Cultural
ಅರಮನೆ ಪ್ರವೇಶಿಸಿದ 2 ನೇ ತಂಡ

ಮೈಸೂರು: ವಿಶ್ವವಿಖ್ಯಾತ ನಾರು ದಸರಾ ಮಹೋತ್ಸವದಲ್ಲಿ ಭಾಗಿಯಾಗಲು ಎರಡನೇ ಹಂತದ ಗಜಪಡೆಗಳು ಸೋಮವಾರ ಅರಮನೆ ಪ್ರವೇಶಿಸಿದವು.
ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಒಮೊದಲ ಬಾರಿಗೆ ಆಗಮಿಸಿದ ಲಕ್ಷ್ಮೀ, ರೋಹಿತ್, ಪ್ರಶಾಂತ, ಸುಗ್ರೀವ, ಹಿರಣ್ಯಾ
ಆನೆಗಳಿಗೆ ಕಬ್ಬು-ಬೆಲ್ಲ ತಿಸಿಸಿ ಪೂಜೆ ಸಲ್ಲಿಸಿ ಸಂಪ್ರದಾಯಿಕವಾಗಿ ಬರ ಮಾಡಿಕೊಳ್ಳಲಾಯಿತು.
ಆನೆಗಳನ್ನು ಅರಣ್ಯ ಇಲಾಖೆ ಮತ್ತು ಅರಮನೆ ಮಂಡಳಿ ಸ್ವಾಗತಿಸಿಕೊಂಡಿತು.ಡಿಸಿಎಫ್ ಸೌರಭ್ ಕುಮಾರ್ ಮತ್ತಿತ್ತರು ಹಾಜರಿದ್ದರು.
ಈಗಾಗಲೇ ಮೊದಲ ತಂಡದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಕಂಜನ್, ವರಲಕ್ಷ್ಮೀ, ವಿಜಯ, ಭೀಮ, ಗೋಪಿ, ಧನಂಜಯ, ಮಹೇಂದ್ರ ಆನೆಗಳ ತಂಡ ಮೈಸೂರಿಗೆ ಆಗಮಿಸಿ ಅರಮನೆ ಆರವರಣದಲ್ಲಿ ಠಿಕಾಣಿ ಹೂಡಿದ್ದವು.
ಆನೆಗಳ ಪರಿಚಯ: ಲಕ್ಷ್ಮೀ: ದೊಡ್ಡ ಹರವೆ ಶಿಬಿರದ ಲಕ್ಷ್ಮೀಗೆ 52 ವರ್ಷ. 2.52 ಎತ್ತರ, 3000-3200 ಕೆ.ಜಿ.ತೂಕ ಇದೆ. ಈ ಆನೆಯ ಮಾವುತ-ರವಿ, ಕಾವಾಡಿ-ಮಂಜು, ರೋಹಿತ:ಈ ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿರುವ ಗಜಪಡೆಯಲ್ಲಿ ಅತೀ ಚಿಕ್ಕ ವಯಸ್ಸಿನ ಆನೆ ರೋಹಿತ, ರಾಮಪುರ ಶಿಬಿರದ ಈ ಆನೆಗೆ 21 ವರ್ಷ, 2.70 ಮೀ.ಎತ್ತರ, 2900-3000 ತೂಕ ಇದೆ. ಇದು ಕೂಡ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದೆ. ಮಾವುತ-ಮಹದೇವ, ಕಾವಾಡಿ-ಮಣಿ, ಹಿರಾ: ರಾಮಪುರ ಶಿಬಿರದ ಹೆಣ್ಣಾನೆ ಹಿರಣ್ಯಾಗ 46 ವರ್ಷ. 2.50 ಮೀ. ಎತ್ತರ, 3000-3200 ಕೆ.ಜಿ.ತೂಕ ಇದೆ. ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿದೆ. ಮಾವುತ-ಚಂದ್ರಶೇಖರ್, ಕಾವಾಡಿ-ಮನ್ಸೂರ್, ಪ್ರಶಾಂತ: ದುಬಾರ ಶಿಬಿರದ ಪ್ರಶಾಂತ ಆನೆಗೆ 50 ವರ್ಷ. 3 ಮೀ. ಎತ್ತರ, 4000-4200 ಕೆ.ಜಿ.ತೂಕ ಇದೆ. ಮಾವುತ-ಚಿನ್ನಪ್ಪ, ಕಾವಾಡಿ-ಚಂದ್ರ, ಸುಗ್ರೀವ: ದುಬಾರೆ ಶಿಬಿರದ ಸುಗ್ರೀವ ಆನೆಗೆ 41 ವರ್ಷ, 2.77 ಮೀ. ಎತ್ತರ, 4000-4100 ಕೆ.ಜಿ.ತೂಕ ಇದೆ, ಮಾವುತ-ಜೆ.ಬಿ.ಶಂಕರ್, ಕಾವಾಡಿ-ಜೆ.ಬಿ.ಹರೀಶ್,
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ

ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.
ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
Cultural
ಬ್ರಹ್ಮ ಕುಮಾರೀಸ್ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ರಕ್ಷಾಬಂಧನ

ಮಂಡ್ಯ: ನಗರದ ಬನ್ನೂರು ರಸ್ತೆಯಲ್ಲಿರುವ ಬ್ರಹ್ಮ ಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ಸೋಮವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು .ಪತ್ರಕರ್ತರಿಗೆ ರಾಕಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ.ಶ್ವೇತ ಚಾಲನೆ ನೀಡಿದರು.ನಂತರ ಬಿ.ಕೆ.ಶಾರದಾ ಅವರು ಮಾತನಾಡಿ, ನನ್ನ ಕರ್ಮ ನನ್ನನ್ನು ರಕ್ಷಣೆ ಮಾಡುತ್ತದೆ. ಪರಮಾತ್ಮನು ರಕ್ಷಿಸುತ್ತಾನೆ ಎಂದರು.ಸಮಾಜದಲ್ಲಿ ಕಾಮ, ಕ್ರೋಧ, ಮದ, ಮತ್ಸರಗಳು ಅತಿಯಾಗಿದೆ. ಹಾಗಾಗಿ ಪಂಚಕರ್ಮಗಳಿಂದ ನಮಗೆ ರಕ್ಷಣೆ ಬೇಕಿದೆ ಎಂದು ತಿಳಿಸಿದರು.
ಎಲ್ಲಾ ಆತ್ಮಗಳು ಒಳ್ಳೆಯ ಆತ್ಮಗಳಾಗಿದೆ. ಆದರೆ ಆತ್ಮದಲ್ಲಿನ ನಕರಾತ್ಮಕ ಭಾವನೆ ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದರು. ವಿದ್ಯಾದೇವತೆ ಸರಸ್ವತಿಗೆ ಪರಮಾತ್ಮನ ಜ್ಞಾನವಿದೆ. ಹಾಗಾಗಿ ಆಕೆಯನ್ನು ವಿದ್ಯಾದೇವಿ ಎಂದು ಪೂಜಿಸುತ್ತೇವೆ ಎಂದು ತಿಳಿಸಿದ ಅವರು, ಆಧ್ಯಾತ್ಮಿಕ ಜ್ಞಾನವಿಲ್ಲದೆ ನಾವು ಏನನ್ನು ಸಾಧಿಸಲು ಆಗುವುದಿಲ್ಲ. ಈ ಜ್ಞಾನವಿದ್ದಲ್ಲಿ ವಿಕಾರಗಳಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಕೆ ಗೀತಾಂಜಲಿ, ಬಿಕೆ ಯಶೋಧ, ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.
-
Special12 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State8 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan9 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State7 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
State9 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
Kodagu5 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan6 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Hassan5 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ