Connect with us

Hassan

ರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕು ಬೆಂಗಳೂರು-ಮಂಗಳೂರು NH 75ರ 222+900ರಲ್ಲಿ ಮಂಜ್ರಾಬಾದ್ ಕೋಟೆಯ ಸಮೀಪ ದೋಣಿಗಲ್ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದು ಪಕ್ಕದ ಭೂಮಾಲಿಕರುಗಳು ಕಾಮಗಾರಿಯನ್ನು ತಡೆದು ನಿಲ್ಲಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಹಾಸನ ಬೈ ಪಾಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ-75ರ ದೋಣಿಗಲ್ ವಿಭಾಗದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ಫೆಬ್ರವರಿ .9 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು-ಮಂಗಳೂರು NH-75ರ 222+900 ರಿಂದ 223+700 ದೋಣಿಗಾಲ್ ರಸ್ತೆಯಿಂದ ಕೆಸಗನಹಳ್ಳಿ ರಸ್ತೆವರೆಗೆ ಕಾಮಗಾರಿ ನಡೆಯಲಿದ್ದು ಸದರಿ ಕಾಮಗಾರಿ ನೆಡೆದಿದ್ದು, ಕಾಮಗಾರಿ ನಡೆಯುವ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಪ್ರದೇಶ ಅವಧಿಯಲ್ಲಿ 5 ಜನರಿಗಿಂತ ಹೆಚ್ಚು ಗುಂಪಾಗಿ ಸೇರುವಂತ್ತಿಲ್ಲ, ಈ ಅವಧಿಯಲ್ಲಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತ್ತಿಲ್ಲ, ಯಾವುದೇ ರೀತಿಯ ಪ್ರಚಾರ ಸಾಮಾಗ್ರಿಗಳನ್ನು ಹಿಡಿದುಕೊಂಡು ಘೋಷಣೆ ಕೂಗಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ. ಈ ಆದೇಶವು ಕಾಮಗಾರಿ ನಡೆಸುವ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತ್ತಿಲ್ಲ ಹಾಗೂ ಮೇಲ್ಕಂಡ ನಿಬಂಧನೆಗಳನ್ನು ಉಲಂಘಿಸಿದಲ್ಲಿ ಸಂಭಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Continue Reading

Hassan

ಹಾಸನ ಬಸ್‌ ನಿಲ್ದಾಣದಲ್ಲಿ ಬಸ್‌ ಚಾಲಕರ ನಡುವೆ ವಾಗ್ವಾದ; ಬಳಿಕ ಹೆದ್ದಾರಿಯಲ್ಲಿ ಮತ್ತೆ ಜಗಳ

Published

on

ಹಾಸನ: ಹಾಸನ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಸಮಯದ ವಿಚಾರವಾಗಿ ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗದ ಬಸ್‌ ಚಾಲಕರ ನಡುವೆ ಜಗಳ ನಡೆದ ಘಟನೆ ವರದಿಯಾಗಿದೆ.

  ಮಾಹಿತಿಯ ಪ್ರಕಾರ, ಕೆಎ09-F-5249 ಸಂಖ್ಯೆಯ ಧರ್ಮಸ್ಥಳ ಮಾರ್ಗದ ಬಸ್‌ ಹಾಗೂ ಕೆಎ42-F-2308 ಸಂಖ್ಯೆಯ ಮಂಗಳೂರು ಮಾರ್ಗದ ಬಸ್‌ ನಡುವೆ ಬಸ್‌ ನಿಲುಗಡೆ ಸಮಯದ ವಿಚಾರದಲ್ಲಿ ವಾಗ್ವಾದ ಉಂಟಾಗಿದೆ. ಈ ವೇಳೆ ಚಾಲಕರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದು, ಮಂಗಳೂರು ಮಾರ್ಗದ ಬಸ್‌ ಚಾಲಕನ ಮೇಲೆ ಬೈಗುಳದ ಆರೋಪ ಕೇಳಿಬಂದಿದೆ.

ನಂತರ ಬಸ್‌ ನಿಲ್ದಾಣದ ಮೇಲಾಧಿಕಾರಿಗಳು ಮಧ್ಯಪ್ರವೇಶಿಸಿ ಇಬ್ಬರ ನಡುವೆ ಸಂಧಾನ ನಡೆಸಿ ಕಳುಹಿಸಿದ್ದಾರೆ. ಬಳಿಕ ಕೆಎ09-F-5249 ಸಂಖ್ಯೆಯ ಬಸ್‌ಗೆ ಸಂಬಂಧಿಸಿದವರು ಕೆಎ05-AG-3616 ಸಂಖ್ಯೆಯ ಶಿಫ್ಟ್‌ ಡಿಸೈರ್‌ ಕಾರಿನಲ್ಲಿ ಬಂದು ಎನ್‌ಎಚ್‌-75 ಹೆದ್ದಾರಿಯಲ್ಲಿ ಮತ್ತೆ ಜಗಳ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Continue Reading

Hassan

ಮರ ಕಡಿಯುವ ವೇಳೆ ಮರ ಬಿದ್ದು ವ್ಯಕ್ತಿ ಸಾ*ವು

Published

on

ವರದಿ:  ಸತೀಶ್ ಚಿಕ್ಕಕಣಗಾಲು

ಆಲೂರು: ಮರ ಕಡಿಯುವ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ದಾಟೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಮರ ಕಡಿಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ನಾಗಪ್ಪ ಅವರು, ಹೊಸಕೋಟೆಯ ಗುರುಪಾದಪ್ಪ ಅವರ ಕಾಫಿ ತೋಟದಲ್ಲಿ ಮರಕಟ್ಟು ಮಾಡುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಮರ ಕಡಿಯುವ ವೇಳೆ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಆಲೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪ್ರಕರಣವನ್ನು ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Continue Reading

Hassan

ಹಿರಿಯ ಪತ್ರಕರ್ತ ಜಯಕುಮಾರ್ ನಿಧನ

Published

on

ಅರಕಲಗೂಡು: ತಾಲ್ಲೂಕಿನ ಹಿರಿಯ ಪತ್ರಕರ್ತರು ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷರಾದ ಜಯಕುಮಾರ್ (59) ಅವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು.

ಜಯಕುಮಾರ್ ಅವರು ಜನಮಿತ್ರ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಕುಟುಂಬಕ್ಕೆ ಮಾತ್ರವಲ್ಲದೆ, ಅರಕಲಗೂಡು ತಾಲ್ಲೂಕಿನ ಪತ್ರಿಕೋದ್ಯಮ ಕ್ಷೇತ್ರಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದೆ.

Continue Reading

Trending

error: Content is protected !!