಲ್ಪಟ್ಟು 18 ವರ್ಷ ಮೀರದ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಭಾರತೀಯ ನಾಗರಿಕರಾಗಿದ್ದು, ಭಾರತದಲ್ಲೇ ವಾಸಿಸುತ್ತಿರಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರು Self-Nomination ಅಥವಾ ಇತರರ ಮೂಲಕ Nomination ಸಲ್ಲಿಸಬಹುದು. ಅರ್ಜಿಯನ್ನು ಆನ್‌ಲೈನ್ ಮೂಲಕ https://awards.gov.in⁠ ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು. ಅಗತ್ಯ ದಾಖಲೆಗಳು ಹಾಗೂ ಸಾಧನೆಗೆ ಸಂಬಂಧಿಸಿದ ಮಾಹಿತಿಯನ್ನು ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಬೇಕು.

ಕೊನೆಯ ದಿನಾಂಕ:
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ–2026ಕ್ಕೆ ಅರ್ಜಿ ಸಲ್ಲಿಸಲು 2026ರ ಜುಲೈ 31 ಕೊನೆಯ ದಿನವಾಗಿದೆ. ಅರ್ಹ ಮಕ್ಕಳು ಹಾಗೂ ಅವರ ಪೋಷಕರು ಅಥವಾ ಶಿಕ್ಷಣ ಸಂಸ್ಥೆಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಒಳಿತು.

ದೇಶದ ಭವಿಷ್ಯವಾಗಿರುವ ಮಕ್ಕಳ ಪ್ರತಿಭೆ, ಧೈರ್ಯ ಮತ್ತು ಸಾಮಾಜಿಕ ಬದ್ಧತೆಯನ್ನು ರಾಷ್ಟ್ರದ ಮಟ್ಟದಲ್ಲಿ ಗುರುತಿಸಿ ಗೌರವಿಸುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಇದು ತಮ್ಮ ಪ್ರತಿಭೆಯನ್ನು ದೇಶದ ಮುಂದೆ ಪ್ರದರ್ಶಿಸಲು ದೊರೆಯುವ ಅಮೂಲ್ಯ ಅವಕಾಶವಾಗಿದೆ. ಆದ್ದರಿಂದ ಅರ್ಹ ಮಕ್ಕಳನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ನಾಮನಿರ್ದೇಶನ ಸಲ್ಲಿಸಲು ಸಂಬಂಧಪಟ್ಟವರು ಮುಂದಾಗಬೇಕು.

Continue Reading

State

ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮತ್ತೊಂದು ಖಡಕ್ ನಿರ್ಧಾರ

Published

on

ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್‌ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್‌ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು. ಮಂಗಳೂರಿನ ವೆನ್ಲಾಕ್‌ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಆಸ್ಪತ್ರೆಗಳ ಹಾಗೂ ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಆಹಾರ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ವಿಪರೀತವಾಗಿ ಅವಲಂಬನೆಯಾಗಿರುವುದು ಕೂಡ ಸಾಕಷ್ಟು ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕ್ಯಾನ್ಸರ್, ಮೂತ್ರಪಿಂಡ ಮೊದಲಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಹೆಚ್ಚುತ್ತಿವೆ. ಇದನ್ನು ಶಾಲಾ ಅಥವಾ ಆಸ್ಪತ್ರೆ ಹಂತದಲ್ಲೇ ನಿಯಂತ್ರಿಸಿದರೆ, ಕನಿಷ್ಠ ದೇಹದ ಆರೋಗ್ಯವನ್ನೂದರೂ ಕಾಪಾಡಲು ಸಾಧ್ಯವಿದೆ. ಅದಕ್ಕಾಗಿ ಆಸ್ಪತ್ರೆ ಮಾತ್ರವಲ್ಲ ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಕೂಡ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.

ಇದಕ್ಕೆ ಪೂರಕವಾಗಿ ಆಹಾರ ಮತ್ತು ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ಮಾಲ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಮಾರಾಟ ಮಾಡುವ ಆಹಾರ ವಸ್ತುಗಳ ಗುಣಮಟ್ಟವನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ, ಗುಣಮಟ್ಟ ರಹಿತ ಆಹಾರ ವಸ್ತುಗಳ ಮಾರಾಟವನ್ನು ನಿರ್ಬಂಧಿಸಲಾಗುವುದು. ಮಾತ್ರವಲ್ಲ ಅಂತಹವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಹಾಲಿ ಇರುವ ಆಹಾರ ಗುಣಮಟ್ಟ ತಪಾಸಣಾ ಲ್ಯಾಬ್‌ನ್ನು ಅತ್ಯುತ್ಕೃಷ್ಟ ಮಟ್ಟದಲ್ಲಿ ಮೇಲ್ದರ್ಜೆಗೆ ಪಿಪಿಪಿ ಮಾದರಿಯಲ್ಲಿ ಏರಿಸಲು ನಿರ್ಧರಿಸಲಾಗಿದೆ. ಅಲ್ಲಿ ಆಹಾರ ವಸ್ತುಗಳ ತಪಾಸಣೆ ನಡೆಸಿ ನೀಡುವ ವರದಿಯನ್ನು ಸುಪ್ರೀಂ ಕೋರ್ಟ್‌ ಕೂಡ ಸಮ್ಮತಿಸುವಂತೆ ಇರಬೇಕು ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿಯೇ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಚಿಕಿತ್ಸೆಗೆ ತಗಲುವ ವೆಚ್ಚ ಎಷ್ಟು, ಅದಕ್ಕಾಗಿ ಸರ್ಕಾರ ಎಷ್ಟು ಶ್ರಮ ವಹಿಸಿದೆ, ಓರ್ವ ರೋಗಿಗೆ ಎಷ್ಟು ಮೊತ್ತ ಖರ್ಚು ಮಾಡುತ್ತದೆ ಎಂಬುದು ದಾಖಲಾಗುವ ಎಲ್ಲ ರೋಗಿಗಳಿಗೂ ಗೊತ್ತಿರಬೇಕು. ಅದಕ್ಕಾಗಿ ಪ್ರತಿಯೊಬ್ಬ ರೋಗಿಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೊರಗೆ ಹೋಗುವಾಗ ಅವರ ಚಿಕಿತ್ಸೆಗೆ ಒಟ್ಟು ಎಷ್ಟು ವೆಚ್ಚ ತಗುಲಿದೆ ಎಂಬ ಬಗ್ಗೆ ಸಮಗ್ರ ಬಿಲ್‌ ನೀಡಲಾಗುತ್ತದೆ. ಆದರೆ ಮೊತ್ತ ಪಡೆಯುವುದಿಲ್ಲ, ಅದು ಮೊತ್ತ ಪಾವತಿ ರಹಿತ ಬಿಲ್‌ ಆಗಿರುತ್ತದೆ. ಈ ಮಾದರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಿಂದಲೇ ಆರಂಭವಾಗಲಿದ್ದು, ಇದನ್ನು ರಾಜ್ಯದ ಎಲ್ಲ ಕಡೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್‌ ಹೇಳಿದರು.

Continue Reading

Trending

error: Content is protected !!