Mandya
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಅನನ್ಯ – ಪ್ರಕಾಶ್
ನಾಗಮಂಗಲ : ವಿದೇಶಿಗರು ಬೆಂಗಳೂರಿನತ್ತ ತಿರುಗಿ ನೋಡಲು ನಾಡಪ್ರಭು ಕೆಂಪೇಗೌಡರ ಅನನ್ಯ ದೂರದೃಷ್ಟಿ ಕಾರಣ ಎಂದು ಕಾಲೇಜು ಶಿಕ್ಷಣ ಇಲಾಖೆ ಸಹ ಪ್ರಾಧ್ಯಾಪಕ ಡಾ.ಎನ್.ಜಿ.ಪ್ರಕಾಶ್ ಅಭಿಪ್ರಾಯ ಪಟ್ಟರು.
ಶ್ರೀ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ೫೧೫ನೇ ಜಯಂತ್ಯೋತ್ಸವದ ಅಂಗವಾಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೀರ ಶೂರ ಧೀರನಾಗಿದ್ದ ನಾಡಪ್ರಭು ಕೆಂಪೇಗೌಡರು ವಿದೇಶಿಗರು ಬೆಂಗಳೂರಿನತ್ತ ತಿರುಗಿ ನೋಡುವಂತಾಗಲು ಅವರ ದೂರದೃಷ್ಟಿಯೇ ಕಾರಣ. ಬೆಂಗಳೂರನ್ನು ಅಂದಿನ ಕಾಲದಲ್ಲಿಯೇ ಅಷ್ಟು ಉತ್ತಮ ನಗರ ಯೋಜನೆಯೊಂದಿಗೆ ನಿರ್ಮಾಣ ಮಾಡಿದ್ದಾರೆ. ಕೆಂಪೇಗೌಡರು ಒಬ್ಬ ರಾಜನಷ್ಟೇ ಅಲ್ಲ. ಅವರು ರೈತ, ಕೈಗಾರಿಕೋದ್ಯಮಿ, ಎಂಜಿನಿಯರ್, ಜ್ಞಾನಿ ದಾರ್ಶನಿಕ ಸಾರ್ವಭೌಮ ಹೀಗೆ ಊಹೆಗೂ ನಿಲುಕದ ವ್ಯಕ್ತಿತ್ವ ಉಳ್ಳವರು. ಆಂಧ್ರ ಮತ್ತು ತಮಿಳುನಾಡಿನವರು ಕೆಂಪೇಗೌಡರನ್ನು ನಮ್ಮವರು ಎನ್ನುತ್ತಾರೆ. ಆದರೆ ಮೂಲತಃ ಕೆಂಪೇಗೌಡರು ಕನ್ನಡಿಗರು. ಜಾತಿ ಆಧಾರಿತ ಪೇಟೆಗಳನ್ನು ಕಟ್ಟಲಿಲ್ಲ ವೃತ್ತಿ ಆಧಾರಿತ ಪೇಟೆಗಳನ್ನು ಅವರು ಕಟ್ಟಿದರು ಎಂದರು.
ಯಾರು ಕುಳಿತು ಸಮರ್ಥವಾಗಿ ಸ್ಪಷ್ಟವಾಗಿ ಕೇಳಿಸಿಕೊಳ್ಳುವರೋ ಅವರೇ ಮುಂದಿನ ದಿನಗಳಲ್ಲಿ ವೇದಿಕೆಯಲ್ಲಿ ಸಮರ್ಥವಾಗಿ ನಿಂತು ಸಮರ್ಪಕವಾಗಿ ಮಾತನಾಡಲು ಅರ್ಹರು. ಭವಿಷ್ಯದ ಉತ್ತಮ ದಿನಗಳ ಬಗ್ಗೆ ಕನಸು ಕಂಡು ಪ್ರಯತ್ನ ಮಾಡಿದಾಗ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಖ್ಯಾತ ಸಾಹಿತಿ ಹೊನ್ನಶೆಟ್ಟಿ ಹಳ್ಳಿ ಗಿರಿರಾಜ್ ಮಾತನಾಡಿ, ಆರ್ಥಿಕ ವಾಗಿ ನೈತಿಕವಾಗಿ ಉನ್ನತ ಸ್ಥಾನ ಏರಲು ದೂರದೃಷ್ಟಿ ಹೊಂದಿದ್ದ ಧೀಮಂತ ಕೆಂಪೇಗೌಡ. ಸುಂದರವಾದ ಭವ್ಯವಾದ ಕನಸು ಕಾಣಬೇಕು ನಾಡಪ್ರಭು ಕೆಂಪೇಗೌಡ ಅಂತಹ ಸುಂದರ ಕನಸು ಕಂಡಿದ್ದರು. ಸುಂದರ ಕನಸು ಕಂಡವರು ಸಾಧಕರಾಗುತ್ತಾರೆ ಎಂದರು.
ಆರಕ್ಷಕ ವೃತ್ತ ನಿರೀಕ್ಷಕ ಕೆ.ಎಸ್.ನಿರಂಜನ್ ಮಾತನಾಡಿ, ಕೆಂಪೇಗೌಡರು ವೃತ್ತಿ ಆಧಾರದ ಮೇಲೆ ಬೆಂಗಳೂರು ಪೇಟೆ ಕಟ್ಟಿದರು. ಯಾರನ್ನು ಜಾತಿ ಆಧಾರದ ಮೇಲೆ ಬೇರ್ಪಡಿಸಲಿಲ್ಲ. ಎಲ್ಲಾ ಮಹನೀಯರ ಜನ್ಮದಿನಾಚರಣೆಯನ್ನ ಅವರವರ ಜಾತಿಗೆ ಸೀಮಿತ ಮಾಡಿರುವುದು ವಿಷಾದನೀಯ. ಈ ಜಾತಿ ಧರ್ಮ ವ್ಯವಸ್ಥೆ ಮುಂದಿನ ದಿನಗಳಲ್ಲಿ ಆತಂಕ ಸೃಷ್ಟಿ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ವಿದ್ಯಾರ್ಥಿಗಳು ಜಾತಿ ವರ್ತುಲದಿಂದ ಆಚೆ ಇರಬೇಕು ಎಂದು ಕಿವಿ ಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಸ್.ರವೀಂದ್ರ ಅಧ್ಯಕ್ಷೀಯ ನುಡಿಗಳಾಡುತ್ತಾ ಬೇರೆಯವರಿಗೆ ಉತ್ತೇಜಿಸುವ ರೀತಿಯಲ್ಲಿ ನಮ್ಮ ವ್ಯಕ್ಯಿತ್ವ ಅನಾವರಣಗೊಳ್ಳಬೇಕು. ಅನುಭವದ ಆಧಾರದ ಮೇಲೆ ಬದುಕನ್ನು ಕಟ್ಟಿಕೊಳ್ಳಬೇಕಿದೆ. ಭವಿಷ್ಯದ ದಿನಗಳಲ್ಲಿ ನಾವು ನಾಡಪ್ರಭು ಕೆಂಪೇಗೌಡರಂತೆ ಪಟ್ಟಣ ಕಟ್ಟಲಾಗುವುದಿಲ್ಲ. ಅಂತವರ ಬದುಕಿನ ಆದರ್ಶ ನಮ್ಮ ಬದುಕನ್ನು ಉತ್ತಮವಾಗಿ ನಿರ್ಮಿಸಬಲ್ಲದು ಎಂದರು.
ತಾಲ್ಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್ ಬಿ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಿ.ಎಚ್.ಚೇತನ್ ಪ್ರಥಮ, ನಾಗಮಂಗಲ ಬಿಜಿಎಸ್ ಪದವಿಪೂರ್ವ ಕಾಲೇಜಿನ ಶಶಾಂಕ್ ಗೌಡ ಜೆ ದ್ವಿತೀಯ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ರಂಗನಾಥ ಕೆ.ಎಸ್ ತೃತೀಯ ಬಹುಮಾನಕ್ಕೆ ಭಾಜನರಾದರು.
ವಿಜೇತ ಸ್ಪರ್ಧಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಅನುಕ್ರಮವಾಗಿ ೧೦೦೦, ೭೫೦ ಹಾಗೂ ೫೦೦ ರೂ ನಗದು ನೀಡಿ ಗೌರವಿಸಲಾಯಿತು.
ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಎಂ.ಗುಣವತಿ ಪ್ರಾರ್ಥಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥೆ ಎ.ಬಿ.ಪವಿತ್ರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳಾಡಿದರು. ಭೂಗೋಳ ವಿಭಾಗದ ಮುಖ್ಯಸ್ಥ ಹಾಗೂ ಐಕ್ಯೂ ಎಸಿ ಸಂಯೋಜಕ ಡಾ.ಎಂ.ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಪದವಿ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore19 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu20 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore16 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu17 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu20 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu15 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Hassan14 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Mysore15 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು