Kodagu
ಆನೆ ಚೌಕೂರು. ಗೇಟಿನಲ್ಲಿ ಕೊಡಗು ಮೈಸೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ರವರಿಗೆ ಭವ್ಯ ಸ್ವಾಗತ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ರವರನ್ನು ಇಂದು ಬೆಳಗ್ಗೆ ಆನೆ ಚೌಕೂರು ಗೇಟಿನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಇಬ್ಬರು ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭವ್ಯ ಸ್ವಾಗತವನ್ನು ನೀಡಿದರು.
ಮೈಸೂರಿನಿಂದ ಆಗಮಿಸಿದ ಲಕ್ಷ್ಮಣ್ ರವರನ್ನು ಶಾಲು ಹಾಗೂ ಹಾರ ಹಾಕುವ ಮೂಲಕ ಲೋಕಸಭಾ ಅಭ್ಯರ್ಥಿಯಾಗಿ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಸಂದರ್ಭ ಬರಮಾಡಿಕೊಳ್ಳಲಾಯಿತು.
ಜಿಲ್ಲೆಗೆ ಲಕ್ಷ್ಮಣ್ ಅವರನ್ನು ಸ್ವಾಗತಿಸಿ ಮಾತನಾಡಿದ ಶಾಸಕ ಎ. ಎಸ್. ಪೂನ್ನಣ್ಣನವರು ಮಾತನಾಡಿ ಇಂದಿನಿಂದ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸುತ್ತಿದ್ದೇವೆ ಮೊದಲಿಗೆ ಭಗಂಡೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ನಂತರ ತಲಕಾವೇರಿಯಲ್ಲಿ ಮಾತೆಕಾವೇರಿಗೆ ನಮಿಸಿ ಪೂಜಿಸಿ, ಮಾಜಿ ಯೋಧರಿಗೆ ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸಿ ಚುನಾವಣೆಗೆ ಅಣಿಯಾಗುತ್ತಿದ್ದೇವೆ ಎಂದರು. ಈ ಬಾರಿ ಲಕ್ಷ್ಮಣ್ ಗೌಡ ರವರ ಗೆಲುವು ನಿಶ್ಚಿತಎಂದು ಪೊನ್ನಣ್ಣನವರು ಸ್ಪಷ್ಟಪಡಿಸಿದರು.
ನಂತರ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕರಾದ ಮಂಥನಗೌಡರವರು ಕೊಡಗಿನ ಜನತೆ ನನ್ನನ್ನು ಹಾಗೂ ಪೊನ್ನಣ್ಣನವರನ್ನು ಕಳೆದ ಚುನಾವಣೆಯಲ್ಲಿ ಆರಿಸಿ ಕಳುಹಿಸಿದ್ದಾರೆ 10 ತಿಂಗಳ ನಮ್ಮ ಅಭಿವೃದ್ಧಿ ಕೆಲಸಗಳು ಗಮನಿಸಿ ಜನತೆ ಮತ ನೀಡುವಂತೆ ಕೋರಿಕೊಂಡರು. ಲಕ್ಷ್ಮಣ್ ಅವರ ಕಾರ್ಯಕ್ಷಮತೆ ಹಾಗೂ ಬದ್ಧತೆ, ಹಾಗೂ ಪಕ್ಷಕ್ಕಾಗಿ ಅವರ ತ್ಯಾಗವನ್ನು ಮನಗಂಡು ಅವರಿಗೆ ಟಿಕೆಟ್ ಅನ್ನು ಈ ಬಾರಿ ನೀಡಲಾಗಿದೆ ನಮ್ಮ ಚುನಾವಣೆಗಿಂತ ಇನ್ನೂ ಹೆಚ್ಚಾಗಿ ನಾವು ಕೆಲಸ ನಿರ್ವಹಿಸಿ ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು. ಕೊಡಗಿನ ಎರಡು ಕ್ಷೇತ್ರದಲ್ಲಿ ಅತ್ಯಧಿಕ ಮತವನ್ನು ನೀಡುತ್ತೇವೆ ಎಂದರು.
ನಂತರ ಮಾತನಾಡಿದ ಲಕ್ಷ್ಮಣ್ ರವರು ಕೊಡಗಿನಲ್ಲಿ 25 ವರ್ಷಗಳ ನಂತರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದ ಜನತೆ ಮುಕ್ತಿ ನೀಡಿದ್ದಾರೆ. ಕಳೆದ 10 ತಿಂಗಳಿಂದ ದಿನದ 24 ತಾಸು ಇಬ್ಬರು ಶಾಸಕರು ಅಭಿವೃದ್ಧಿ ಮಂತ್ರವನ್ನು ಜಪಿಸುತ್ತ ಇಡೀ ಕ್ಷೇತ್ರದಲ್ಲಿ 350 ಕೋಟಿಗಿಂತ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದ್ದಾರೆ, ಅವರೊಂದಿಗೆ ಕೆಲಸ ನಿರ್ವಹಿಸಲು ನನ್ನನ್ನು ಲೋಕಸಭಾ ಸದಸ್ಯನ್ನಾಗಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ಪಕ್ಷದ ರಾಜ್ಯ ಮುಖಂಡರಾದ ಚಂದ್ರಮೌಳಿ, ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.
Kodagu
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರೂರು ಗ್ರಾಮದ ಲೈನ್ ಮನೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಬಲ್ಲಮಾವಟಿ ಪೇರೂರು ಗ್ರಾಮದ ತೋಳಂಡ ಪೂಣಚ್ಚ ಎಂಬುವವರ ಲೈನ್ ಮನೆಯಲ್ಲಿ ಶನಿವಾರ ರಾತ್ರಿ (ದಿನಾಂಕ:15/03/2025/ 8.ಗಂಟೆಗೆ )ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ಬಿಟ್ಟುಪರಾರಿ ಯಾಗಿದ್ದಾಳೆ.
ಜನರು ವಾಸವಿಲ್ಲದ ಲೈನ್ ಮನೆಯಲ್ಲಿ ಮಗುವಿನ ಕೂಗು ಕೇಳಿದ ಸ್ಥಳೀಯರು ಮನೆ ಮಾಲೀಕ ಪೂಣಚ್ಚ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದ ಮಾಲಿಕ ಪೂಣಚ್ಚ ಎಂಬುವವರು ಮಗುವಿನ ಬಳಿ ಯಾರು ಇಲ್ಲದಿರುವುದನ್ನು ಕಂಡು 112 ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ
ಸ್ಥಳಕ್ಕೆ ಧಾವಿಸಿದ 112 ಸಿಬ್ಬಂದಿಗಳಾದ ಮುಖ್ಯಪೇದೆ ರಾಜೇಶ್, ಮತ್ತು ಮೊಣ್ಣಪ್ಪ ರವರು ಮಗುವನ್ನು ರಕ್ಷಿಸಿ ನಾಪೋಕ್ಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಆಂಬುಲೆನ್ಸಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ರಕ್ತದ ಮಡುವಿನಲ್ಲಿ ಇರುವೆಗಳೊಂದಿಗೆ ಜೀವ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಗುವಿನ ಅರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ

ಮಡಿಕೇರಿ: ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.
ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.
ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.
ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.
Kodagu
ಮಾ.16 ಹಾಗೂ 17ರಂದು ಕೊಳಕೇರಿ ಬೊಮ್ಮಂಜಿ ಭದ್ರಕಾಳಿ ಉತ್ಸವ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು: ನಾಪೋಕ್ಲು ಬಳಿಯ ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿಯಲ್ಲಿ ವಾರ್ಷಿಕವಾಗಿ ಆಚರಿಸಲ್ಪಡುವ ಶ್ರೀ ಭದ್ರಕಾಳಿ ದೇವರ ಉತ್ಸವವು ಮಾ.16ಮತ್ತು17ರಂದು ನಡೆಯಲಿದೆ.
ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
-
State21 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu20 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
National - International21 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu22 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State23 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Chikmagalur7 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
Hassan24 hours ago
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು
-
Chamarajanagar6 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ