Connect with us

Mysore

ಕಾಂಗ್ರೆಸ್ ಅಹಾರೋತ್ರಿ ಧರಣಿ ಅಂತ್ಯ

Published

on

ಮೈಸೂರು: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸೋಮವಾರ ಬೆಳಗ್ಗೆ ಅಂತ್ಯಗೊಂಡಿತು.

ಎಐಸಿಸಿ ಸೂಚನೆ ಹಿನ್ನೆಲೆಯಲ್ಲಿ ವಿವಿಧ ಹಂತದ ಹೋರಾಟ ರೂಪಿಸಿದ್ದು, ಮೈಸೂರಿನ ಪುರಭವನ ಆವರಣದಲ್ಲಿ ಸೋಮವಾರ ಅಹೋರಾತ್ರಿ ಸತ್ಯಗ್ರಹ ಸಂಘಟಿಸಲಾಗಿತ್ತು. ಕೆಪಿಸಿಸಿ ಉಪಾಧ್ಯಕ್ಷ, ಮೈಸೂರು ಉಸ್ತುವಾರಿ ವಿ.ಎಸ್.ಉಗ್ರಪ್ಪ ಅವರ ನೇತೃತ್ವದಲ್ಲಿ ರಾತ್ರಿಪೂರ್ತಿ ಪ್ರತಿಭಟನೆ ನಡೆಸಲಾಯಿತು.


ಸೋಮವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಶಾಸಕರು ಪಾಲ್ಗೊಂಡರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟವನ್ನು ಅಂತ್ಯಗೊಳಿಸಲಾಯಿತು.

ಜಾನಪದ ಕಥೆ, ಕಾರ್ಯಕರ್ತರ ಗಾಯನ: ಪ್ರತಿಭಟನೆಯಲ್ಲಿ ತೊಡಗಿದ್ದವರು ನಿದ್ದೆಗೆ ಜಾರದಂತೆ ರಾತ್ರಿ ಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಹಿರಿಯ ರಂಗಕರ್ಮಿ ಎಚ್.ಜನಾರ್ದನ್ (ಜನ್ನಿ) ತಂಡದವರು ಕ್ರಾಂತಿಗೀತೆಗಳನ್ನು ಹಾಡಿದರು.

ಜಾನಪದ ಗಾಯಕ ಮೈಸೂರು ಗುರುರಾಜ್ ಅವರು ಇಡೀ ರಾತ್ರಿ ಮಾದಪ್ಪ, ಮಂಟೇಸ್ವಾಮಿ ಕಥಪ್ರಸಂಗ ಹಾಗೂ ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಗಾಯನದಲ್ಲಿ ಆಸಕ್ತಿ ಇದ್ದ ಕಾಂಗ್ರೆಸ್ ಮುಖಂಡರೂ ವಿವಿಧ ಗೀತೆಗಳನ್ನು ಹಾಡಿ ಗಮನ ಸೆಳೆದರು.

ಬೆಳಗ್ಗೆ 5 ಗಂಟೆಗೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ಸಾಕ್ಷö್ಯಚಿತ್ರಗಳನ್ನು ವೀಕ್ಷಿಸಿದರು. ರಾಷ್ಟçಗೀತೆ ಹಾಡಲಾಯಿತು. ಕೊನೆಯದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟ ಯಶಸ್ವಿಗೊಂಡಿತು.

ಅಹೋರಾತ್ರಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮುಖಂಡರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಿದ್ದೆಗೆ ಜಾರದಂತೆ ಟೀ, ಕಾಫಿ ವಿತರಿಸಲಾಗುತ್ತಿತ್ತು. ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ಎಲ್ಲ ಹಂತದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಮಹಿಳೆಯರು ಮುಖಂಡರು ಹಾಜರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ಮಾಡಿದೆ. ದೇಶದ ಜನರ ದುಡಿಯುವ ಹಕ್ಕನ್ನ ಕಿತ್ತುಕೊಂಡಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ನರೇಗಾದಿಂದ 15 ಕೋಟಿ ಜನ ಉದ್ಯೋಗ ಪಡೆಯುತ್ತಿದ್ದರು. ಕೋವಿಡ್ ವೇಳೆ ನರೇಗಾದಿಂದ ಜನರು ಜೀವನ ಸಾಗಿಸಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಲಕ್ಷಾಂತರ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ನೀಡಿ, ಜೀವನಕ್ಕೆ ಆಧಾರವಾಗಿದ್ದ ಮನರೇಗಾ ಯೋಜನೆಯನ್ನು ಬದಲಾವಣೆ ಮಾಡಲಾಗಿದೆ. ಕಾಯ್ದೆ ಮರುಸ್ಥಾಪನೆಗೆ ಆಗ್ರಹಿಸಿ ನಮ್ಮ ಹೋರಾಟ ಮುಂದುವರಿಯಲಿದೆ. ಬಡ ಜನರ ಉದ್ಯೋಗದ ಹಕ್ಕು ಕಸಿಯುವ ಹೊಸ ಕಾಯಿದೆಯನ್ನು ಹಿಂಪಡೆಯಬೇಕು ಎಂದರು.

ಈ ಹಿಂದೆ ಕೇಂದ್ರ ಸರ್ಕಾರವೇ ಮನರೇಗಾಕ್ಕೆ ಹಣ ಕೊಡುತ್ತಿತ್ತು. ಹೊಸ ಕಾಯ್ದೆಯಂತೆ ಈಗ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಕೊಡಬೇಕಿದೆ. ಕೇವಲ ಹೆಸರನ್ನು ಮಾತ್ರ ಬದಲಾವಣೆ ಮಾಡಿದ್ದಾರೆ. ಇದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಯಥಾವತ್ತಾಗಿ ಮನ್‌ರೇಗಾ ಯೋಜನೆ ಜಾರಿ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸಿದೆ. ಗ್ರಾಮೀಣ ಬಡವರ ಬದುಕಿಗೆ ಆಸರೆಯಾಗಿರುವ ಈ ಯೋಜನೆಯನ್ನು ಮರುಜೀವಂತಗೊಳಿಸಬೇಕು. ಮನರೇಗಾ ಮರಳಿ ತರೋಣ ಜನರ ಉದ್ಯೋಗದ ಹಕ್ಕನ್ನು ಉಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಣ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಮಾಜಿ ಶಾಸಕರಾದ ಎಚ್.ಪಿ. ಮಂಜುನಾಥ್, ಜಿ.ಎನ್.ನಂಜುಂಡಸ್ವಾಮಿ, ಎಂ.ಕೆ. ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಬಿ.ಎಲ್.ಭೈರಪ್ಪ, ಕೆ.ವಿ. ಮಲ್ಲೇಶ್, ಭಾಸ್ಕರ್ ಎಲ್.ಗೌಡ, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ಎಂ.ಶಿವಣ್ಣ, ರವಿ ಮಂಚೇಗೌಡನಕೊಪ್ಪಲು, ಈಶ್ವರ್ ಚಕ್ಕಡಿ, ಕೆ.ಮಹೇಶ್, ಹುಣಸೂರು ಬಸವಣ್ಣ ಮುಂತಾದವರು ಭಾಗವಹಿಸಿದ್ದರು.

 

Continue Reading

Mysore

ಬನ್ನೂರು ಈಶ್ವರ ದೇವಾಲಯ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಸಂಸದ ಸುನೀಲ್ ಬೋಸ್

Published

on

ತಿ.ನರಸೀಪುರ:-ಶಿಥಿಲವಸ್ಥೆಯಲ್ಲಿರುವ ಈಶ್ವರ ದೇವಾಲಯದ ಗೋಪುರ ನಿರ್ಮಾಣ ಹಾಗೂ ಗಿರಿಜಾ ಕಲ್ಯಾಣ ಮಂಟಪವನ್ನು ಕೆಡವಿ ನೂತನವಾಗಿ ಕಲ್ಲಿನಿಂದ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 1 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದರು.ತಾಲ್ಲೂಕಿನ ಬನ್ನೂರಿನ ದೇವಾಲಯದ ನಿರ್ಮಾಣ ಹಾಗೂ ಕಲ್ಯಾಣ ಮಂಟಪದ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿದರು.

ನಂತರ ಮಾತನಾಡಿ ಇತಿಹಾಸ ಪ್ರಸಿದ್ದ ಸ್ಥಳದ ಈ ಕ್ಷೇತ್ರವು ಎರಡು ಗುಲಗಂಜಿ ತೂಕದಷ್ಟು ಪುಣ್ಯ ಕ್ಷೇತ್ರವಾಗಿದೆ. ಇಲ್ಲಿ ಈಶ್ವರ ದೇವಾಲಯವು ಪ್ರಸಿದ್ದಿ ಪಡೆದ ದೇವಾಲಯವಾಗಿರುವುದರಿಂದ ಪುರಾತತ್ವ ಇಲಾಖೆಗೆ ಸೇರಿದೆ ಆದ್ದರಿಂದ ಇಲಾಖೆವತಿಯಿಂದ ಈಶ್ವರ ದೇವಾಲಯ ಗೋಪುರ ಶಿಥಿಲವಸ್ಥೆಯಲ್ಲಿರುವುದರಿಂದ ಇಟ್ಟಿಗೆ ಹಾಗೂ ಸುಣ್ಣದಿಂದ ಹಾಗೂ ಟೈಲ್ಸ್ ನಿಂದ ಗೋಪುರ ನಿರ್ಮಾಣ ಮಾಡಲಾಗುವುದು ಅಲ್ಲದೆ ಗಿರಿಜಾ ಕಲ್ಯಾಣ ಮಂಟಪವನ್ನು ನೂತನವಾಗಿ ಕಲ್ಲುಗಳಿಂದ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 1 ಕೋಟಿ ಹಣ ಬಿಡುಗಡೆಯಾಗಿದೆ ಎಂದರು.


ಈ ಸಂದರ್ಭದಲ್ಲಿ ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ,ಕೃಷ್ಣೆಗೌಡ, ಮುನವರ್ ಪಾಷಾ,ಎ.ಎನ್. ಸ್ವಾಮಿ,ಡಾ.ಜ್ಞಾನ ಪ್ರಕಾಶ್,ಬನ್ನೂರು ಶಿವು, ಪುರಾತತ್ವ ಇಲಾಖೆ ಸಿಬ್ಬಂದಿ,ಅಧಿಕಾರಿಗಳು,ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Continue Reading

Mysore

ನಂಜನಗೂಡು ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಎ. ಪುಟ್ಟರಾಜು ಅಧಿಕಾರ ಸ್ವೀಕಾರ

Published

on

ವರದಿ:  ಮಹದೇವಸ್ವಾಮಿ ಪಟೇಲ್

ನಂಜನಗೂಡು : ರೋಟರಿ ಸಂಸ್ಥೆ ಹಲವಾರು ಸಮಾಜ ಸೇವೆ ಮಾಡುವ ಮೂಲಕ ಸಮಾಜದ ಏಳಿಗೆಗೆ ಕೈಜೋಡಿಸಿದೆ ಸಮಾಜದ ಎಲ್ಲಾ ಸ್ಧರಗಳಲ್ಲೂ ಧನಾತ್ಮಕ ಬದಲಾವಣೆ ಮಾಡಬೇಕೆಂಬ ಹಂಬಲದೊಂದಿಗೆ ಎರಡನೇ ಬಾರಿ ಹೆಜ್ಜೆ ಹಾಕಿದ್ದೇನೆ ಎಂದು ನೂತನ ಅಧ್ಯಕ್ಷ ಎ.ಪುಟ್ಟರಾಜು ತಿಳಿಸಿದರು.

ನಂಜನಗೂಡು ನಗರದ ಮಹದೇಶ್ವರ ಪ್ಯಾಲೇಸ್ ಭಾನುವಾರ ಸಂಜೆ ಆಯೋಜಿಸಲಾಗಿದ್ದ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನಿಯೋಜಿತ ಗೌರ್ನರ್ ಎಸ್. ಸೋಮಶೇಖರ್ ರವರು ನೂತನ ಅಧ್ಯಕ್ಷರಿಗೆ ಕಾಲರ್ ಅರ್ಪಿಸುವ ಮೂಲಕ ಪದಗ್ರಹಣ ನೆರವೇರಿಸಿದರು.

ನಂಜನಗೂಡು ರೋಟರಿ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ ಅವರು, ಈ ಬಾರಿ ರೋಟರಿ ಜಿಲ್ಲೆಯ 3181ರ ಎಲ್ಲಾ ದೂರದೃಷ್ಟಿಯ ಯೋಜನೆಗಳು ನಮ್ಮ ಕ್ಲಬ್ ನ ಮೂಲ ಯೋಜನೆಗಳ ದಿಕ್ಸೂಚಿಯಾಗಿದ್ದು ಅವುಗಳ ಯಶಸ್ಸು ನನ್ನ ಪ್ರಮುಖ ಕರ್ತವ್ಯವೆಂದು ಗುರಿ ಪಡಿಸುತ್ತೇನೆ.

2019-20 ನೇ ಸಾಲಿನಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿತ್ತು, ಆದರೆ ಮತ್ತೆ 2026-27 ಸಾಲಿನ ಸೇವೆ ಮಾಡಲು ಅವಕಾಶ ಕೊಟ್ಟಿದೆ ಅವರಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ.

ಸಂಧ್ಯಾ ಸುರಕ್ಷಾ ಹಿರಿಯ ನಾಗರೀಕರ ಶ್ರೇಯೋಭಿವೃದ್ಧಿಯ ನಿಟ್ಟಿನ ಹೆಜ್ಜೆ ಆಗಿರುತ್ತದೆ. ಸವ೯ರ ಆರೋಗ್ಯದ ಸುಧಾರಣೆಗೆ ರೋಟರಿ ಯೋಜನೆಗಳು ಮೂಲಕ ಕೊಡುಗೆಗಳಾಗಿರುತ್ತವೆ ಎಂದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ನಿಯೋಜಿತ ಗೌರ್ನರ್ ಎಸ್. ಸೋಮಶೇಖರ್ ರವರು ನೂತನ ತಂಡಕ್ಕೆ ಶುಭ ಹಾರೈಸಿ ಮಾತನಾಡಿ ಕಳೆದ ಬಾರಿ ಅನಿಲ್ ಕುಮಾರ್ ಮತ್ತು ರಾಜಶೇಖರ್ ಮೂರ್ತಿ ತಂಡ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಅದೇ ರೀತಿ ನೂತನ ಅಧ್ಯಕ್ಷರು ಎಲ್ಲರ ಸದಸ್ಯರ ಸಲಹೆ ಸೂಚನೆಗಳನ್ನು ತೆಗೆದುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂದು ತಿಳಿಸಿದರು.

ಸಹಾಯಕ ಗೌರ್ನರ್ ಸುರೇಶ್, ಶ್ರೀಕಂಠ ಪ್ರಸಾದ್, ನೂತನ ಕಾರ್ಯದರ್ಶಿಗಳಾದ ಎನ್. ಶಿವಾನಂದ ಇವರುಗಳು ಮಾತನಾಡಿದರು. ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೆಚ್.ವಿ.ಮುರಳೀಧರ್, ನಿಕಟ ಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ನಿಕಟ ಪೂರ್ವ ಕಾರ್ಯದರ್ಶಿ ರಾಜಶೇಖರ್ ಮೂರ್ತಿ, ರೋಟರಿ ಪಬ್ಲಿಕ್ ಇಮೇಜ್ ಡೈರೆಕ್ಟರ್ ಗಳು ಮುಂತಾದವರು ಉಪಸ್ಥಿತರಿದ್ದರು.

Continue Reading

Mysore

ನೀಟ್ ಹಗರಣ ಖಂಡಿಸಿ ದಸಂಸ ಪ್ರತಿಭಟನೆ : ಸೋನಂ ವಾಂಗ್ಚುಕ್‌ಗೆ ಬೆಂಬಲ

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ದೇಶದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ದಸಂಸ) ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕು ಸಂಚಾಲಕರು ಸುರೇಶ್ ಶಂಕರಪುರ ಮಾತನಾಡಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ನಂಬಿಕೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.

ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರಿಗೆ ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಕೇಂದ್ರ ಸರ್ಕಾರ ಈ ಕುರಿತು ಸಮರ್ಪಕ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಹಗರಣದ ಎಲ್ಲಾ ತಪ್ಪಿತಸ್ಥರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಸಂಘಟನೆಕಾರರು ಚಿಕ್ಕಣ್ಣ ಹಗಿನವಾಳು, ಮರಿಸ್ವಾಮಿ ಹೂಸೂರು, ಶ್ರೀರಾಂಪುರ ಯಶವಂತ್ ಕುಮಾರ್, ಡಿ.ಸಿ.ಶಿವಕುಮಾರ್, ಆನಂದಪುರ ನವೀನ್, ಸುಧನ್, ರವಿ, ನಟರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

Trending

error: Content is protected !!