Connect with us

Uncategorized

ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ

Published

on

ಬೆಂಗಳೂರು: ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

Continue Reading
Click to comment

Leave a Reply

Your email address will not be published. Required fields are marked *

Uncategorized

ಮರಳಾಗಾಲ ಗ್ರಾಮದ ಜಗಧೀಶ್(53) ನಿಧನ

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಮರಳಾಗಾಲ ಗ್ರಾಮದ ದಿ.ಮಹದೇವು ರವರ ಮಗ ಎಂ ಜಗದೀಶ್(53) ರವರು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಪ್ರಮಾಣದ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಕ್ರಿಯೆಯನ್ನು ಅವರ ಸ್ವ-ಗ್ರಾಮ ಮರಳಾಗಾಲದಲ್ಲಿ ಮದ್ಯಾಹ್ನ ನೆರವೇರಿಸುವುದಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

Continue Reading

Hassan

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ

Published

on

50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,

ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,

*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*

ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,

ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,

ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,

ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,

ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು

Continue Reading

Kodagu

ಉಡೋತ್ ಮೊಟ್ಟೆ : ಡಿ.6 & 7  ರಂದು ಕೊರಗಜ್ಜ ದೈವದ ನೇಮೋತ್ಸವ

Published

on

ಮಡಿಕೇರಿ : ಉಡೋತ್‌ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ.

ಡಿ.6ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು. ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ.

ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9900931278 , 9591304757೯೫೯೧೩೦೪೭೫೭, ೯೪೮೩೩೯೯೦೭೭ ಸಂಪರ್ಕಿಸಬಹುದಾಗಿದೆ.

Continue Reading

Trending

error: Content is protected !!