Mysore
ದಸರಾ ಹಬ್ಬದ ಅಂಗವಾಗಿ ಕೆಎಂಪಿ ಕೆ ಟ್ರಸ್ಟ್ ಆಯೋಜಿಸಿರುವ ಮನೆ ಮನೆ ದಸರಾ ಗೊಂಬೆ ಕೂರಿಸುವ ಸ್ಪರ್ಧೆ

ಮೈಸೂರು: ಯಾವುದೋ ಸುದ್ದಿಗಳನ್ನ ಮೂರುದಿನಗಳ ಕಾಲ ಪ್ರಚಾರ ಮಾಡುವ ಬದಲು ನಮ್ಮ ಇತಿಹಾಸ, ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗೊಂಬೆ ಜೋಡಣೆಯಂತಹ ಗೊಂಬೆ ಮನೆ ಸುದ್ದಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕೆಂದು ಪ್ರಸಿದ್ದ ಹಾಸ್ಯಗಾರ್ತಿ ಸುಧಾ ಬರಗೂರು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದರು.
ಮೈಸೂರು ದಸರಾ ಹಬ್ಬದ ಅಂಗವಾಗಿ ಕೆಎಂಪಿ ಕೆ ಟ್ರಸ್ಟ್ ಆಯೋಜಿಸಿರುವ ಮನೆ ಮನೆ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯಲ್ಲಿ ಭಾಗವಹಿಸಿರುವ ನಂಜು ಮಳಿಗೆಯಲ್ಲಿರುವ ಸೌಮ್ಯಲಕ್ಷ್ಮಿ ಸತ್ಯನಾರಾಯಣ ಅವರ ನಿವಾಸಕ್ಕೆ ಭೇಟಿ ನೀಡಿದ ಸುಧಾ ಬರಗೂರು ಗೊಂಬೆ ಜೋಡಣೆ ಕಂಡು ಮನತುಂಬಿ ಮಾತನಾಡಿದರು
ನಮ್ಮ ಇತಿಹಾಸವನ್ನ ಗೊಂಬೆಗಳ ಮೂಲಕ ಸೌಮ್ಯಲಕ್ಷ್ಮೀ ಕಟ್ಟಿಕೊಟ್ಟಿದ್ದಾರೆ. ಇದನ್ನ
ಉಳಿಸಿ ಬೆಳೆಸಬೇಕಿದೆ.ಮುಂದಿನ ಜನಾಂಗಕ್ಕೆ ತಿಳಿಸಿಕೊಡುವ ಅಗತ್ಯವಿದೆ ಇದಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದರು.
ನಮ್ಮ ಇತಿಹಾಸವನ್ನ ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ, ಈ ಗೊಂಬೆ ಮನೆ ಸಂಸ್ಕೃತಿಯನ್ನು
ಉಳಿಸಿ ಬೆಳೆಸಬೇಕಿದೆ.ಇದೊಂದು ಅದ್ಭುತ ಕಲೆ.ಇದೆಲ್ಲಾ ಮುಂದಿನ ಜನಾಂಗಕ್ಕೆ ತಿಳಿಯಬೇಕು ಇದಕ್ಕೆ ಎಲ್ಲರ ಸಹಕಾರ ಇರಲಿ ಎಂದು ಕೋರಿದರು
ಹೆಣ್ಣು ಮಕ್ಕಳಿಗೆ ಒಂದು ಕ್ರೇಜ್ ಇರುತ್ತದೆ,ಬಳೆ,ಬಿಂದಿ,ಸೀರೆ,ವಡವೆ ಕಲೆಕ್ಟ್ ಮಾಡುವುದು.
ಹಿಂದೆ ನಾವು ಚಿಕ್ಕವರಾಗಿದ್ದಾಗ ಪುಟ್ಟ ಗೊಂಬೆಗಳನ್ನು ಜೋಡಿಸಿದ್ದನ್ನ ನೋಡಿದ್ದೆ.ಕಬ್ಬಿಣದ ಪುಟ್ಟ ಪೆಟ್ಟಿಗೆಯನ್ನ ಗೊಂಬೆ ಹಬ್ಬದಲ್ಲಿ ಕೆಳಗಿಳಿಸುತ್ತಿದ್ದರು.
ಸಿಬಾಕಾ,ಬಿನಾಕಾ ಪೇಸ್ಟ್ ಬರುತ್ತಿತ್ತು ಅದರಲ್ಲಿ ಪುಟ್ಟ ಗೊಂಬೆಗಳು ಇರುತ್ತಿತ್ತು ಅವುಗಳನ್ನು ಜೋಡಿಸಿ ಆನಂದಿಸುತ್ತಿದ್ದೆವು ಎಂದು ತಮ್ಮ ಬಾಲ್ಯವನ್ನು ನೆನಪು ಮಾಡಿಕೊಂಡರು.
ಇಡೀ ದಸರಾ ಪರಿಕಲ್ಪನೆಯನ್ನ ಸೌಮ್ಯ ಅವರು ಇಪ್ಪತ್ತು ವರ್ಷಗಳ ಶ್ರಮ ದಿಂದ ಮಾಡಿದ್ದಾರೆ, ಪೌರಾಣಿಕ ಕಥೆಗಳು,ದೇವಸ್ಥಾನ,ಅದರ ಅರ್ಚಕರು ಹೊರಬರುವುದು ಹೀಗೆ ಪ್ರತಿಯೊಂದನ್ನೂ ಗೊಂಬೆ ಮೂಲಕ ಮೈಸೂರಿನ ಸೌಮ್ಯಲಕ್ಷ್ಮಿ ಗೊಂಬೆಗಳ ಮೂಲಕ ಕಟ್ಟಿಕೊಟ್ಟಿದ್ದಾರೆ ಅದಕ್ಕೆ ಅವರನ್ನ ಎಲ್ಲರ ಪರವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.
ಅರಮನೆ,ಝೂ,ಕೆಆರ್ ಎಸ್ ನೋಡೋರು ಮರೆಯದೆ ಈ ಗೊಂಬೆಮನೆಗೂ ಭೇಟಿ ಕೊಡಿ ಎಂದು ಅವರು ಮನವಿ ಮಾಡಿದರು.
ಸುಮಂಗಲಿ ಸ್ಯಾರಿ ಅಂಗಡಿ ಕೂಡಾ ಇಲ್ಲಿದೆ,ಅಂದರೆ ಮೈಸೂರಿನ ವಿಶೇಷತೆಗಳನ್ನ ಗೊಂಬೆಗಳ ಮೂಲಕ ಕಟ್ಟಿ ಕೊಟ್ಟಿದ್ದಾರೆ.ಇದಕ್ಕೆ ಹ್ಯಾಟ್ಸ್ ಅಪ್ ಎಂದು ನುಡಿದರು.
ಈ ವೇಳೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಥ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾಕ್ಟರ್ ಆರ್ ಎಚ್ ಪವಿತ್ರ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್ , ಅಜಯ್ ಶಾಸ್ತ್ರಿ, ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ,ನವೀನ್ ಕೆಂಪಿ, ಮಿರ್ಲೆ ಪನಿಷ್, ಮತ್ತಿತರರು ಹಾಜರಿದ್ದರು.
Mysore
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ ಧರಣಪ್ಪಗೌಡ, ಕರ್ಪೂರವಳ್ಳಿ ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Crime
ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆ; ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ

ನಂಜನಗೂಡು: ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 39 ವರ್ಷದ ಮಹದೇವಸ್ವಾಮಿ ಮೃತ ದುರ್ಧೈವಿಯಾಗಿದ್ದಾನೆ. 40 ವರ್ಷದ ಸೋಮಯ್ಯ ಎಂಬುವವರ ಪತ್ನಿ ಜೊತೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಸೋಮಯ್ಯ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್ ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ರೈತರು ಹೈನುಗಾರಿಕೆಗೆ ಒತ್ತು ನೀಡಿ ಶಾಸಕ ಡಿ. ರವಿಶಂಕರ್





-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore6 days ago
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
-
Hassan2 hours ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ