Connect with us

Chikmagalur

ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರವೇ ಪ್ರತಿಭಟನೆ

Published

on

ಚಿಕ್ಕಮಗಳೂರು : ರಾಜ್ಯದಲ್ಲಿ ನೀರಿನ ಕೊರತೆಯಿಂದ ರೈತರು ಸಂಕಷ್ಟದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಈ ನಡುವೆ ರಾಜ್ಯ ಸರ್ಕಾರದ ನಿಲುವು ಸರಿಯಲ್ಲ. ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ)ಯ ಜಿಲ್ಲಾಧ್ಯಕ್ಷ ನಾಗವಾರ ರಮೇಶ್ ಎಚ್ಚರಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಬಳಿಕ ಮಾತನಾಡಿ, ಮಳೆ ಕೊರತೆಯಿಂದ ರಾಜ್ಯದಲ್ಲಿ ಜನತೆಗೆ ತೀವ್ರ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಸೂಕ್ತವಲ್ಲ. ಕೂಡಲೇ ನೀರು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ೧೯೨ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ ದಿನ ೫ ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿ ಎಂದು ಹೇಳಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಪ್ರಾಧಿಕಾರದ ಆದೇಶ ಮುಖ್ಯವಲ್ಲ. ಈಗಲೂ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊ ಳ್ಳಬೇಕು. ರಾಜ್ಯದ ಎಲ್ಲ ಸಂಸದರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.

Continue Reading
Click to comment

Leave a Reply

Your email address will not be published. Required fields are marked *

Chikmagalur

ಸಂಪರ್ಕ ಕಡಿತದ ಭೀತಿಯಲ್ಲಿ ಬಣಕಲ್ ದೇವರಮನೆ ರಸ್ತೆ

Published

on

ಚಿಕ್ಕಮಗಳೂರು: ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮುಖಂಡ ಬಿಎಸ್ ವಿಕ್ರಂ ಮಾತನಾಡಿ ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಗ ಕಡಿತದ ಭೀತಿ ಎದುರಾಗಿದೆ ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ, ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ.

ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಹಾಗೂ ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Continue Reading

Chikmagalur

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

Published

on

ಚಿಕ್ಕಮಗಳೂರು : ಅತಿವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ‌ ನಡೆದಿದೆ

ಮೂಡಿಗೆರೆ- ಕೊಟ್ಟೆಗೆಹಾರ ಮಾರ್ಗದ ಬಿದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ.

Continue Reading

Chikmagalur

ಅಕ್ರಮ ಇಸ್ಪೀಟು ಜೂಜಾಟದ ಅಡ್ಡೆಯ ಮೇಲೆ ದಾಳಿ, ೭ ಮಂದಿ‌ ಬಂಧನ

Published

on

ಚಿಕ್ಕಮಗಳೂರು : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಗಿಲೆ ಗ್ರಾಮದ ಬಳಿಯ ಪ್ಲಾಂಟೇಶನ್ ಬಳಿ ನಡೆದಿದೆ.

ಖಚಿತ ಮಾಹಿತಿಯೊಂದಿಗೆ ಬಣಕಲ್ ಠಾಣೆಯ ಪಿಎಸೈ ರೇಣುಕಾ ಸಾರಥ್ಯದಲ್ಲಿ ಪೊಲೀಸರ ತಂಡದೊಂದಿಗೆ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದು, 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.‌
ಈ ಕಾರ್ಯಾಚರಣೆಯಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್, ಕಿರಣ್, ಮೆಹಬೂಬ್, ಮಾಲತೇಶ್, ಅಶೋಕ್, ಸಚಿನ್, ದಿಲೀಪ್ ಪಾಲ್ಗೊಂಡಿದ್ದರು.

 

Continue Reading

Trending