Connect with us

State

ಜಲಜೀವನ್‌ ಮಿಷನ್‌ಗೆ ಅನುದಾನವಿಲ್ಲ: ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ ಎಂದ ಸಿಎಂ

Published

on

ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಜಲಜೀವನ್‌ ಮಿಷನ್‌ ಅನ್ನು ಹಾಳುಗೆಡವಲು ಬಿಜೆಪಿ ಉದ್ದೇಶಪೂರಿತ ಸಂಚು ರೂಪಿಸಿದೆ. ಆ ಮೂಲಕ ಕರ್ನಾಟಕದ ಹಿತಾಶಕ್ತಿಗೆ ದ್ರೋಹ ಬೆಗೆದಿದೆ ಎಂದು ದೂರಿದ್ದಾರೆ.

https://x.com/siddaramaiah/status/1890706784882671833

ಟ್ವಿಟ್ಟರ್‌ನಲ್ಲೇನಿದೆ?

ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು!

ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ.

ಇಲ್ಲಿದೆ ನೋಡಿ ಸತ್ಯ:

ಜೆಜೆಎಂ ( ಜಲಜೀವನ್ ಮಿಷನ್)ಗೆ ಒಟ್ಟು ಹಂಚಿಕೆ – ₹49,262 ಕೋಟಿ (ಕೇಂದ್ರದ ಪಾಲು – ₹26,119 ಕೋಟಿ, ರಾಜ್ಯದ ಪಾಲು – ₹23,142 ಕೋಟಿ)

ಬಿಡುಗಡೆಯಾದ ಒಟ್ಟು ಅನುದಾನ – ₹32,202 ಕೋಟಿ (ಕೇಂದ್ರದ ಪಾಲು – ₹11,760 ಕೋಟಿ, ರಾಜ್ಯದ ಪಾಲು – ₹20,442 ಕೋಟಿ)

ಕರ್ನಾಟಕದ ಒಟ್ಟು ಖರ್ಚು – ₹29,413 ಕೋಟಿ

ಕೇಂದ್ರದ ಪಾಲು
₹26,119 ಕೋಟಿ ಹಂಚಿಕೆ
ಕೇವಲ ₹11,760 ಕೋಟಿ ಬಿಡುಗಡೆಯಾಗಿದೆ – ಶೇ. 45ರಷ್ಟು ಮಾತ್ರ ಬದ್ಧತೆಯನ್ನು ಹೊಂದಿದೆ.

ರಾಜ್ಯದ ಪಾಲು
₹23,142 ಕೋಟಿ ಹಂಚಿಕೆ
₹20,442 ಕೋಟಿ ಬಿಡುಗಡೆ – ಶೇ. 88.3ರಷ್ಟು ಹೆಚ್ಚಿನ ಮೊತ್ತ!

ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.

2024-25ನೇ ಸಾಲಿನ ಬಜೆಟ್‌ನಲ್ಲಿ – ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ

ಕೇಂದ್ರ ಸರ್ಕಾರವು ಜೆಜೆಎಮ್ ಗೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ₹570 ಕೋಟಿ ಮಾತ್ರ ಬಿಡುಗಡೆಯಾಗಿರುತ್ತದೆ. ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ. ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್ ನಲ್ಲಿ ₹7,652 ಕೋಟಿ ಹಂಚಿಕೆ ಮಾಡಿದ್ದು, ₹4,977 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ – ಇದು ದೇಶದ ಎಲ್ಲಾ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ.
ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – ₹70,163 ಕೋಟಿ
ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ ₹22,694 ಕೋಟಿಗೆ ಇಳಿಸಲಾಗಿದೆ.

ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್ ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ.

ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು.

ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ಕರ್ನಾಟಕದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ ಎಂದು ಸುದೀರ್ಘವಾಗಿ ಬರೆದುಕೊಂಡು ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ

Continue Reading

State

ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 4 ಸಾವಿರ ರೂ. ಹಣ ಈ ದಿನ ಜಮವಾಗಲಿದೆ : ಸ್ಟೇಟಸ್ ಚೆಕ್ ಮಾಡುವುದು ಹೇಗೆ?

Published

on

Gruhalakshmi Scheme Pending Amount Credit Date – ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಜಮವಾಗುವ 2000ರೂ. ಹಣವು ಕಳೆದ ಎರಡು ತಿಂಗಳಿನಿಂದ ಪಲಾನುಭವಿಗಳ ಖಾತೆಗೆ ವಿವಿಧ ಕಾರಣಕ್ಕಾಗಿ ಜಮವಾಗಿಲ್ಲ.

ಇದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದ ಮುಕಾಂತರ ಪಲಾನುಭವಿಗಳಿಗೆ ಬಾಕಿ ಇರುವ ಎರಡು ಕಂತುಗಳ 4 ಸಾವಿರ ರೂಪಾಯಿ ಹಣವನ್ನು ಶೀಘ್ರದಲ್ಲಿಯೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯಾವಾಗ ಜಮಾವಾಗಲಿದೆ? ಜಮಾವಾದ ಹಣವನ್ನು ಪರಿಶೀಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ..

ಯಾವ ದಿನಾಂಕದಂದು ಜಮವಾಗಲಿದೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ ಪ್ರಕಾರ ಬಾಕಿ ಇರುವ ಎರಡು ಕಂತುಗಳ 4,000ರೂ. ಹಣವನ್ನು ಶೀಘ್ರದಲ್ಲಿಯೆ ಅಂದರೆ ಮಾರ್ಚ್ 31 ರನಂತರ ಖಚಿತವಾಗಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಮವಾದ ಹಣದ ಸ್ಟೇಟಸ್ ಪರಿಶೀಲಿಸುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯ ಬಾಕಿ ಮೊತ್ತ ಜಮವಾದ ಹಣದ ಸ್ಟೇಟಸ್ ನೀವು ನಿಮ್ಮ ಮೊಬೈಲ್ ಮುಕಾಂತರ ಸುಲಭವಾಗಿ DBT ಅಪ್ ಮುಕಾಂತರ ಪರಿಶೀಲಿಕೊಳ್ಳಬಹುದು. ಗೂಗಲ್ ಪ್ಲೇ ಸ್ಟೋರ್ ನಲ್ಲಿ DBT ಆಪ್ ಡೌನ್ಲೋಡ್ ಮಾಡಿ, ನೋಂದಣಿಯಾಗಿ ನಿಮ್ಮ ಆಧಾರ್ ಕಾರ್ಡ್ ಮುಕಾಂತರ ನಿಮ್ಮ ಖಾತೆಗೆ ಜಮವಾಗುವುದರ ಕುರಿತು ಪರಿಶೀಲಿಕೊಳ್ಳಿ. DBT ಆಪ್ ನ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಕೆಳಗಡೆ ನೀಡಲಾಗಿದೆ.

DBT ಆಪ್ ಲಿಂಕ್ – https://play.google.com/store/apps/details?id=com.dbtkarnataka

Continue Reading

State

ಮುನಿರತ್ನನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು: ಕೆ.ಎನ್‌ ರಾಜಣ್ಣ

Published

on

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.

ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್‌ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.

Continue Reading

State

ಫೋನ್‌ ಕದ್ದಾಲಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಿಷ್ಟು?

Published

on

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಫೋನ್ ಕದ್ದಾಲಿಕೆಯಾಗಿದೆ. ಇದೇ ರೀತಿ ಹಲವು ಶಾಸಕರ ಫೋನ್ ಕದ್ದಾಲಿಕೆಯಾಗಿದೆ. ರಾಜಣ್ಣ ಮತ್ತು ರಾಜೇಂದ್ರ ಅವರನ್ನು ಟ್ರ್ಯಾಪ್ ಮಾಡಲು ಕದ್ದಾಲಿಕೆ ಮಾಡಿಸಿದ್ದಾರೆ. ಈ ಬಗ್ಗೆ ನಾನು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಿದ್ದೇವೆ. ಸುಮಾರು 2 ವರ್ಷಗಳಿಂದಲೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದರು.

ಇನ್ನು ನಾವು ಧರ್ಮಾಧಾರಿತ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದೇವೆ. ಮೀಸಲಾತಿ ಭೂತವನ್ನು ರಾಜ್ಯದ ಹಿಂದೂಗಳ ಮೇಲೆ ಹೇರುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶೇ.5ರಷ್ಟು ಮುಸ್ಲಿಮರು ಗುತ್ತಿಗೆದಾರರಾಗಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಬೇಡ ಎಂದಿದ್ದಾರೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

Continue Reading

Trending

error: Content is protected !!