Kodagu
ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಗೆ ಶೀಘ್ರ ಮುಕ್ತಿ ! ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ತಡೆಗೋಡೆ ಪರಿಶೀಲನೆ

ಮಡಿಕೇರಿ : ಕಳೆದ ವಿಧಾನ ಸಭಾ ಚುನಾವಣೆ ಸಂಧರ್ಭದಲ್ಲಿ ಬಹು ಸದ್ದು ಮಾಡಿದ ಕೊಡಗು ಜಿಲ್ಲಾಡಳಿತ ಕಛೇರಿ (ಮಡಿಕೇರಿ ಡಿ.ಸಿ.ಕಛೇರಿ ತಡೆಗೋಡೆ) ತಡೆಗೋಡೆಗೆ ಮುಕ್ತಿ ಸಿಗಲಿದ್ದು, ಸರಕಾರ ಹೊಸ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ತಡೆಗೋಡೆ ಕೆಡವಲು ಕ್ಷಣಗಣನೆ ಆರಂಭಗೊAಡಿದ್ದು, ಮಾ. ೧೪ ರಂದು ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಸಮಿತಿ ಸದಸ್ಯರು ತಡೆಗೋಡೆಯ ಪರಿಶೀಲನೆ ನಡೆಸಲಿದ್ದಾರೆ.
ಏಳು ಕೋಟಿ ವೆಚ್ಚದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ನಡೆದ ತಡೆಗೋಡೆ ಕಾಮಗಾರಿ ಕಳಪೆ ಕಾಮಗಾರಿಯಾಗಿದೆ ಎಂದು ಅಂದಿನ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಆರೋಪ ನಡೆಸಿ ಹೋರಾಟ ಮಾಡಿತ್ತು.
ಅಂದು ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದ ಎ.ಎಸ್.ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ತಮ್ಮ ಚುನಾವಣೆ ಪ್ರಚಾರದಲ್ಲಿ ಅವೈಜ್ಞಾನಿಕವಾಗಿರುವ ಈ ಜರ್ಮನ್ ಟೆಕ್ನಾಲಜಿಯ ತಡೆಗೋಡೆಯನ್ನು ಕೆಡವಿ ಇಂಡಿಯನ್ ಟೆಕ್ನಾಲಜಿಯ ಸುಭದ್ರ ತಡೆಗೋಡೆ ನಿರ್ಮಿಸುವುದಾಗಿ ಜನತೆಗೆ ಭರವಸೆ ನೀಡಿದ್ದರು. ತದನಂತರ ಚುನಾವಣೆ ನಡೆದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಡಾ ಮಂತರ್ ಗೌಡ ಹಾಗೂ ಪೊನ್ನಣ್ಣ ಶಾಸಕರುಗಳಾಗಿ ಆಯ್ಕೆಯಾದರು.
ತಡೆಗೋಡೆ ನಿರ್ವಹಣೆ ಹೊತ್ತ ಇಂಜಿನಿಯರ್ ಅಮಾನತ್ತಿಗೆ ಒಳಗಾದರೆ ಈ ಕಾಮಗಾರಿಗೆ ಸಂಬAಧಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸೂಪರಿಂಟೆAಡೆAಟ್ ಇಂಜಿನಿಯರ್, ಚೀಫ್ ಇಂಜಿನಿಯರ್ ವರ್ಗಾವಣೆ ಶಿಕ್ಷೆಗೆ ಒಳಪಟ್ಟರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಪ್ರಥಮ ಅಧಿವೇಶನದಲ್ಲಿ ಡಿ.ಸಿ.ಕಛೇರಿ ತಡೆಗೋಡೆ ಅವೈಜ್ಞಾನಿಕವಾಗಿದ್ದು ಯಾವತ್ತಾದರೂ ಬಿದ್ದು ಅನಾಹುತ ಸಂಭವಿಸಲಿರುವುದರಿAದ ಸುಭದ್ರ ತಡೆಗೋಡೆ ನಿರ್ಮಾಣಕ್ಕೆ ಸದನದಲ್ಲಿ ಒತ್ತಾಯಿಸಿದ್ದರು. ಈಗ ಡಾ. ಮಂತರ್ ಒತ್ತಡದಿಂದ ಸರ್ಕಾರ ನವೀನ ತಂತ್ರಜ್ಞಾನವನ್ನು ಉಪಯೋಗಿಸಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ಉಪ ವಿಧಾನ ಸಭಾ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಈ ತುಕಾರಾಮ್, ಎ.ಮಂಜು, ಸುರೇಶ್ ಬಾಬು ತಂಡ ಮಾ.೧೪ ರಂದು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಲಿದ್ದಾರೆ.
ಬಾಕ್ಸ್
ಜರ್ಮನ್ ತಂತ್ರಜ್ಞಾನ ಅನುಸರಿಸಿ ನಿರ್ಮಿಸಲಾದ ಬೃಹತ್ ತಡೆಗೋಡೆ ಕಾಮಗಾರಿ ಪೂರ್ಣಗೊಳ್ಳುದರ ಒಳಗಾಗಿಯೇ ಅಪಾಯದ ಮುನ್ಸೂಚನೆ ನೀಡಿತ್ತು. ಬರೆಗೆ ಅಡ್ಡಲಾಗಿ ಮಳೆ ನೀರು ನುಗ್ಗದಂತೆ ಹೊದಿಸಿದ್ದ ಟಾರ್ಪಲ್ ಅಲ್ಲಲ್ಲಿ ಕಿತ್ತು ಮಣ್ಣು ಜರಿಯಲಾರಂಭಿಸಿ ಆತಂಕ ಸೃಷ್ಟಿ ಮಾಡಿತ್ತು. ನೂತನ ತಂತ್ರಜ್ಞಾನ ಹೆದ್ದಾರಿಗೆ ರಕ್ಷಣೆ ನೀಡಲಿದೆ ಎಂದು ಭಾವಿಸಲಾಗಿತ್ತು. ಆದರೆ ನಿರೀಕ್ಷೆ ಹುಸಿ ಆಗಿ ಮಳೆಗಾಲದಲ್ಲಿಯೇ ಉಬ್ಬು ಹಾಗೂ ಬಿರುಕು ಕಾಣತೊಡಗಿತ್ತು.
Kodagu
ಸುಂಟ್ಟಿಕೊಪ್ಪ: ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ?

ಮಡಿಕೇರಿ: ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಮುಂದಿನ ಮೂರು ದಿನಗಳೊಳಗೆ, ತಮ್ಮ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಅನೂಪ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅನೂಪ್ ಕುಮಾರ್, ನಾನು ಕಳೆದ ಹಲವು ವರ್ಷಗಳಿಂದ ಯುವ ಕಾಂಗ್ರೆಸ್ ಕಾರ್ಯರ್ತನಾಗಿ ನಂತರ ಸುಂಟಿಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದೇನೆ. ಅದಲ್ಲದೇ ಸುಂಟಿಕೊಪ್ಪ ಭಾಗದಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದು ಯುವ ಕಾಂಗ್ರೆಸ್ ಬಲಪಡಿಸುವ ಕೆಲಸ ಮಾಡಿದ್ದೇನೆ.
ಆದರೆ ಕಿಡಿಗೇಡಿಗಳ ಗುಂಪೊಂದು ನನ್ನ ಮೇಲೆ ಹಲ್ಲೆ ಮಾಡಿದ ಸಂದರ್ಭ, ಸುಂಟಿಕೊಪ್ಪ ಠಾಣೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಲತೀಫ್ ಸುಂಟಿಕೊಪ್ಪ ಮತ್ತು ಸಿಸಿಬಿ ವಿರಾಜಪೇಟೆ ತಂಡದ ಯುವಕರು ಹೊರತುಪಡಿಸಿ ಯಾರು ಕೂಡ ನನ್ನ ಬೆಂಬಲಕ್ಕೆ ನಿಂತಿಲ್ಲ.
ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಸುಂಟ್ಟಿಕೊಪ್ಪ ನಗರ ಕಾಂಗ್ರೆಸ್ ನಾಯಕರ ಗಮನಕ್ಕೆ ತಂದರು ಕೂಡ, ನನ್ನ ಬೆಂಬಲಕ್ಕೆ ನಿಲ್ಲದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅನೂಪ್ ಕುಮಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರ ಈ ಧೋರಣೆಯಿಂದ ಬೇಸತ್ತು ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮುಂದಿನ ಮೂರು ದಿನಗಳಲ್ಲಿ ನಿರ್ಧಾರ ತಿಳಿಸುವುದಾಗಿ ಅನೂಪ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಅನೂಪ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಜನಸೇವೆಗೆ ಸದಾ ಸಿದ್ಧನಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡಿದ್ದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ಸ್ಪರ್ಧಿಸಿದ್ದರು. ಅದಲ್ಲದೇ ಅನೂಪ್ ಕುಮಾರ್ ಅವರ ಗೆಲುವು ಕೂಡ ಬಹುತೇಕ ಖಚಿತಗೊಂಡಿತ್ತು. ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುವ ಮುನ್ನ ಅನೂಪ್ ಕುಮಾರ್ ಅವರ ರಾಜೀನಾಮೆ ನೀಡಲು ಮುಂದಾಗಿರುವುದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.
ಸುಂಟಿಕೊಪ್ಪ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅನೂಪ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದರು.
Kodagu
ಅಡ್ಮಿನ್ಗಳ ವಿರುದ್ಧ ಕಾಂಗ್ರೆಸ್ ದೂರು: ಬಿಜೆಪಿ ತೀವ್ರ ಅಸಮಾಧಾನ

ಮಡಿಕೇರಿ: ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಗ್ರೂಪ್ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ನೀಡಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ದೇಶದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇದನ್ನು ಮನಗಂಡು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು” ಎಂಬ ವಾಟ್ಸ್ಆಪ್ ಗ್ರೂಪ್ ನಲ್ಲಿ ಚರ್ಚೆ ನಡೆದಿದೆ. ಶೌಚಾಲಯದ ಫೋಟೋಕ್ಕೆ ಸ್ಥಳೀಯ ಶಾಸಕರ ಫೋಟೋವನ್ನು ಎಡಿಟ್ ಮಾಡಿ ಹಾಕಿದರು ಎಂಬ ಕಾರಣಕ್ಕೆ ವಾಟ್ಸ್ಆಪ್ ಗ್ರೂಪ್ ನ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರಕರಣ ದಾಖಲಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡದೆ ಇದ್ದಾಗ ಆ ಕ್ಷೇತ್ರದ ಶಾಸಕರ ಗಮನಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಶಾಸಕರು ಸಮಸ್ಯೆಯ ಬಗ್ಗೆ ಗಮನಹರಿಸಿ ಶೌಚಾಲಯವನ್ನು ಶುಚಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕಾಗಿತ್ತು. ಶಾಸಕರ ಫೋಟೋ ಹಾಕಿದ್ದರಿಂದ ತೇಜೋವಧೆ ಆಗಿದ್ದರೆ ಪ್ರಕರಣ ದಾಖಲಿಸಲಿ. ಅದನ್ನು ಬಿಟ್ಟು ಚರ್ಚೆ ಮಾಡಿದ ಗ್ರೂಪ್ ಅಡ್ಮಿನ್ ಗಳ ವಿರುದ್ಧವೇ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿರುವುದು ಸರಿಯಲ್ಲವೆಂದು ಹೇಳಿದ್ದಾರೆ.
ಆಡಳಿತ ಪಕ್ಷ ಪೊಲೀಸ್ ಇಲಾಖೆಯನ್ನು ತಮ್ಮ ಪರ ಕೆಲಸ ಮಾಡುವಂತೆ ಒತ್ತಾಯಿಸಿ ಈ ರೀತಿ ಪ್ರಕರಣ ದಾಖಲು ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರು ಕೂಡ ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸದೆ ಕಾನೂನಿಗೆ ಗೌರವ ನೀಡಿ ಕರ್ತವ್ಯ ನಿರ್ವಹಿಸಬೇಕೆಂದು ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.
Kodagu
ತಾಳತ್ತಮನೆ : ಫೆ.11 ಮತ್ತು 12 ರಂದು ಶ್ರೀ ದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

ಮಡಿಕೇರಿ: ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ, ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.11 ಮತ್ತು 12 ರಂದು ನಡೆಯಲಿದೆ.
ದೇವಾಲಯದಲ್ಲಿ ಎರಡು ದಿನಗಳ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ.
ಫೆ.11 ರಂದು ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ಸಂಜೆ 6 ಗಂಟೆಗೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ.
ಫೆ.12 ರಂದು ಬೆಳಿಗ್ಗೆ 10 ಗಂಟೆಯಿAದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 4.30 ಗಂಟೆಗೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, ಸಂಜೆ 6 ಗಂಟೆಗೆ ರಂಗಪೂಜೆ, 7 ಗಂಟೆಯಿAದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದೆ.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ