Connect with us

National - International

Covid-19: ಸಿಂಗಾಪುರದಲ್ಲಿ ಕೊರೋನ ಸ್ಫೋಟ, ಒಂದೇ ವಾರದಲ್ಲಿ 25,900 ಕೇಸ್ ದಾಖಲು !! ಎಲ್ಲೆಡೆ ಮಾಸ್ಕ್ ಕಡ್ಡಾಯ !!

Published

on

Covid-19: ಮೇ 5 ರಿಂದ 11 ರವರೆಗೆ ಬರೋಬ್ಬರಿ 25,900 ಪ್ರಕರಣ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಸಿಂಗಾಪುರ ಸರ್ಕಾರ(Singapura Government) ಮತ್ತೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

Covid-19: ಕೋವಿಡ್ ಮಹಾಮಾರಿಯನ್ನು ಜನ ಮರೆತು ನೆಮ್ಮದಿಯಿಂದ ಜೀವನ ನಡೆಸುವಾಗಲೇ ಈ ರೋಗ ಮತ್ತೆ ಹೊಸ ರೂಪದಲ್ಲಿ ವಕ್ಕರಿಸಿಕೊಂಡು, ಸಿಂಗಾಪುರ(Singapura) ದಲ್ಲಿ ಸ್ಪೋಟಗೊಂಡಿದೆ.

ಹೌದು, 2020 ರಲ್ಲಿ ಎಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಕೋವಿಡ್ – 19(Covid-19) ಅಲೆ ಸಿಂಗಾಪುರದಲ್ಲಿ ಮತ್ತೆ ಹೊಸ ರೂಪದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದೆ. ಮೇ 5 ರಿಂದ 11 ರವರೆಗೆ ಬರೋಬ್ಬರಿ 25,900 ಪ್ರಕರಣ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಸಿಂಗಾಪುರ ಸರ್ಕಾರ(Singapura Government) ಮತ್ತೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ಸಾವಿರಗಟ್ಟಲೆ ಪ್ರಕರಣ ದಾಖಲಾದ ಬಳಿಕ ಎಚ್ಚೆತ್ತು ಸಿಂಗಾಪುರ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ನೀಡಿದೆ. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು, ಜಸಂದಣಿಯಿಂದ ದೂರವಿರುವುದು, ಅನಾರೋಗ್ಯ, ಕೋವಿಡ್ ಲಕ್ಷಣ ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ವೈದ್ಯರು, ಆಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಿದೆ.

ಇನ್ನು ಆರೋಗ್ಯ ಸಚಿವ ಓಂಗ್ ಯೆ ಕುಂಗಾ ಅವರು ‘ನಾವು ಹೊಸ ಅಲೆಯ ಆರಂಭಿಕ ಹಂತದಲ್ಲಿದ್ದೇವೆ. ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಮುಂದಿನ ಎರಡರಿಂದ ನಾಲ್ಕು ವಾರಗಳಲ್ಲಿ ಅಲೆಯು ಉತ್ತುಂಗಕ್ಕೇರುತ್ತದೆ ಎಂದು ಊಹಿಸಲಾಗಿದೆ. ಅಂದರೆ ಜೂನ್ ಮಧ್ಯ ಮತ್ತು ಅಂತ್ಯದ ನಡುವೆ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ

ಇತ್ತ ಲಸಿಕೆಯಿಂದ ಅಡ್ಡಪರಿಣಾಮ ಕುರಿತು ವರದಿ ಬಹಿರಂಗವಾದ ಬಳಿಕ ಆತಂಕ ಹೆಚ್ಚಾಗಿದೆ. ಹೀಗಾಗಿ ಕೋವಿಡ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದರ ನಡುವೆ ಕೋವಿಡ್ ಅಲೆ ಕಾಣಿಸಿಕೊಂಡಿರುವುದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

Continue Reading
Click to comment

Leave a Reply

Your email address will not be published. Required fields are marked *

National - International

ಹನಿಟ್ರ್ಯಾಪ್‌ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

Published

on

ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್‌ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್‌ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್‌ ರಾಜ್ಯದ ವಕೀಲ ವಿನಯ್‌ ಕುಮಾರ್‌ ಸಿಂಗ್‌ ಎಂಬುವವರು ಸುಪ್ರೀಂಕೋರ್ಟ್‌ ಪಿಐಎಲ್‌ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ನೀವು ಜಾರ್ಖಂಡ್‌ ರಾಜ್ಯದವರು. ಇದರ ಬಗ್ಗೆ ನಿಮಗೇನು ಸಂಬಂಧ. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್‌ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್‌ ಕುಮಾರ್‌ ಸಿಂಗ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಈ ಮೂಲಕ ಹನಿಟ್ರ್ಯಾಪ್‌ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್‌ ಕುಮಾರ್‌ರಿಗೆ ತೀವ್ರ ಮುಖಭಂಗವಾಗಿದೆ.

Continue Reading

National - International

ಸುಪ್ರೀಂ ಕೋರ್ಟ್‌ ಅಂಗಳಕ್ಕೆ ಹನಿಟ್ರ್ಯಾಪ್‌ ಪ್ರಕರಣ

Published

on

ನವದೆಹಲಿ: ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್‌ ಪ್ರಕರಣವು ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್‌ಕುಮಾರ್‌ ಸಿಂಗ್‌ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್‌) ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನದ ವೇಳೆ ಸ್ವತಃ ಸಚಿವರೇ ತಮ್ಮ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ವಿಶ್ವಾಸದ ದೃಷ್ಠಿಯಿಂದ ಕೋರ್ಟ್‌ ನಿಗಾದಲ್ಲಿ ಕೂಡಲೇ ತನಿಖೆ ನಡೆಸಬೇಕು ಎಂದು ವಿನಯ್‌ಕುಮಾರ್‌ ಸಿಂಗ್‌ ಮುಖ್ಯ ನಾಯಾಮೂರ್ತಿ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಶೀಘ್ರವೇ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ತೀರ್ಮಾನಿಸಿದ್ದು, ಹನಿಟ್ರ್ಯಾಪ್‌ ವಿಚಾರಣೆಯನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

Continue Reading

National - International

ಅಣ್ಣಾಮಲೈ ಒಬ್ಬ ಪುವರ್‌ ಮ್ಯಾನ್‌: ಡಿಕೆ ಶಿವಕುಮಾರ್‌ ಹೀಗೇಳಿದ್ದೇಕೆ?

Published

on

ತಮಿಳುನಾಡು: ಜನಸಂಖ್ಯಾ ಆಧಾರಿತ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಐಎನ್‌ಡಿಐಎ ಮೈತ್ತಿ ಪಕ್ಷಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.

ಈ ಸಭೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭಾಗವಹಿಸಿದ್ದರು.

ಈ ಸಭೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಯೋಜನೆಗೆ ಮುಂದಾಗಿ ತಮಿಳುನಾಡು ರಾಜ್ಯದ ಜನರಿಗೆ ಅನ್ಯಾಯ ಮಾಡಿ, ಕ್ಷೇತ್ರ ಮರುವಿಂಗಡಣೆ ಸಭೆಗೆ ಹಾಜರಾಗಿದ್ದಾರೆ ಎಂದು ವಿರೋಧಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.

ಇನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆದ, ನಮ್ಮ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ಶೋಷಿಸುತ್ತಿರುವ ಮತ್ತು ತಮಿಳುನಾಡು ಗಡಿ ಜಿಲ್ಲೆಗಳನ್ನು ಕೇರಳದ ವೈದ್ಯಕೀಯ ತ್ಯಾಜ್ಯವನ್ನು ಸುರಿಯುವ ಸ್ಥಳವನ್ನಾಗಿ ಪರಿವರ್ತಿಸುತ್ತಿರುವ ತಮ್ಮ INDIA ಮೈತ್ರಿಕೂಟದ ಪಾಲುದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಸಹೋದರ ಸಹೋದರಿಯರು ತಮ್ಮ ಮನೆಗಳ ಮುಂದೆ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡದ್ದರು.

ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ಅಣ್ಣಾಮಲೈ ಒಬ್ಬ ಪುವರ್‌ ಮ್ಯಾನ್‌, ಕರ್ನಾಟಕದಲ್ಲಿ ಕೆಲಸ ನಿರ್ವಹಿಸುವ ವೇಳೆ ನನ್ನ ಶಕ್ತಿ ಬಗ್ಗೆ ಆತನಿಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆತನಿಗೆ ಶುಭವಾಗಲಿ ಎಂದು ನಸುನಕ್ಕರು.

https://x.com/annamalai_k/status/1903348499267326152

ಡಿಕೆ ರಿಯಾಕ್ಷನ್‌ಗೆ ಮತ್ತೊಂದು ಪೋಸ್ಟ್‌ ಮಾಡಿರುವ ಅಣ್ಣಾಮಲೈ, ಹೌದು, ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಗಮನಾರ್ಹ ಉಲ್ಲೇಖಕ್ಕಾಗಿ ಧನ್ಯವಾದಗಳು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ.

ಅಲ್ಲದೆ, ಈ ಬಡವನಿಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳು ಮತ್ತು ಸಿದ್ದರಾಮಯ್ಯ ಅವರನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ನಿಮಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Continue Reading

Trending

error: Content is protected !!