Kodagu
ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಗೆ ಶೀಘ್ರ ಮುಕ್ತಿ ! ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ತಡೆಗೋಡೆ ಪರಿಶೀಲನೆ

ಮಡಿಕೇರಿ : ಕಳೆದ ವಿಧಾನ ಸಭಾ ಚುನಾವಣೆ ಸಂಧರ್ಭದಲ್ಲಿ ಬಹು ಸದ್ದು ಮಾಡಿದ ಕೊಡಗು ಜಿಲ್ಲಾಡಳಿತ ಕಛೇರಿ (ಮಡಿಕೇರಿ ಡಿ.ಸಿ.ಕಛೇರಿ ತಡೆಗೋಡೆ) ತಡೆಗೋಡೆಗೆ ಮುಕ್ತಿ ಸಿಗಲಿದ್ದು, ಸರಕಾರ ಹೊಸ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ತಡೆಗೋಡೆ ಕೆಡವಲು ಕ್ಷಣಗಣನೆ ಆರಂಭಗೊAಡಿದ್ದು, ಮಾ. ೧೪ ರಂದು ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಸಮಿತಿ ಸದಸ್ಯರು ತಡೆಗೋಡೆಯ ಪರಿಶೀಲನೆ ನಡೆಸಲಿದ್ದಾರೆ.
ಏಳು ಕೋಟಿ ವೆಚ್ಚದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ನಡೆದ ತಡೆಗೋಡೆ ಕಾಮಗಾರಿ ಕಳಪೆ ಕಾಮಗಾರಿಯಾಗಿದೆ ಎಂದು ಅಂದಿನ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಆರೋಪ ನಡೆಸಿ ಹೋರಾಟ ಮಾಡಿತ್ತು.
ಅಂದು ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದ ಎ.ಎಸ್.ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ತಮ್ಮ ಚುನಾವಣೆ ಪ್ರಚಾರದಲ್ಲಿ ಅವೈಜ್ಞಾನಿಕವಾಗಿರುವ ಈ ಜರ್ಮನ್ ಟೆಕ್ನಾಲಜಿಯ ತಡೆಗೋಡೆಯನ್ನು ಕೆಡವಿ ಇಂಡಿಯನ್ ಟೆಕ್ನಾಲಜಿಯ ಸುಭದ್ರ ತಡೆಗೋಡೆ ನಿರ್ಮಿಸುವುದಾಗಿ ಜನತೆಗೆ ಭರವಸೆ ನೀಡಿದ್ದರು. ತದನಂತರ ಚುನಾವಣೆ ನಡೆದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಡಾ ಮಂತರ್ ಗೌಡ ಹಾಗೂ ಪೊನ್ನಣ್ಣ ಶಾಸಕರುಗಳಾಗಿ ಆಯ್ಕೆಯಾದರು.
ತಡೆಗೋಡೆ ನಿರ್ವಹಣೆ ಹೊತ್ತ ಇಂಜಿನಿಯರ್ ಅಮಾನತ್ತಿಗೆ ಒಳಗಾದರೆ ಈ ಕಾಮಗಾರಿಗೆ ಸಂಬAಧಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸೂಪರಿಂಟೆAಡೆAಟ್ ಇಂಜಿನಿಯರ್, ಚೀಫ್ ಇಂಜಿನಿಯರ್ ವರ್ಗಾವಣೆ ಶಿಕ್ಷೆಗೆ ಒಳಪಟ್ಟರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಪ್ರಥಮ ಅಧಿವೇಶನದಲ್ಲಿ ಡಿ.ಸಿ.ಕಛೇರಿ ತಡೆಗೋಡೆ ಅವೈಜ್ಞಾನಿಕವಾಗಿದ್ದು ಯಾವತ್ತಾದರೂ ಬಿದ್ದು ಅನಾಹುತ ಸಂಭವಿಸಲಿರುವುದರಿAದ ಸುಭದ್ರ ತಡೆಗೋಡೆ ನಿರ್ಮಾಣಕ್ಕೆ ಸದನದಲ್ಲಿ ಒತ್ತಾಯಿಸಿದ್ದರು. ಈಗ ಡಾ. ಮಂತರ್ ಒತ್ತಡದಿಂದ ಸರ್ಕಾರ ನವೀನ ತಂತ್ರಜ್ಞಾನವನ್ನು ಉಪಯೋಗಿಸಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ಉಪ ವಿಧಾನ ಸಭಾ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಈ ತುಕಾರಾಮ್, ಎ.ಮಂಜು, ಸುರೇಶ್ ಬಾಬು ತಂಡ ಮಾ.೧೪ ರಂದು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಲಿದ್ದಾರೆ.
ಬಾಕ್ಸ್
ಜರ್ಮನ್ ತಂತ್ರಜ್ಞಾನ ಅನುಸರಿಸಿ ನಿರ್ಮಿಸಲಾದ ಬೃಹತ್ ತಡೆಗೋಡೆ ಕಾಮಗಾರಿ ಪೂರ್ಣಗೊಳ್ಳುದರ ಒಳಗಾಗಿಯೇ ಅಪಾಯದ ಮುನ್ಸೂಚನೆ ನೀಡಿತ್ತು. ಬರೆಗೆ ಅಡ್ಡಲಾಗಿ ಮಳೆ ನೀರು ನುಗ್ಗದಂತೆ ಹೊದಿಸಿದ್ದ ಟಾರ್ಪಲ್ ಅಲ್ಲಲ್ಲಿ ಕಿತ್ತು ಮಣ್ಣು ಜರಿಯಲಾರಂಭಿಸಿ ಆತಂಕ ಸೃಷ್ಟಿ ಮಾಡಿತ್ತು. ನೂತನ ತಂತ್ರಜ್ಞಾನ ಹೆದ್ದಾರಿಗೆ ರಕ್ಷಣೆ ನೀಡಲಿದೆ ಎಂದು ಭಾವಿಸಲಾಗಿತ್ತು. ಆದರೆ ನಿರೀಕ್ಷೆ ಹುಸಿ ಆಗಿ ಮಳೆಗಾಲದಲ್ಲಿಯೇ ಉಬ್ಬು ಹಾಗೂ ಬಿರುಕು ಕಾಣತೊಡಗಿತ್ತು.
Kodagu
ಡಾ.ಬಿ.ಆರ್.ಅಂಬೇಡ್ಕರ್ ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ: ವೆಂಕಟ್ ರಾಜಾ
ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು.

ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು.
ಅಂಬೇಡ್ಕರ್ ಅವರ ಮೌಲ್ಯಗಳು ಹಾಗೂ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅವರು ಬರೆದಿರುವ ಸಂವಿಧಾನವನ್ನು ಸ್ಮರಿಸಿಕೊಂಡು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ನಡೆದುಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಅವರು ಮಾತನಾಡಿ, ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಎಂದರು.
ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
Kodagu
ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
ಮಡಿಕೇರಿ: ಪತ್ತ್ಕಟ್ಟ್ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ’ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು.

ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು.
1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ ದೇವಟ್ ಪರಂಬು ದಾಳಿಯಿಂದಾದ ಕೊಡವ ನರಮೇಧದ ಪರಿಣಾಮ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಕೊಡವ ಯೋಧರು ಭಾಗವಹಿಸಲು ಕಾರಣವಾಯಿತು. ವೀರ ಕೊಡವರ ಶೌರ್ಯವನ್ನು ಗೌರವಿಸುವುದಕ್ಕಾಗಿ ’ಪುತ್ತರಿ ನಮ್ಮೆ’ಯ ಪ್ರಯುಕ್ತ ಹಿತಿಯರನ್ನು ಸ್ಮರಿಸಲಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್, ಚಂಬಂಡ ಜನತ್, ಕಿರಿಯಮಾಡ ಶೆರಿನ್, ಪಾರ್ವಂಗಡ ನವೀನ್, ಕಿರಿಯಮಾಡ ಶಾನ್, ಮದ್ರಿರ ಕರುಂಬಯ್ಯ, ಅಪ್ಪೆಯಂಗಡ ಮಾಲೆ ಪೂಣಚ್ಚ ಹಾಗೂ ಚೊಕ್ಕಂಡ ಕಟ್ಟಿ ಪಾಲ್ಗೊಂಡಿದ್ದರು.
Kodagu
ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
ಮಡಿಕೇರಿ : ತಾಲೂಕು ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
ಬಳಿಕ ಶಾಸಕರ ಅನುದಾನದ 25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕೇರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತುರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ, ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು.
-
State21 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan18 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan21 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya16 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur24 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan22 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore21 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore15 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
