Connect with us

Chikmagalur

ಅ. 19 ರಿಂದ 24ರ ವರೆಗೆ ಕಾಫಿ ನಾಡಿನಲ್ಲಿ ನಿಷೇದಾಜ್ಞೆ ಜಾರಿ

Published

on

ಚಿಕ್ಕಮಗಳೂರು : ಮಹಿಷ ದಸರಾ ಸಂಬಂಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾದ ಹಿನ್ನೆಲೆಯಲ್ಲಿ ಹಾಗೂ ಮಹಿಷ ದಸರಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮುಂಜಾಗ್ರತ ಕ್ರಮವಾಗಿ ಅ.19ರಿಂದ 24 ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಹಿಷ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರಚೋದನಾತ್ಮಕ ಭಾಷಣ, ಪೋಸ್ಟರ್, ಫ್ಲೆಕ್ಸ್ ಹಾಕಬಾರದು. ಈ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ‌.
ನಿಷೇದಾಜ್ಞೆ ಅವಧಿಯಲ್ಲಿ ಘೋಷಣೆಗಳನ್ನು ಕೂಗುವುದು, ಆವೇಶಭರಿತರಾಗಿ ಭಾಷಣ ಮಾಡುವುದು, ಸಂಗೀತ ಕಾರ್ಯಕ್ರಮ ನಡೆಸುವುದನ್ನು ನಿಷೇಧಿಸಲಾಗಿದೆ. ಯಾರಾದರೂ ನಿಷೇದಾಜ್ಞೆ ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಅ. 20ರಂದು ಮಹಿಷ ದಸರಾ ಅಂಗವಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ನಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮುಂದಾಗಿತ್ತು. ಜೊತೆಗೆ ಮಹಿಷ ದಸರಾದ ಸಭಾ ಕಾರ್ಯಕ್ರಮವನ್ನು ಚಿಂತಕ ಪ್ರೊ.ಭಗವಾನ್ ನೆರವೇರಿಸಲಿದ್ದರು. ಆದರೆ ನಿಷೇದಾಜ್ಞೆ ಜಾರಿಯಿಂದಾಗಿ ಮಹಿಷ ದಸರಾ ಅಂಗವಾಗಿ ನಡೆಯಬೇಕಿದ್ದ ಮೆರವಣಿಗೆ ರದ್ದಾದಂತಾಗಿದೆ.
ಮಹಿಷ ದಸರ ಕಾರ್ಯಕ್ರಮಕ್ಕೆ ಚಿಂತಕ ಪ್ರೊಫೆಸರ್ ಭಗವಾನ್ ಆಗಮಿಸುವುದಕ್ಕೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಪ್ರಮುಖವಾಗಿ ಒಕ್ಕಲಿಗರ ಸಂಘ, ಶ್ರೀರಾಮ ಸೇನೆ ಕಾರ್ಯಕರ್ತರು ಭಗವಾನ್ ಚಿಕ್ಕಮಗಳೂರಿಗೆ ಬಂದಲ್ಲಿ ಅವರಿಗೆ ಮಸಿ ಬಳಿಯುವುದಾಗಿ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಭಗವಾನ್ ಚಿಕ್ಕಮಗಳೂರಿಗೆ ಬಾರದಂತೆ ಗಡಿಪಾರು ಮಾಡಬೇಕು ಎಂದು ಡಿಸಿಗೆ ಮನವಿಯನ್ನು ಸಲ್ಲಿಸಲಾಗಿತ್ತು.
ಮಹಿಷ ದಸರಾಗೆ ಭಗವಾನ್ ಬಂದಲ್ಲಿ ಮಸಿಬಳಿಯುವುದಾಗಿ ಕೆಲ ಸಂಘಟನೆಗಳು ಹೇಳಿಕೆ ನೀಡಿದ್ದ ಬೆನ್ನಲ್ಲೇ ದಲಿತ ಸಂಘಟನೆಗಳು ಭಗವಾನ್ ಅವರನ್ನು ಕರೆಯಿಸುತ್ತೇವೆ. ಅವರಿಗೆ ಮಸಿ ಬಳಿಯಲು ಬಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಜೊತೆಗೆ ಭಗವಾನ್ ಅವರಿಗೆ ಮಹಿಳಾ ಕಾರ್ಯಕರ್ತರಿಂದ ಮಸಿ ಬಳಿಸುವ ಸಾಧ್ಯತೆಯಿರುವುದರಿಂದ ಭಗವಾನ್ ಅವರಿಗೆ ನಾವು ಮಹಿಳೆಯರಿಂದಲೇ ರಕ್ಷಣೆ ಕೊಡಿಸುತ್ತೇವೆ ಎಂದು ಹೇಳಿದ್ದರು.
ಈ ಎಲ್ಲ ಘಟನಾವಳಿಗಳನ್ನು ಅವಲೋಕಿಸಿದ ಎಸ್ ಪಿ ವಿಕ್ರಮ್ ಅಮಟೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಜಾಗ್ರಾತಾ ಕ್ರ‌ಮವಾಗಿ ಅ.19 ರಿಂದ 24ರವರೆಗೆ ನಿಷೇದಾಜ್ಞೆ ಜಾರಿಗೊಳಿಸುವಂತೆ ಡಿಸಿ ಮೀನಾ ನಾಗರಾಜ್ ಅವರಿಗೆ ಶಿಫಾರಸ್ಸು ಮಾಡಿದ್ದರು. ಎಸ್ ಪಿ ಶಿಫಾರಸ್ಸಿನ ಮೇಲೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ತಾಪಂ-ಜಿಪಂ-ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ವಿಚಾರ : ಸಚಿವ ಪರಮೇಶ್ವರ್

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನ ಗೃಹ ಸಚಿವರಾದ ಪರಮೇಶ್ವರ್  ರವರು, ತಾಪಂ-ಜಿಪಂ-ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ವಿಚಾರವಾಗಿ , ನಿನ್ನೆ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಿದ್ದೇವೆ, ಎಂದರು.

ಈ ಚುನಾವಣೆಗೆ ಬ್ಯಾಲೆಡ್ ಪೇಪರ್ ಇಂಟ್ರಡ್ಯೂಸ್ ಮಾಡ್ಬೇಕು ಅಂತ ತೀರ್ಮಾನ ಮಾಡಿದ್ದೇವೆ, ತಾಪಂ-ಗ್ರಾಪಂಗೆ ಮಾಡ್ಬೇಕು ಅಂತ ತೀರ್ಮಾನ ಆಗಿದೆ.

ಬಹುಶಃ, ಜಿಬಿಎಗೂ ಅದನ್ನೇ ಅಪ್ಲೈ ಮಾಡುತ್ತಾರೆ.ಎಂದು  ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದರು.

Continue Reading

Chikmagalur

ಗಾಂಧಿ ಹೆಸರಲ್ಲಿ ಕಾಂಗ್ರೆಸ್ಸಿಗರು ನುಂಗಣ್ಣರು ಎಂದು ಬಿಜೆಪಿ ಜಾಹಿರಾತು ವಿಚಾರ : ಪರಮೇಶ್ವರ್

Published

on

ಚಿಕ್ಕಮಗಳೂರು : ಗಾಂಧಿ ಹೆಸರಲ್ಲಿ ಕಾಂಗ್ರೆಸ್ಸಿಗರು ನುಂಗಣ್ಣರು ಎಂದು ಬಿಜೆಪಿ ಜಾಹಿರಾತು ವಿಚಾರ ಎಂದು  ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದರು.

ಗಾಂಧಿ ಬಗ್ಗೆ ಅವರಿಗೆ ಯಾವ ಗೌರವ ಭಾವನೆ ಇದೆ ಎಂಬುದು ಜಗತ್ತಿಗೆ ಗೊತ್ತಿದೆ, ಈಗ ಹೊಸದಾಗಿ ಮಹಾತ್ಮ ಗಾಂಧೀಜಿ ಬಗ್ಗೆ ಮಾತನಾಡಲು ಹೊರಟಿದ್ದಾರೆ.

ಅಷ್ಟು ಗೌರವ ಇದ್ರೆ, ಉದ್ಯೋಗ ಖಾತ್ರಿ ಯೋಜನೆಗೆ ಇದ್ದ ಗಾಂಧಿ ಹೆಸರನ್ನ ಏಕೆ ತೆಗೆಯಲು ಮುಂದಾದರು, ಅದಕ್ಕೆ ಯಾವುದಾದರೂ ಕಾರಣ ಇತ್ತಾ, ಯಾರಾದರೂ ಹೋರಾಟ ಮಾಡಿದ್ದರಾ, ಕಾಂಗ್ರೆಸ್ ಹೆಸರು ಗಾಂಧಿ ಜೊತೆ ಜೋಡಣೆಯಾಗಿದೆ ಎಂದು ತೆಗೆದಿದ್ದಾರೆ.

ನರೇಗಾ ಯೋಜನೆ ವಿಶ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಕೊಡುವ ಕಾರ್ಯಕ್ರಮ ಎಂದು ವರ್ಲ್ಡ್ ಬ್ಯಾಂಕ್ ಹೇಳಿದೆ. ಅನೇಕ ಅಂತಾರಾಷ್ಟ್ರೀಯ ಸಂಸ್ಥೆಗಳು ಹೇಳಿವೆ, ಇದನ್ನೆಲ್ಲ ತಡೆಯಲು ಆಗದ ಬಿಜೆಪಿಯವರು ಹೀಗೆ ಮಾಡಿದ್ದಾರೆ ಎಂದು ಹೇಳಿದರು.

Continue Reading

Chikmagalur

ಧರ್ಮಸ್ಥಳ ಬುರುಡೆ ಕೇಸ್ ತನಿಖಾ ವರದಿ ಬಹಿರಂಗ ವಿಚಾರ

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್  ರವರು, ಧರ್ಮಸ್ಥಳ ಬುರುಡೆ ಕೇಸ್ ತನಿಖಾ ವರದಿ ಬಹಿರಂಗ ವಿಚಾರ  ಹೇಳಿದ್ದಾರೆ.

ಅಂತಿಮ ವರದಿ ಇನ್ನು ಕೊಟ್ಟಿಲ್ಲ, ಕೊಡಬೇಕು. ಅವರು ಎಲ್ಲೆಲ್ಲಿ ಸಾಕ್ಷಿ ಕಲೆ ಹಾಕಬೇಕಿತ್ತೋ ಅಲ್ಲಲ್ಲೇ ಹೋಗಿದ್ದಾರೆ.

ಅದನ್ನೆಲ್ಲಾ ಕ್ರೋಡೀಕರಿಸಿ ಅಂತಿಮ ವರದಿ ನೀಡುತ್ತಾರೆ, ಆಮೇಲೆ ಬಹಿರಂಗಪಡಿಸುತ್ತೀವಿ, ಕಾಲದ ಮಿತಿ ಹೇಳೋಕಾಗುತ್ತಾ, ಸ್ಯಾಟಲೈಟ್ ಲಾಂಚ್ ಮಾಡೋದಾದ್ರೆ ಕಾಲ ಹೇಳಬಹುದು ಎಂದರು.

ಕಾಲ ಹೇಳಲು ಆಗಲ್ಲ, ಆದಷ್ಟು ಬೇಗ ಮಾಡಿ ಎಂದು ಆರಂಭದಲ್ಲೇ ಹೇಳಿದ್ದೇವು,  ಅವರು ಸಂಪೂರ್ಣ ವರದಿ ಸಿದ್ಧಪಡಿಸಿ ಕೊಡ್ತಾರೆ, ಆಮೇಲೆ ಬಿಡುಗಡೆ ಮಾಡುತ್ತೇವೆ ಎಂದರು.

Continue Reading

Trending

error: Content is protected !!