Hassan
ಪ್ರಜ್ವಲ್ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ ನಗದು ಬಹುಮಾನ ಘೋಷಣೆ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ ೩೦ ಅಧಿಕಾರಿ, ಸಿಬ್ಬಂದಿಗೆ ೨೫ ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಪ್ರಕರಣದ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು ಒಟ್ಟಾರೆ ೩೫ ಲಕ್ಷ ರೂ. ಬಹುಮಾನ ಘೋಷಿಸಿದೆ.

ಯಾರ್ಯಾರಿಗೆ ಎಷ್ಟು ಹಣ?
ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸುಮನ್ ಡಿ ಪನ್ನೇಕರ್, ಎಸ್ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ.ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ ಈ 25 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ.
ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರೂ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ)ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರೂ. ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರೂ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.

ನ್ಯಾಯಾಲಯದ ಆದೇಶದಲ್ಲಿ ಏನಿದೆ?
ಪುಜ್ವಲ್ ಮತ್ತು ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡವು, ಇಬ್ಬರ ವಿರುದ್ಧ ಒಟ್ಟು 4 ಪಕರಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ 1 ಪ್ರಕರಣದ ತನಿಖಾ ಕಾಲದಲ್ಲಿ ಸಮರ್ಪಕವಾಗಿ ತನಿಖೆ ಕೈಗೊಂಡು ಸಾಕ್ಷ್ಯಾಧಾರ ಸಂಗ್ರಹಿಸಿ, ಒಟ್ಟು 5 ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಿದ್ಧಪಡಿಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸದರಿ ಪ್ರಕರಣಗಳ ಪೈಕಿ ಸಿ.ಐ.ಡಿ. ಸೈಬರ್ ಕ್ರೈಂ ಪೊಲೀಸ್ ಠಾಣಾ ಮೊ.ಸಂ.02/2024ರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ಪೂರ್ಣಗೊಂಡು ಪ್ರಕರಣದ ಆರೋಪಿ ಪ್ರಜ್ವಲ್ ಕೃತ್ಯ ಸಾಬೀತಾಗಿದ್ದರಿಂದ ಅಪರಾಧಿಗೆ ಅಜೀವ ಸೆರೆವಾಸ ಮತ್ತು 11,60,000 ರೂ. ದಂಡ ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.
ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸದ್ಯ ಪ್ರಕರಣದ ಆರೋಪಿ ಪ್ರಜ್ವಲ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಪಡೆಯಲ್ಲಿ ವೃತ್ತಿ ಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆ ಉತ್ತೇಜಿಸುವ ಉದ್ದೇಶದೊಂದಿಗೆ ನಗದು ಪ್ರಶಸ್ತಿ ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
Hassan
ವಿಕಸಿತ ಭಾರತ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ವಿಕಸಿತ ಭಾರತ ಮೋದಿಜಿಯವರ ಕನಸು. 2047ಕ್ಕೆ ವಿಕಸಿತ ಭಾರತ ಆಗಬೇಕು ಅನ್ನೊ ಸಂಕಲ್ಪಕ್ಕೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಈ ಭಾರಿಯ ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ಬಜೆಟ್ ಮೂರು ಪ್ರಮುಖ ಕರ್ತವ್ಯಗಳ ಆಧಾರದ ಮೇಲೆ ಅಭಿವೃದ್ಧಿ ಪೂರಕ ಆಡಳಿತದತ್ತ ಸ್ಪಷ್ಟ ದಿಕ್ಸೂಚಿಯನ್ನು ನೀಡಿದೆ. ಮೊದಲನೆಯದಾಗಿ, ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕ ಪ್ರಗತಿಗೆ ವೇಗ ನೀಡುವುದು ಮತ್ತು ಆರ್ಥಿಕತೆ ಚೇತರಿಸಿಕೊಳ್ಳುವ ಶಕ್ತಿಯನ್ನು ವೃದ್ಧಿಸುವುದು, ಎರಡನೆಯದಾಗಿ, ಯುವಜನತೆಯ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಅವರಲ್ಲಿ ಹೊಸ ಸಾಮರ್ಥ್ಯ ಬೆಳೆಸುವುದು ಹಾಗೂ ಮೂರನೆಯದಾಗಿ, ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ಪ್ರದೇಶಗಳಿಗೆ ಅಗತ್ಯ ಸಂಪನ್ಮೂಲ ಹಾಗೂ ಸಮಾನ ಅವಕಾಶಗಳನ್ನು ಒದಗಿಸಿ, ಎಲ್ಲರೂ ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಜೆಟ್ನ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

◦ ಈ ಬಜೆಟ್ ’ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ನಂತಹ ವೇದಿಕೆಗಳ ಮೂಲಕ ಯುವಜನರ ಆಲೋಚನೆಗಳನ್ನು ನೀತಿ ನಿರೂಪಣೆಯಲ್ಲಿ ಅಳವಡಿಸಿಕೊಂಡಿರುವುದು ಶ್ಲಾಘನೀಯ. ಇದು ಯುವಜನರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ರಾಷ್ಟ್ರದ ನಿರ್ಧಾರಗಳಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಿದೆ. ಆ ಮೂಲಕ ಭಾರತದ ಮುಂದಿನ ಪ್ರಗತಿಯನ್ನು ಯುವಜನರು ಮುನ್ನಡೆಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಒತ್ತಿ ಹೇಳಿದ್ದು, ಅದರತ್ತ ಈ ಬಜೆಟ್ ಕೂಡ ಗಮನಹರಿಸಿರುವುದು ಸಮಯೋಚಿತವೆನಿಸಿದೆ ಎಂದು ಹೇಳಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಜೆಟ್ ಮಂಡಿಸಿದ್ದಾರೆ. ಕರ್ತವ್ಯ ಭವನದಲ್ಲಿ ಈ ಬಜೆಟ್ ತಯಾರಾಗಿದ್ದು.ನಿರ್ಮಲಾ ಸೀತಾರಾಮನ್ ನಮ್ಮವರು. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಅವರು 9ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ.ಕ್ರೀಡಾ ಕ್ಷೇತ್ರ, ನಾರಿ ಶಕ್ತಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಯಾವುದೇ ಹೊಸ ತೆರಿಗೆಯನ್ನ ಹೇರಿಲ್ಲ. ಸರ್ವಸ್ಪರ್ಷಿ, ಸರ್ವವ್ಯಾಪಿ ಬಜೆಟ್ ಇದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಆರ್ಥಿಕ ಸದೃಢತೆ, ವಿಶ್ವಗುರುವಾಗಲು ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದರು.
Hassan
ಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
ಹಾಸನ: ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.
ಹರೀಶ್ ಅವರು ಡಾ. ಎಂ. ಆರ್. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧ The Impact of E- governance and rural development ( A case study of Hassan district ) ಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಹರೀಶ್ ಅವರು ಅರಸೀಹಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯ ಎ ಅಣ್ಣೇಗೌಡ ಮತ್ತು ಜಯಲಕ್ಷ್ಮಮ್ಮ ಅವರ ಪುತ್ರರಾಗಿದ್ದಾರೆ
Hassan
ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
ನವದೆಹಲಿ: ಹಾಸನ ಜಿಲ್ಲೆಯಲ್ಲಿ ದಶಕಗಳಿಂದಲೂ ರೈತರನ್ನು ಕಾಡುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಶೀಘ್ರದಲ್ಲೇ ಹಾಸನಕ್ಕೆ ಕೇಂದ್ರ ತಂಡ ಭೇಟಿ ಸಚಿವರೊಂದಿಗಿನ ಭೇಟಿಯ ನಂತರ, ಅರಣ್ಯ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕರಾದ ರಮೇಶ್ ಕೆ. ಪಾಂಡೇ (IFS) ಅವರನ್ನು ಸಂಸದರು ಭೇಟಿ ಮಾಡಿದರು. ಸಚಿವರ ನಿರ್ದೇಶನದಂತೆ, ಹಾಸನ ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ವೈಲ್ಡ್ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (WII) ತಂಡವು ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಸಂಸದರು ತಿಳಿಸಿದರು.

ಈ ತಂಡವು ಜಿಲ್ಲೆಯ ಆನೆ ಕಾರಿಡಾರ್ಗಳ ಸ್ಥಿತಿಗತಿ ಮತ್ತು ಸಂಘರ್ಷ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ. 7 ಗ್ರಾಮಗಳ ರೈತರಿಂದ ಸ್ವಯಂಪ್ರೇರಿತ ಜಮೀನು ಹಸ್ತಾಂತರ ಹಿಂದೆ ನಡೆದ ಟಾಸ್ಕ್ಫೋರ್ಸ್ ಕಮಿಟಿ ಸಭೆಯ ನಿರ್ಧಾರಗಳನ್ನು ಸಚಿವರ ಗಮನಕ್ಕೆ ತಂದ ಶ್ರೇಯಸ್ ಪಟೇಲ್ ಅವರು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮತ್ತು ಆನೆಗಳ ಸಂಚಾರ ಅಧಿಕವಾಗಿರುವ ಕೆಳಕಂಡ 7 ಗ್ರಾಮಗಳನ್ನು ಯೋಜನೆಗೆ ಒಳಪಡಿಸುವಂತೆ ಒತ್ತಾಯಿಸಿದರು.
ಅರಣಿ, ಬೋರನಮನೆ, ಬಾಳೆಹಳ್ಳ, ಬೆಟ್ಟಕುಮರಿ, ಮಂಕನಹಳ್ಳಿ, ಯತ್ತಹಳ್ಳ, ಬಾಜಿ ಮನೆ ಎಸ್ಟೇಟ್ ಈ ಗ್ರಾಮಗಳಲ್ಲಿನ 416 ರೈತರು ತಮ್ಮ ಒಟ್ಟು 2261.21 ಎಕರೆ ಹಿಡುವಳಿ ಪ್ರದೇಶವನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಸಿದ್ಧರಿದ್ದಾರೆ.
ಪರಿಹಾರಕ್ಕೆ ಆಗ್ರಹ
“ಈ 7 ಗ್ರಾಮಗಳ ರೈತರು ಆನೆಗಳ ಕಾಟದಿಂದ ಬೇಸತ್ತಿದ್ದು, ಸರ್ಕಾರವು ಪ್ರತಿ ಎಕರೆಗೆ ಕನಿಷ್ಠ 15 ಲಕ್ಷ ರೂ. ಪರಿಹಾರ ನೀಡಿದಲ್ಲಿ ತಕ್ಷಣವೇ ಜಮೀನು ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಸ್ತಾವನೆ ಜಾರಿಯಾದಲ್ಲಿ ಆನೆಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಸಿಗಲಿದ್ದು, ರೈತರ ಪ್ರಾಣ-ಹಾನಿ ತಪ್ಪಿಸಬಹುದು,” ಎಂದು ಶ್ರೇಯಸ್ ಪಟೇಲ್ ತಿಳಿಸಿದರು.

ಹಾಸನ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ಪರಿಗಣಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.
-
Manglore4 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Cinema24 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan5 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan4 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National6 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State7 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya9 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Hassan3 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
