Connect with us

Hassan

ಏ.೧೮ಕ್ಕೆ ಸಿಎಂ ಸಿದ್ದರಾಮಯ್ಯ, ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ ಶ್ರೇಯಸ್ ಪಟೇಲ್

Published

on

ಹಾಸನ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ ೧೮ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ವಿಶ್ವಾಸವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ಅವರಿಂದ ಜಿಲ್ಲೆಯಲ್ಲಿ ಮತಯಾಚನೆಗೆ ಆಗಮಿಸಿದ್ದು, ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ ತನ್ನಿ ಎಂದು ಎಲ್ಲರಲ್ಲಿ ಮನವಿ ಮಾಡಿದ್ದೇನೆ. ಒಮ್ಮೆ ನನಗೆ ಅವಕಾಶ ಕೊಡಿ ಎಂದು ಕೇಳಿಕೊಳ್ಳುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ ನಾವು ಗೆಲ್ಲುತ್ತೇವೆ. ಏಪ್ರಿಲ್ ೧೫ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೂರಿಗೆ ಬರುತ್ತಿದ್ದು, ಏಪ್ರಿಲ್ ೧೮ ರಂದು ಸಿಎಂ, ಡಿಎಸಿಎಂ ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು ಸೇರಿದಂತೆ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದು, ಒಂದೊಂದೆಡೆ ರೋಡ್ ಶೋ, ಮತ್ತೊಂದೆಡೆ ಬಹಿರಂಗ ಸಭೆ ಇದ್ದು, ಒಂದೇ ದಿನದಲ್ಲಿ ಏಳು ವಿಧಾನಸಭಾ ಕ್ಷೇತ್ರದ ಪ್ರಚಾರ ಮುಗಿಸಲಿದ್ದಾರೆ ಎಂದರು. ನಮಗೆ ಒಂದು ದಿನ ಚುನಾವಣೆ ಪ್ರಚಾರಕ್ಕೆ ಬಂದರೆ ಸಾಕು. ಇದಕ್ಕಿಂತ ಮುಂಚೆ ಹತ್ತಾರು ಬಾರಿ ಬಂದಿದ್ದಾರೆ.

ಬಿಜೆಪಿ ಕಾರ್ಯಕರ್ತರು ಭೇಟಿ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಪ್ರತಿ ತಿಂಗಳು ಅಮವಾಸ್ಯೆ ಪೂಜೆಗೆ ದೊಡ್ಡಗದ್ದವಳ್ಳಿ ದೇವಸ್ಥಾನಕ್ಕೆ ಹೋಗುತ್ತೇನೆ. ಈ ವೇಳೆ ಪಕ್ಷಾತೀತವಾಗಿ ಎರಡು, ಮೂರು ಸಾವಿರ ಜನ ಇದ್ದರು. ಅವತ್ತು ಬೆಳಿಗ್ಗೆ ಹೋದಾಗ ಕೊಇನ್ಸಿಡೆನ್ಸ್ ಅವರು ಬಂದರು. ನಾನು ಸಹಾಯ ಮಾಡಿ ಎಂದು ಮತಯಾಚಿಸಿದೆ. ಅವರು ನಗತ್ತಲೇ ಹೋದರು. ಗುಂಪಿನಲ್ಲಿದ್ದಾಗ ಒಂದು ಫೋಟೋ ತೆಗೆದುಕೊಂಡರು.

ಅದು ಬಿಟ್ಟರೆ ನಾನು ಹೋಗಿದ್ದು, ಅವರು ಅಲ್ಲಿ ಇದ್ದದ್ದು ನೂರಕ್ಕೆ ನೂರು ಪರ್ಸೆಂಟ್ ಕೊನ್ಸಿಡೆನ್ಸ್. ನಾನು ಬಿಜೆಪಿಯ ಯಾರನ್ನು ಭೇಟಿ ಮಾಡಿಲ್ಲ. ಅದೆಲ್ಲಾ ಸುಳ್ಳು. ನಾನು ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದವರನ್ನು ಭೇಟಿ ಮಾಡಿದ್ದೀನಿ. ಸುಮ್ನೆ ವೈಯುಕ್ತಿಕವಾಗಿ ಯಾರ ಮೇಲೂ ಮಾತನಾಡಬಾರದು, ಆ ರೀತಿ ಏನು ಇಲ್ಲ ಎಂದು ಉತ್ತರಿಸಿದರು. ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ಬಹುಮತದೊಂದಿಗೆ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ಮತದಾರರ ಮೇಲೆ ವಿಶ್ವಾಸದ ಮಾತನ್ನು ಹೇಳಿದರು.

ಇದೆ ವೇಳೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮುಖಂಡರಾದ ವಿನಯ್ ಗಾಂಧಿ, ಮುನಿಸ್ವಾಮಿ, ಪ್ರಸನ್ನ ಕುಮಾರ್, ಗಿರೀಶ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಸರ್ಕಾರಿ ಶಾಲೆಗಳ ಅಭಿವೃದ್ಧಿ, ಉಳಿವಿಗೆ ಹಿರಿಯ ವಿದ್ಯಾರ್ಥಿಗಳು ಸಹಕಾರಿಸಬೇಕು: ಸಿ.ಎನ್‌.ಬಾಲಕೃಷ್ಣ

Published

on

ವರದಿ: ದಯಾನಂದ ಶೆಟ್ಟಿಹಳ್ಳಿ

ಚನ್ನರಾಯಪಟ್ಟಣ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಉಳಿವಿಗೆ ಹಿರಿಯ ವಿದ್ಯಾರ್ಥಿಗಳು ಸಹಕಾರ ನೀಡಬೇಕು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

ಪಟ್ಟಣದ ಮಾಧ್ಯಮಿಕ ಶಾಲಾ ಅವರಣದಲ್ಲಿ ಶನಿವಾರದಂದು ಎವನ್ ಪ್ಲಾಸ್ಟಿಕ್ ಸಂಸ್ಥೆ ತಾಲೂಕಿನ ಸರ್ಕಾರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಂಸ್ಥೆಯ ಸಿಎಸ್ಆರ್ ಅನುದಾನದಡಿ ನೀಡುತ್ತಿರುವ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,
ಹಲವಾರು ಖಾಸಗಿ ಸಂಸ್ಥೆಗಳು ಸಿಎಸ್ಆರ್ ಪಂಡಿತ್ ಸಹಕಾರ ನೀಡಬಹುದು ಅಂತಹ ಸಂಸ್ಥೆಗಳನ್ನು ಗುರುತಿಸಿ ತರುವಂತಹ ಕೆಲಸವನ್ನು ಹಿರಿಯ ವಿದ್ಯಾರ್ಥಿಗಳು ಮಾಡಬೇಕು ಎಂದರು.


ತಾಲೂಕಿಗೆ ಮಂಜೂರಾಗಿರುವ ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.

ತಾಲೂಕಿನ ಬಾಗೂರು ಹಾಗೂ ಶ್ರಾವಣಬೆಳಗೊಳಕ್ಕೆ ಕೆಪಿಎಸ್ ಶಾಲೆ ಮಂಜುರಾಗಿದ್ದು ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಯಾವುದೇ ಅನುದಾನಗಳು ಬಿಡುಗಡೆಯಾಗದಿರುವುದರಿಂದ ಎರಡು ಶಾಲೆಗಳಿಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಶಾಲೆ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷಕ್ಕೆ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಯಿಂದ 15ನೇ ಹಣಕಾಸು ಯೋಜನೆಯಲ್ಲಿ ಒಂದೊಂದು ಶಾಲೆಗಳನ್ನು ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದ್ದು, ಶಾಲಾ ಶಿಕ್ಷಣ ಇಲಾಖೆಯ ಆಡಳಿತಾಧಿಕಾರಿಗಳು ತಾಲೂಕಿನಲ್ಲಿರುವ ಶಾಲೆಗಳ ಅಗತ್ಯ ಕಾಮಗಾರಿಗಳ ಬಗ್ಗೆ ಪಟ್ಟಿ ಸಲ್ಲಿಸಿದರೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಗುರು ಶಾಲೆಗೆ ಅತಿ ಅವಶ್ಯವಾಗಿ ಶೌಚಾಲಯದ ಅವಶ್ಯಕತೆ ಇದ್ದು ಕೆಪಿಎಸ್ ಶಾಲೆಯ ಅನುದಾನದಲ್ಲಿ ಹೈಟೆಕ್ ಶೌಚಾಲಯವನ್ನು ನಿರ್ಮಿಸಲಾಗುವುದು ಎಂದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ ಸಮೀಪಿಸುತ್ತಿದ್ದು ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಎಲ್ಲ ಶಿಕ್ಷಕರು ಹಾಗೂ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ಕ್ರಮವಹಿಸಬೇಕು. ವಿಷಯವಾರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ನಿರ್ದಿಷ್ಟ ಕಲಿಕಾಂಶಗಳ ಪ್ರಗತಿಗೆ ಶ್ರಮಿಸಬೇಕು. ಎಲ್ಲ ವಿಷಯ ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳ ಕಲಿಕಾ ಕೊರತೆ ಗುರುತಿಸಿ ಪ್ರಗತಿಗೆ ಪ್ರತಿದಿನ ಚಟುವಟಿಕೆ ರೂಪಿಸಿ, ಕಲಿಕಾ ಪ್ರಗತಿಯಾಗುವಂತೆ ಶ್ರಮವಹಿಸಬೇಕು ಎಂದು ಸೂಚಿಸಿದರು.

ಎವನ್ ಪ್ಲಾಸ್ಟಿಕ್ ಸಂಸ್ಥೆಯವರು ಪ್ರಸಕ್ತ ವರ್ಷದ ಸಿಎಸ್ಆರ್ ಅನುದಾನದಲ್ಲಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 6,000 ಬ್ಯಾಗ್ ಗಳನ್ನು ವಿತರಿಸಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಾಲೂಕಿನಲ್ಲಿರುವ ಪ್ರೌಢಶಾಲಾ ಮಕ್ಕಳಿಗೆ ಮುಂದಿನ ಆರ್ಥಿಕ ವರ್ಷದ ಸಿಎಸ್ಆರ್ ಅನುದಾನದಲ್ಲಿ ಉಚಿತ ಬ್ಯಾಗ್ ಗಳನ್ನು ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎನ್. ದೀಪ ಮಾತನಾಡಿದರು, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಕೆ.ಎನ್.ಅನಿಲ್ , ಎವನ್ ಪ್ಲಾಸ್ಟಿಕ್ ಇಂಡಸ್ಟ್ರೀಸ್ ನ ವ್ಯವಸ್ಥಾಪಕ ಗೌತಮ್, ರಮೇಶ್, ಲೋಕೇಶ್, ಸರಬರಾಜುದಾರ ಮಧುಶೆಟ್ಟಿ, ಟಿಎಪಿಸಿಎಂಎಸ್ ನ ಅಧ್ಯಕ್ಷ ವೆಂಕಟೇಶಮೂರ್ತಿ ಹೇಳಿದಂತೆ ತಾಲೂಕಿನ ಶಾಲೆಗಳ ಮುಖ್ಯಸ್ಥರು ಹಾಗೂ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Continue Reading

Hassan

ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು: ಶಾಸಕ ಸಿಮೆಂಟ್‌ ಮಂಜು

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನತೆಗೆ ನೀಡಿದ ಭರವಸೆಯಂತೆ ಮಾದರಿ ವಿಧಾನ ಸಭಾ ಕ್ಷೇತ್ರವನ್ನಾಗಿ ಮಾಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದ್ರವಳ್ಳಿ ಗ್ರಾಮದ ದೇವನಕಟ್ಟೆ ಹಳ್ಳಕ್ಕೆ ಅಡ್ಡಲಾಗಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಬೇಸಿಗೆ ಕಾಲದಲ್ಲಿಯೂ ಸಹ ರೈತರಿಗೆ ನೀರು ಒದಗಿಸುವ ಉದ್ದೇಶದಿಂದ ಈ ಮಹತ್ವಾಕಾಂಕ್ಷಿಯ ಯೋಜನೆಗೆ ಚಾಲುನೆ ನೀಡಲಾಗಿದೆ ಈ ಯೋಜನೆಯಿಂದ ಸರಿಸುಮಾರು 45 ಎಕರೆ ಭೂಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಸಾವಿರಾರು ರೈತರಿಗೆ ಅನುಕೂಲವಾಗಿದೆ ಇದನ್ನು ಸದುಪಯೋಗಪಡಿಸಿಕೊಂಡು ರೈತರು ಉತ್ತಮ ಕೃಷಿ ಮಾಡಬೇಕೆಂದು ಜನರು ನನ್ನ ಮೇಲೆ ನಂಬಿಕೆ ಇಟ್ಟು ನನ್ನನ್ನ ಕ್ಷೇತ್ರದ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಹಾಗಾಗಿ ಕ್ಷೇತ್ರದ ಜನತೆಯ ಕಲ್ಯಾಣದ ಜೊತೆಗೆ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಹುಣಸವಳ್ಳಿ ಗ್ರಾಮ ಪಂಚಾಯಿತಿಯ ಸದಸ್ಯ ಮೋಹನ್ ಮಾವನೂರು, ತಾಳೂರು ಗ್ರಾಮ ಪಂಚಾಯಿತಿಯ ಸದಸ್ಯ ಮಹೇಂದರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣಮೂರ್ತಿ, ತಾಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹರೀಶ್, ಬಿಜೆಪಿ ಮುಖಂಡರಾದ ವೆಂಕಟೇಶ್ ವೀರಪ್ಪ.ಕೃಷ್ಣಮೂರ್ತಿ. ಚೇತನ್. ಅಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Continue Reading

Hassan

ಕುಟುಂಬದ ಮೌಲ್ಯಕ್ಕೆ ಶರಣಾದ ವಿವಾಹಿತೆ : ಪ್ರಿಯಕರನ ಸಹವಾಸ ತೊರೆದು,ವಾಪಸ್ ತವರು ಮನೆಗೆ

Published

on

ಹಾಸನ: ಇಡೀ ರಾಜ್ಯವೇ ಬೆಚ್ಚಿ ಬಿದ್ದಿಧ್ದ ಮಹಿಳೆ‌ ನಿಗೂಢ ರೀತಿಯ ನಾಪತ್ತೆ ಪ್ರಕರಣದಲ್ಲಿ ಐದು ದಿನಗಳ ಬಳಿಕ ಪ್ರಿಯಾಂಕ ಸಾಂತ್ವಾನ ಕೇಂದ್ರದಿಂದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ತಾಯಿ ಮನೆಗೆ ತೆರಳಿದ್ದಾಳೆ.

ಫೆಬ್ರವರಿ 14 ರಂದು ಹಾಸನ ತಾಲೂಕಿನ, ಕಲ್ಕೆರೆ ಬಳಿ ಮಹಿಳೆಯ ಬಟ್ಟೆ, ಚಪ್ಪಲಿ ಹಾಹೂ ಬ್ಯಾಗ್ ಪತ್ತೆಯಾಗಿದ್ದು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಫೆಬ್ರವರಿ 14 ರ ರಾತ್ರಿಯೇ ಕುಣಿಗಲ್‌ನಲ್ಲಿ‌ ಗೆಳೆಯ ಡೇವಿಡ್ ಜೊತೆ ಇರುವುದನ್ನು ಪತ್ತೆ ಮಾಡಿ ಹೆಚ್ಚಿನ ವಿಚಾರಣೆಗಾಗಿ ಹಾಸನಕ್ಕೆ ಕರೆ ತಂದಿದ್ದರು.

ಆನಂತರ ಪತಿ ಜೊತೆ ವಾಪಾಸ್ ತೆರಳಲು ಪ್ರಿಯಾಂಕ ಒಪ್ಪಿರಲಿಲ್ಲ. ಬಳಿಕ ಪ್ರಿಯಾಂಕ ಕುಟುಂಬ ಸದಸ್ಯರ ಜೊತೆ ಪೊಲೀಸರು ಮಾತನಾಡಿ ನಿನ್ನೆ ಸಂಜೆ ತವರು ಮನೆಗೆ ಕಳುಹಿಸಿದ್ದಾರೆ.

ಪತಿ ರುದ್ರೇಶ್ ಹಾಗೂ ಪುತ್ರ ಪತ್ನಿ ಮನೆಗೆ ಆಗಮಿಸಿದ್ದು, ಕೆಲ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ತಾಯಿ ಮನೆಯಲ್ಲಿ ವಾಸ್ಥವ್ಯ ಹೂಡಿದ್ದಾರೆ‌. ಪ್ರಿಯಾಂಕ ನಾಪತ್ತೆ ಆಗಿದ್ದ ವೇಳೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದರು. ನಂತರ ಗೆಳೆಯನ ಜೊತೆ ಕುಣಿಗಲ್‌ನಲ್ಲಿ ಪ್ರಿಯಾಂಕ ಪತ್ತೆಯಾಗಿದ್ದಳು.

Continue Reading

Trending

error: Content is protected !!