Chamarajanagar
ಪ್ರಥಮ ದರ್ಜೆ ಕಾಲೇಜು ನಲ್ಲಿ ದೀನ್ ದಯಾಳ್ ತರಬೇತಿ ಕೌಶಲ್ಯ

ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಯಳಂದೂರು ಹಾಗೂ ದೀನ್ ದಯಾಳು ತರಬೇತಿ ಕೌಶಲ್ಯ ಕೇಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಬಲೀಕರಣದತ್ತ ಕರ್ನಾಟಕ ವಿಶ್ವ ಶಕ್ತಿಯಾಗುವಂಥ ಭಾರತ ಎಂಬ ಶೀರ್ಷಿಕೆಡಿಯಲ್ಲಿ ಇಂದು ಉದ್ಯೋಗ ಕೋಶ ಮತ್ತು ಐಕ್ಯೂ ಎಸಿ ಯು ಅಡಿಯಲ್ಲಿ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಈ ವರ್ಷ ಓದುತ್ತಿರುವ ಪ್ರಥಮ ದ್ವಿತೀಯ ತೃತೀಯ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಯೋಜಿತ ಎನ್ ಆರ್ ಎಲ್ ಎಮ್ ಸಂಜೀವಿನಿ ಯೋಜನೆಯ ಅಡಿಯಲ್ಲಿ ಅನುಷ್ಠಾನವಾಗುತ್ತಿರುವ ಮಹತ್ವಾಕಾಂಕ್ಷಿ ಯೋಜನೆಯದ ಡಿಡಿ ಯು ಜಿ ಕೆ ವೈ ಯೋಜನೆಯಲ್ಲಿ ವಿದ್ಯಾವಂತ ನಿರುದ್ಯೋಗಿ ಗ್ರಾಮೀಣ ಬಡ ಯುವಕ ಯುವತಿಯರ ಸ್ವಾವಲಂಬಿಗಳಾಗಿ ಆರ್ಥಿಕ ಸಬಲೀಕರಣ ಹೊಂದಲು ಉಚ್ಚಾರಾಗಿರುವ ಅಭ್ಯರ್ಥಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸದರಿ ಸಂಸ್ಥೆಯ ತರಬೇತುದಾರರಾದ ಶ್ರೀ ಸುನಿಲ್ ಅವರು ಕಾರ್ಯಕ್ರಮದ ಯೋಜನೆಯಂತೆ ನಮ್ಮ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವ ಮೂಲಕ ನಡೆಸಿಕೊಟ್ಟರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಈ ಕಾರ್ಯಕ್ರಮವು ಆಯೋಜನೆಗೊಳ್ಳುತ್ತಿದ್ದು ವಿದ್ಯಾವಂತ ನಿರುದ್ಯೋಗಿ ವಿದ್ಯಾರ್ಥಿಗಳನ್ನು ಗುರುತಿಸಿ ಅಂತವರು ಸ್ವಾವಲಂಬಿಗಳಾಗಿ ಜೀವನ ಕಟ್ಟಿಕೊಳ್ಳುವಲ್ಲಿ ಅವಶ್ಯವಾದ ಕೌಶಲ್ಯ ತರಬೇತಿಯನ್ನು ನಮ್ಮ ಸಂಸ್ಥೆಯು ನೀಡುತ್ತಿದೆ ಈಗಾಗಲೇ ಒಂದುವರೆ ವರ್ಷಗಳಲ್ಲಿ ಸುಮಾರು ಮೂರು ವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪ್ಲೇಸ್ಮೆಂಟ್ ಅನ್ನು ಮಾಡಲಾಗಿದೆ ಹೆತ್ತವರಿಗೆ ಭಾರವಾಗ ದಿನದಂತೆ ಮಕ್ಕಳು ಸ್ವತಂತ್ರ ಜೀವನವನ್ನು ಕಟ್ಟಿಕೊಳ್ಳಲು ದುಡಿಯುವಂತಹ ಉದ್ಯೋಗವನ್ನು ಅವರೇ ನಿರ್ಮಾಣ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ಈ ಬಗೆಯ ತರಬೇತಿ ಕಾರ್ಯಕ್ರಮಗಳನ್ನು ನಾವು ಆಯೋಜಿಸುತ್ತಿದ್ದೇವೆ ಇದರ ಸಂಪೂರ್ಣ ಲಾಭವನ್ನು ವಿದ್ಯಾರ್ಥಿಗಳಾದ ತಾವು ಪಡೆಯಲೇಬೇಕು ಎಂಬ ಮಹತ್ವಕಾಂಕ್ಷೆಯನ್ನು ಹೊಂದಿದ ಮಾನ್ಯ ಪ್ರಾಂಶುಪಾಲರು ಈ ಕಾರ್ಯಕ್ರಮವನ್ನು ಆಯೋಜಿಸಲು ನಮ್ಮ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು ಅದರಂತೆ ಮೊದಲ ಭಾಗವಾಗಿ ಇಂದು ನಮ್ಮ ಸಂಸ್ಥೆಯ ಜೈಯೋದ್ದೇಶಗಳನ್ನು ಮತ್ತು ನೀಡಲಾಗುವ ಉಚಿತ ತರಬೇತಿಗಳು ಯಾವುವು ಅದರಿಂದ ಏನೆಲ್ಲಾ ಅನುಕೂಲಗಳಾಗುತ್ತದೆ ಎಂಬ ಸಾಮಾನ್ಯ ಮಾಹಿತಿಗಾಗಿ ಈ ಕಾರ್ಯವನ್ನು ಆಯೋಜಿಸಲಾಗಿದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡುತ್ತಾ ಇಂದಿನ ಯುಗದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವ ಮಾಡುತ್ತಿದ್ದು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಇಂಥ ಅನುದಾನಿತ ಸಂಸ್ಥೆಯೊಂದಿಗೆ ನಮ್ಮ ಕಾಲೇಜು ಒಡಂಬಡಿಕೆ ಮಾಡಿಕೊಂಡಿದೆ ಅದರ ಮೊದಲ ಭಾಗವಾಗಿ ಈ ಕಾರ್ಯಕ್ರಮವನ್ನು ನಮ್ಮ ವಿದ್ಯಾರ್ಥಿಗಳಿಗೆ ಆಯೋಜಿಸುವ ಮೂಲಕ ಕೌಶಲ್ಯ ಕೇಂದ್ರಿತ ತರಬೇತಿಯನ್ನು ಆಯೋಜಿಸಿ ಲಾಗಿದೆ ಎಂದು ವಿವರಿಸಿದರು ಸದರಿ ಸಂಸ್ಥೆಯ ಈ ಬಗೆಯ ಕಾರ್ಯಕ್ರಮಗಳನ್ನು ಶ್ಲಾಘಿಸಿದ ಪ್ರಾಂಶುಪಾಲರು ಇಂಥ ಕಾರ್ಯಕ್ರಮಗಳನ್ನು ಸದರಿ ಸಂಸ್ಥೆಯ ವತಿಯಿಂದ ಹೆಚ್ಚು ಹೆಚ್ಚು ಆಯೋಜಿಸಲಾಗುತ್ತದೆ ಎಂಬ ಮಾಹಿತಿಯನ್ನು ಹಂಚಿಕೊಂಡರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯಾದ ನೀಲಮ್ಮ ಎಲ್ಲರನ್ನೂ ಸ್ವಾಗತಿಸಿದರು ಅಂತೆಯೇ ಉದ್ಯೋಗ ಕೋಶದ ಸಂಚಾಲಕರಾದ ಕುಮಾರಿ ದಾಕ್ಷಾಯಿಣಿಯವರು ಈ ಕಾರ್ಯಕ್ರಮದ ಆಶಯವನ್ನು ಕುರಿತು ವಿವರಿಸಿದರು ಸದರಿ ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು ಅಧ್ಯಾಪಕಿತರರು ಎಲ್ಲರೂ ಭಾಗವಹಿಸಿದ್ದರು ಎಲ್ಲರಿಗೂ ವಂದಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು
Chamarajanagar
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ

ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ
ಮಲೈ ಮಹದೇಶ್ವರ ಬೆಟ್ಟ .ಏಪ್ರಿಲ್ 24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು…
*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.
*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎ.ಇ.ಇ ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
*ಹಿಂದಿನ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.
*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.
ಸಭೆಯಲ್ಲಿ ಪಶು ಸಂಗೋಪನೆ,ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್,ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ,
ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,ಎ.ಆರ್.ಕೃಷ್ಣ ಮೂರ್ತಿ,ಎಂ.ಆರ್.ಮಂಜುನಾಥ್,ಡಾ.ಡಿ.ತಿಮ್ಮಯ್ಯ,ಉನ್ನತ ಅಧಿಕಾರಿಗಳಾದ ಬಿ.ಬಿ.ಕಾವೇರಿ,ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿಗಳಾದ ಮೋನಾ ರೋತ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಬಿ.ಟಿ.ಕವಿತಾ,ಪ್ರಾಧಿಕಾರದ ಸದಸ್ಯರು,ಇನ್ನಿತರ ಗಣ್ಯರು,ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Chamarajanagar
ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 3647.62 ಕೋಟಿ ರೂ.ಅಂಗೀಕಾರ
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಮುಖ್ಯಾಂಶಗಳು.
ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ
ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ
ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.
ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.
ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.
ಹನೂರಿನಲ್ಲಿ ಹೊಸ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.
ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.
ಪಿ ಡಬ್ಲ್ಯೂಡಿ -ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಕೆರೆ ನೀರು ತುಂಬಿಸುವ ಕಾರ್ಯಕ್ರಮ
1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.
ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.
ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ
40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.
ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.
ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.
ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ.
ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ.
ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ವೆಂಕಟೇಶ್, ಎಂ.ಸಿ.ಸುಧಾಕರ್, ಡಾ.ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಸೇರಿದಂತೆ ಇತರರು ಹಾಜರಿದ್ದರು.
Chamarajanagar
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು(ಏಪ್ರಿಲ್.24) ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಅವರು ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗವಹಿಸಿದ್ದಾರೆ.
ಇನ್ನೂ ಮಲೆ ಮಹದೇಶ್ವರ ದೇವಾಲಯ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರಿಂದ ಬೆಳ್ಳಿ ರಥೋತ್ಸವದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ದಾರೆ.
-
Mysore12 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore14 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International7 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State10 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International8 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu22 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu12 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar10 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್