Mandya
ಮಂದಗೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆಯಲ್ಲಿ ಜೆ.ಡಿ.ಎಸ್ ಪಕ್ಷದ ವಷಕ್ಕೆ

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಮಂದಗರೆ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷದ ಅವದಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ನಿಗದಿಯಾಗಿತ್ತು
ಸಾಲಗಾರ ಕೇತ್ರಕ್ಕೆ 20 ಜನ ಸ್ಪರ್ದೆ ಮಾಡಿದ್ದು ಅದರಲ್ಲಿ ಗದ್ದೇಹೊಸೂರು ಜಿ.ಎನ್ ದೀಪಕ್, ಜಿ.ಬಿ ಮನು, ಚಿಕ್ಕಮಂದಗರೆ ಗ್ರಾಮದ ರಮೇಶ್ ಕೆ.ಎನ್, ವಸಂತ, ಆಲೇನಹಳ್ಳಿ ಗ್ರಾಮದ ಆಶೋಕ, ಸಾವಿತ್ರಮ್ಮ, ಮಂದಗರೆ ಗ್ರಾಮದ ಮಂಜುನಾಥ್, ಮೂಡನಹಳ್ಳಿ ಗ್ರಾಮದ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಗ್ರಾಮದ ಮಂಜೇಗೌಡ, ಶ್ರವಣಹಳ್ಳಿ ಗ್ರಾಮದ ಬೋಜಯ್ಯ, ಗೆಲುವು ಸಾದಿಸಿದ್ರೆ ಸಾಸಲಗಾರರಲ್ಲದ ಕ್ಷೇತ್ರದಿಂದ ಅಲೇನಹಳ್ಳಿ ಮಹೇಶ್ ರವರು ಗೆಲುವು ಸಾದಿಸಿದ್ರು
ನೂತನ ನಿರ್ದೇಶಕರಿಗೆ ಜೆ.ಡಿ.ಎಸ್ ಪಕ್ಷದ ಯುವ ನಾಯಕ ಗದ್ದೇಹೊಸೂರು ಜಗದೀಶ್ ಸಿಹಿ ತಿನ್ನಿಸಿ ಎಲ್ಲಾ ನಿರ್ದೇಶಕರಿಗೆ ಶುಭ ಕೋರಿ ಮಾತನಾಡಿ ಜೆ.ಡಿ.ಎಸ್ ಅಭ್ಯರ್ಥಿ 8 ಸ್ಥಾನ ಗೆಲುವು ಸಾದಿಸಿ ಅದಿಕಾರದ ಚುಕ್ಕಾಣೆ ಹಿಡಿಯಲಿದ್ದು ಎಲ್ಲಾ ನಿರ್ದೇಶಕರು ಪಕ್ಷಬೇದ ಮರೆತು ಸಂಘದ ಅಭಿವೃದ್ಧಿ ಶ್ರಮಿಸುವಂತೆ ಸಲಹೆ ನೀಡಿದ್ರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
Mandya
ಬದಲಾಗುತ್ತಿರುವ ಹೊಸ ಆವಿಷ್ಕಾರಗಳಿಗೆ ತಕ್ಕಂತೆ ಸಂಘದ ಸಿಬ್ಬಂದಿಗಳು ಹೊಂದಿಕೊಳ್ಳುವ ಅನಿವಾರ್ಯತೆಯಿದೆ : ಧನಂಜಯ್

ಮಂಡ್ಯ : ಬದಲಾಗುತ್ತಿರುವ ಹೊಸ ಆವಿಷ್ಕಾರಗಳಿಗೆ ತಕ್ಕಂತೆ ಸಂಘದ ಸಿಬ್ಬಂದಿಗಳು ಹೊಂದಿಕೊಳ್ಳುವ ಅನಿವಾರ್ಯತೆ ಇರುವುದಾಗಿ ಶಾಖಾ ಸಮಿತಿ ಸದಸ್ಯ ಜಿ. ಧನಂಜಯ ದರಸಗುಪ್ಪೆ ಕಿವಿ ಮಾತು ಹೇಳಿದರು.
ನಗರದ ಅಶೋಕನಗರ ಒಂದನೇ ಕ್ರಾಸ್ ನಲ್ಲಿರುವ ‘ ದಿ ಪಾವಗಡ ಸೌಹಾರ್ಧ ಮಲ್ಟಿಪರ್ಪಸ್ ಕೋ -ಆಪರೇಟಿವ್ ಸೊಸೈಟಿ ಲಿ,’ ಮಂಡ್ಯ ಶಾಖೆಯಲ್ಲಿ, ಮಂಡ್ಯ -ರಾಮನಗರ, ಮೈಸೂರು -ತುಮಕೂರು ಶಾಖೆಯ ಸಿಬ್ಬಂದಿಗಳಿಗೆ ಆಯೋಜಿಸಿದ್ದ, “ತರಬೇತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡುತ್ತಾ, 22 ವರುಷಗಳ ಹಿಂದೆ ಪ್ರಾರಂಭಗೊಂಡ ಸಂಸ್ಥೆ ತಹಲ್ ವರೆವಿಗೂ, ಪ್ರತಿವರ್ಷವೂ ಲಾಭದಲ್ಲಿಯೇ ನಡೆಯುತಲಿದ್ದು, ದಿ ಪಾವಗಡ ಸಂಸ್ಥೆ, ರಾಜ್ಯದಲ್ಲಿಯೇ ಪ್ರತಿಷ್ಠಿತ-ಆರ್ಥಿಕ ಸದೃಢ ಹಾಗೂ ಸೇವಾ ಮನೋಭಾವದ ಸೌಹಾರ್ಧ ಸಂಸ್ಥೆಯಾಗಿ ಮುನ್ನಡೆಯುತ್ತಿದೆ ಎಂದರು
ಬದ್ಧತೆ – ವಿಧೇಯತೆ – ಪ್ರಾಮಾಣಿಕತೆ – ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ಪಂಚ ದ್ಯೇಯಗಳೊಂದಿಗೆ ಪ್ರಾರಂಭವಾದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಹೆಚ್. ಕೃಷ್ಣರೆಡ್ಡಿ ಮಾತನಾಡಿ, ಆಡಳಿತ ಮಂಡಳಿ ನಿರ್ದೇಶಕರ-ಷೇರುದಾರರ-ಸಿಬ್ಬಂದಿಗಳ-ಸಹಕಾರದೊಂದಿಗೆ ಯಶಸ್ವಿಯಾಗಿ ಮುನ್ನಡೆಸುತ್ತಿರುವುದಕ್ಕೆ ಅಭಿನಂದನಾರ್ಹರು ಎಂದರು. ಆಡಳಿತ ಮಂಡಳಿ ನಿರ್ದೇಶನಗಳಿಗನುಗುಣವಾಗಿ, ಹೊಸ ಹೊಸ ಆವಿಷ್ಕಾರ ಹಾಗೂ ನಾವಿನ್ಯತೆಗಳಿಗೆ ತಕ್ಕಂತೆ ಹೊಂದಿಕೊಂಡು, ಸಿಬ್ಬಂದಿಗಳು ಶ್ರದ್ದೆ ಹಾಗೂ ಪ್ರಾಮಾಣಿಕವಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಶಾಖಾ ಸಮಿತಿಯ ಅಧ್ಯಕ್ಷ ನರಸಿಂಹ ಮೂರ್ತಿ ಶೆಟ್ಟಿ ವಹಿಸಿದ್ದರು. ಸದಸ್ಯರಾದ ನಾರಾಯಣ ರೆಡ್ಡಿ, ಗೋವರ್ಧನ್ ರೆಡ್ಡಿ, ಮಂಡ್ಯ ಶಾಖಾ ವ್ಯವಸ್ಥಾಪಕ ಜಯಶಂಕರ ಶೆಟ್ಟಿ, ಉಪಸ್ಥಿತರಿದ್ದರು.
ತುಮಕೂರು ಶಾಖೆಯ ಹಿರಿಯ ವ್ಯವಸ್ಥಾಪಕ ಹಾಗೂ ಅಭಿವೃದ್ಧಿ ತಂಡದ ಮುಖ್ಯಸ್ಥ ನರಸರೆಡ್ಡಿ, ರಾಮನಗರ ಶಾಖೆ ವ್ಯವಸ್ಥಾಪಕ ರುದ್ರೇಶ್, ತರಬೇತುದಾರ ಅನಿಲ್ ರವರುಗಳು ವಿವಿಧ ಶಾಖೆಯ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.
Mandya
ಕನ್ನಡ ಸಾಹಿತ್ಯ ಪರಿಷತ್ ಬೈಲಾ ತಿದ್ದುಪಡಿಗೆ ಖಂಡನೆ : ಮಹೇಶ್ ಜೋಶಿ ನಿರ್ಧಾರಕ್ಕೆ ಕಿಡಿ

ಮಂಡ್ಯ: ಕಸಾಪ ಬೈಲಾ ತಿದ್ದುಪಡಿ ಮಾಡಲು ಹೊರಟಿರುವ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರ ನಿರ್ಧಾರದ ವಿರುದ್ಧ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಲು ನಿರ್ಣಯ ಕೈಗೊಂಡಿವೆ.
ನಗರದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಹೇಶ್ ಜೋಶಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಸಮ್ಮೇಳನ ಮುಗಿದ ಮಾರನೇ ದಿನ ಪರಿಷತ್ನ ಬೈಲಾ ನಿಯಮ ಉಲ್ಲಂಘಿಸಿ ಕಾರ್ಯಕಾರಿ ಮಂಡಳಿ ರದ್ದುಪಡಿಸಿ ಹೊಸ ಕಾರ್ಯಕಾರಿ ಮಂಡಳಿ ರಚನೆ ಮಾಡಲಾಗಿತ್ತು. ಇದರ ವಿರುದ್ಧ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದವರಿಗೆ ಸದಸ್ಯತ್ವ ರದ್ದುಪಡಿಸುವ ನೋಟಿಸ್ ನೀಡಲಾಗಿದ್ದು, ಅದಕ್ಕೆ ತಕ್ಕ ಉತ್ತರ ನೀಡುವ ಬಗ್ಗೆ ನಿರ್ಧರಿಸಲಾಯಿತು.
ಅಲ್ಲದೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಬೈಲಾದ 21/1ರಲ್ಲಿರುವಂತೆ ನಿಯಮವನ್ನು ಬಳ್ಳಾರಿ ಯಲ್ಲಿ ನಡೆಯಲಿರುವ ಸರ್ವ ಸದಸ್ಯರ ಸಭೆಗೆ ಹಾಜರು ಪಡಿಸಲು ಮುಂದಾಗಿರುವುದು ಸರಿಯಲ್ಲ. ನ್ಯಾಯಾಲಯ ದಲ್ಲಿದ್ದಾಗ ಯಾವುದೇ ಬೈಲಾದ ನಿಯಮ ರದ್ದುಪಡಿಸಲು ಬರುವುದಿಲ್ಲ.
ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಇರುವ ವಿಶೇಷ ಅಧಿಕಾರದ ನಿಯಮವನ್ನು ಕಸಾಪ ಬೈಲಾದಲ್ಲಿ ಸೇರಿಸುವ ಮೂಲಕ ರಾಜ್ಯಾಧ್ಯಕ್ಷರು ಸಹ ಅವರ ಸರಿಸಮಾನ ಎಂದು ಪರಮೋಚ್ಛ ಅಧಿಕಾರ ಪಡೆಯಲು ಮುಂದಾಗಿದ್ದಾರೆ. ಅದರ ಮೂಲಕ ಯಾರನ್ನಾದರೂ ಸದಸ್ಯತ್ವದಿಂದ ತೆಗೆದು ಹಾಕಬಹುದು ಅಥವಾ ಸೇರಿಸಬಹುದು.
ಆದರೆ, ಸಂವಿಧಾನ ಪರಿಚ್ಛೇದ 164(1) ಅಡಿಯಲ್ಲಿ ಯಾವುದೇ ಸಂಘ-ಸಂಸ್ಥೆಗಳಿಗೆ ಈ ಅಧಿಕಾರ ಪಡೆಯುವ ಅಧಿಕಾರವಿಲ್ಲ. ಇದರ ಬಗ್ಗೆ ತಜ್ಞರ ಜೊತೆ ಚರ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಮಹೇಶ್ ಜೋಶಿ ಅವರ ನಿರ್ಣಯ, ನಿರ್ಧಾರದ ಬಗ್ಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದು. ಜೊತೆಗೆ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳೊಡಗೂಡಿ ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಕಸಾಪ ಮಾಜಿ ಅಧ್ಯಕ್ಷರಾದ ಪ್ರೊ.ಜಿ.ಟಿ.ವೀರಪ್ಪ, ಮೀರಾ ಶಿವಲಿಂಗಯ್ಯ, ಎಂ.ವಿ.ಧರಣೇಂದ್ರಯ್ಯ, ರೈತ ನಾಯಕಿ ಸುನಂದಜಯರಾಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Mandya
ದೇವಾಲಯಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ಶ್ರದ್ಧಾ ಕೇಂದ್ರಗಳು : ಎನ್.ಚಲುವರಾಯಸ್ವಾಮಿ

ಕೆ.ಆರ್.ಪೇಟೆ : ದೇವಾಲಯಗಳು ನಮ್ಮ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ನೀಡುವ ಶ್ರದ್ಧಾ ಕೇಂದ್ರಗಳಾಗಿದ್ದು, ದೈವದ ಮಾರ್ಗದಲ್ಲಿ ಸಾಗಿದರೆ ಯಶಸ್ಸು ನಿಶ್ಚಿತ ಎಂದು ಜಿಲ್ಲಾ ಉಸ್ತವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಅವರು ಕೆ.ಆರ್.ಪೇಟೆ ಗ್ರಾಮ ದೇವತೆ ಶ್ರೀ ದೊಡ್ಡಕೇರಮ್ಮ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀರಥದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಶಿಥಿಲವಾಗಿದ್ದ ಗ್ರಾಮದೇವತೆಯ ದೇವಾಲಯವನ್ನು ವಾಸ್ತುಬದ್ಧವಾಗಿ ನೂತನವಾಗಿ ನಿರ್ಮಿಸಿ ನಾಗರೀಕ ಸಮಾಜ ಮೆಚ್ಚುವಂತಹ ಕೆಲಸ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು. ದೇವರ ಸ್ಮರಣೆ ಹಾಗೂ ಪೂಜೆಯಿಂದ ಕಾಲ ಕಾಲಕ್ಕೆ ಮಳೆಯಾಗಿ ಉತ್ತಮ ಬೆಳೆಯಾಗಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲಸಲಿ. ಅನ್ನಧಾತರಾದ ರೈತರ ಬಾಳು ಬಂಗಾರವಾಗಲಿ ಎಂದು ಅವರು ಶುಭ ಹಾರೈಸಿದರು.
ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರು ನೀಡಿದ ಹೃದಯಸ್ಪರ್ಶಿ ಅಭಿನಂದನೆಯನ್ನು ಸ್ವೀಕರಿಸಿದರು.
ಸಮಾಜ ಸೇವಕರಾದ ಸ್ಟಾರ್ ಚಂದ್ರು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ. ಎಲ್.ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಪುರಸಭೆ ಅಧ್ಯಕ್ಷೆ ಪಂಕಜಾ, ಉಪಾಧ್ಯಕ್ಷೆ ಸೌಭಾಗ್ಯ, ಸ್ಥಾಯಿಸಮಿತಿ ಅಧ್ಯಕ್ಷ ರವೀಂದ್ರಬಾಬು, ಕಸಬಾ ಸೊಸೈಟಿ ಅಧ್ಯಕ್ಷ ಪುರುಷೋತ್ತಮ್, ಚಿನಕುರಳಿ ರಮೇಶ್, ಉಧ್ಯಮಿ ಬಿ. ರಾಜಶೇಖರ್, ವಕೀಲ ಬಿ. ನಾಗೇಶ್, ಪುರಸಭೆ ಸದಸ್ಯರಾದ ಕೆ.ಎಸ್. ಪ್ರಮೋದ್, ಬಸ್ ಸಂತೋಷ್, ನಟರಾಜ್, ಮಹಾದೇವಿ, ಸುಗುಣ, ಕೆ.ಸಿ.ಮಂಜುನಾಥ್, ಗ್ರಾಮದ ಯಜಮಾನರಾದ ಹೆಗ್ಗಡಿ ಕೃಷ್ಣೆಗೌಡ, ಪಟೇಲ್ ಚಂದ್ರಣ್ಣ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರೆಗೌಡ, ಕೆ.ಸಿ. ವಾಸು, ಉಧ್ಯಮಿ ಹೆಚ್.ಎಂ.ಸಿ ಚಂದ್ರಶೇಖರ್ ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ಅಶೋಕ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಪೊಲೀಸ್ ಇನ್ಸ್ ಪೆಕ್ಟರ್ ಸುಮಾರಾಣಿ, ಗ್ರಾಮದ ಮುಖಂಡರಾದ ಪಟೇಲ್ ಚಂದ್ರಣ್ಣ, ಹೆಗ್ಗಡಿ ಕೃಷ್ಣೆಗೌಡ ಅವರನ್ನು ಸಚಿವ ಚಲುವರಾಯಸ್ವಾಮಿ ಅವರು ಸನ್ಮಾನಿಸಿ ಗೌರವಿಸಿದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu24 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur23 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Chikmagalur24 hours ago
ಜನಿವಾರ ತೆಗೆಸಿರುವುದು ಖಂಡನೀಯ