Mandya
ಸಂಘಟನಾ ಚತುರ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ನಿಧನ

ಮಂಡ್ಯ: ಅತ್ಯಂತ ಸಂಘಟನಾ ಚತುರ ಹಾಗೂ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿ.ಕೆ.ರವಿಕುಮಾರ ಚಾಮಲಾಪುರ(53) ಅವರು ಸೋಮವಾರ ಬೆಳಿಗ್ಗೆ ನಿಧನರಾದರು, ಇವರಿಗೆ ಹಲವು ಜನಪ್ರತಿನಿಧಿಗಳು ಹಾಗೂ ಸಾಹಿತಿಗಳು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ಪತ್ನಿ ಚಂದ್ರಕಲಾ, ಪುತ್ರ ಸಿ.ಆರ್. ಚಂದನ್, ಪುತ್ರಿ ಸಿ.ಆರ್.ರಚನಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಇವರು,
ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಚಾಮಲಾಪುರ ಗ್ರಾಮದ ಶ್ರೀಮತಿ ಸಣ್ಣಮ್ಮ ಮತ್ತು ಶ್ರೀ ಸಿ.ಕಾಳೇಗೌಡ ದಂಪತಿ ಮಗನಾಗಿ 14/07/1970 ರಲ್ಲಿ ಜನಿಸಿರುವ ಇವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೂ, ಪ್ರೌಢ ಶಿಕ್ಷಣವನ್ನು ಹುಲಿವಾನದಲ್ಲಿ ಮುಗಿಸಿ, ಪಿ.ಯು.ಸಿ ಮತ್ತು ಪದವಿ ಶಿಕ್ಷಣವನ್ನು ಮಂಡ್ಯದ ಪಿ.ಇ.ಎಸ್. ವಿಜ್ಞಾನ ಕಾಲೇಜಿನಲ್ಲಿ ಐಚ್ಛಿಕ ಕನ್ನಡ ವಿಷಯದೊಂದಿಗೆ ಪೂರೈಸಿದರು.
ಪಿ.ಯು.ಸಿ. ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿ ನಾಯಕರಾಗಿ ಹಲವಾರು ಕನ್ನಡ ಪರ ಕಾರ್ಯಕ್ರಮಗಳನ್ನು ರೂಪಿಸುತ್ತಾ ಸಂಘಟನೆಗೆ ಮುನ್ನುಡಿ ಬರೆದ ಇವರು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟದ ಮುಂಚೂಣಿ ನಾಯಕರೆಂದು ಹೆಸರಾದರು.
1997 ರಲ್ಲಿ ಮೈಸೂರು ವಿ.ವಿ.ಯಿಂದ ಎಂ.ಎ ಪದವಿಯನ್ನು ಕನ್ನಡ ವಿಷಯದಲ್ಲಿ ಪ್ರಥಮ ದರ್ಜೆಯೊಂದಿಗೆ ಪಡೆದಿರುತ್ತಾರೆ. ಮೈಸೂರು ವಿ.ವಿ.ಯ ವಿದ್ಯಾರ್ಥಿ ಸೆನೆಟ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ ಕೀರ್ತಿ ಇವರದು.
1997 ರಿಂದ 2002 ರವರೆಗೆ ಮಂಡ್ಯದ ಪಿ.ಇ.ಎಸ್. ಸಂಜೆ ಪದವಿ ಕಾಲೇಜಿನಲ್ಲಿ, 2003-2007 ರವರೆಗೆ ಮಂಡ್ಯದ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಗೂ 2007 ರಿಂದ ಮಾಂಡವ್ಯ ವಿದ್ಯಾಸಂಸ್ಥೆ ಹಾಗೂ ಮಂಡ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಮನ ಗೆದ್ದಿದ್ದರು.
ಇನ್ನೂ ಸಂಘಟಕರಾಗಿ ಕಾರ್ಯದರ್ಶಿ, ಉನ್ನತಿ ಟ್ರಸ್ಟ್ (ರಿ) ಮಂಡ್ಯ1998, ಕಾರ್ಯದರ್ಶಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ 1998-2000 ಅಧ್ಯಕ್ಷರು, ಮೈಸೂರು ವಿ.ವಿ. ಪದವೀಧರರ ಹಿತರಕ್ಷಣಾ ಸಮಿತಿ(ರಿ) ಮಂಡ್ಯ 2003 ಪ್ರಾಧ್ಯಾಪಕರು, ಕನ್ನಡ ವಿಭಾಗ, ಮಾಂಡವ್ಯ ಶಿಕ್ಷಣ ಸಂಸ್ಥೆ, ಮಂಡ್ಯ. ಅಧ್ಯಕ್ಷರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ 2012-2015 ಅಧ್ಯಕ್ಷರು, ಸಾಹಿತ್ಯ ಲಯನ್ಸ್ ಕ್ಲಬ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಇದಕ್ಕೆ ಸಾಕ್ಷಿ ಎಂಬಂತೆ ನಿರಂತರವಾದ ಕನ್ನಡಪರ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಹಲವಾರು ವಿಚಾರ ಸಂಕಿರಣಗಳನ್ನು ಏರ್ಪಡಿಸುವ ಮೂಲಕ ಕನ್ನಡದ ಸೇವೆಯಲ್ಲಿ ನಿರತರಾಗಿದ್ದರು.
ಮಂಡ್ಯ ಸಾಹಿತ್ಯ ಲಯನ್ಸ್ ಕ್ಲಬ್ನ ಅಧ್ಯಕ್ಷರಾಗಿ, ಉಚಿತ ಬೃಹತ್ ಆರೋಗ್ಯ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳನ್ನು, ಕೆರಗೋಡು. ಚಾಮಲಾಪುರ, ಮಂಡ್ಯ ಮತ್ತು ಬಸರಾಳುವಿನಲ್ಲಿ ಆಯೋಜಿಸಿ ಸಾವಿರಾರು ಬಡರೋಗಿಗಳಿಗೆ ನೆರವಾಗಿರುವುದು ಇವರ ಸಾಧನೆಯ ಮತ್ತೊಂದು ಗರಿಮೆಯಾಗಿದೆ.
2015 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿ ಹಲವು ಸಮ್ಮೇಳನಗಳನ್ನು ನಡೆಸಿ ಯುವ ಸಾಹಿತಿಗಳಿಗೆ ಹಾಗೂ ಜಲಾವಿದರನ್ನು ಪರಿಚಯಿಸುವ ಕೆಲಸ ಮಾಡಿದ್ದರು, ಮತ್ತೆ 2021 ರಲ್ಲಿ ನಡೆದ ಕಸಾಪ ಚುನಾವಣೆಯಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿ ಒಂದು ವರ್ಷ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿದ್ದರು.
ತದನಂತರ ಅನಾರೋಗ್ಯಕ್ಕೀಡಾಗಿ ಹಲವು ತಿಂಗಳುಗಳ ಕಾಲ ಹಾಸಿಗೆ ಹಿಡಿದರು. ಇವರ ಈ ಅನಾರೋಗ್ಯವು ಇನ್ನಲ್ಲದಂತೆ ಬಾಧಿಸ ತೊಡಗಿತು. ಆದರೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಅತ್ಯುತ್ಸಕರಾಗಿ ಸಮ್ಮೇಳನವನ್ನು ಮಂಡ್ಯಕೆ ತರಲು ಯಶಸ್ವಿಯಾಗಿದ್ದ ರವಿಕುಮಾರ ಚಾಮಲಾಪುರ ಅವರು ದುರಂತದ ನಾಯಕರಾಗಿ ಇವರ ಸಾಹಿತ್ಯ ಪ್ರೇಮಿಗಳು ಹಾಗೂ ಅಭಿಮಾನಿಗಳಿಗೆ ಹೆಗಲು ಕೊಡಲು ಹೇಳದೇ ಹೋದದ್ದು ಮೋಸವೇ ಸರಿ.
ಅಂತ್ಯಕ್ರಿಯೆ- ಸೋಮವಾರ ಮಧ್ಯಾಹ್ನ 3 ಗಂಟೆಗೆ ಹುಟ್ಟೂರಾದ ಚಾಮಲಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲ ತಿಳಿಸಿದೆ.
(ಮಧ್ಯಾಹ್ನದವರೆಗೆ ಕಾವೇರಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡ ಲಾಗಿದೆ).
— ಮೋಹನ್ ರಾಗಿಮುದ್ದನಹಳ್ಳಿ (ಪತ್ರಕರ್ತರು)
Mandya
ಜು.11 ‘ಸೆಪ್ಟೆಂಬರ್ 10’ ಕನ್ನಡ ಚಲನಚಿತ್ರ ಬಿಡುಗಡೆ : ಓಂ ಸಾಯಿಪ್ರಕಾಶ್

ಮಂಡ್ಯ: ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂಬ ಧ್ಯೇಯದೊಂದಿಗೆ `ಸೆಪ್ಟೆಂಬರ್ ೧೦’ ಶೀರ್ಷಿಕೆಯೊಂದಿಗೆ ಚಲನಚಿತ್ರ ನಿರ್ಮಿಸಲಾಗಿದ್ದು, ಜುಲೈ.11ರಂದು ಬಿಡುಗಡೆಯಾಗಲಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತವರಿಗೆ ಬಾ ತಂಗಿ, ಮುದ್ದಿನ ಮಾವ, ಅಣ್ಣ ತಂಗಿ, ಸೋಲಿಲ್ಲದ ಸರದಾರದಂತಹ ಯಶಸ್ವಿ ಚಲನಚಿತ್ರಗಳ ನಿರ್ದೇಶನ ಮಾಡಿದ್ದು, `ಸೆಪ್ಟೆಂಬರ್ 10೦’ ನನ್ನ 105ನೇ ಚಲನಚಿತ್ರವಾಗಿದೆ ಎಂದರು.
ಸೆಪ್ಟೆಂಬರ್.10 ರೈತ ಆತ್ಮಹತ್ಯೆ ತಡೆ ದಿನವಾಗಿದ್ದು, ಆತ್ಮಹತ್ಯೆಯನ್ನೇ ಮೂಲವನ್ನಾಗಿಸಿಕೊಂಡು ಚಲನಚಿತ್ರ ನಿರ್ಮಿಸಲಾಗಿದೆ. ದುರ್ಬಲ ಹಾಗೂ ಸಂಕುಚಿತ ಮನಸ್ಸನವರಿಗೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡುವ ಪ್ರಯತ್ನ ಚಿತ್ರದಲ್ಲಿದೆ. ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿದ ರೈತ, ಪ್ರೇಮಿಗಳು, ವ್ಯಾಪಾರಿಗಳು, ಪರೀಕ್ಷೆ ಎದುರಿಸಲಾಗದ, ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳ ಆತ್ಮಹತ್ಯೆಯ ಸತ್ಯ ದರ್ಶನವನ್ನು ಚಿತ್ರದ ಮೂಲಕ ತೋರ್ಪಡಿಸಲಾಗುತ್ತಿದೆ ಎಂದು ಹೇಳಿದರು.
ಚಿತ್ರದ ಚಿತ್ರೀಕರಣವನ್ನು ಬೆಂಗಳೂರಿನಲ್ಲೇ ಮಾಡಲಾಗಿದ್ದು, 60 ಲಕ್ಷ ರೂ.ಗಳನ್ನು ವ್ಯಯಿಸಲಾಗಿದೆ. ನಿಮಾನ್ಸ್ನ ವೈದ್ಯರೂ ಮಾನಸಿಕವಾಗಿ ಕುಗ್ಗಿದವರಿಗೆ ಮಾನಸಿಕ ಸ್ಥೈರ್ಯ ನೀಡಲಿದೆ ಎಂದು ಹೇಳಿರುವುದಾಗಿ ಅವರು ತಿಳಿಸಿದರು.
2020೨೦೨೦ರಲ್ಲೇ ಚಲನಚಿತ್ರ ಪ್ರಾರಂಭಿಸಿ ಮುಗಿಸುವಷ್ಟರಲ್ಲಿ ಕೊರೋನದಿಂದಾಗಿ ಬಿಡುಗಡೆ ಮಾಡಲಾಗಿರಲಿಲ್ಲ, ಚಿತ್ರಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಂಗೀತ, ಜೆ.ಜಿ.ಕೃಷ್ಣರ ಛಾಯಾಗ್ರಹಣ, ಬಿ.ಎ.ಮಧು ಅವರ ಸಂಭಾಷಣೆಯಿದೆ. ಚಲನಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಬಿಬಿಎಂಪಿ ಮಾಜಿ ಸದಸ್ಯ ಡಾ.ರಾಜು ಅವರ ಸಹಕಾರದಿಂದ ಚಲನಚಿತ್ರ ಬಿಡುಗಡೆಯಾಗುತ್ತಿದ್ದು, ಚಲನಚಿತ್ರ ಪ್ರಿಯರು ಚಿತ್ರ ವೀಕ್ಷಿಸಿ, ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಹ ನಿರ್ದೇಶಕ ಶಶಿಕಿರಣ್, ಹಿರಿಯ ನಟ ಮೀಸೆ ಆಂಜನಪ್ಪ (ಶಂಖನಾದ ಆಂಜಿನಪ್ಪ), ನಟರಾದ ತುಳಸಿ, ಜಯಸಿಂಹ, ಪತ್ರಕರ್ತ ಹಲ್ಲೆಗೆರೆ ಗುರುಸ್ವಾಮಿ, ಜಯರಾಮ್ ಇದ್ದರು.
Mandya
ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

ಮಂಡ್ಯ : “ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.
ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ. ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದ ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.
ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ ಎಂದು ಹೇಳಿದರು.
ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.
ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ. ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್ಎಸ್ಎಚ್ಎಂ ಜ್ಞಾನ ಕ್ಯಾಂಪಸ್ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ, ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಉಪಸ್ಥಿತರಿದ್ದರು.
Mandya
ಶ್ರಮಜೀವಿ ರೈತರಿಗೆ ಭೂತಾಯಿ ಮೋಸ ಮಾಡುವುದಿಲ್ಲ : ಸಚಿವ ಎನ್.ಚಲುವರಾಯಸ್ವಾಮಿ

ನಾಗಮಂಗಲ : ಶ್ರಮ ಜೀವಿ ರೈತರಿಗೆ ಭೂತಾಯಿ ಯಾವಾಗಲೂ ಮೋಸ ಮಾಡುವುದಿಲ್ಲ. ರೈತರ ಏಳಿಗೆಗಾಗಿ ಪ್ರತಿಫಲ ನೀಡುವ ಭೂಮಿಗೆ ನಾವುಗಳು ಚಿರಋಣಿಯಾಗಿ ಇರಬೇಕೆಂದು ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ಅವರು ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ ರೈತ ಉದ್ಪಾದಕರ ಕಂಪನಿಯ ನೂತನ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿ ಪೂರಕ ಸಂಸ್ಥೆಗಳು ಇದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವ ಮುಖಾಂತರ ಆರ್ಥಿಕವಾಗಿ ಸದೃಢರಾಗಬೇಕು ಎಂದರು.
ತಾವೇ ಉತ್ಪಾದಕ ಕಂಪನಿಗಳ ನಿರ್ವಹಣೆ ಮಾಡುವ ವ್ಯವಸ್ಥೆ ಇದ್ದರೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಸಿಗಲಿದ್ದು, ರೈತರು ಇಂತಹ ಕೃಷಿ ಪೂರಕ ವ್ಯವಸ್ಥೆಗಳಿಗೆ ಹಾಗೂ ಕೃಷಿ ಭೂಮಿಯ ಬೆಳವಣಿಗೆ ಮಾಡಲು ಅನೇಕ ಯೋಜನೆಗಳು ರೂಪಿಸಿದ್ದು ಕೃಷಿ ಅವಲಂಬಿತ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಸಂಘದ ಅಧ್ಯಕ್ಷರಾದ ಹಾಗೂ ರಾಜ್ಯ ನಿರ್ದೇಶಕರಾದ. ರಾಜೇಶ್ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ತಹಸೀಲ್ದಾರ್ ಆದರ್ಶ್, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್, ಕಾರಸವಾಡಿ ಮಹದೇವ, ನೇಗಿಲು ಯೋಗಿ ಬಸವರಾಜು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ರೈತ ಉತ್ಪಾದಕರ ಸಂಘದ ಅಧ್ಯಕ್ಷರುಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ಕರಡಹಳ್ಳಿ ಗ್ರಾಮದಲ್ಲಿ ನೂತನವಾಗಿ ಪಶು ಸಂಗೋಪನ ಚಿಕಿತ್ಸಾಲಯ ಉದ್ಘಾಟನೆ ಹಾಗೂ ದೇವಲಾಪುರ ಹ್ಯಾಂಡ್ ಪೋಸ್ಟ್ ಪಾಲಿಟೆಕ್ನಿಕ್ ಪ್ರಯೋಗಾಲಯ ಹಾಗೂ ಪ್ರಥಮ ದರ್ಜೆ ಕಾಲೇಜು ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅರೆ ಅಲ್ಪಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಗುದ್ದಲಿ ಪೂಜೆ ಹಾಗೂ ಅಲ್ಪಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದರು.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Mandya24 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya23 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State19 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ