Mandya
ಕಳ್ಳತನಕ್ಕೆ ಸಹಕರಿಸಿದ್ದ ಪೇದೆ ಸೇರಿದಂತೆ ನಾಲ್ವರ ಬಂಧನ

ಬಂಧಿತರಿಂದ 83 ಲಕ್ಷ ರೂ. ಮೌಲ್ಯದ ನಗ–ನಾಣ್ಯ ವಶಕ್ಕೆ ಪಡೆದ ಪೊಲೀಸರು
ಮಂಡ್ಯ: ಮದ್ದೂರು ಪಟ್ಟಣದಲ್ಲಿ ಮನೆ ಬೀಗ ಮುರಿದು 83 ಲಕ್ಷ ರೂ. ವೌಲ್ಯದ ನಗ-ನಾಣ್ಯ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳಿಗೆ ಸಹಕಾರ ನೀಡಿದ್ದ ಓರ್ವ ಪೊಲೀಸ್ ಪೇದೆಯನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ತಿಳಿಸಿದರು.
ಮೈಸೂರಿನ ಫಯಾಜ್, ಮಹಮದ್ ಮುನ್ನಾ, ಅಯೂಬ್, ಪ್ರಸಾದಿ ಹಾಗೂ ಆರೋಪಿಗಳಿಗೆ ಸಹಕಾರ ನೀಡಿದ್ದ ಪೊಲೀಸ್ ಪೇದೆ ಕೆಂಡಗಣ್ಣ ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಮದ್ದೂರು ಪಟ್ಟಣದ ಕೆ.ಎಚ್.ನಗರ ನಿವಾಸಿ ಡಾ.ಚಂದ್ರು ಅವರು ಜ.17 ರಂದು ಮನೆ ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ಹೊರಗೆ ಹೋಗಿದ್ದರು. 18 ರಂದು ವಾಪಸ್ಸು ಬಂದು ನೋಡಲಾಗಿ ಮನೆಯ ಬೀಗ ಮುರಿದು ಕಳ್ಳತನವಾಗಿರುವುದು ತಿಳಿಯಿತು ಎಂದು ಮದ್ದೂರು ಪೊಲೀಸರಿಗೆ ದೂರು ನೀಡಿದ್ದರು ಎಂದರು.
ಮನೆಯ ಕೊಠಡಿಯಲ್ಲಿನ ಬೀರುವಿನಲ್ಲಿದ್ದ ಒಂದೂವರೆ ಕೆ.ಜಿ. ಚಿನ್ನಾಭರಣಗಳು, 8 ಲಕ್ಷ ಕಳವು ಮಾಡಿದ್ದಾರೆ ಎಂದು ದೂರು ನೀಡಿದ್ದರು. ಮದ್ದೂರು ಗ್ರಾಮಾಂತರ ಸಿಪಿಐ ವೆಂಕಟೇಗೌಡ ಮತ್ತು ತಂಡ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ತಿಪಟೂರಿನಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಘಟನೆ ನಂತರ ಆರೋಪಿಗಳು ಹೈದ್ರಾಬಾದ್, ಗೋವಾ, ಬೀದರ್, ಹಾಸನ ಇತರೆಡೆಗಳಲ್ಲಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಅರಿತು ಹುಡುಕಾಟ ನಡೆಸಲಾಗಿತ್ತು. ಅಂತಿಮವಾಗಿ ತಿಪಟೂರಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿತ್ತು. ಬಂಧಿತ ಆರೋಪಿಗಳಿಂದ 1.486 ಕೆ.ಜಿ. ಚಿನ್ನಾಭರಣ, ₹1.70 ಲಕ್ಷ ಸೇರಿದಂತೆ ₹83 ಲಕ್ಷ ವೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಆರೋಪಿಗಳು ಕದ್ದಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಪೊಲೀಸ್ ಪೇದೆ ಕೆಂಡಗಣ್ಣ ಸಹಕಾರ ನೀಡಿದ್ದರೆಂಬ ಆರೋಪದ ಮೇರೆಗೆ ಆತನನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದರು.
ಮನೆ ಬೀಗ ಮುರಿದು ಒಳ ನುಗ್ಗಿ ನಗದು ಸೇರಿದಂತೆ ₹67 ಲಕ್ಷ ವೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ, ಮಳವಳ್ಳಿ ತಾಲ್ಲೂಕಿನ ರಾಮಂದೂರು ಗ್ರಾಮದ ಅಶೋಕ್ಕುಮಾರ್ (28) ಹಾಗೂ ಚಲುವರಾಜು (26) ಬಂಧಿತ ಆರೋಪಿಗಳು.
ಮನೆಗಳ್ಳರಿಂದ ₹67 ಲಕ್ಷ ಮೌಲ್ಯದ ಚಿನ್ನದ ಸಮೇತ ಬಂಧನ: ಮಳವಳ್ಳಿ ತಾಲ್ಲೂಕು ತೊರೆಕಾಡನಹಳ್ಳಿಯ ಅರ್ಜುನ್ ಎಂಬುವರ ಮನೆಯ ಬಾಗಿಲ ಬೀಗ ಮುರಿದು ಒಳ ನುಗ್ಗಿದ ಆರೋಪಿಗಳು ವಾಲ್ಡ್ರೂಪ್ನ ಡ್ರಾನಲ್ಲಿಟ್ಟಿದ್ದ 26 ಗ್ರಾಂ ತೂಕದ ಚಿನ್ನದ ಒಡವೆಗಳು, ₹20 ಸಾವಿರ ಹಣ ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ದಾಖಲು ಮಾಡಿದ್ದರು, ಈ ಬಗ್ಗೆ ತನಿಖೆ ಕೈಗೊಂಡ ಸಿಪಿಐ ಶ್ರೀಧರ್, ಪಿಎಸ್ಐ ಮಹೇಂದ್ರ, ಸತೀಶ್ ಮತ್ತು ಸಿಬ್ಬಂದಿಯು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ತೊರೆಕಾಡನಹಳ್ಳಿ ಮಾತ್ರವಲ್ಲದೆ ಬೇರೆ ಬೇರೆ ಕಡೆಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ, ಆರೋಪಿಗಳಿಂದ ₹67 ಲಕ್ಷ ವೌಲ್ಯದ 122 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
Mandya
ಮಂದಗೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆಯಲ್ಲಿ ಜೆ.ಡಿ.ಎಸ್ ಪಕ್ಷದ ವಷಕ್ಕೆ

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಮಂದಗರೆ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷದ ಅವದಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ನಿಗದಿಯಾಗಿತ್ತು
ಸಾಲಗಾರ ಕೇತ್ರಕ್ಕೆ 20 ಜನ ಸ್ಪರ್ದೆ ಮಾಡಿದ್ದು ಅದರಲ್ಲಿ ಗದ್ದೇಹೊಸೂರು ಜಿ.ಎನ್ ದೀಪಕ್, ಜಿ.ಬಿ ಮನು, ಚಿಕ್ಕಮಂದಗರೆ ಗ್ರಾಮದ ರಮೇಶ್ ಕೆ.ಎನ್, ವಸಂತ, ಆಲೇನಹಳ್ಳಿ ಗ್ರಾಮದ ಆಶೋಕ, ಸಾವಿತ್ರಮ್ಮ, ಮಂದಗರೆ ಗ್ರಾಮದ ಮಂಜುನಾಥ್, ಮೂಡನಹಳ್ಳಿ ಗ್ರಾಮದ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಗ್ರಾಮದ ಮಂಜೇಗೌಡ, ಶ್ರವಣಹಳ್ಳಿ ಗ್ರಾಮದ ಬೋಜಯ್ಯ, ಗೆಲುವು ಸಾದಿಸಿದ್ರೆ ಸಾಸಲಗಾರರಲ್ಲದ ಕ್ಷೇತ್ರದಿಂದ ಅಲೇನಹಳ್ಳಿ ಮಹೇಶ್ ರವರು ಗೆಲುವು ಸಾದಿಸಿದ್ರು
ನೂತನ ನಿರ್ದೇಶಕರಿಗೆ ಜೆ.ಡಿ.ಎಸ್ ಪಕ್ಷದ ಯುವ ನಾಯಕ ಗದ್ದೇಹೊಸೂರು ಜಗದೀಶ್ ಸಿಹಿ ತಿನ್ನಿಸಿ ಎಲ್ಲಾ ನಿರ್ದೇಶಕರಿಗೆ ಶುಭ ಕೋರಿ ಮಾತನಾಡಿ ಜೆ.ಡಿ.ಎಸ್ ಅಭ್ಯರ್ಥಿ 8 ಸ್ಥಾನ ಗೆಲುವು ಸಾದಿಸಿ ಅದಿಕಾರದ ಚುಕ್ಕಾಣೆ ಹಿಡಿಯಲಿದ್ದು ಎಲ್ಲಾ ನಿರ್ದೇಶಕರು ಪಕ್ಷಬೇದ ಮರೆತು ಸಂಘದ ಅಭಿವೃದ್ಧಿ ಶ್ರಮಿಸುವಂತೆ ಸಲಹೆ ನೀಡಿದ್ರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
Mandya
ಕಡು ಬಡವರಿಗೂ ಗ್ಯಾರಂಟಿಗಳು ತಲುಪಿದಾಗ ಮಾತ್ರ ಯೋಜನೆಗಳು ಯಶಸ್ವಿಯಾದಂತೆ: ಚಿಕ್ಕಲಿಂಗಯ್ಯ

ಮಂಡ್ಯ : ಸರ್ಕಾರದ ಕನಸಿನ ಕೂಸಾದ ಗ್ಯಾರಂಟಿ ಯೋಜನೆಗಳು ರಾಜ್ಯದ ಕಡು ಬಡವರ ಮನೆಯನ್ನು ತಲುಪಿದಾಗ ಮಾತ್ರ ಯೋಜನೆ ಯಶಸ್ವಿಯಾದಂತೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಲು ಪ್ರಾಧಿಕಾರವು ಸಹ ಶ್ರಮವಹಿಸಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಗ್ಯಾರಂಟಿ ಯೋಜನೆಯ ಪ್ರಮುಖ ಯೋಜನೆ ಗೃಹಲಕ್ಷಿ ಯೋಜನೆ, ಈ ಯೋಜನೆಯಿಂದ ರಾಜ್ಯದ ಅನೇಕ ಕುಟುಂಬಗಳು ಸಬಲವಾಗಿವೆ, ಜಿಲ್ಲೆಯಲ್ಲಿ ಶೇ 100 ರಷ್ಟು ಅರ್ಹ ಮಹಿಳೆಯರಿಗೆ ಯೋಜನೆಗಳನ್ನು ತಲುಪಿಸುವುದು ಅತಿ ಮುಖ್ಯ, ಈಗಾಗಲೇ ಡಿಸೆಂಬರ್ ಮಾಹೆಯವರೆಗೂ ಗೃಹ ಲಕ್ಷ್ಮಿ ಯೋಜನೆಯಡಿ ಅನುದಾನ ಮಂಜೂರು ಮಾಡಲಾಗಿದೆ ಹಾಗೂ ಡಿ ಬಿ ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರೊಂದಿಗೆ ಚರ್ಚಿಸಿ ಕಾಲ ಕಾಲಕ್ಕೆ ಗೃಹಲಕ್ಷಿ ಹಣವನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಹಾಗೂ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಅನ್ನ ಭಾಗ್ಯ ಯೋಜನೆಯಡಿ 7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದೂ ಡಿಸೆಂಬರ್ ಮಾಹೆಯವರೆಗೆ ಒಟ್ಟು ರೂ. 402 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ, ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ರೂ. 23.06 ಕೋಟಿ ಹಣವನ್ನು ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ, ಸರ್ಕಾರದ ನಿರ್ದೇಶನದಂತೆ ಫೆಬ್ರವರಿ ಮಾಹೆಯಿಂದ ಹಣದ ಬದಲು 15 ಕೆ.ಜಿ ಅಕ್ಕಿಯನ್ನೇ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲೆಡೆ ಈಗಾಗಲೇ ಫೆಬ್ರವರಿ ಮಾಹೆಯ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುತ್ತಿದೆ, ಪ್ರತಿ ಎರಡು ವರ್ಷಕ್ಕೊಮ್ಮೆ ತೂಕ ಮೌಲ್ಯ ಮಾಪನ ನಡೆಸಲಾಗುವುದು, ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಅಂಗಡಿಯ ಮಾಲೀಕನ ಮೇಲೆ ಕ್ರಮ ಜರುಗಿಸಲಾಗುವುದು, ಜಿಲ್ಲೆಯಲ್ಲಿ ಅನೇಕ ಕಡೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ, ಅಧಿಕಾರಿಗಳು ಈಗಾಗಲೇ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಹಣ ವಸೂಲಿ ಮಾಡದಂತೆ ಸೂಚನೆ ನೀಡಿದ್ದಾರೆ, ಅದನ್ನು ಮೀರಿ ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಿ,
ಶಕ್ತಿ ಯೋಜನೆಯಡಿ ಫೆಬ್ರವರಿ ಮಾಹೆಯಲ್ಲಿ ಪ್ರತಿದಿನದ ಸರಾಸರಿಯಂತೆ 29 ಸಾವಿರಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರ ವಿತರಿಸಲಾಗಿದೆ, ಫೆಬ್ರವರಿ ಮಾಹೆಯಲ್ಲಿ 59.13 ಲಕ್ಷಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ನೀಡಲಾಗಿದೆ ಎಂದು ತಿಳಿಸಿದರು.
ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 5 ಲಕ್ಷದ 49 ಸಾವಿರಕ್ಕೂ ಹೆಚ್ಚಿನ ಫಲಾನುಭವಿಗಳು ಇದ್ದು, ಈವರೆಗೂ ಜಿಲ್ಲೆಗೆ 314 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯಲ್ಲಿ ಶೇ 97 ರಷ್ಟು ಪ್ರಮಾಣದಲ್ಲಿ ಗೃಹ ಜ್ಯೋತಿ ಅನ್ನು ಎಲ್ಲಾ ಮನೆಗಳಿಗೂ ತಲುಪಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ 7 ತಾಲ್ಲೂಕಿನ ಎಲ್ಲಾ ಪದವಿ ಹಾಗೂ ಡಿಪ್ಲೋಮೋ ಕಾಲೇಜುಗಳಲ್ಲಿ ಯುವ ನಿಧಿ ಯೋಜನೆಯ ಕುರಿತು ಜಾಗೃತಿ ಮೂಡಿಸಲಾಗಿದೆ, 4702 ಅರ್ಹ ಫಲಾನುಭವಿಗಳು ಪ್ರಸ್ತುತ ಜಿಲ್ಲೆಯಲ್ಲಿದ್ದು ಎಲ್ಲರಿಗೂ ಡಿ.ಬಿ.ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ, ಯುವನಿಧಿ ಯೋಜನೆಯಡಿ 7 ಕೋಟಿ 12 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು ಕೆ.ಸಿ. ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ಸದಸ್ಯರಾದ ವೀಣಾ ಶಂಕರ್, ರುದ್ರಪ್ಪ, ಮಹೇಶ್, ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಕೆ.ಎಸ್. ಆರ್. ಟಿ.ಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಹಾಗೂ ಆಹಾರ ಮೇಳ

ಕೆ.ಆರ್.ಪೇಟೆ : ಇಲ್ಲಿನ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳವು ಯಶಸ್ವಿಯಾಗಿ ನಡೆಯಿತು.
ಶಾಸಕ ಹೆಚ್.ಟಿ.ಮಂಜು ಎತ್ತಿನ ಗಾಡಿಯನ್ನು ಓಡಿಸುವ ಮೂಲಕ ಜಾನಪಸ ಜಾತ್ರೆಗೆ ಚಾಲನೆ ನೀಡಿ, ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಅವರು, ನಮ್ಮ ಪೂರ್ವಜರು ಬೇಸಾಯ ಮಾಡುವಾಗ ಮಾಡುತ್ತಿದ್ದ ನೃತ್ಯಗಳು, ಜಾನಪದ ಹಾಡುಗಳು ಇಂದಿಗೂ ಜನಪದರ ಬಾಯಿಂದ ಬಾಯಿಗೆ ಹರಿದಾಡುತ್ತಿವೆ. ಸುಗ್ಗಿ ಯ ಸಂಭ್ರಮದಲ್ಲಿ ಹಾಡುವ ಹಾಡುಗಳು ಇಂದಿಗೂ ನಮ್ಮ ಬದುಕಿನ ಜೀವ ಸೆಲೆಯಾಗಿವೆ. ಮೌಡ್ಯವಿಲ್ಲದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು, ಪಾಶ್ಚಾತ್ಯ ಸಂಸ್ಕೃತಿಗೆ ಆಕರ್ಷಿ ತವಾಗುತ್ತಿರುವ ಇಂದಿನ ದಿನಮಾನದಲ್ಲಿ ಮರಳಿ ಜಾನಪದ ಸಂಸ್ಕೃತಿಗೆ ಕರೆತರಲು ಇಂತಹ ಗ್ರಾಮೀಣ ಸೊಗಡಿನ ಕಾರ್ಯಕ್ರಮಗಳು ಸಹಾಯವಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಸುಮಾರಾಣಿ ಮಾತನಾಡಿ, ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ. ಜಾನಪದದ ಮೂಲ ಬೇರೆ ಹೆಣ್ಣಾ ಗಿರುವುದರಿಂದ ಹೆಣ್ಣಿಗೂ ಜಾನಪದಕ್ಕೂ ಅವಿನಾಭಾವ ಸಂಬಂಧವಿದೆ. ಹೆಣ್ಣು ಮಕ್ಕಳು ಆಯಾ ಸಂದರ್ಭಕ್ಕೆ ಅನುಗುಣವಾಗಿ ಹಾಡುವ ಹಾಡುಗಳು ಹಾಗೂ ನೃತ್ಯಗಳು ಜಾನಪದ ಕ್ಷೇತ್ರದ ಶಕ್ತಿಯನ್ನು ಇಮ್ಮಡಿಗೊಳಿಸಿವೆ ಎಂದು ಹೇಳಿದರು.
ಮಹಿಳಾ ಸರ್ಕಾರಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ.ಬಿ. ಪ್ರತಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಇಂದು ವಿಶೇಷವಾಗಿ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳವನ್ನು ಆಯೋಜಿಸಲಾಗಿದೆ. ನಮ್ಮ ಸಂಸ್ಕೃತಿಯ ಪ್ರತಿಬಿಂಬವಾದ ಜಾನಪದಕ್ಕೆ ಶಕ್ತಿ ತುಂಬುವ ರೀತಿಯಲ್ಲಿ ಇಂದು ವಿದ್ಯಾರ್ಥಿನಿಯರು ರೇಷ್ಮೆ ಸೀರೆಯನ್ನು ಉಟ್ಟು ಮದುಮಗಳ ರೀತಿಯಲ್ಲಿ ಅಲಂಕಾರ ಮಾಡಿಕೊಂಡು ಬಂದಿದ್ದಾರೆ. ದನಕರುಗಳು ಹಾಗೂ ಪ್ರಕೃತಿಯೇ ಜನಪದದ ಜೀವಾಳವಾಗಿದೆ. ಮೋಸ, ವಂಚನೆಯ ಬಗ್ಗೆ ತಿಳಿಯದ, ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಯುವ ಸಮುದಾಯವನ್ನು ಜಾಗೃತಿಗೊಳಿಸಿ ಮುನ್ನಡೆಸಲು ಇಂತಹ ಕಾರ್ಯಕ್ರಮಗಳು ವರದಾನವಾಗಿವೆ ಎಂದು ಹೇಳಿದರು.
ಪುರಸಭೆ ಸದಸ್ಯ ಗಿರೀಶ್, ಶಾಮಿಯಾನ ತಿಮ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್ ಸೇರಿದಂತೆ ಕಾಲೇಜಿನ ಅಧ್ಯಾಪಕ ವರ್ಗ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಚೇತನ್ ಕುಮಾರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
-
State23 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan21 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan21 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
Mysore20 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ