Mysore
ತಾಲೂಕಿನ ವಿವಿದೆಡೆಯ ಪಟಾಕಿ ಮಾರಾಟ ಅಂಗಡಿಗಳ ಮಾಲೀಕರ ಸಭೆ

ಪಿರಿಯಾಪಟ್ಟಣ: ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಕುಂ ಇ ಅಹಮದ್ ನೇತೃತ್ವ ವಿವಿಧ ಇಲಾಖೆಗಳ ಸಮ್ಮುಖ ತಾಲೂಕಿನ ವಿವಿದೆಡೆಯ ಪಟಾಕಿ ಮಾರಾಟ ಅಂಗಡಿಗಳ ಮಾಲೀಕರ ಸಭೆ ನಡೆಯಿತು.
ಸಭೆಯಲ್ಲಿ ತಹಶೀಲ್ದಾರ್ ಕುಂ ಇ ಅಹಮದ್ ಅವರು ಮಾತನಾಡಿ ಸರ್ಕಾರ ಪಟಾಕಿ ಅಂಗಡಿಗಳಲ್ಲಿ ಕೇವಲ ಹಸಿರು ಪಟಾಕಿ ಹಾಗೂ ಪರಿಸರಕ್ಕೆ ಹಾನಿ ಉಂಟು ಮಾಡದಂತಹ ಮತ್ತು ಶಬ್ದ ಮಾಲಿನ್ಯವಾಗದಂತಹ ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಿದ್ದು ಪಟಾಕಿ ಅಂಗಡಿಗಳ ಮಾಲೀಕರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಪಟಾಕಿ ಮಾರಾಟಕ್ಕೆ ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪಿರಿಯಾಪಟ್ಟಣ ಆರಕ್ಷಕ ಠಾಣೆ ಇನ್ಸ್ಪೆಕ್ಟರ್ ಕೆ.ವಿ ಶ್ರೀಧರ್ ಅವರು ಮಾತನಾಡಿ ಪಟಾಕಿ ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಸಂಬಂಧಿಸಿದ ಇಲಾಖೆಗಳ ಮುಖಾಂತರ ಅನುಮತಿ ಪಡೆದಿರಬೇಕು ಹಾಗೂ ನಿರ್ಜನ ಪ್ರದೇಶಗಳಲ್ಲಿ ಅಗತ್ಯಕ್ಕನುಗುಣವಾಗಿ ಪಟಾಕಿ ದಾಸ್ತಾನು ಮಾಡಿಕೊಂಡು ತುರ್ತು ಅವಘಡ ಸಂದರ್ಭ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೂಕ್ತ ಕ್ರಮ ಅನುಸರಿಸುವಂತೆ ತಿಳಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
ಈ ಸಂದರ್ಭ ಶಿರಸ್ತೆದಾರ್ ಶಕೀಲಾ ಬಾನು, ಬೆಟ್ಟದಪುರ ಆರಕ್ಷಕ ಠಾಣೆ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಎಂ ಎತ್ತಿನಮನಿ, ಅಗ್ನಿಶಾಮಕ ಠಾಣೆ ಅಧಿಕಾರಿ ಹಾಗು ತಾಲೂಕು ಆಡಳಿತ ಕಚೇರಿ ಸಿಬ್ಬಂದಿ ಶೇಖರ್ ಮತ್ತು ತಾಲೂಕಿನ ವಿವಿದೆಡೆಯ ಪಟಾಕಿ ಮಾರಾಟ ಅಂಗಡಿಗಳ ಮಾಲೀಕರು ಇದ್ದರು.
ಬೆಕ್ಕರೆ ಸತೀಶ್ ಆರಾಧ್ಯ
Mysore
ಜನತಾ ದರ್ಶನದಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡು ಕ್ಷೇತ್ರದಲ್ಲಿ ಇಂದು ತಮ್ಮ ಕಚೇರಿಯ ಆವರಣದಲ್ಲಿ ಸಾರ್ವಜನಿಕರ ಕುಂದು -ಕೊರತೆಗಳಯ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು.
ಜನತಾ ದರ್ಶನದಲ್ಲಿ – ನಂಜನಗೂಡು ತಾಲ್ಲೂಕಿನಾದ್ಯಂತ ಆಗಮಿಸಿದ ಸಾವಿರಾರು ಜನಸಾಮಾನ್ಯರು ಆಗಮಿಸಿದರು.
ನಂಜನಗೂಡು ತಾಲ್ಲೂಕು ಪಂಚಾಯತಿ ಕಾರ್ಯಾಲಯ ಶಾಸಕರ ಕಚೇರಿಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಕೇಳಿ,ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಆಗುವಂತಹ ಕೆಲಸಗಳನ್ನು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಕೆಲವು ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ಫೋನ್ ಮಾಡಿ ಚರ್ಚಿಸಿ ನಿಮ್ಮ ಕೆಲಸಗಳನ್ನು ಶೀಘ್ರದಲ್ಲೇ ಬಗೆಹರಿಸಿ ಕೊಡುತ್ತೇನೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ಕಚೇರಿ ಶಿರಸ್ತೇದರು ರಾಜು , ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.
Mysore
ಜಾತಿಗಣತಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ?

ಜಾತಿಗಣತಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ?
ಅವರು ಇನ್ನೂ ಇದರ ಬಗ್ಗೆ ತಿಳಿದುಕೊಳ್ಳಬೇಕು
ಸೋಷಿಯೋ ಎಕನಾಮಿಕ್ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ
ಲಿಂಗಾಯತರು ವಿರೋಧ ಮಾಡಿದರು
ಹಾಗಾಗಿ ಮತ್ತೊಮ್ಮೆ ಜಾತಿಗಣತಿ ಮಾಡುತ್ತೇವೆ ಅಂತಾರೆ
39 ಜನ ಶಾಸಕರು ಲಿಂಗಾಯತರು ಇದ್ದಾರೆ
ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರಾ ?
ವಿರೋಧ ಇದ್ದರೆ ಕುರ್ಚಿ ಬಿಟ್ಟು ಕೊಡಲಿ
ಯತೀಂದ್ರ ತಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳುತ್ತಿದ್ದಾರೆ
ನಿಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳಬೇಡಿ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ಕೇಂದ್ರ ಸರ್ಕಾರ ರಾಜಕೀಯವಾಗಿ ಬಲ ತೋರಿಸಲು ಈ ಸರ್ವೇ ಮಾಡುತ್ತಿಲ್ಲ
ಜನರ ಆರ್ಥಿಕ ಸ್ಥಿತಿಗತಿ ಬಗ್ಗೆ ತಿಳಿಯಲು ಸರ್ವೇ ಮಾಡುತ್ತಿದೆ
ನಮ್ಮ ಸರ್ವೇ ಆಗುತ್ತದೆ ನೀವು ಸುಮ್ಮನೆ ಇರಿ
ನಿಮ್ಮ ಸರ್ವೇ ನಮಗೆ ಅಗತ್ಯವಿಲ್ಲ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ಕುರ್ಚಿ ಉಳಿಸಿಕೊಳ್ಳಲು ಪ್ರತಿದಿನ ಸಿದ್ದರಾಮಯ್ಯ ಜನರನ್ನು ಡೈವರ್ಟ್ ಮಾಡುತ್ತಿದ್ದಾರೆ
ಒಬ್ಬರು ಕುರ್ಚಿ ಉಳಿಸಿಕೊಳ್ಳಲು ನೋಡುತ್ತಿದ್ದಾರೆ
ಇನ್ನೊಬ್ಬರು ಕುರ್ಚಿ ಎಳೆಯುತ್ತಿದ್ದಾರೆ
ಇಬ್ಬರ ಕುರ್ಚಿ ಗಲಾಟೆಯಲ್ಲಿ ನಮಗೇನಾದರೂ ಲಾಭ ಆಗುತ್ತಾ ಅಂತ ಇನ್ನೊಂದು ಸ್ವಲ್ಪ ಜನ ಕಾಯುತ್ತಿದ್ದಾರೆ
ಸಿದ್ದರಾಮಯ್ಯ ಮೈಸೂರಿಗೆ ಏನೂ ಅಭಿವೃದ್ದಿ ಕೆಲಸ ಮಾಡಲಿಲ್ಲ
ಸಿದ್ದರಾಮಯ್ಯ ಬದಲಾಗುತ್ತಾರಾ ಅನ್ನೋದನ್ನಾ ಡಿ ಕೆ ಶಿವಕುಮಾರ್ ಕೇಳಿ
ಇದರಲ್ಲಿ ತಂತ್ರ ಮಂತ್ರ ಏನು ಮಾಡಿದ್ದಾರೋ ಗೊತ್ತಿಲ್ಲ
ನವೆಂಬರ್ ನಲ್ಲಿ ಬದಲಾವಣೆ ಅಗತ್ತೊ ಇಲ್ಲವೋ ಗೊತ್ತಿಲ್ಲ
ಆದರೆ ಇನ್ನೂ 3 ವರ್ಷ ಇವರ ಕುರ್ಚಿ ಕಿತ್ತಾಟದ ಅಸಹ್ಯ ನಡೆಯುತ್ತಲೆ ಇರುತ್ತದೆ
ರಾಜ್ಯದ ಜನ ಅಂತೂ ಅವರಿಗೆ 136 ಸೀಟು ಕೊಟ್ಟಿದ್ದಾರೆ
ಹಾಗಾಗಿ ಇನ್ನು 3 ವರ್ಷ ಇವರ ಕಿತ್ತಾಟ ನೋಡಬೇಕು
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ರಾಜ್ಯದಲ್ಲಿ ಮರು ಜಾತಿಗಣತಿ ವಿಚಾರ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ಸಿದ್ದರಾಮಯ್ಯ 150 ಕೋಟಿ ರೂಪಾಯಿ ವ್ಯಯ ಮಾಡಿ ಕಾಟಾಚಾರಕ್ಕೆ ಈ ಗಣತಿ ಮಾಡಿದ್ದರು
ಇದನ್ನು ಬಿಜೆಪಿ ಜೆಡಿಎಸ್ ವಿರೋಧ ಮಾಡಿತು
ಇದು ಅವೈಜ್ಞಾನಿಕ ಅಂತ ಎಲ್ಲಾರಿಗೂ ಗೊತ್ತಿತ್ತು
ಈಗ ರಾಹುಲ್ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಅಂತ ಹೇಳಿದ್ದಾರೆ
ಇದರಿಂದ 150 ಕೋಟಿ ಹಣ ವ್ಯರ್ಥ
ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತೇವೆ ಅಂತ ಹೇಳಿದೆ
ಹೀಗಿದ್ದಾಗ ಮತ್ತೊಂದು ಬಾರಿ ನಿಮ್ಮ ಗಣತಿ ಮಾಡುವುದು ಬೇಡ
ಇದು ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಅಷ್ಟೇ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರ ವಿರೋಧಕ್ಕೆ ಮರು ಜಾತಿಗಣತಿ ಎಂಬ ವಿಚಾರ.
ಹಳೆ ಜಾತಿಗಣತಿ ಸರ್ವೇಯಿಂದ ನೂರಾರು ಕೋಟಿ ಹಣ ಪೋಲಾಗಿದೆ
ಜನರನ್ನು ಡೈವರ್ಟ್ ಮಾಡಲು ಸಿಎಂ ಹೊರಟಿದ್ದಾರೆ
ಈ ಹಿಂದೆಯೇ ಲಿಂಗಾಯತ ಒಕ್ಕಲಿಗರು ಗಣತಿಗೆ ಒಪ್ಪಿರಲಿಲ್ಲ
10 ವರ್ಷ ಹಳೆಯ ಗಣತಿ ಇದು ಅಂಕಿ ಅಂಶಗಳು ಸರಿಯಿಲ್ಲ ಅಂತ ಹೇಳಿದ್ದೆವು
ಆದರೆ ನಾವು ಇದೇ ಜಾತಿಗಣತಿ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದರು
ಈಗ ಹೈ ಕಮಾಂಡ್ ಹೇಳಿದೆ ಅಂತ ಮತ್ತೊಮ್ಮೆ ಗಣತಿ ಮಾಡಲು ಹೊರಟಿದ್ದಾರೆ
ಇದಕ್ಕೆ ಹಣ ಎಲ್ಲಿಂದ ತರುತ್ತಾರೆ ?
ಮ್ಯಾನ್ ಪವರ್ ಎಲ್ಲಿಂದ ಮಾಡುತ್ತಾರೆ ?
ರಾಜ್ಯದ ಜನರಲ್ಲಿ ಮೂಡಿಸಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ
ಮೈಸೂರಿನಲ್ಲಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿಕೆ
Mysore
ಅವಧೂತ ದತ್ತಪೀಠದಲ್ಲಿ ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಂಡಿದ್ದ ಸಹಸ್ರ ಚಂಡೀಯಾಗ ಸಂಪನ್ನ

ಮೈಸೂರು: ಮೈಸೂರಿನ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಜೂನ್ 6 ರಿಂದ ಹಮ್ಮಿಕೊಂಡಿದ್ದ ವನ ದುರ್ಗಾ ವೃಕ್ಷ ಶಾಂತಿ ಮಹಾಯಜ್ಞ ಮತ್ತು ಸಹಸ್ರ ಚಂಡೀಯಾಗ ಇಂದು ಸಂಪನ್ನಗೊಂಡಿತು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಸನಾತನ ವೈದಿಕ ವಿಧಿಗಳು ಮತ್ತು ಪರಿಸರ ಸಮತೋಲನ ಕಾಪಾಡುವ ಉದ್ದೇಶದಿಂದ ಈ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಜೂನ್ 6 ರಿಂದ ಸಹಸ್ರ ಚಂಡೀ ಯಾಗವನ್ನು ವಿಶ್ವ ರಕ್ಷಣೆ, ಸಮೃದ್ಧಿ ಹಾಗೂ ಸಾಮರಸ್ಯಕ್ಕಾಗಿ ಮತ್ತು ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಗಣಪತಿ ಶ್ರೀಗಳು ಪ್ರಾರಂಭಿಸಿದ್ದರು.
ಇದು ವಿಶ್ವದಲ್ಲೇ ಮೊಟ್ಟ ಮೊದಲ ಮಹಾ ಯಾಗವೆಂಬುದು ವಿಶೇಷ. ಇತ್ತೀಚೆಗೆ ನಡೆದ ಅವಘಡಗಳು,ಯುದ್ದಗಳು,ಸಾವು, ನೋವುತಿಳಿದು ಗಣಪತಿ ಶ್ರೀ ಗಳು ಬಹಳ ಬೇಸರಗೊಂಡಿದ್ದರು.
ಹಾಗಾಗಿ ಇಡೀ ಜಗತ್ತಿನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿ,ಲೋಕ ಕಲ್ಯಾರ್ಥವಾಗಿ ಈ ಮಹಾ ಯಾಗವನ್ನು ಜೂನ್ 6 ರಿಂದ ಪ್ರಾರಂಭಿಸಿ ಜೂನ್ 15 ಅಂದರೆ ಇಂದಿನವರೆಗೆ ಎಲ್ಲೂ ಯಾವುದೇ ಲೋಪವಾಗದಂತೆ ಸಂಪನ್ನಗೊಳಿಸಿದ್ದಾರೆ.
ಗಣಪತಿ ಶ್ರೀಗಳಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಬೆನ್ನೆಲುಬಾಗಿ ನಿಂತು ಎಲ್ಲಾ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಪ್ರಕೃತಿ ವಿಕೋಪ, ಪರಿಸರ ಅಸಮತೋಲನ ತಡೆಯುವ ದೃಷ್ಟಿ ಇಟ್ಟುಕೊಂಡು ಶ್ರೀಗಳು ವೃಕ್ಷ ಶಾಂತಿ ಮಹಾಯಜ್ಞವನ್ನು ಹಮ್ಮಿಕೊಂಡರು.
ಪರಿಸರ ಸಮತೋಲನ ಸೂಚಕವಾಗಿಯೇ ಈ ವನದುರ್ಗ ವೃಕ್ಷ ಮಹಾಯಜ್ಞವನ್ನು ಕೈಗೊಂಡ ಗಣಪತಿ ಶ್ರೀಗಳು 8000 ಪವಿತ್ರ ಬೋನ್ಸಾಯ್ ವೃಕ್ಷ ಗಳನ್ನು ಪೂಜಿಸಿ ಸಮರ್ಪಿಸಿದ್ದಾರೆ.
ಇಡೀ ವಿಶ್ವದಲ್ಲೇ ಅತಿ ಹೆಚ್ಚು ಬೋನ್ಸಾಯ್ ವೃಕ್ಷಗಳನ್ನು ಹೊಂದಿರುವ ಖ್ಯಾತಿ ಕೂಡಾ ಅವಧೂತ ದತ್ತ ಪೀಠಕ್ಕೆ ಸಂದಿದೆ.ಹಾಗಾಗಿ ಗಿನ್ನೀಸ್ ವರ್ಡ್ ರೆಕಾರ್ಡ್ ಕೂಡಾ ಅವಧೂತ ದತ್ತಪೀಠಕ್ಕೆ ಸಂದಿದೆ.
ಇಂದು ಮುಂಜಾನೆ ಎಂದರೆ ಗಣಪತಿ ಶ್ರೀಗಳು ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯನಂದ ತೀರ್ಥ ಸ್ವಾಮಿಗಳು ಸಹಸ್ರ ಚಂಡೀಯಾಗದ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದರು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಆಶ್ರಮದ ಆವರಣದಲ್ಲಿ ಈ ಮಹಾ ಯಾಗಕ್ಕಾಗಿ ನಿರ್ಮಿಸಿದ್ದ 11 ಹೋಮ ಕುಂಡಗಳ ಬಳಿಯೂ ಪೂರ್ಣಹುತಿಯನ್ನು ನೆರವೇರಿಸಿದರು. ತದನಂತರ ಪ್ರಧಾನ ಹೋಮಕುಂಡದಲ್ಲಿ ಅತಿ ಪ್ರಮುಖವಾದ ಪೂರ್ಣಾಹುತಿಯನ್ನು ನೆರವೇರಿಸಿ ಯಾಗವನ್ನು ಸಂಪನ್ನಗೊಳಿಸಿದರು.
ನಂತರ ಸಪ್ತ ಋಷಿ ಸರೋವರದಲ್ಲಿ ದೇವಿಯನ್ನು ಉತ್ಸವದಲ್ಲಿ ಕೊಂಡೊಯ್ದು ಅವಭೃತ ಸ್ನಾನ ನೆರವೇರಿಸುವ ಮೂಲಕ ಇಡೀ ಯಾಗವನ್ನು ಸಂಪನ್ನಗೊಳಿಸಲಾಯಿತು.
ಇದೇ ವೇಳೆ ನೂರಾರು ಭಕ್ತರು ಲಲಿತಾ ಸಹಸ್ರನಾಮ ಮತ್ತು ಸೌಂದರ್ಯ ಲಹರಿಯನ್ನು ಪಠಿಸಿದರು. ಆಶ್ರಮದ ಆವರಣದಲ್ಲಿ ಸಂಜೆ ವನದುರ್ಗ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ದೇಶಾದ್ಯಂತ ಹಲವಾರು ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವೃಕ್ಷ ಶಾಂತಿ ಮಹಾ ಯಜ್ಞ ಮತ್ತು ವಿಶ್ವದ ಮೊಟ್ಟಮೊದಲ ಸಹಸ್ರ ಚಂಡೀಯಾಗವನ್ನು ಕಣ್ತುಂಬಿಕೊಂಡು ಪುನೀತರಾದರು.
-
Uncategorized23 hours ago
ಸೆಕ್ಯುರಿಟಿ ಸಿಬ್ಬಂದಿಗಳಿಂದ ಯುವಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ದ ಎಫ್ಐಆರ್ ದಾಖಲು
-
Mandya23 hours ago
ಮಾಜಿ ಶಾಸಕ ಎಂ.ಡಿ.ಲಕ್ಷ್ಮೀ ನಾರಾಯಣ್ ದಂಪತಿಗಳ 48ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಣೆ: ಗಣ್ಯರಿಂದ ಶುಭಹಾರೈಕೆ
-
Hassan10 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
State23 hours ago
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?
-
Kodagu9 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya24 hours ago
2024-25ನೇ ಸಾಲಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಫೂಲ್ ಪ್ಲೇಸ್ಮೆಂಟ್ ಸಂದರ್ಶನ
-
Chikmagalur12 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu11 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ