Hassan
ಪ್ರಜ್ವಲ್ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ ನಗದು ಬಹುಮಾನ ಘೋಷಣೆ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ ೩೦ ಅಧಿಕಾರಿ, ಸಿಬ್ಬಂದಿಗೆ ೨೫ ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಪ್ರಕರಣದ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು ಒಟ್ಟಾರೆ ೩೫ ಲಕ್ಷ ರೂ. ಬಹುಮಾನ ಘೋಷಿಸಿದೆ.

ಯಾರ್ಯಾರಿಗೆ ಎಷ್ಟು ಹಣ?
ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸುಮನ್ ಡಿ ಪನ್ನೇಕರ್, ಎಸ್ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ.ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ ಈ 25 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ.
ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರೂ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ)ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರೂ. ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರೂ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.

ನ್ಯಾಯಾಲಯದ ಆದೇಶದಲ್ಲಿ ಏನಿದೆ?
ಪುಜ್ವಲ್ ಮತ್ತು ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡವು, ಇಬ್ಬರ ವಿರುದ್ಧ ಒಟ್ಟು 4 ಪಕರಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ 1 ಪ್ರಕರಣದ ತನಿಖಾ ಕಾಲದಲ್ಲಿ ಸಮರ್ಪಕವಾಗಿ ತನಿಖೆ ಕೈಗೊಂಡು ಸಾಕ್ಷ್ಯಾಧಾರ ಸಂಗ್ರಹಿಸಿ, ಒಟ್ಟು 5 ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಿದ್ಧಪಡಿಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸದರಿ ಪ್ರಕರಣಗಳ ಪೈಕಿ ಸಿ.ಐ.ಡಿ. ಸೈಬರ್ ಕ್ರೈಂ ಪೊಲೀಸ್ ಠಾಣಾ ಮೊ.ಸಂ.02/2024ರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ಪೂರ್ಣಗೊಂಡು ಪ್ರಕರಣದ ಆರೋಪಿ ಪ್ರಜ್ವಲ್ ಕೃತ್ಯ ಸಾಬೀತಾಗಿದ್ದರಿಂದ ಅಪರಾಧಿಗೆ ಅಜೀವ ಸೆರೆವಾಸ ಮತ್ತು 11,60,000 ರೂ. ದಂಡ ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.
ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸದ್ಯ ಪ್ರಕರಣದ ಆರೋಪಿ ಪ್ರಜ್ವಲ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಪಡೆಯಲ್ಲಿ ವೃತ್ತಿ ಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆ ಉತ್ತೇಜಿಸುವ ಉದ್ದೇಶದೊಂದಿಗೆ ನಗದು ಪ್ರಶಸ್ತಿ ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
Hassan
ಅರಸೀಕೆರೆಯಲ್ಲಿ ಬಕ್ರೀದ್ ಹಿನ್ನೆಲೆ ಪೊಲೀಸ್ ರೂಟ್ ಮಾರ್ಚ್
ಅರಸೀಕೆರೆ: ಮೇ. 28 ರಂದು ಬಕ್ರೀದ್ ಹಬ್ಬ ಇರುವ ಪ್ರಯುಕ್ತ ಸಾರ್ವಜನಿಕರಲ್ಲಿ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ವಿಶ್ವಾಸ ಮೂಡಿಸಲು ನಗರದಲ್ಲಿ ಇಂದು ಜಿಲ್ಲಾ ಎಸ್ಪಿ ಶುಭನ್ವಿತಾ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು.
ನಗರದ ಹುಳಿಯಾರ್ ರಸ್ತೆ, ಶಾನುಭೋಗರ ಬೀದಿ ಹಾಗೂ ಬಿ.ಎಚ್. ರಸ್ತೆಯಲ್ಲಿ ನಡೆದ ಈ ರೂಟ್ ಮಾರ್ಚ್ನಲ್ಲಿ ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸದಾ ಸನ್ನದ್ಧರಾಗಿದ್ದಾರೆ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ನೀಡಿದರು.

ಹಬ್ಬಗಳು ಹಾಗೂ ಸೂಕ್ಷ್ಮ ಸಂದರ್ಭಗಳಲ್ಲಿ ಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುವವರಿಗೆ ಭದ್ರತೆಯ ಭಾವನೆ ಮೂಡಿಸುವುದು ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರಿಗೆ ಎಚ್ಚರಿಕೆ ನೀಡುವುದು ರೂಟ್ ಮಾರ್ಚ್ನ ಮುಖ್ಯ ಉದ್ದೇಶವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
Hassan
ಹಿರೇಮಠದಲ್ಲಿ 9 ದಿನಗಳ ಮೌನ ಶಿವಾನುಷ್ಠಾನ: ಜೂ.5ರಂದು ಮಹಾಮಂಗಳೋತ್ಸವ, ಭಕ್ತರಿಗೆ ದರ್ಶನ ನಿರ್ಬಂಧ
Hassan
ಅರಸೀಕೆರೆ ನಗರದಲ್ಲಿ ಗುಡುಗು ಸಹಿತ ಭಾರಿ ಮಳೆ
-
Special13 hours agoಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಹೇಗೆ?
-
Mysore20 hours agoದೈವ ನಿಂದನೆ ಪ್ರಕರಣ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್
-
Hassan20 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Manglore22 hours agoಪ್ರವಾಸಿಗರಿಗೆ ಜಲಪಾತ ವೀಕ್ಷಣೆ, ಪರ್ವತ ಏರಲು ಜೂ.1ರಿಂದ ಅವಕಾಶ
-
State18 hours agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Chikmagalur19 hours agoಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ಸೀತಾಳಯ್ಯನಗಿರಿ
-
Sports18 hours agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
-
Hassan19 hours ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

