State
ಮಂಗಳೂರು: ಕಾನ್ಸ್ಟೇಬಲ್ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್ಪಿ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್ಪಿ 7ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಕೆಎಸ್ಆರ್ಪಿ 7ನೇ ಬೆಟಾಲಿಯನ್ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್ಸ್ಟೇಬಲ್ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು.
ಆದರೆ ಪೊಲೀಸ್ ಕಾನ್ಸ್ಸ್ಟೇಬಲ್ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ 3ತಿಂಗಳಿನಿಂದ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಮಹಮ್ಮದ್ ಹ್ಯಾರೀಸ್ ಪ್ರತಿದಿನ ಕರೆಮಾಡಿ 18,000 ರೂ. ಹಣ ಲಂಚವಾಗಿ ನೀಡಬೇಕೆಂದು ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂದು ಫಿರ್ಯಾದಿದಾರರಿಗೆ ಬೆದರಿಸುತ್ತಿದ್ದ.
ಇದರಿಂದ ಬೇಸತ್ತ ಪೊಲೀಸ್ ಕಾನ್ಸ್ಸ್ಟೇಬಲ್ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ 18,000 ಲಂಚ ಪಡೆಯುತ್ತಿದ್ದಾಗಲೇ ಮಹಮ್ಮದ್ ಹ್ಯಾರೀಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
State
ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಬೇಗ ಅರ್ಜಿ ಸಲ್ಲಿಸಿ

Indian Air force Recruitment 2025 – ದ್ವಿತೀಯ ಪಿಯುಸಿ ಮುಗಿಸಿ ಭಾರತೀಯ ರಕ್ಷಣಾ ಇಲಾಖೆಯಲ್ಲಿ ದೇಶ ಸೇವೆ ಸಲ್ಲಿಸ ಬಯಸುವಂತಹ ಹಾಗೂ ಕೇಂದ್ರ ಸರ್ಕಾರಿ ಉದ್ಯೋಗವನ್ನು ಸೇರ ಬಯಸುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ ಕೊನೆಯ ದಿನಾಂಕ ಯಾವಾಗ ಮತ್ತು ಆಯ್ಕೆ ವಿಧಾನ ಹೀಗಿರಲಿದೆ ಎಂಬ ಮಾಹಿತಿ ಇಲ್ಲಿದೆ..
ಅಗ್ನಿವೀರ ನೇಮಕಾತಿಗೆ ಅರ್ಹತಾ ಮಾನದಂಡಗಳೇನು?
ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಮುಗಿಸಿದಂತಹ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಮುಗಿಸಿದಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಪ್ರಮುಖವಾಗಿ ಅಭ್ಯರ್ಥಿಗಳು ಶೇಕಡ 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು.
ವಯೋಮಿತಿ ಮಾನದಂಡಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಜುಲೈ 02, 2005 ರಿಂದ ಜನವರಿ 02, 2009 ರ ಒಳಗಾಗಿ ಜನಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಈ ನೇಮಕಾತಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಆನ್ಲೈನ್ ಪರೀಕ್ಷೆ ನಂತರದಲ್ಲಿ ದೈಹಿಕ ಪರೀಕ್ಷೆ ಹಾಗೂ ನಂತರದಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತಹ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ.
ಹಾಗಿದ್ದರೆ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹತೆಗಳನ್ನು ಹೊಂದಿರುವಂತಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ agnipathvayu.cdac.in ಭೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು.
State
ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.
ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.
ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂ. 24 ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್ರೇ ಮಾಡಿದಾಗ ಖೈದಿ ದೌಲತ್ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು.
ವೈದ್ಯರು ಶಸ್ತ್ರ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಷೇಧವಿದ್ದರು ಜೈಲಿನೊಳಗೆ ಮೊಬೈಲ್ ಫೋನ್ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ಪಿ. ರಂಗನಾಥ್ ಅವರು ದೂರು ನೀಡಿದ್ದಾರೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
State
ಹಾರ್ಟ್ ಅಟ್ಯಾಕ್ ನ ಈ ಕೆಲವು ಲಕ್ಷಣಗಳನ್ನು ನಿರ್ಲಕ್ಷ ಮಾಡಬೇಡಿ : ಈ 3C ಗಳನ್ನು ನೆನಪಿಟ್ಟರೆ ಜೀವ ಉಳಿಸಿಕೊಳ್ಳಬಹುದು

Heart Attack Symptoms : ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳಿಂದ ಹಿಡಿದು ಹಿರಿಯ ವಯಸ್ಸಿನವರಿಗೂ ಕೂಡ ಹಾರ್ಟ್ ಅಟ್ಯಾಕ್ ಎಂಬ ರೋಗ ಹೆಚ್ಚು ಕಾಡುತ್ತಿದೆ.
ಯಾವುದೇ ಒಬ್ಬ ರೋಗಿಗೆ ಹೃದಯಘಾತದ ಲಕ್ಷಣಗಳು ಕಂಡು ಬಂದ ನಂತರದ 60 ನಿಮಿಷಗಳನ್ನು ಗೋಲ್ಡನ್ ಹವರ್ ಎಂದು ಕರೆಯಲಾಗುತ್ತದೆ. ಏಕೆಂದರೆ ಈ ಒಂದು ಅಮೂಲ್ಯವಾದ ಸಮಯದಲ್ಲಿ ನಾವು ಸಕಾಲಿಕ ಆರೈಕೆಯನ್ನು ತೆಗೆದುಕೊಂಡರೆ ಪ್ರಾಣಪಾಯದಿಂದ ಪಾರಾಗಬಹುದು.
ಈ ಒಂದು ಲೇಖನದಲ್ಲಿ ನಾವು ನಿಮಗೆ ಅಥವಾ ಯಾವುದೇ ಒಬ್ಬ ವ್ಯಕ್ತಿಗೆ ಹೃದಯಘಾತದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಸುಲಭವಾಗಿ ಮಾಡಿಕೊಳ್ಳಬಹುದಾದ 3C ಗಳನ್ನು ತಿಳಿಸಿಕೊಡಲಿದ್ದೇವೆ. ಇದರಿಂದ ರೋಗಿಗಳು ಪ್ರಾಣಪಾಯದಿಂದ ಉಳಿಯಬಹುದು.
CPR ನ 3 C ಗಳನ್ನು ನೆನಪಿಟ್ಟುಕೊಳ್ಳಿ..!
1. CHECK (ಪರಿಶೀಲಿಸಿ) : ಮೊಟ್ಟ ಮೊದಲು ನೀವು ಹೃದಯಘಾತ ಲಕ್ಷಣಗಳು ಕಂಡು ಬಂದ ವ್ಯಕ್ತಿ ಉಸಿರಾಡುತ್ತಿದ್ದಾನೋ ಇಲ್ಲವೋ ಎಂಬುದನ್ನು ಪರಿಶೀಲಿಸಿ.
2. CALL (ಕರೆ ಮಾಡಿ) : ತಕ್ಷಣವೇ ಆಂಬುಲೆನ್ಸ್ಗೆ ತಕ್ಷಣವೇ ಕರೆ ಮಾಡಿ.
3. COMPRESS (ಒತ್ತಿರಿ) : ಒಂದು ವೇಳೆ ವ್ಯಕ್ತಿಯು ಉಸಿರಾಡುತ್ತಿಲ್ಲವಾದರೆ ಸಿಪಿಆರ್ ಪ್ರಾರಂಭಿಸಿ. ರೋಗಿಯ ಎದೆಯನ್ನು ಕನಿಷ್ಠ 30 ಬಾರಿ ಸತತವಾಗಿ ಒತ್ತಿರಿ ಮತ್ತು ವೈದ್ಯಕೀಯ ನೆರವು ಸಿಗುವವರೆಗೂ ನಿಲ್ಲಿಸದಿರಿ.
ತೀವ್ರ ಹೃದಯಾಘಾತದ ಸಂದರ್ಭದಲ್ಲಿ ಗೋಲ್ಡನ್ ಹವರ್ ಏಕೆ ಮುಖ್ಯ?
ತೀವ್ರ ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದಲ್ಲಿ ಮೊದಲ 60 ನಿಮಿಷಗಳನ್ನು ಗೋಲ್ಡನ್ ಅವರ್ ಎಂದು ಕರೆಯಲಾಗುತ್ತದೆ. ಏಕೆಂದರೆ ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು.
ನಂತರದಲ್ಲಿ ತಕ್ಷಣದ ಇಸಿಜಿ ಮತ್ತು ಟೆನೆಸ್ಟೆಪ್ಲೇಸ್ ಚುಚ್ಚುಮದ್ದು (ರಕ್ತಹೆಪ್ಪುಗಟ್ಟುವಿಕೆ ಕರಗಿಸಲು) ಜೀವ ಉಳಿಸಲು ಸಹಕಾರಿಯಾಗುತ್ತದೆ.
ನೆನಪಿಡಿ : ಗೋಲ್ಡನ್ ಅವರ್ ಆರೈಕೆಯು ಜೀವ ಉಳಿಸಬಹುದು
-
Special10 hours ago
ಸೃಷ್ಟಿಯ ನಿಯಮವನ್ನು ಮೀರುವುದೆಂದರೆ ಇದೇ….?
-
Chamarajanagar5 hours ago
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ
-
Chamarajanagar10 hours ago
ಮಹಿಳಾ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
-
Hassan5 hours ago
ಮುಸುಕಿನ ಜೋಳಕ್ಕೆ ಬಿಳಿ ಸುಳಿ ರೋಗ: ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ ಎ.ಎಸ್.ಪಾಟೀಲ್ ನಡಹಳ್ಳಿ
-
Mysore7 hours ago
ಮುಖ್ಯಮಂತ್ರಿ ಬದಲಾವಣೆ ವಿಚಾರ| ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ: ಎಚ್.ಸಿ.ಮಹದೇವಪ್ಪ
-
Mysore7 hours ago
ಸರ್ಕಾರದ ಸಾಧನೆಗಳ ಸಮಾವೇಶ, ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಎಚ್.ಸಿ.ಮಹದೇವಪ್ಪ
-
Hassan5 hours ago
ಹೆಣ್ಣಿನ ವ್ಯಕ್ತಿತ್ವ ಪ್ರತಿಪಾದಿಸುವ ವಕ್ತಿತ್ವದವರು ನಮ್ಮ ಜೊತೆ ಇರುವುದೇ ಒಂದು ಹೆಮ್ಮೆಯ ವಿಷಯ: ಕೆ.ಎಸ್. ಲತಾ ಕುಮಾರಿ
-
Kodagu4 hours ago
ಬಂದೂಕು ವಿನಾಯಿತಿ ಪ್ರಮಾಣ ಪತ್ರ : ಕೊಡವ ಜನಾಂಗೀಯ ಪ್ರಮಾಣ ಪತ್ರ ಪಡೆಯಲು ಸಿಎನ್ಸಿ ಸಲಹೆ