Connect with us

Mysore

ದೇಶಕ್ಕೆ ಶ್ರೇಷ್ಠ ಸಂವಿಧಾನ — ಜಿಲ್ಲಾ ಉಸ್ತುವಾರಿ ಸಮಾಜ ಕಲ್ಯಾಣ ಸಚಿವರು ಎಚ್.ಸಿ.ಮಹದೇವಪ್ಪ

Published

on

ನಂಜನಗೂಡು ಏ.22

ದೇಶದಲ್ಲಿ ಸಮಾನತೆ ಸೌಹಾರ್ತೆ ಎಲ್ಲಾ ಧರ್ಮಗಳು ಸಂವಿಧಾನ ಅಡಿಯಲ್ಲಿ ಒಂದೇ ಎಂದು ಜಿಲ್ಲಾ ಉಸ್ತುವಾರಿ ಸಮಾಜ ಕಲ್ಯಾಣ ಸಚಿವರು ಎಚ್ ಸಿ ಮಹದೇವಪ್ಪ ಹೇಳಿದರು,

ಲೋಕಸಭಾ ಚುನಾವಣೆ ಹಿನ್ನೆಲೆ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸುನೀಲ್ ಬೋಸ್ ರವರ ಪರ ಜಿಲ್ಲಾ ಉಸ್ತುವಾರಿ ಸಮಾಜ ಕಲ್ಯಾಣ ಸಚಿವರು
ಡಾ. ಎಚ್. ಸಿ. ಮಹದೇವಪ್ಪ ರವರು, ಹಾಗೂ ಮಾಜಿ ಶಾಸಕರಾದ ಕಳಲೆ ಎನ್. ಕೇಶವಮೂರ್ತಿ ಜೊತೆಗೊಡಿಕೊಂಡು ನಂಜನಗೂಡು ಕ್ಷೇತ್ರ ವ್ಯಾಪ್ತಿ
ಗ್ರಾಮ ಪಂಚಾಯತ್ ಕೇಂದ್ರಗಳ


ದೇಬೂರು, ಬದನವಾಳು, ಹೆಡತಲೆ, ಹೆಮ್ಮರಗಾಲ
ನೇರಳೆ, ದೊಡ್ಡ ಕವಲಂದೆ ಗ್ರಾಮಗಳಲ್ಲಿ ಮಗನ ಪರ ಅಬ್ಬರ ಮತಯಾಚನೆ ನಡೆಸಿ ಮಾತನಾಡುತ್ತಾ ಅವರು,

ಈ ದೇಶದಲ್ಲಿ ಅತ್ಯಂತ ಅವಮಾನಕರ ಪರಿಸ್ಥಿತಿ ಎಂದರೆ ಅಸ್ಪೃಶ್ಯತೆ, ಅದನ್ನು ಸಂಪೂರ್ಣ ತೆಗೆದು ಹಾಕಬೇಕು,

ದೇಶದ ಮೂಲ ಕಸುಬು ವ್ಯವಸಾಯ ಮತ್ತು ಗುಡಿ ಕೈಗಾರಿಕೆ ಇದರ ಮುಖಾಂತರ ನಮ್ಮ ದೇಶದ ಅಭಿವೃದ್ಧಿ ಮಾಡಿ ಪ್ರತಿಯೊಬ್ಬ ಪ್ರಜೆ ಸ್ವಾವಲಂಬನೆಯಿಂದ ಬದುಕ ಬೇಕು ಎಂದು ಸ್ವತಂತ್ರದ ಉದ್ದೇಶವಾಗಿತ್ತು.

ಆ ಸಂದೇಶ ಈ ಬದನವಾಳು ಗ್ರಾಮದಿಂದ 1927 ಗಾಂಧೀಜಿ ರವರು ಪ್ರಾರಂಭವಾಯಿತು.

ಅದಾದ ನಂತರ ಸಂವಿಧಾನ ಬಂದಮೇಲೆ ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೇತೃತ್ವದ ಅವರ ಪರಿಶ್ರಮದಿಂದ ಸಂವಿಧಾನ ಮೂಲಕ ಪ್ರತಿಯೊಬ್ಬ ಮಾನವ ಹಕ್ಕು ರಕ್ಷಣೆ ಮಾಡಿಕೊಳ್ಳುವ ಹಾಗೆ ಮಾಡಿದರು.

ದೇಶಕ್ಕೆ ಶ್ರೇಷ್ಠ ಸಂವಿಧಾನ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿದ್ದಾರೆ.

ಭಾರತದಲ್ಲಿ 144 ಕೋಟಿ ಜನರು ಇದ್ದಾರೆ. ಅಷ್ಟು ಜನರ ಹಕ್ಕುಗಳು ಏನು ಅಂದರೆ ಬದುಕು ಹಕ್ಕು, ಆಚಾರ ವಿಚಾರಗಳು, ಧಾರ್ಮಿಕ ಆಚರಣೆಗಳು, ಮುಕ್ತವಾಗಿ ಇರಲಿ ಎಂದು ಹಕ್ಕನ್ನು ಕೊಟ್ಟಿದ್ದಾರೆ.

ಬಿಜೆಪಿ ಸರ್ಕಾರ ಎಲ್ಲಾ ಸಮನ್ವಯ ವಿಚಾರಗಳನ್ನು ಗಾಳಿಗೆ ತೋರಿ, ಸರ್ವಾಧಿಕಾರಿ ಧೋರಣೆ ಮೂಲಕ ಸಂವಿಧಾನವನ್ನು ಜನರಿಗೋಸ್ಕರ ಇದ್ದದ್ದನ್ನು ಆಡಳಿತ ವ್ಯವಸ್ಥೆ ಬದಲಾವಣೆ ಮಾಡುತ್ತಿರುವ ಪ್ರಯತ್ನಕ್ಕೆ ಬಿಜೆಪಿ ಸರ್ಕಾರ ಮುಂದಾಗಿದ್ದಾರೆ.

ದೇಶ ಸ್ವತಂತ್ರ ಉದ್ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ಎಲ್ಲರಿಗೂ ಸಮಾನತೆ ಅವಕಾಶ ಬದುಕಿನ ಮಾರಕವಾಗಿ ಸಂಗಾತಿಯಾಗಿದೆ

ಈ ಚುನಾವಣೆ ಅತ್ಯಂತ ಮಹತ್ತರವಾದ ಚುನಾವಣೆಯಾಗಿದೆ. ಚುನಾವಣೆ ಕೋಮುವಾದ ಮತ್ತು ಮಂತಿವಾದ ಸೋತು ಮತ್ತು ಜಾತ್ಯತೀವಾದ,
ಪ್ರಜಾಪ್ರಭುತ್ವಕ್ಕೆ ಸಂವಿಧಾನ ಇರಲೇಬೇಕು.

ಆ ಕಾರಣಕ್ಕೆ ಬಿಜೆಪಿ ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಸ್ವತಂತ್ರ ಉದ್ದೇಶ ಮತ್ತು ಗಾಂಧೀಜಿ ಹೇಳಿದ್ದರು ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನ ಅಡಿಯಲ್ಲಿ ಜಾರಿ ಮಾಡಿದ್ದಾರೆ.

ಆದ್ದರಿಂದ ಈ ದೇಶಕ್ಕೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಸುನೀಲ್ ಬೋಸ್ ಅನ್ನು ಬಹುಮತದಿಂದ ಗೆಲ್ಲಿಸಬೇಕೆಂದು ಮತದಾರರಿಗೆ ಮನವಿ ಮಾಡಿದರು.

ಈ ಸಂದಭ೯ದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಮಹಿಳೆ ಅಧ್ಯಕ್ಷ ಲತಾಸಿದ್ದ ಶೆಟ್ಟಿ, ವೀರಶೈವ ತಾಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ, ಇಂದನ್ ಬಾಬು, ತಗಡೂರು ಯೂತ್ ಅಧ್ಯಕ್ಷ ಹೊಸಕೋಟೆ ಗಿರೀಶ್, ಹೆಜ್ಜಿಗೆ ರವಿ, ಚೋಳ ರಾಜ್, ಕುರಹಟ್ಟಿ ಮಹೇಶ್, ಗಟ್ಟವಾಡಿ ಮಂಜುನಾಥ್, ಸೇರಿದಂತೆ ಪಕ್ಷದ ಮುಖಂಡರು ಇದ್ದರು

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading
Click to comment

Leave a Reply

Your email address will not be published. Required fields are marked *

Mysore

ಜನತಾ ದರ್ಶನದಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

Published

on

 ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡು ಕ್ಷೇತ್ರದಲ್ಲಿ ಇಂದು ತಮ್ಮ ಕಚೇರಿಯ ಆವರಣದಲ್ಲಿ ಸಾರ್ವಜನಿಕರ ಕುಂದು -ಕೊರತೆಗಳಯ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು.

ಜನತಾ ದರ್ಶನದಲ್ಲಿ – ನಂಜನಗೂಡು ತಾಲ್ಲೂಕಿನಾದ್ಯಂತ ಆಗಮಿಸಿದ ಸಾವಿರಾರು ಜನಸಾಮಾನ್ಯರು ಆಗಮಿಸಿದರು.

ನಂಜನಗೂಡು ತಾಲ್ಲೂಕು ಪಂಚಾಯತಿ ಕಾರ್ಯಾಲಯ ಶಾಸಕರ ಕಚೇರಿಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಕೇಳಿ,ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಆಗುವಂತಹ ಕೆಲಸಗಳನ್ನು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಕೆಲವು ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ಫೋನ್ ಮಾಡಿ ಚರ್ಚಿಸಿ ನಿಮ್ಮ ಕೆಲಸಗಳನ್ನು ಶೀಘ್ರದಲ್ಲೇ ಬಗೆಹರಿಸಿ ಕೊಡುತ್ತೇನೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ಕಚೇರಿ ಶಿರಸ್ತೇದರು ರಾಜು , ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.

Continue Reading

Mysore

ಜಾತಿಗಣತಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ?

Published

on

ಜಾತಿಗಣತಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ?
ಅವರು ಇನ್ನೂ ಇದರ ಬಗ್ಗೆ ತಿಳಿದುಕೊಳ್ಳಬೇಕು
ಸೋಷಿಯೋ ಎಕನಾಮಿಕ್ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ
ಲಿಂಗಾಯತರು ವಿರೋಧ ಮಾಡಿದರು
ಹಾಗಾಗಿ ಮತ್ತೊಮ್ಮೆ ಜಾತಿಗಣತಿ ಮಾಡುತ್ತೇವೆ ಅಂತಾರೆ
39 ಜನ ಶಾಸಕರು ಲಿಂಗಾಯತರು ಇದ್ದಾರೆ
ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರಾ ?
ವಿರೋಧ ಇದ್ದರೆ ಕುರ್ಚಿ ಬಿಟ್ಟು ಕೊಡಲಿ
ಯತೀಂದ್ರ ತಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳುತ್ತಿದ್ದಾರೆ
ನಿಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳಬೇಡಿ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

ಕೇಂದ್ರ ಸರ್ಕಾರ ರಾಜಕೀಯವಾಗಿ ಬಲ ತೋರಿಸಲು ಈ ಸರ್ವೇ ಮಾಡುತ್ತಿಲ್ಲ
ಜನರ ಆರ್ಥಿಕ ಸ್ಥಿತಿಗತಿ ಬಗ್ಗೆ ತಿಳಿಯಲು ಸರ್ವೇ ಮಾಡುತ್ತಿದೆ
ನಮ್ಮ ಸರ್ವೇ ಆಗುತ್ತದೆ ನೀವು ಸುಮ್ಮನೆ ಇರಿ
ನಿಮ್ಮ ಸರ್ವೇ ನಮಗೆ ಅಗತ್ಯವಿಲ್ಲ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ಕುರ್ಚಿ ಉಳಿಸಿಕೊಳ್ಳಲು ಪ್ರತಿದಿನ ಸಿದ್ದರಾಮಯ್ಯ ಜನರನ್ನು ಡೈವರ್ಟ್ ಮಾಡುತ್ತಿದ್ದಾರೆ
ಒಬ್ಬರು ಕುರ್ಚಿ ಉಳಿಸಿಕೊಳ್ಳಲು ನೋಡುತ್ತಿದ್ದಾರೆ
ಇನ್ನೊಬ್ಬರು ಕುರ್ಚಿ ಎಳೆಯುತ್ತಿದ್ದಾರೆ
ಇಬ್ಬರ ಕುರ್ಚಿ ಗಲಾಟೆಯಲ್ಲಿ ನಮಗೇನಾದರೂ ಲಾಭ ಆಗುತ್ತಾ ಅಂತ ಇನ್ನೊಂದು ಸ್ವಲ್ಪ ಜನ ಕಾಯುತ್ತಿದ್ದಾರೆ
ಸಿದ್ದರಾಮಯ್ಯ ಮೈಸೂರಿಗೆ ಏನೂ ಅಭಿವೃದ್ದಿ ಕೆಲಸ ಮಾಡಲಿಲ್ಲ
ಸಿದ್ದರಾಮಯ್ಯ ಬದಲಾಗುತ್ತಾರಾ ಅನ್ನೋದನ್ನಾ ಡಿ ಕೆ ಶಿವಕುಮಾರ್ ಕೇಳಿ
ಇದರಲ್ಲಿ ತಂತ್ರ ಮಂತ್ರ ಏನು ಮಾಡಿದ್ದಾರೋ ಗೊತ್ತಿಲ್ಲ
ನವೆಂಬರ್ ನಲ್ಲಿ ಬದಲಾವಣೆ ಅಗತ್ತೊ ಇಲ್ಲವೋ ಗೊತ್ತಿಲ್ಲ
ಆದರೆ ಇನ್ನೂ 3 ವರ್ಷ ಇವರ ಕುರ್ಚಿ ಕಿತ್ತಾಟದ ಅಸಹ್ಯ ನಡೆಯುತ್ತಲೆ ಇರುತ್ತದೆ
ರಾಜ್ಯದ ಜನ ಅಂತೂ ಅವರಿಗೆ 136 ಸೀಟು ಕೊಟ್ಟಿದ್ದಾರೆ
ಹಾಗಾಗಿ ಇನ್ನು 3 ವರ್ಷ ಇವರ ಕಿತ್ತಾಟ ನೋಡಬೇಕು
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

ರಾಜ್ಯದಲ್ಲಿ ಮರು ಜಾತಿಗಣತಿ ವಿಚಾರ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ಸಿದ್ದರಾಮಯ್ಯ 150 ಕೋಟಿ ರೂಪಾಯಿ ವ್ಯಯ ಮಾಡಿ ಕಾಟಾಚಾರಕ್ಕೆ ಈ ಗಣತಿ ಮಾಡಿದ್ದರು
ಇದನ್ನು ಬಿಜೆಪಿ ಜೆಡಿಎಸ್ ವಿರೋಧ ಮಾಡಿತು
ಇದು ಅವೈಜ್ಞಾನಿಕ ಅಂತ ಎಲ್ಲಾರಿಗೂ ಗೊತ್ತಿತ್ತು
ಈಗ ರಾಹುಲ್ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಅಂತ ಹೇಳಿದ್ದಾರೆ
ಇದರಿಂದ 150 ಕೋಟಿ ಹಣ ವ್ಯರ್ಥ
ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತೇವೆ ಅಂತ ಹೇಳಿದೆ
ಹೀಗಿದ್ದಾಗ ಮತ್ತೊಂದು ಬಾರಿ ನಿಮ್ಮ ಗಣತಿ ಮಾಡುವುದು ಬೇಡ
ಇದು ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಅಷ್ಟೇ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರ ವಿರೋಧಕ್ಕೆ ಮರು ಜಾತಿಗಣತಿ ಎಂಬ ವಿಚಾರ.
ಹಳೆ ಜಾತಿಗಣತಿ ಸರ್ವೇಯಿಂದ ನೂರಾರು ಕೋಟಿ ಹಣ ಪೋಲಾಗಿದೆ
ಜನರನ್ನು ಡೈವರ್ಟ್ ಮಾಡಲು ಸಿಎಂ ಹೊರಟಿದ್ದಾರೆ
ಈ ಹಿಂದೆಯೇ ಲಿಂಗಾಯತ ಒಕ್ಕಲಿಗರು ಗಣತಿಗೆ ಒಪ್ಪಿರಲಿಲ್ಲ
10 ವರ್ಷ ಹಳೆಯ ಗಣತಿ ಇದು ಅಂಕಿ ಅಂಶಗಳು ಸರಿಯಿಲ್ಲ ಅಂತ ಹೇಳಿದ್ದೆವು
ಆದರೆ ನಾವು ಇದೇ ಜಾತಿಗಣತಿ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದರು
ಈಗ ಹೈ ಕಮಾಂಡ್ ಹೇಳಿದೆ ಅಂತ ಮತ್ತೊಮ್ಮೆ ಗಣತಿ ಮಾಡಲು ಹೊರಟಿದ್ದಾರೆ
ಇದಕ್ಕೆ ಹಣ ಎಲ್ಲಿಂದ ತರುತ್ತಾರೆ ?
ಮ್ಯಾನ್ ಪವರ್ ಎಲ್ಲಿಂದ ಮಾಡುತ್ತಾರೆ ?
ರಾಜ್ಯದ ಜನರಲ್ಲಿ ಮೂಡಿಸಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ
ಮೈಸೂರಿನಲ್ಲಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿಕೆ

Continue Reading

Mysore

ಅವಧೂತ ದತ್ತಪೀಠದಲ್ಲಿ ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಂಡಿದ್ದ ಸಹಸ್ರ ಚಂಡೀಯಾಗ ಸಂಪನ್ನ

Published

on

ಮೈಸೂರು: ಮೈಸೂರಿನ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಜೂನ್ 6 ರಿಂದ ಹಮ್ಮಿಕೊಂಡಿದ್ದ ವನ ದುರ್ಗಾ ವೃಕ್ಷ ಶಾಂತಿ ಮಹಾಯಜ್ಞ ಮತ್ತು ಸಹಸ್ರ ಚಂಡೀಯಾಗ ಇಂದು ಸಂಪನ್ನಗೊಂಡಿತು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಸನಾತನ ವೈದಿಕ ವಿಧಿಗಳು ಮತ್ತು ಪರಿಸರ ಸಮತೋಲನ ಕಾಪಾಡುವ ಉದ್ದೇಶದಿಂದ ಈ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಜೂನ್ 6 ರಿಂದ ಸಹಸ್ರ ಚಂಡೀ ಯಾಗವನ್ನು ವಿಶ್ವ ರಕ್ಷಣೆ, ಸಮೃದ್ಧಿ ಹಾಗೂ ಸಾಮರಸ್ಯಕ್ಕಾಗಿ ಮತ್ತು ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಗಣಪತಿ ಶ್ರೀಗಳು ಪ್ರಾರಂಭಿಸಿದ್ದರು.

ಇದು ವಿಶ್ವದಲ್ಲೇ ಮೊಟ್ಟ ಮೊದಲ ಮಹಾ ಯಾಗವೆಂಬುದು ವಿಶೇಷ. ಇತ್ತೀಚೆಗೆ ನಡೆದ ಅವಘಡಗಳು‌,ಯುದ್ದಗಳು,ಸಾವು, ನೋವುತಿಳಿದು ಗಣಪತಿ ಶ್ರೀ ಗಳು ಬಹಳ ಬೇಸರಗೊಂಡಿದ್ದರು.

ಹಾಗಾಗಿ ಇಡೀ ಜಗತ್ತಿನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿ,ಲೋಕ ಕಲ್ಯಾರ್ಥವಾಗಿ ಈ ಮಹಾ ಯಾಗವನ್ನು ಜೂನ್ 6 ರಿಂದ ಪ್ರಾರಂಭಿಸಿ ಜೂನ್ 15 ಅಂದರೆ ಇಂದಿನವರೆಗೆ ಎಲ್ಲೂ ಯಾವುದೇ ಲೋಪವಾಗದಂತೆ ಸಂಪನ್ನಗೊಳಿಸಿದ್ದಾರೆ.

ಗಣಪತಿ ಶ್ರೀಗಳಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಬೆನ್ನೆಲುಬಾಗಿ ನಿಂತು ಎಲ್ಲಾ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಪ್ರಕೃತಿ ವಿಕೋಪ, ಪರಿಸರ ಅಸಮತೋಲನ ತಡೆಯುವ ದೃಷ್ಟಿ ಇಟ್ಟುಕೊಂಡು ಶ್ರೀಗಳು‌ ವೃಕ್ಷ ಶಾಂತಿ ಮಹಾಯಜ್ಞವನ್ನು ಹಮ್ಮಿಕೊಂಡರು.

ಪರಿಸರ ಸಮತೋಲನ ಸೂಚಕವಾಗಿಯೇ ಈ ವನದುರ್ಗ ವೃಕ್ಷ ಮಹಾಯಜ್ಞವನ್ನು ಕೈಗೊಂಡ ಗಣಪತಿ ಶ್ರೀಗಳು 8000 ಪವಿತ್ರ ಬೋನ್ಸಾಯ್ ವೃಕ್ಷ ಗಳನ್ನು ಪೂಜಿಸಿ ಸಮರ್ಪಿಸಿದ್ದಾರೆ.

ಇಡೀ ವಿಶ್ವದಲ್ಲೇ ಅತಿ ಹೆಚ್ಚು ಬೋನ್ಸಾಯ್ ವೃಕ್ಷಗಳನ್ನು ಹೊಂದಿರುವ ಖ್ಯಾತಿ ಕೂಡಾ ಅವಧೂತ ದತ್ತ ಪೀಠಕ್ಕೆ ಸಂದಿದೆ.ಹಾಗಾಗಿ ಗಿನ್ನೀಸ್ ವರ್ಡ್ ರೆಕಾರ್ಡ್ ಕೂಡಾ ಅವಧೂತ ದತ್ತಪೀಠಕ್ಕೆ ಸಂದಿದೆ.

ಇಂದು ಮುಂಜಾನೆ ಎಂದರೆ ಗಣಪತಿ ಶ್ರೀಗಳು ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯನಂದ ತೀರ್ಥ ಸ್ವಾಮಿಗಳು ಸಹಸ್ರ ಚಂಡೀಯಾಗದ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದರು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಆಶ್ರಮದ ಆವರಣದಲ್ಲಿ ಈ ಮಹಾ ಯಾಗಕ್ಕಾಗಿ ನಿರ್ಮಿಸಿದ್ದ 11 ಹೋಮ ಕುಂಡಗಳ ಬಳಿಯೂ ಪೂರ್ಣಹುತಿಯನ್ನು ನೆರವೇರಿಸಿದರು. ತದನಂತರ ಪ್ರಧಾನ ಹೋಮಕುಂಡದಲ್ಲಿ ಅತಿ ಪ್ರಮುಖವಾದ ಪೂರ್ಣಾಹುತಿಯನ್ನು ನೆರವೇರಿಸಿ ಯಾಗವನ್ನು ಸಂಪನ್ನಗೊಳಿಸಿದರು.

ನಂತರ ಸಪ್ತ ಋಷಿ ಸರೋವರದಲ್ಲಿ ದೇವಿಯನ್ನು ಉತ್ಸವದಲ್ಲಿ ಕೊಂಡೊಯ್ದು ಅವಭೃತ ಸ್ನಾನ ನೆರವೇರಿಸುವ ಮೂಲಕ ಇಡೀ ಯಾಗವನ್ನು ಸಂಪನ್ನಗೊಳಿಸಲಾಯಿತು.

ಇದೇ‌ ವೇಳೆ ನೂರಾರು ಭಕ್ತರು ಲಲಿತಾ ಸಹಸ್ರನಾಮ ಮತ್ತು ಸೌಂದರ್ಯ ಲಹರಿಯನ್ನು ಪಠಿಸಿದರು. ಆಶ್ರಮದ ಆವರಣದಲ್ಲಿ ಸಂಜೆ ವನದುರ್ಗ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ದೇಶಾದ್ಯಂತ ಹಲವಾರು ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವೃಕ್ಷ ಶಾಂತಿ ಮಹಾ ಯಜ್ಞ ಮತ್ತು ವಿಶ್ವದ ಮೊಟ್ಟಮೊದಲ ಸಹಸ್ರ ಚಂಡೀಯಾಗವನ್ನು ಕಣ್ತುಂಬಿಕೊಂಡು ಪುನೀತರಾದರು.

Continue Reading

Trending

error: Content is protected !!