Connect with us

Chamarajanagar

ಪ್ರಥಮ ದರ್ಜೆ ಕಾಲೇಜು ನಲ್ಲಿ ದೀನ್ ದಯಾಳ್ ತರಬೇತಿ ಕೌಶಲ್ಯ

Published

on

ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಯಳಂದೂರು ಹಾಗೂ ದೀನ್ ದಯಾಳು ತರಬೇತಿ ಕೌಶಲ್ಯ ಕೇಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಬಲೀಕರಣದತ್ತ ಕರ್ನಾಟಕ ವಿಶ್ವ ಶಕ್ತಿಯಾಗುವಂಥ ಭಾರತ ಎಂಬ ಶೀರ್ಷಿಕೆಡಿಯಲ್ಲಿ ಇಂದು ಉದ್ಯೋಗ ಕೋಶ ಮತ್ತು ಐಕ್ಯೂ ಎಸಿ ಯು ಅಡಿಯಲ್ಲಿ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಈ ವರ್ಷ ಓದುತ್ತಿರುವ ಪ್ರಥಮ ದ್ವಿತೀಯ ತೃತೀಯ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಯೋಜಿತ ಎನ್ ಆರ್ ಎಲ್ ಎಮ್ ಸಂಜೀವಿನಿ ಯೋಜನೆಯ ಅಡಿಯಲ್ಲಿ ಅನುಷ್ಠಾನವಾಗುತ್ತಿರುವ ಮಹತ್ವಾಕಾಂಕ್ಷಿ ಯೋಜನೆಯದ ಡಿಡಿ ಯು ಜಿ ಕೆ ವೈ ಯೋಜನೆಯಲ್ಲಿ ವಿದ್ಯಾವಂತ ನಿರುದ್ಯೋಗಿ ಗ್ರಾಮೀಣ ಬಡ ಯುವಕ ಯುವತಿಯರ ಸ್ವಾವಲಂಬಿಗಳಾಗಿ ಆರ್ಥಿಕ ಸಬಲೀಕರಣ ಹೊಂದಲು ಉಚ್ಚಾರಾಗಿರುವ ಅಭ್ಯರ್ಥಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸದರಿ ಸಂಸ್ಥೆಯ ತರಬೇತುದಾರರಾದ ಶ್ರೀ ಸುನಿಲ್ ಅವರು ಕಾರ್ಯಕ್ರಮದ ಯೋಜನೆಯಂತೆ ನಮ್ಮ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವ ಮೂಲಕ ನಡೆಸಿಕೊಟ್ಟರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಈ ಕಾರ್ಯಕ್ರಮವು ಆಯೋಜನೆಗೊಳ್ಳುತ್ತಿದ್ದು ವಿದ್ಯಾವಂತ ನಿರುದ್ಯೋಗಿ ವಿದ್ಯಾರ್ಥಿಗಳನ್ನು ಗುರುತಿಸಿ ಅಂತವರು ಸ್ವಾವಲಂಬಿಗಳಾಗಿ ಜೀವನ ಕಟ್ಟಿಕೊಳ್ಳುವಲ್ಲಿ ಅವಶ್ಯವಾದ ಕೌಶಲ್ಯ ತರಬೇತಿಯನ್ನು ನಮ್ಮ ಸಂಸ್ಥೆಯು ನೀಡುತ್ತಿದೆ ಈಗಾಗಲೇ ಒಂದುವರೆ ವರ್ಷಗಳಲ್ಲಿ ಸುಮಾರು ಮೂರು ವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪ್ಲೇಸ್ಮೆಂಟ್ ಅನ್ನು ಮಾಡಲಾಗಿದೆ ಹೆತ್ತವರಿಗೆ ಭಾರವಾಗ ದಿನದಂತೆ ಮಕ್ಕಳು ಸ್ವತಂತ್ರ ಜೀವನವನ್ನು ಕಟ್ಟಿಕೊಳ್ಳಲು ದುಡಿಯುವಂತಹ ಉದ್ಯೋಗವನ್ನು ಅವರೇ ನಿರ್ಮಾಣ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ಈ ಬಗೆಯ ತರಬೇತಿ ಕಾರ್ಯಕ್ರಮಗಳನ್ನು ನಾವು ಆಯೋಜಿಸುತ್ತಿದ್ದೇವೆ ಇದರ ಸಂಪೂರ್ಣ ಲಾಭವನ್ನು ವಿದ್ಯಾರ್ಥಿಗಳಾದ ತಾವು ಪಡೆಯಲೇಬೇಕು ಎಂಬ ಮಹತ್ವಕಾಂಕ್ಷೆಯನ್ನು ಹೊಂದಿದ ಮಾನ್ಯ ಪ್ರಾಂಶುಪಾಲರು ಈ ಕಾರ್ಯಕ್ರಮವನ್ನು ಆಯೋಜಿಸಲು ನಮ್ಮ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು ಅದರಂತೆ ಮೊದಲ ಭಾಗವಾಗಿ ಇಂದು ನಮ್ಮ ಸಂಸ್ಥೆಯ ಜೈಯೋದ್ದೇಶಗಳನ್ನು ಮತ್ತು ನೀಡಲಾಗುವ ಉಚಿತ ತರಬೇತಿಗಳು ಯಾವುವು ಅದರಿಂದ ಏನೆಲ್ಲಾ ಅನುಕೂಲಗಳಾಗುತ್ತದೆ ಎಂಬ ಸಾಮಾನ್ಯ ಮಾಹಿತಿಗಾಗಿ ಈ ಕಾರ್ಯವನ್ನು ಆಯೋಜಿಸಲಾಗಿದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡುತ್ತಾ ಇಂದಿನ ಯುಗದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವ ಮಾಡುತ್ತಿದ್ದು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಇಂಥ ಅನುದಾನಿತ ಸಂಸ್ಥೆಯೊಂದಿಗೆ ನಮ್ಮ ಕಾಲೇಜು ಒಡಂಬಡಿಕೆ ಮಾಡಿಕೊಂಡಿದೆ ಅದರ ಮೊದಲ ಭಾಗವಾಗಿ ಈ ಕಾರ್ಯಕ್ರಮವನ್ನು ನಮ್ಮ ವಿದ್ಯಾರ್ಥಿಗಳಿಗೆ ಆಯೋಜಿಸುವ ಮೂಲಕ ಕೌಶಲ್ಯ ಕೇಂದ್ರಿತ ತರಬೇತಿಯನ್ನು ಆಯೋಜಿಸಿ ಲಾಗಿದೆ ಎಂದು ವಿವರಿಸಿದರು ಸದರಿ ಸಂಸ್ಥೆಯ ಈ ಬಗೆಯ ಕಾರ್ಯಕ್ರಮಗಳನ್ನು ಶ್ಲಾಘಿಸಿದ ಪ್ರಾಂಶುಪಾಲರು ಇಂಥ ಕಾರ್ಯಕ್ರಮಗಳನ್ನು ಸದರಿ ಸಂಸ್ಥೆಯ ವತಿಯಿಂದ ಹೆಚ್ಚು ಹೆಚ್ಚು ಆಯೋಜಿಸಲಾಗುತ್ತದೆ ಎಂಬ ಮಾಹಿತಿಯನ್ನು ಹಂಚಿಕೊಂಡರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯಾದ ನೀಲಮ್ಮ ಎಲ್ಲರನ್ನೂ ಸ್ವಾಗತಿಸಿದರು ಅಂತೆಯೇ ಉದ್ಯೋಗ ಕೋಶದ ಸಂಚಾಲಕರಾದ ಕುಮಾರಿ ದಾಕ್ಷಾಯಿಣಿಯವರು ಈ ಕಾರ್ಯಕ್ರಮದ ಆಶಯವನ್ನು ಕುರಿತು ವಿವರಿಸಿದರು ಸದರಿ ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು ಅಧ್ಯಾಪಕಿತರರು ಎಲ್ಲರೂ ಭಾಗವಹಿಸಿದ್ದರು ಎಲ್ಲರಿಗೂ ವಂದಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು

Continue Reading
Click to comment

Leave a Reply

Your email address will not be published. Required fields are marked *

Chamarajanagar

ಡಿ. 10ಕ್ಕೆ ಚಾ.ನಗರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿರುವ ಲೋಕಾಯುಕ್ತ ಅಧಿಕಾರಿಗಳು

Published

on

ಚಾಮರಾಜನಗರ : ಜಿಲ್ಲೆಯ ಲೋಕಾಯುಕ್ತ ಕಚೇರಿಯ ಅಧಿಕಾರಿಗಳು ಚಾಮರಾಜನಗರ ಪ್ರವಾಸಿಮಂದಿರದಲ್ಲಿ (ಐ.ಬಿ) ಡಿಸೆಂಬರ್. 10ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಕರ್ನಾಟಕ ಲೋಕಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅನಗತ್ಯ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2 ರಲ್ಲಿ ಭರ್ತಿಮಾಡಿ ಸಲ್ಲಿಸಬಹುದು.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ವಿಭಾಗದ ಉಪಾಧೀಕ್ಷಕ ಜಿ.ಎಸ್. ಗಜೇಂದ್ರ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಚಾಮರಾಜನಗರ, ನಂಜನಗೂಡು, ಕಡಕೊಳ, ಅಶೋಕಪುರಂ ರೈಲು ನಿಲ್ದಾಣಗಳಿಗೆ ಡಿಆರ್‌ಎಂ ಭೇಟಿ, ಪರಿಶೀಲನೆ

Published

on

ಮೈಸೂರು: ಮೈಸೂರು ವಿಭಾಗದ ನೈರುತ್ಯ ರೈಲ್ವೆ ವ್ಯವಸ್ಥಾಪಕ ‌ನಿರ್ದೇಶಕ ಮುದಿತ್ ಮಿತ್ತಲ್ ಅವರು ಚಾಮರಾಜನಗರ, ನಂಜನಗೂಡು ಟೌನ್, ಕಡಕೊಳ ಮತ್ತು ಅಶೋಕಪುರಂ ರೈಲು ನಿಲ್ದಾಣಗಳನ್ನು ಸೋಮವಾರ ಪರಿಶೀಲಿಸಿದರು.

ಚಾಮರಾಜನಗರದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿ, ಪ್ರಯಾಣಿಕರ ಸೌಲಭ್ಯಗಳು, ಮೂಲಸೌಕರ್ಯ ಸುಧಾರಣೆಗಳು ಮತ್ತು ನಿಲ್ದಾಣ ಪುನರ್ವಿಕಾಸಕ್ಕೆ ಸಂಬಂಧಿಸಿದ ಅಂಶಗಳ ಮೇಲೆ ವಿಶೇಷ ಗಮನ ಹರಿಸಿದರು. ಅಲ್ಲದೇ, ನಿಲ್ದಾಣದಲ್ಲಿನ ಉದ್ಯೋಗಿಗಳು ಮತ್ತು ಸಿಬ್ಬಂದಿಯೊಂದಿಗೆ ಕೂಡ ಸಂವಾದ ನಡೆಸಿದರು.

ನಂಜನಗೂಡು ಪಟ್ಟಣದ ಗೂಡ್ಸ್ ಶೆಡ್ ಪರಿಶೀಲಿಸಿ, ಅದರ ಕಾರ್ಯಾಚರಣಾ ದಕ್ಷತೆ ಹಾಗೂ ಭವಿಷ್ಯದ ಸಾಮರ್ಥ್ಯ ವೃದ್ಧಿ ಅಗತ್ಯಗಳನ್ನು ಅವಲೋಕಿಸಿದರು. ನಂತರ ಕಡಕೊಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಕಂಟೇನರ್ ಲೋಡಿಯಿಂಗ್ ಪಾಯಿಂಟ್ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ಈ ವೇಳೆ ಸರಕು ಹಸ್ತಾಂತರ ಸೌಲಭ್ಯಗಳು ಹಾಗೂ ಸರಕು ಸಾಗಣೆ ಕಾರ್ಯಕ್ಷಮತೆ ಮುಂಬರುವ ಅಭಿವೃದ್ಧಿ ಚಟುವಟಿಕೆಗಳನ್ನು  ಪರಿಶೀಲಿಸಿದರು.

ಅಶೋಕಪುರಂ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳು, ಸುರಕ್ಷತಾ ಕ್ರಮಗಳು ಹಾಗೂ ನಿಲ್ದಾಣದ ನಿರ್ವಹಣೆಯನ್ನೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗತಿ ಶಕ್ತಿ ಸಿಪಿಎಂ ಆನಂದ್ ಭಾರತಿ ಮತ್ತು ವಿವಿಧ ವಿಭಾಗದ ಹಿರಿಯ ಅಧಿಕಾರಿಗಳು ಇದ್ದರು.

Continue Reading

Chamarajanagar

ಇ-ಸ್ವತ್ತು ಹಾಗೂ ನೋಂದಣಿ ಗೆ ಒತ್ತಾಯಿಸಿ ಪ್ರತಿಭಟನೆ

Published

on

ವರದಿ : ಸುನೀಲ್ ಪ್ರಶಾಂತ್

ಕೊಳ್ಳೇಗಾಲ: ಇ-ಸ್ವತ್ತು ಹಾಗೂ ನೋಂದಣಿ ಮಾಡಿಕೊಡುವಂತೆ ಮಹಿಳಾ ನಿವಾಸಿಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ನಗರಸಭೆ ಮುಂಭಾಗದಲ್ಲಿ ಜಮಾಯಿಸಿದ ಮುಡಿಗುಂಡ ಹಾಗೂ ಶಂಕನಪುರ ಬಡಾವಣೆಗಳ ಸ್ಲಮ್ ಬೋರ್ಡ್ ಮನೆಗಳ ಇ-ಸ್ವತ್ತು ಹಾಗೂ ನೋಂದಣಿ ಮಾಡಿಕೊಡುವಂತೆ ಒತ್ತಾಯಿಸಿ ಇಲ್ಲಿನ ಮುಡಿಗುಂಡ ಹಾಗೂ ಶಂಕನಪುರ ಬಡಾವಣೆಯ ಮಹಿಳಾ ವಾಸಿಗಳು ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾತನಾಡಿ ನಮ್ಮ ಸಮಸ್ಯೆ ಕುರಿತು ಅಳಲು ತೋಡಿಕೊಂಡರು.

ಪ್ರತಿಭಟನೆಯಲ್ಲಿ ಮಹಿಳಾ ಹೋರಾಟಗಾರ್ತಿ ಶಿವಮ್ಮ, ನಿವಾಸಿಗಳಾದ ಕವಿತಾ, ಸುಮ, ನಿಂಗಮ್ಮ,ರಾಧ, ಪುಟ್ಟನಂಜಮ್ಮ, ನಾಗವೇಣಿ, ದೀಪಾ, ಜಯಮ್ಮ,
ಮಹದೇವ, ನಿಂಗರಾಜು ಇತರರು ಇದ್ದರು.

Continue Reading

Trending

error: Content is protected !!