State
ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ
ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ.
ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ?
ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ.
“ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ.
State
INDvsENG 1st t20: ಟೀಂ ಇಂಡಿಯಾ ಅಲ್ರೌಂಡರ್ ಪ್ರದರ್ಶನ; ಸೂರ್ಯ ಬಳಕ್ಕೆ ಮೊದಲ ಜಯ
ಕೊಲ್ಕತ್ತಾ: ಭಾರತ ತಂಡದ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್ ತಂಡ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ಗಳ ಅಂತರದಿಂದ ಗೆಲುವು ದಾಖಲಿಸಿದೆ.
ಇಲ್ಲಿನ ಈಡೆನ್ ಗಾರ್ಡೆನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 20 ಓವರ್ಗಳಲ್ಲಿ ಆಲ್ಔಟ್ ಆಗಿ 132 ರನ್ ಗಳಿಸಿ ಟೀಂ ಇಂಡಿಯಾಗೆ 133 ರನ್ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿ ಭಾರತ ತಂಡ 12.5 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ 7 ವಿಕೆಟ್ಗಳ ಅಂತರದಿಂದ ಗೆದ್ದು ಬೀಗಿತು.
ಇಂಗ್ಲೆಂಡ್ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರವಾಗಿ ಬೆನ್ ಡಕೆಟ್ ಹಾಗೂ ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಿದರು. ಸಾಲ್ಟ್ ಶೂನ್ಯ ಸುತ್ತಿ ಹೊರನಡೆದರೇ, ಡಕೆಟ್ 4(4) ರನ್ ಗಳಿಸಿ ಇನ್ನಿಂಗ್ಸ್ ಮುಗಿಸಿದರು.
ನಾಯಕ ಜೋಸ್ ಬಟ್ಲರ್ 44 ಎಸೆತ 8 ಬೌಂಡರಿ, 2 ಸಿಕ್ಸರ್ ಸಹಿತ 68 ರನ್ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಅಧಿಕ ರನ್. ಬಟ್ಲರ್ ಏಕಾಂಕಿ ಹೋರಾಟದ ಫಲವಾಗಿ ಇಂಗ್ಲೆಂಡ್ ನೂರರ ಗಡಿ ದಾಟಿತು.
ಉಳಿದಂತೆ ಹ್ಯಾರಿ ಬ್ರೂಕ್ 17(14), ಲಿವಿಂಗ್ಸ್ಟೋನ್ ಡಕ್ಔಟ್, ಬೆಥೆಲ್ 7(14), ಓವರ್ಟನ್ 2(4), ಆಟ್ಕಿನ್ಸನ್ 2(13), ಜೋಫ್ರಾ ಆರ್ಚರ್ 12(10), ಮಾರ್ಕ್ವುಡ್ 1(1) ಹಾಗೂ ಆದಿಲ್ ರಶೀದ್ ಔಟಾಗದೇ 8(11) ರನ್ ಗಳಿಸಿದರು.
ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ 3, ಅರ್ಶದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಟೀಂ ಇಂಡಿಯಾ ಇನ್ನಿಂಗ್ಸ್: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಸಂಜು ಸ್ಯಾಮ್ಸನ್ 26(20) ರನ್ ಗಳಿಸಿದರೇ, ನಾಯಕ ಸೂರ್ಯಕುಮಾರ್ ಯಾದವ್ ಡಕ್ಔಟ್ ಆಗಿ ಹೊರನಡೆದರು.
ಇತ್ತ ಆರಂಭದಿಂದಲೇ ಭರ್ಜರಿಯಾಗಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ ಭರ್ಜರಿ 8 ಸಿಕ್ಸರ್ಗಳ ಸಹಾಯದಿಂದ 79 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಜೊತೆಯಾದ ತಿಲಕ್ ವರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಕ್ರಮವಾಗಿ 19 ಹಾಗೂ 3 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಎರಡು, ಆದಿಲ್ ರಶೀದ್ ಒಂದು ವಿಕೆಟ್ ಕಬಳಿಸಿದರು.
State
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 3ಲಕ್ಷ ಪರಿಹಾರ ಘೋಷಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಪರಿಹಾರ ಘೋಷಿಸಿದ್ದಾರೆ.
State
ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್ ಕೊಟ್ಟರು.
ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International12 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan17 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ