State
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 3ಲಕ್ಷ ಪರಿಹಾರ ಘೋಷಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಪರಿಹಾರ ಘೋಷಿಸಿದ್ದಾರೆ.
State
ವಾಲ್ಮೀಕಿ ಹಗರಣದ ತನಿಖೆ ಚುರುಕುಗೊಳಿಸಿದ ಸಿಬಿಐ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದಾರೆ.
ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ಗುರುವಾರ ನೋಟಿಸ್ ನೀಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್ ಮತ್ತು ಕುಟುಂಬಸ್ಥರಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಹಿಂದೆ ಚಂದ್ರಮೋಹನ್ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.
ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್, ಸತ್ಯನಾರಾಯಣ ಇಟಕಾರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ.
State
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು.
ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.
State
ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಮಾಡಿದವರು & ಮುಂದೆ ಮಾಡುವವರು ಈ ವಿಷಯಗಳನ್ನು ತಿಳಿದುಕೊಳ್ಳಿ

ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್ವರ್ಕ್ – Microfinance Industry Network : ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ, ಹಲವು ಬಡ ಜನರ ಜೀವ ಬಳಿ ತೆಗೆದುಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ.
ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಇದರ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಇದರಿಂದ ಮುಂದೆ ನಿಮಗೆ ಆಗುವಂತಹ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು.
ಮಧ್ಯಮ ವರ್ಗದ ಅಥವಾ ಬಡಜನರ ಅತಿಯಾದ ಅವಶ್ಯಕತೆಯನ್ನು ಅವಕಾಶವಾಗಿ ಮಾಡಿಕೊಂಡು ಬಂಡವಾಳ ಮಾಡಿಕೊಳ್ಳುವ ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು, ವ್ಯಕ್ತಿಗಳು, ಅನಧಿಕೃತ ಲೇವಾದೇವಿದಾರರು ಬಡ ಜನರಿಗೆ ಜನರ ತುರ್ತು ಸಮಯದಲ್ಲಿ ಸಾಲದ ರೂಪದಲ್ಲಿ ಹಣ ನೀಡಿ, ಅದಕ್ಕೆ ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಿರುವದರ ಕುರಿತು ಸರ್ಕಾರದ ಮಾರ್ಗಸೂಚಿಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಸಾಲ ಮರುಪಾವತಿ ಮಾಡದೇ ಇರುವುದು ಅಪರಾಧವೆ?
ಹಲವು ವೈಯಕ್ತಿಕ ಕಾರಣಗಳಿಂದಾಗಿ ಪಡೆದಂತಹ ವೈಯಕ್ತಿಕ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡದಿರುವುದು ಕ್ರಿಮಿನಲ್ ಅಪರಾಧ ಆಗಿರುವುದಿಲ್ಲ. ಒಂದು ವೇಳೆ ನೀವು ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದಿದ್ದಲ್ಲಿ, ಮೈಕ್ರೋ ಫೈನಾನ್ಸ್ ಕಂಪನಿಯವರು ನಿಮಗೆ ಅತಿಯಾದ ಕಿರುಕುಳ ಅಥವಾ ತೊಂದರೆ ನೀಡಿದ್ದಲ್ಲಿ ಈ ಕೆಳಗಿನ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ.
• RBI ನಿಯಮಗಳ ಅನುಸಾರ, ಸಾಲ ವಸೂಲು ಮಾಡುವವರು ಪರಸ್ಪರ ನಿರ್ಧರಿಸಿದ ಅಥವಾ ಗೊಟ್ಟುಪಡಿಸಿದ ಸ್ಥಳದಲ್ಲಿ ಮಾತ್ರ ವಸೂಲಾತಿ ಮಾಡಲು ಅವಕಾಶವಿದೆ. ಒಂದು ವೇಳೆ ಸಾಲ ಪಡೆದ ಅಭ್ಯರ್ಥಿಯು ಎರಡು ಅಥವಾ ಹೆಚ್ಚಿನ ಸಂದರ್ಭದಲ್ಲಿ ಗೊತ್ತು ಪಡಿಸಿದ ಸ್ಥಳಕ್ಕೆ ಬರಲು ವಿಫಲವಾದಲ್ಲಿ ಮಾತ್ರ ಅವರ ಮನೆಗೆ ಹೋಗಲು ಅವಕಾಶವಿರುತ್ತದೆ.
• ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಅಥವಾ ಇತರೆ ಸಾಲ ನೀಡುವವರು ಹಣ ವಸೂಲಾತಿಗಾಗಿ ಯಾವುದೇ ರೀತಿಯ ಕಠಿಣ ವಿಧಾನಗಳನ್ನು ಬಳಸಲು ಅವಕಾಶವಿರುವುದಿಲ್ಲ.
• ಸಾಲಗಾರರಿಗೆ ಸಾಲ ವಸೂಲಾತಿ ಮಾಡಲು ನಿರಂತರ ಕರೆ ಮಾಡುವುದು ಅಥವಾ, ಬೆಳಿಗ್ಗೆ 9:00 ಗಂಟೆಯ ಮುಂಚೆ ಮತ್ತು ಸಾಯಂಕಾಲ 6:00 ನಂತರ ಕರೆ ಮಾಡಲು ಅನುಮತಿ ಇರುವುದಿಲ್ಲ.
ಒಂದು ವೇಳೆ ನಿಮಗೆ ಮೈಕ್ರೋಫೈನಾನ್ಸ್ ನವರು ಅಥವಾ ಇತರೆ ಅನಧಿಕೃತ ಸಾಲದಾರರು ಯಾವುದೇ ರೀತಿಯಲ್ಲಿ ಕಿರುಕುಳ ಕೊಟ್ಟರೆ ಸರ್ಕಾರದ 24×7 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
24×7 ಟೋಲ್ ಫ್ರೀ ಸಂಖ್ಯೆ – 112 ಅಥವಾ 1902
-
State13 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu11 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar11 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu10 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Kodagu15 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Hassan8 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Hassan9 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports11 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್