Chikmagalur
ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮೊದಲ ಬಲಿ

ಚಿಕ್ಕಮಗಳೂರು: ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದ್ದು, ಮಂಗನ ಕಾಯಿಲೆಯಿಂದಾಗ ಚಿಕ್ಕಮಗಳೂರಿನಲ್ಲಿ ಸೋಮವಾರ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತ ದುರ್ದೈವಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು.
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನ ಚಿಕಿತ್ಸೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಈ ವರ್ಷ ಮೊದಲ ಬಲಿ ಪಡೆದುಕೊಂಡಿದೆ.
ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ.
ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರದಿದೆ.
Chikmagalur
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.
ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ತೀರ್ಪು ನೀಡಿತು.
Chikmagalur
ಜನಿವಾರ ತೆಗೆಸಿರುವುದು ಖಂಡನೀಯ

ಜಯಪುರ : ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಪತ್ರಿಕೆಗೆ ತಿಳಿಸಿದರು.
ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ.
ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಕೂಡಲೇ ಇಂತಹ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕಾಗಿ ಆಗ್ರಹಿಸುತ್ತೇವೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ :-ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಒಂಟಿ ಸಲಗ

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಕಾಣಿಸಿಕೊಳ್ಳದೊಡಗಿದೆ
ಮೂರು ದಿನದ ಹಿಂದೆ ಎಂಟನೇ ತಿರುವು ಬಳಿ ಸಂಜೆ ವೇಳೆ ಕಾಣಿಸಿದ್ದ ಆನೆ ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ನಿಂತಿದೆ.
ಸಂಜೆಯೂ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿದ್ದು, ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಇದ್ದು,ಆನೆ ದಾಳಿಗೆ ಮುಂದಾದರೆ ತಪ್ಪಿಸಿಕೊಳ್ಳೋದು ಕಷ್ಟ.
ನಿನ್ನೆ ಸಂಜೆ ಕಾರು ಚಾಲಕ ಆನೆಯಿಂದ ಜಸ್ಟ್ ಮಿಸ್ ಆಗಿದ್ದು ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳಿಯರು, ಪ್ರವಾಸಿಗರು ಒತ್ತಾಯಿಸಿದ್ದಾರೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore10 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ