Connect with us

State

ಸರ್ಕಾರಿ ಶಾಲೆಯಲ್ಲಿ ಓದಿ SSLC ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಅಂಕಿತಾ 5 ಲಕ್ಷ, 3ನೇ ಸ್ಥಾನ ಪಡೆದ ನವನೀತ್ ಗೆ 2 ಲಕ್ಷ ರೂ. ಉಡುಗೊರೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು, ಮೇ 14:

ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3 ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10 ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

State

ಬೆಂಗಳೂರು ಅರಮನೆ ಮೈದಾನದ ಜಾಗಕ್ಕೆ ಟಿ.ಡಿ.ಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ: ಎಚ್.ಕೆ ಪಾಟೀಲ

Published

on

ಬೆಂಗಳೂರು: ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.

ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8 ಮತ್ತು 9ರಲ್ಲಿ ರೂ.11.00 ಕೋಟಿಗಳನ್ನು ನಿಗದಿಗೊಳಿಸಲಾಗಿತ್ತು.13-3-1997 ರಂದು ಸದರಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿಹಿಡಿದಿರುತ್ತದೆ. 27 ವರ್ಷಗಳ ನಂತರ ಈ ವ್ಯಾಜ್ಯ ಮುಂಚೂಣಿಗೆ ಬಂದಿದ್ದು, 1996 ರಲ್ಲಿ 472 ಎಕರೆ 16 ಗುಂಟೆ ಜಾಗಕ್ಕೆ ರೂ.11.00 ಕೋಟಿಗಳನ್ನು (ಪ್ರತಿ ಎಕರೆಗೆ 2.30ಲಕ್ಷ ರೂ. ಅಂದಾಜು ಮೊತ್ತ)ನಿಗದಿಗೊಳಿಸಲಾಗಿತ್ತು. 1996ರ ಈ ಕಾಯ್ದೆಗೆ ಮಾನ್ಯ ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಆದರೆ, ದಿನಾಂಕ: 10.12.2024ರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತುಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ ರೂ.3014.00 ಕೋಟಿ ಅಂದರೆ ಪ್ರತಿ ಎಕರೆಗೆ ರೂ.200.00 ಕೋಟಿ ನೀಡಿದರೆ ಆರ್ಥಿಕ ಪರಿಸ್ಥಿತಿ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ. 1996ರ ಕಾಯ್ದೆಗೆ ಪೂರಕವಾದ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲರಿಗೆ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವರು ತಿಳಿಸಿದರು.

ಮಾರುಕಟ್ಟೆ ಮೊತ್ತ ಒಂದು ಕಡೆಯಾದರೆ, ಸರ್ಕಾರ ಈಗಾಗಲೇ ಪಡೆದಿರುವುದಕ್ಕೆ ನಿಗದಿ ಮಾಡಿರುವ ಮೊತ್ತ ಬೇರೆಯಿದೆ. ಅಭಿವೃದ್ಧಿ ಕಾಮಗಾರಿಗಳು ಜಾರಿಯಲ್ಲಿರುವಾಗ ಈ ವ್ಯಾಜ್ಯದಿಂದ ಕರ್ನಾಟಕ ಸರ್ಕಾರ ಸುಮಾರು 3014 ಕೋಟಿ ರೂಪಾಯಿ ಗಳನ್ನು 15.36 ಗಂಟೆ ಭೂಮಿಗೆ ಕೊಡಬೇಕಾಗಿ ಬರುತ್ತದೆ. ಇದು ಅತ್ಯಂತ ಅವ್ಯವಹಾರಿಕ.ಇದನ್ನು ಜಾರಿ ಮಾಡಿದರೆ ಅಭಿವೃದ್ಧಿಗೆ ಗಂಡಾಂತರ ಬರಲಿದೆ. 3014 ಕೋಟಿ ಕಡಿಮೆ ಮೊತ್ತವಲ್ಲ. ಈ ಮೊತ್ತವನ್ನು ಕೊಡಲಾಗುವುದಿಲ್ಲವಾದ್ದರಿಂದ ಅರಮನೆಯ ಭೂಮಿಯನ್ನು ತೆಗೆದುಕೊಳ್ಳುವುದು ಅಥವಾ ಬಿಡುವುದರ ಬಗ್ಗೆ ಅಧ್ಯಾದೇಶದ ಮೂಲಕ ನಿರ್ಧಾರ ಮಾಡಲು ಅಧ್ಯಾದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಬೊಕ್ಕಸವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಿಂದೆ ಮಾಡಿರುವ ಕಾನೂನು ಅನ್ವಯ ಅದನ್ನು ಮುಂದುವರೆಸುವ ದೃಷ್ಟಿಯಿಂದ ಅಧ್ಯಾದೇಶ ಹೊರಡಿಸಿದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಕಾರ್ಯಕಲಾಪ ನಿರ್ಣಯಗಳ ಪ್ರಕಾರ ಯಾವುದಾದರೂ ನಿರ್ಣಯ ಅಥವಾ ಪ್ರಸ್ತಾವನೆಗಳನ್ನು .ನಮ್ಮ ನಿರ್ಧಾರ ರಾಜ್ಯ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ.

ಸುಗ್ರಿವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಮೊದಲು ಕೈಗೊಂಡ ಯಾವುದೇ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶ: ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಈ ಸುಗ್ರಿವಾಜ್ಞೆ ಅವಕಾಶ ಕಲ್ಪಿಸುತ್ತದೆ ಎಂದು ಸಚಿವರು ವಿವರಿಸಿದರು.

15 ಎಕರೆಗೆ 3000 ಕೋಟಿಗಳನ್ನು ಕೊಡಲು ಸಾಧ್ಯವಿಲ್ಲ. 11 ಎಕರೆ ಜಾಗವನ್ನು 1996ರಲ್ಲಿಯೇ ಕೋಟಿಗಳನ್ನು ಕೊಟ್ಟು ಪಡೆಯಲಾಗಿದೆ. ಈ ಸಮಸ್ಯೆಗಳು ವ್ಯಾಜ್ಯಗಳು ಪರಿಹಾರವಾಗದ ಕಾರಣ ಉಂಟಾಗಿದೆ. ಟಿ.ಡಿ.ಆರ್ ಕೊಡದಿರಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

2011ರಲ್ಲಿ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ಆಸ್ತಿಯ 15 ಎಕರೆ 39 ಗುಂಟೆ ಜಾಗವನ್ನು ಬಳಸಿಕೊಂಡು ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸುವ ಸಂಬಂಧ ಮಧ್ಯಂತರ ಅರ್ಜಿ ದಾಖಲಿಸಿದಾಗ ಸದರಿ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯವು 2014 ರಲ್ಲಿ ಟಿ.ಡಿ.ಆರ್ ನಿಯಮಗಳ ಪ್ರಕಾರ ಟಿ.ಡಿ.ಆರ್ ಷರತ್ತಿಗೊಳಪಡಿಸಿ, ಜಾಗವನ್ನು ಬಳಸಿಕೊಳ್ಳಲು ಅನುಮತಿ ನೀಡಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿಗದಿಪಡಿಸಿರುವ ಭೂಸ್ವಾಧಿನ ಮೊತ್ತವು ರಾಜ್ಯದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದ್ದು, ಆರ್ಥಿಕ ಶಿಸ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆರ್ಥಿಕ ಶಿಸ್ತಿನ ತತ್ವಗಳನ್ನು ಅನುಸರಿಸದೇ ಅಂತಹ ಮೂಲಸೌಕರ್ಯ ಯೋಜನೆಗಳ ಮೇಲೆ ನೀತಿ-ನಿರ್ಣಯಗಳನ್ನು ತೆಗೆದುಕೊಳ್ಳುವುದು ಕಷ್ಟಸಾಧ್ಯ. ನೀತಿ-ನಿಯಮಕ ವಿಷಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಿರ್ಧರಿಸುವಾಗ ರಾಜ್ಯದ ಆರ್ಥಿಕ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧುವಲ್ಲದ ಯಾವುದೇ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗೆ ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಿವಿಲ್ ಅಪಿಲ್ನಲ್ಲಿ ರಾಜ್ಯದ ಪರವಾಗಿ ಆದೇಶವಾದಲ್ಲಿ ಮಾರಾಟ ಅಥವಾ ಇನ್ನಾವುದೇ ರೀತಿಯಲ್ಲಿ ಬಳಕೆಯಾದ ಟಿ.ಡಿ.ಆರ್ ಗಳನ್ನು ಹಿಂಪಡೆಯಲಾಗಲೀ ಅಥವಾ ಮರುಪಡೆಯಲಾಗಲೀ ಅಸಾಧ್ಯವಾಗುವುದರಿಂದ ಸುಗ್ರಿವಾಜ್ಞೆಯ ಮೂಲಕ ಅಧಿಕಾರ ಪಡೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

• ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ:

“ಅಧ್ಯಾದೇಶಗಳು ಒಳಗೊಂಡಂತೆ ಶಾಸನಗಳ ಪ್ರಸ್ತಾವಗಳು, ಆದರೆ ಪೂರ್ಣವಾಗಿ ಔಪಚಾರಿಕ ಸ್ವರೂಪದ ಅಥವಾ ಅತೀ ಕಡಿಮೆ ಪ್ರಾಮುಖ್ಯತೆ ಹೊಂದಿರುವ ವಿಷಯಗಳೆಂದು ಮುಖ್ಯಮಂತ್ರಿಯವರು ಅಭಿಪ್ರಾಯ ಪಡುವ ಪ್ರಸ್ತಾವಗಳನ್ನು ಹೊರತುಪಡಿಸಿ” ಎಂಬ ನಿಯಮವನ್ನು ತಿದ್ದುಪಡಿ ಮಾಡಿ ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುತ್ತದೆ. ಇಂತಹ ಪ್ರಸ್ತಾವನೆಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡುತ್ತದೆ.

ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ಮೊತ್ತದ ಹಣ ಕೊಟ್ಟು ರಾಜ್ಯದ ಬೊಕ್ಕಸಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ನ್ಯಾಯಯುತವಾದ ಅಭಿವೃದ್ಧಿ ಕೆಲಸಗಳಾಗಲು ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಮುಖ್ಯಮಂತ್ರಿಗಳು ನಿರ್ಧಾರ ಮಾಡಿ ಬಿಲ್ ಅಥವಾ ಅಧ್ಯಾದೇಶ ಕಳಿಸುವ ಸಂದರ್ಭ ಬಂದಾಗ ಸಚಿವ ಸಚಿವ ಸಂಪುಟ ದಲ್ಲಿಟ್ಟು ನಂತರವೇ ಹೋಗಬೇಕಿತ್ತು. ರಾಜ್ಯಪಾಲರು ಮುಖ್ಯಮಂತ್ರಿಗಳ ಹಂತದಲ್ಲಿಯೇ ಆಗಬಹುದು ಎಂದಾದರೆ Transaction of Business Rules ನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಲಹೆ ಕೊಟ್ಟ ಮೇರೆಗೆ ವ್ಯವಹಾರ ಸುಗಮ ನಿರ್ವಹಣೆ -Transaction of Business Rules ನ್ನು ತಿದ್ದುಪಡಿ ಮಾಡಿ ಅದರ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ಸಭೆ
ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ನಾಳೆಯೇ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ. ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ. ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ನಾಳೆ ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದರು.

ರಾಜ್ಯಪಾಲರು ಹಲವಾರು ಬಿಲ್ಲುಗಳನ್ನು ಹಿಂತಿರುಗಿಸಿರುವ ಬಗ್ಗೆ ಸ್ಪಷ್ಟೀಕರಣ ನೀಡಲಾಗುವುದು ಎಂದು ಸಚಿವರು ಇದೆ ಸಂದರ್ಭದಲ್ಲಿ ತಿಳಿಸಿದರು.

Continue Reading

State

ಖೋ-ಖೋ ವಿಶ್ವಕಪ್‌ ವಿಜೇತೆ ಚೈತ್ರಾರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

Published

on

2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿದರು.ಸಚಿವರಾದ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Continue Reading

State

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ಗೆ ನಿರ್ಧಾರವೇ ಅಂತಿಮ ಎಂದ ಸಿದ್ದರಾಮಯ್ಯ

Published

on

ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ.

ನಿನ್ನೆಯಷ್ಟೇ ಡಿಸಿಎಂ ಡಿಕೆಶಿ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ತೀರ್ಮಾನವೇ ಅಂತಿಮ. ಈ ಬಗ್ಗೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ಅದೇ ಅಂತಿಮ ಎಂದರು.

ಇನ್ನು ನಿಗಮ ಹಾಗೂ ಮಂಡಳಿಗಳ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದ ದಿನದಿಂದಲೂ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

Continue Reading

Trending

error: Content is protected !!