Connect with us

Politics

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಳಗಾವಿ, ಡಿ. 24

“ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಕೇಳಿದಾಗ, “ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ” ಎಂದು ತಿಳಿಸಿದರು.

“ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು” ಎಂದು ತಿಳಿಸಿದರು.

“ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ” ಎಂದು ಹೇಳಿದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಮಂಗಳವಾರ (ಇಂದು) ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮಗಳ ವಿವರದ ಬಗ್ಗೆ ಕೇಳಿದಾಗ, “26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ” ಎಂದು ತಿಳಿಸಿದರು.

Continue Reading

Politics

ಡಿಕೆ ಬ್ರದರ್ಸ್‌ಗೆ ನೋಟಿಸ್‌ ಜಾರಿ ಮಾಡಿದ ದೆಹಲಿ ಪೊಲೀಸರು

Published

on

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಅವರ  ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

Continue Reading

Politics

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Published

on

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್ ಕಾಂಗ್ರೆಸ್ ಹೈಕಮಾಂಡ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು  ಸಿಎಂ ಮತ್ತು ವೇಣುಗೋಪಾಲ್ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದಿನ ರಾಜ್ಯದ ಗೊಂದಲಕ್ಕೆ ಎಐಸಿಸಿ ಅಧ್ಯಕ್ಷರು ಎಲ್ಲರನ್ನು ಕರೆದು ಮಾತುಕತೆ ಮಾಡಿ ನನ್ನಿಂದ ಏನು ಆಗಲ್ಲವೆಂದು ದೆಹಲಿ ಹೋಗಿದ್ದರು. ನನ್ಮ ಕೈಯಲ್ಲಿ ಏನು ಇಲ್ಲ, ಹೈಕಮಾಂಡ್ ಗಮನಕ್ಕೆ ತರುತ್ತೇನೆಂದು ಹೋದರು. ಯಾಕೆ ಮಲ್ಲಿಕಾರ್ಜುನ ಖರ್ಗೆ ಹೀಗೆ ಮಾತಾಡಿದರೆಂದು ರಾಜ್ಯದ ಜನರಿಗೆ ಗೊಂದಲ ಆಗಿತ್ತು. ಈಗ ಆ ಗೊಂದಲ ಏನೆಂದು ಕ್ಲಿಯರ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಯಾರು ಅಂದರೆ ವೇಣುಗೋಪಾಲ್ ಎಂದು ಗೊತ್ತಾಯಿತು. ಎಐಸಿಸಿ ಅಧ್ಯಕ್ಷರಿಗಿಂತ ವೇಣುಗೋಪಾಲ್ ದೊಡ್ಡವರೆಂದು ಗೊತ್ತಾಯಿತ್ತೆಂದು ಎಂದು ವ್ಯಂಗ್ಯ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಗೂ ವೇಣುಗೋಪಾಲ್ ಹೈಕಮಾಂಡ್ ಆಗಿದ್ದಾರೆ. ಇದು ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಗೊತ್ತಾಯ್ತು. ಯಾವುದೋ ಒಬ್ಬ ವ್ಯಕ್ತಿ ಕೈಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೆ ಎಂದು ವಾಗ್ದಾಳಿ ನಡೆಸಿದರು.

ಈ ದೇಶ ನಡೆಸೋ ಕಾಂಗ್ರೆಸ್ ಕೈಯಲ್ಲಿ ಇವತ್ತು ಬಂಡವಾಳ ಇಲ್ಲ. ಬಂಡವಾಳಕ್ಕೆ ಇರೋ ಒಂದೇ ಒಂದು ರಾಜ್ಯ ಕರ್ನಾಟಕ. ವೇಣುಗೋಪಾಲ್ ಅಲ್ಲಿ ಕುಳಿತು ಕಾಂಗ್ರೆಸ್‌ನಲ್ಲಿ ಇರೋ 2-3 ಗುಂಪುಗಳನ್ನು ಕರೆಯುತ್ತಿದ್ದಾರೆ. ಯಾವ ಗುಂಪು ಎಷ್ಟು ಬಾಳಿಕೆ ಬರುತ್ತದೆಂದು ವೇಣುಗೋಪಾಲ್ ನೋಡುತ್ತಿದ್ದಾರೆ. ಕಾಂಗ್ರೆಸ್‌ಗೆ ಮೊದಲು ಎಟಿಎಂ ಲೀಡರ್ ಬೇರೆ ಇದ್ದರು. ಆ ಜನರಲ್ ಸೆಕ್ರೆಟರಿ ಬೇರೆ. ಹೈಕಮಾಂಡ್ ಜನರಲ್ ಸೆಕ್ರೆಟರಿ ವೇಣುಗೋಪಾಲ್. ಇವರು ಯರ‍್ಯಾರು ಎಷ್ಟಕ್ಕೆ ಬಾಳುತ್ತೀರಾ. ನೀವು ಎಷ್ಟಕ್ಕೆ ಬಾಳುತ್ತೀರಾ ಅಂತ ಇಬ್ಬರನ್ನು ತೂಕ ಮಾಡೋ ಸ್ಥಿತಿಗೆ ಬಂದಿದೆ. ರಾಜ್ಯದ ಹಿತ ಮರೆತು ಅಧಿಕಾರ ಉಳಿಯೋಕೆ,  ಕುರ್ಚಿ ಉಳಿಸಿಕೊಳ್ಳಬೇಕೆಂದು ಸಿಎಂ-ಡಿಸಿಎಂ ಪೈಪೋಟಿಗೆ ಬಿದ್ದು ರಾಜ್ಯದ ಸ್ಥಿತಿ ಗಂಭೀರ ಮಾಡಿದ್ದಾರೆ ಎಂದು ಸಿಎಂ, ಡಿಸಿಎಂ ಮತ್ತು ಕಾಂಗ್ರೆಸ್‌ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅನೇಕ ಸಮಸ್ಯೆ ಇದೆ, ರೈತರ ಬಗ್ಗೆ ದಲಿತರ ಬಗ್ಗೆ ಕೇಳೋರು ಇಲ್ಲ. ದಲಿತರ ಯೋಗ ಕ್ಷೇಮ ಈ ಸರ್ಕಾರ ನೋಡಿಲ್ಲ. ಕಾಂಗ್ರೆಸ್‌ನಲ್ಲಿರೋ ದಲಿತ ಲೀಡರ್‌ಗಳಿಗೂ ಕಾಂಗ್ರೆಸ್ ಉಳಿಯೋದು ಮುಖ್ಯ. ದಲಿತ ಸಮುದಾಯ ಉಳಿಯೋದು ಮುಖ್ಯ ಅಲ್ಲ. ಅಧಿವೇಶನ 8 ರಿಂದ ಪ್ರಾರಂಭ ಆಗುತ್ತಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡೋಕೆ ಅಧಿವೇಶನ ಮಾಡುತ್ತೇವೆ. ಆದರೆ ಈಗಾಗಲೇ 31 ಬಿಲ್‌ಗಳು ಇವೆ. ಈಗ ಮತ್ತೆ 22 ಹೊಸ ಬಿಲ್‌ಗಳು ಇವೆಂದು ಹೇಳುತ್ತಿದ್ದಾರೆ. ಇದು ಬಿಲ್ ಪಾಸ್ ಅಧಿವೇಶನಾ ಎಂದು ಪ್ರಶ್ನೆ ಮಾಡಿದ್ದಾರೆ.

ಸದನ ನಡೆಯೋದೆ 8-9 ದಿನ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಇಲ್ಲ. ರಾಜು ಕಾಗೆ ಪ್ರತ್ಯೇಕ ರಾಜ್ಯ ಬೇಕು ಅಂತ ಕೇಳುತ್ತಿದ್ದಾರೆ. ನಿಮ್ಮದೇ ಶಾಸಕರು. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು. ಕಾಂಗ್ರೆಸ್ ದೇಶ, ರಾಜ್ಯ ಒಡೆಯೋದ್ರಲ್ಲಿ ನಿಪುಣರು. ಯುಪಿ, ಛತ್ತೀಸ್‌ಗಢ, ಆಂಧ್ರ ಪ್ರದೇಶ ಒಡೆದರು. ಈಗ ಕರ್ನಾಟಕ ಒಡೆಯೋಕೆ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಈ ಬಿಲ್ ಪಾಸ್ ಮಾಡೋಕೆ ವಿಶೇಷ ಅಧಿವೇಶನ ಕರೆಯಿರಿ. ಆದರೆ ಬೆಂಗಳೂರಿಗೆ ಸಂಬಂಧಿಸಿದ ಬಿಲ್ ಬೆಳಗಾವಿಯಲ್ಲಿ ಮಾಡೋದು ಸರಿಯಲ್ಲ ಎಂದರು.

ಸಚಿವ ಹೆಚ್‌.ಕೆ. ಪಾಟೀಲ್‌ರನ್ನು ಏನೋ ಅಂದುಕೊಂಡಿದ್ದೆ. ಉತ್ತರ ಕರ್ನಾಟಕ ಭಾಗದ ನಾಯಕರಾಗಿ ಅವರು ಆ ಭಾಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಹೀಗೆ ತಾರತಮ್ಯ ಆಗೋಕೆ ಉತ್ತರ ಕರ್ನಾಟಕದ ನಾಯಕರೇ ಕಾರಣ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಯಾಕೆ ಹಿಂದುಳಿದಿದೆ? ಅಲ್ಲಿಯವರೇ ಸಿಎಂ ಆಗಿದ್ದರು ಯಾಕೆ ಅಭಿವೃದ್ಧಿ ಆಗಿಲ್ಲ? ತಾರತಮ್ಯ ಮಾಡೋರಿಗೆ ತಕ್ಕ ಪಾಠ ಕಲಿಸೋ ಕೆಲಸ ಮಾಡಬೇಕು ಎಂದು ಹೇಳಿದರು.

Continue Reading

Politics

ನವೆಂಬರ್‌ ಕ್ರಾಂತಿ ಹೈಕಮಾಂಡ್‌ ಬಿಡಲ್ಲ: ಸತೀಶ್‌ ಜಾರಕಿಹೊಳಿ

Published

on

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ, ಹಾಗೇ ಮಾಡಲು  ಹೈಕಮಾಂಡ್ ಬಿಡಲ್ಲ ಎಂದು  ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನವೆಂಬರ್ ಕ್ರಾಂತಿ ಆಗಲ್ಲ  ಕ್ರಾಂತಿ ಆಗಲು 20 ರಿಂದ 30 ದಿನ ಇದೆ. ಏನಾಗುತ್ತದೆ ಎಂದು ನೋಡೋಣ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ಲ ಹೈಕಮಾಂಡ್‌ ಹಾಗೇ ಮಾಡಲು ಬಿಡಲ್ಲ ಎಂದು ಹೇಳಿದರು.

ಏಕನಾಥ್ ಶಿಂಧೆ ಒಬ್ಬರೇ,  ಪವಾರ್ ಒಬ್ಬರೇ ಇನ್ನೊಬ್ಬ ಶಿಂಧೆ,  ಪವರ್ ಹುಟ್ಟಿಕೊಳ್ಳಲು ಆಗಲ್ಲ ಎಂದರು.

ದಲಿತ ಸಿಎಂ  ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಅವಕಾಶ ಬರುವವರೆಗೆ ಕಾಯಬೇಕು. ಈಗಂತೂ ಅವಕಾಶ ಇಲ್ಲ ಸಮಯಕ್ಕಾಗಿ ಕಾಯಬೇಕು. ಅವಕಾಶ  ಸೃಷ್ಠಿಯಾಗಬೇಕು. ಅಲ್ಲಿವರೆಗೆ ಕಾಯಬೇಕು ಎಂದರು.

Continue Reading

Trending

error: Content is protected !!