Connect with us

Politics

ಡಿಕೆ ಬ್ರದರ್ಸ್‌ಗೆ ನೋಟಿಸ್‌ ಜಾರಿ ಮಾಡಿದ ದೆಹಲಿ ಪೊಲೀಸರು

Published

on

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಅವರ  ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

Continue Reading

Politics

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

Published

on

ಸರ್ಕಾರ ರಚನೆ ಕುರಿತು ಚರ್ಚೆಗಳು ನಡೆಯುತ್ತಿವೆ, ಆದರೆ ಯಾವುದೇ ಔಪಚಾರಿಕ ಪ್ರಸ್ತಾವನೆ ಪಕ್ಷದ ಹೈಕಮಾಂಡ್‌ಗೆ ತಲುಪಿಲ್ಲ ಎಂದು ಹೇಳಿದರು. ಸಚಿವರ ನೇಮಕದ ಕುರಿತು ಯಾವುದೇ ಪ್ರಸ್ತಾವನೆ ಇನ್ನೂ ಬಂದಿಲ್ಲ.

ಬೆಂಗಳೂರು: ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಜೂನ್ 3 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಸಚಿವರು ಮತ್ತು ಪ್ರಮುಖ ನೇಮಕಾತಿಗಳ ಕುರಿತು ಸಮಾಲೋಚನೆಗಳ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ, ಸರ್ಕಾರ ರಚನೆ ಕುರಿತು ಚರ್ಚೆಗಳು ನಡೆಯುತ್ತಿವೆ, ಆದರೆ ಯಾವುದೇ ಔಪಚಾರಿಕ ಪ್ರಸ್ತಾವನೆ ಪಕ್ಷದ ಹೈಕಮಾಂಡ್‌ಗೆ ತಲುಪಿಲ್ಲ ಎಂದು ಹೇಳಿದರು. ಸಚಿವರ ನೇಮಕದ ಕುರಿತು ಯಾವುದೇ ಪ್ರಸ್ತಾವನೆ ಇನ್ನೂ ಬಂದಿಲ್ಲ. ಪ್ರಸ್ತಾವನೆ ಬಂದ ನಂತರ, ಎಷ್ಟು ಸಚಿವರು ಮತ್ತು ಉಪಮುಖ್ಯಮಂತ್ರಿಗಳನ್ನು ನೇಮಿಸಬೇಕು, ಅದರೊಂದಿಗೆ ಪ್ರಮುಖ ಅಧ್ಯಕ್ಷ ಸ್ಥಾನಗಳನ್ನು ಸಹ ತುಂಬಬೇಕೇ ಎಂಬುದರ ಕುರಿತು ಚರ್ಚೆ ನಡೆಯಲಿದೆ” ಎಂದು ಅವರು ಹೇಳಿದರು.

ಪ್ರಮಾಣ ವಚನ ಸಮಾರಂಭದ ನಂತರವೇ ಸಂಪುಟ ರಚನೆಯ ಕುರಿತು ಹೆಚ್ಚಿನ ಸ್ಪಷ್ಟತೆ ಹೊರಬರಲಿದೆ ಎಂದು ಖರ್ಗೆ ಹೇಳಿದರು. ಈ ಎಲ್ಲಾ ವಿಷಯಗಳು ಚರ್ಚೆಯಲ್ಲಿವೆ. ಜೂನ್ 3 ರ ನಂತರ ನಮಗೆ ತಿಳಿಯುತ್ತದೆ. ನಾವು ಕಾಯಬೇಕಾಗಿದೆ” ಎಂದು ಅವರು ಹೇಳಿದರು.

ಹಂತ ಹಂತವಾಗಿ ಸಚಿವ ಸಂಪುಟ ವಿಸ್ತರಣೆಯ ಸಾಧ್ಯತೆಯ ಕುರಿತು ಮಾತನಾಡಿದ ಖರ್ಗೆ, ನಿಯೋಜಿತ ಮುಖ್ಯಮಂತ್ರಿಯಿಂದ ಪಕ್ಷಕ್ಕೆ ಇನ್ನೂ ವಿವರಗಳು ಬಂದಿಲ್ಲ ಎಂದು ಹೇಳಿದರು. “ಅವರು (ನಿಯೋಜಿತ ಮುಖ್ಯಮಂತ್ರಿ) ಎಂಟು ಅಥವಾ ಹತ್ತು ಸಚಿವರನ್ನು ನೇಮಿಸುತ್ತಾರೋ ಇಲ್ಲವೋ, ಅವರ ಪ್ರಸ್ತಾವನೆ ನಮಗೆ ತಲುಪಿಲ್ಲ. ಅದು ಬಂದ ನಂತರ, ಮೊದಲು ಒಂದು ಹಂತವನ್ನು ಪೂರ್ಣಗೊಳಿಸಬಹುದು.

ನಂತರ 15 ದಿನಗಳು ಅಥವಾ ಒಂದು ತಿಂಗಳ ನಂತರ, ಉಳಿದ (ಸ್ಥಾನಗಳಿಗೆ) ಮತ್ತೊಂದು ಹಂತದಲ್ಲಿ ವಿಸ್ತರಣೆಯಾಗಲಿದೆ ಎಂದು ಅವರು ಹೇಳಿದರು . ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವ ಬಗ್ಗೆ ಕೇಳಿದಾಗ, ನಾಯಕತ್ವದೊಂದಿಗೆ ಯಾವುದೇ ನಿರ್ದಿಷ್ಟ ಯೋಜನೆಯನ್ನು ಹಂಚಿಕೊಳ್ಳಲಾಗಿಲ್ಲವಾದರೂ, ಚರ್ಚೆಗಳು ನಡೆಯುತ್ತಿವೆ ಎಂದು ಖರ್ಗೆ ಹೇಳಿದರು.

ಮತ್ತೊಂದು ಹಂತದಲ್ಲಿ, ಉಳಿದ ಸದಸ್ಯರಿಗೂ ಅವಕಾಶ ಕಲ್ಪಿಸಬೇಕು ಎಂಬ ಕಲ್ಪನೆ ಇದೆ. ಅಂತಹ ಚರ್ಚೆ ಅಸ್ತಿತ್ವದಲ್ಲಿದೆ, ಆದರೆ ನಿಯೋಜಿತ ಮುಖ್ಯಮಂತ್ರಿ ನಿಖರವಾಗಿ ಏನು ಪರಿಗಣಿಸುತ್ತಿದ್ದಾರೆಂದು ನಮಗೆ ಇನ್ನೂ ತಿಳಿದಿಲ್ಲ. ನಮಗೆ ಇನ್ನೂ ಯಾವ ಪ್ರಸ್ತಾವನೆ ಬಂದಿಲ್ಲ” ಎಂದು ಅವರು ಹೇಳಿದರು.

ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕದ ಕುರಿತು ಮಾತನಾಡಿದ ಖರ್ಗೆ ನಾಯಕತ್ವ ಪರಿವರ್ತನೆ ಸಹಜ ಪ್ರಕ್ರಿಯೆಯಾಗಿದ್ದು, ಪಕ್ಷವು ಸೂಕ್ತ ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಎಂದು ಹೇಳಿದರು.

 

Continue Reading

Politics

ಅಕ್ರಮ ಅದಿರು ಸಾಗಾಟ ಪ್ರಕರಣ: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

Published

on

ಬೆಂಗಳೂರು, ಮೇ 30: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮಹತ್ವದ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಎಸ್‌ಐಟಿ ದಾಖಲಿಸಿದ್ದ ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರನ್ನು ಪ್ರಕರಣದಿಂದ ಕೈಬಿಡುವಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಮಾಜಿ ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅದಿರು ಸಾಗಾಟಕ್ಕೆ ಪಿತೂರಿ ನಡೆಸಿದ ಆರೋಪದಡಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಆರೋಪಿಗಳ ಪರ ವಕೀಲರು ಸಿಆರ್‌ಪಿಸಿ ಸೆಕ್ಷನ್ 227 ಅಡಿಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಜನಾರ್ದನ ರೆಡ್ಡಿ ಸೇರಿದಂತೆ ಮೆಹಫೂಜ್ ಅಲಿ ಖಾನ್, ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್ ಹಾಗೂ Trident Mining Company ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

ತನಿಖೆಯ ಪ್ರಕಾರ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ಪಾವತಿಸಬೇಕಿದ್ದ ರಾಯಲ್ಟಿ ಸೇರಿದಂತೆ ವಿವಿಧ ಶುಲ್ಕಗಳನ್ನು ತಪ್ಪಿಸಿ ಭಾರಿ ಪ್ರಮಾಣದಲ್ಲಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಆರೋಪಿಗಳು ಒಟ್ಟು 1,25,419 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಕಾನೂನುಬಾಹಿರವಾಗಿ ‘ಎನ್ ಶೇಕ್‌ಸಾಬ್ ಮೈನ್ಸ್’ ಮತ್ತು ‘ತಿರುಮಲ ಕನ್ವೇಯರ್ ಸಿಸ್ಟಮ್ಸ್’ ಸಂಸ್ಥೆಗಳಿಗೆ ಮಾರಾಟ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿತ್ತು.

ಆದರೆ ಪ್ರಕರಣದ ದಾಖಲೆಗಳು ಹಾಗೂ ವಾದಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ನೀಡಿದ್ದು, ಇದು ಜನಾರ್ದನ ರೆಡ್ಡಿಗೆ ದೊಡ್ಡ ಕಾನೂನು ಜಯವೆಂದು ಪರಿಗಣಿಸಲಾಗಿದೆ.

Continue Reading

Politics

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಬನ್ನಿ: ಕೆ.ಸಿ. ವೇಣುಗೋಪಾಲ್ ಆಹ್ವಾನ

Published

on

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಾಷ್ಟ್ರ ರಾಜಕಾರಣಕ್ಕೆ ಬರಲು ಆಹ್ವಾನ ನೀಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಭೆಯಲ್ಲಿ ಮಾತನಾಡಿದ ಅವರು, “ನಿಮ್ಮ ಸೇವೆ ರಾಷ್ಟ್ರಕ್ಕೂ ಬೇಕು. ರಾಷ್ಟ್ರೀಯ ಮಟ್ಟದಲ್ಲೂ ನೀವು ಪಕ್ಷಕ್ಕೆ ಅಗತ್ಯ” ಎಂದು ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಹೇಳಿದರು.‌

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಅವಧಿಯಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸರ್ಕಾರ ಬದ್ಧತೆಯಿಂದ ಕೆಲಸ ಮಾಡಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದ ಪರಿಣಾಮ ಪಕ್ಷಕ್ಕೆ ಜನಬೆಂಬಲ ಹೆಚ್ಚಿದ್ದು, ಉಪಚುನಾವಣೆಗಳು ಸೇರಿದಂತೆ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಅವರು ತಿಳಿಸಿದರು.

ಅದೇ ವೇಳೆ, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರೂ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಮೂಲಕ ಸರ್ಕಾರ ಜನರ ವಿಶ್ವಾಸ ಗಳಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಿಎಲ್‌ಪಿ ನಾಯಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿರುವ ಸಿದ್ದರಾಮಯ್ಯ, ಸಭೆಯಲ್ಲಿ ಶಾಸಕರಿಗೆ ಧನ್ಯವಾದ ಅರ್ಪಿಸಿ, ಪಕ್ಷದ ಮುಂದಿನ ನಾಯಕತ್ವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕಾಂಗ್ರೆಸ್ ಹೈಕಮಾಂಡ್‌ನಿಂದ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿವೆ.

Continue Reading

Trending

error: Content is protected !!