Connect with us

Hassan

ಹಾಸನದಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು, ಮಂಡ್ಯದಲ್ಲಿ ಸುಮಲತಾ ನಮಗೆ ಸಹಕರಿಸುತ್ತಿಲ್ಲ

Published

on

ಕಾವೇರಿ ನೀರನ್ನು ಉಳಿಸಲು ಶತಸಿದ್ಧ : ಹೆಚ್.ಡಿ. ದೇವೇಗೌಡ

ಹಾಸನ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಅವರು ನಮಗೆ ಸಹಕರಿಸುತ್ತಿಲ್ಲ ಎಂದು ಬೇಸರವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನಮ್ಮ ಮೂರು ಕ್ಷೇತ್ರದಲ್ಲೂ ಜಯಗಳಿಸುವುದಾಗಿ ವಿಶ್ವಾಸವ್ಯಕ್ತಪಡಿಸಿ, ಕಾವೇರಿ ನೀರನ್ನು ಉಳಿಸಲು ಶತಸಿದ್ಧ ಎಂದು ಶಪತ ಮಾಡಿದರು.

ನಗರದ ಹೊರವಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್‌ನವರು ಜಗಳವಾಡುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿನೇ ಇಲ್ಲ. ಆದರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ರಾಹುಲ್ ಗಾಂಧಿ ಹೇಳ್ತಾರೆ. ಕಾವೇರಿ ಬೇಸಿನ್‌ಗೆ ಸಂಬಂಧಪಟ್ಟ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನ ಮಂತ್ರಿಗಳ ಜೊತೆ ಎರಡು ಸಭೆ ಮಾಡಿದ್ದೇನೆ. ಎರಡನೇ ಹಂತದ ಚುನಾವಣೆ ಹೈದರಾಬಾದ್, ಕರ್ನಾಟಕ, ಮುಂಬೈ ಕರ್ನಾಟಕ ಮೇ.೭ ರಂದು ನಡೆಯಲಿದೆ. ಶಿವಮೊಗ್ಗ ಸೇರಿ ಎರಡನೇ ಹಂತದ ಚುನಾವಣೆ ನಡೆಯುತ್ತದೆ ಎಂದರು.

ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತಿನಿ! ಇವತ್ತು ಕಾವೇರಿ ಬೇಸಿನ್‌ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ-ಆಪರೇಟ್ ಮಾಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಕೋಆಪರೇಟ್ ಮಾಡ್ತಿಲ್ಲ.

ಅದರಿಂದ ಕುಮಾರಸ್ವಾಮಿ ಏನೋ ಅಪಾಯ ಆಗುತ್ತೆ ಅಂತ, ಏನು ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ, ಅದು ಜೀವನ್ಮರಣದ ಪ್ರಶ್ನೆ.

ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು ೧೨೫ ಕೋಟಿ ಎನ್‌ಓಸಿ ರಿಲೀಸ್ ಮಾಡಿದ್ದಾರೆ. ರಾಜ್ಯದಲ್ಲಿ ೨೮ ಕ್ಕೆ ೨೮ ಸ್ಥಾನ ಗೆಲ್ಲುಬೇಕು. ಯಾರೇ ಪ್ರಚಾರ, ಅಪಪ್ರಚಾರ ಏನೇ ಮಾಡಲಿ ಈ ದೇವೇಗೌಡ ೯೧ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದಾನೆ ಅದು ಎಲ್ಲರ ಮನಸ್ಸಿಗೆ ನಾಟಿದೆ. ಮೋದಿಯವರು ಡಿಎಂಕೆಯ ಹಂಗಿನಿಂದ ಈ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಹಾಕಿದೆ. ಒಬ್ಬ ಪೊಲೀಸ್ ಅಧಿಕಾರಿ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹೋರಾಡುತ್ತಿದ್ದಾರೆ. ಅಣ್ಣಾ ಡಿಎಂಕೆಯಲ್ಲಿ ಪಕ್ಷದಲ್ಲಿ ಕೆಲವರು ಪರಸ್ಪರ ಭಿನ್ನಾಭಿಪ್ರಾಯಗೊಂಡು ಅವರು ಕೂಡ ಬಿಜೆಪಿ ಜೊತೆ ಅಧಿಕಾರ ಹಂಚಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಅಕೌಂಟ್ ಓಪನ್ ಮಾಡುತ್ತೆ ಯಾವುದೇ ಸಂಶಯವಿಲ್ಲ. ಚಿಕ್ಕಬಳ್ಳಾಪುರದಲ್ಲಿ ನೀರಿನ ಸಮಸ್ಯೆ ಅರ್ಥ ಆಗಿದೆ.

ನಾನು ಗಮನ ಹರಿಸುತ್ತೇನೆ ಎಂದು ಪ್ರಧಾನಮಂತ್ರಿಗೂ ಹೇಳಿದ್ದೇನೆ. ಮೇಕೆದಾಟು, ಕಾವೇರಿ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಮಾಡುತ್ತಿದ್ದೇನೆ.

ಅವರು ಏನು ಹೇಳಿದ್ದಾರೆ ಎನ್ನುವುದನ್ನು ಮಾಧ್ಯಮದ ಮುಂದೆ ಹೇಳಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೋದಲೆಲ್ಲ ಜನಕ್ಕೆ ಅವರು ಹಣದ ಹೊಳೆಯನ್ನು ಹರಿಸುತ್ತಿದ್ದಾರೆ. ಮೂವರು ಇದ್ದರೂ ಆದರೇ ಡಾ. ಮಂಜುನಾಥ್ ಅವರನ್ನು ನಿಲ್ಲಿಸಿದ್ದಾರೆ. ಆದರೂ ಡಾ.ಮಂಜುನಾಥ್ ಗೆಲ್ತಾರೆ. ಅವರು ಅಧಿಕಾರ ಎಷ್ಟು ದುರುಪಯೋಗ ಮಾಡಬೇಕು ಮಾಡಿದ್ದಾರೆ.ಏನೇ ಸಮಸ್ಯೆ ಇಲ್ಲ, ಡಾ.ಮಂಜುನಾಥ್ ಗೆಲ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಯಾವ ಕಾವೇರಿ ನೀರನ್ನು ಉಳಿಸುತ್ತೇನೆ ಎಂದು ಹೇಳಿದ್ದೇನೋ ಅದನ್ನು ಮಾಡುತ್ತೇನೆ, ಅದು ಶತಸಿದ್ದ. ಆದರೆ ಭತ್ತದ ಬೆಳೆಯಿರಿ ಎಂದು ಹೇಳಲು ಹೋಗಲ್ಲ ಎಂದು ಹೇಳಿದರು.

ಇದೆ ವೇಳೆ ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ, ಮಾಜಿ ಶಾಸಕ ಬಿ.ವಿ. ಕರೀಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಸುಮುಖ ರಘು, ಒಕ್ಕಲಿಗರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಇತರರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Hassan

HKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ

Published

on

ಹಾಸನ: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ, ಹಾಸನ ಉಪ ನಿರ್ದೇಶಕರ ಕಛೇರಿ, ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜು, ಹಾಸನ ಹಾಗೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ 2025 – 26ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಸಮಾರೋಪ ಸಮಾರಂಭ ನಗರದ ಹೆಚ್‌ಕೆಎಸ್‌  ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಡಿ.5 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಎ. ಪ್ರವೀಣ್ ಅವರು ಕ್ರೀಡೆಯ ರೂಪು ರೇಷೆಗಳನ್ನು ಕುರಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಸಿ.ಪಿ.ವಿಜಯ್ ಅವರು ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯ ಯಶಸ್ಸಿಗೆ ಹೆಚ್‌ಕೆಎಸ್‌ ಪದವಿ ಪೂರ್ವ ಕಾಲೇಜಿನ ಕಾರ್ಯ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಉಪನಿರ್ದೇಶಕ ಕೆ.ಪಿ.ಗಂಗಾಧರ ಅವರು, ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸೋತವರು ಕುಗ್ಗದೆ ಮುಂದಿನ ಕಾರ್ಯಕ್ಕೆ ಪ್ರವೃತ್ತರಾಗಬೇಕೆಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾ ಪಂದ್ಯಾವಳಿಯಲ್ಲಿ ರಾಜ್ಯದ 33 ಶೈಕ್ಷಣಿಕ ಜಿಲ್ಲೆಗಳು ಭಾಗವಹಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಾಲಕರ ಮತ್ತು ಬಾಲಕಿಯರ ವಿಭಾಗ ಪ್ರಥಮ ಬಹುಮಾನ, ಬೆಂಗಳೂರು ದಕ್ಷಿಣ ಜಿಲ್ಲೆಯ ಬಾಲಕರು ಮತ್ತು ಬಾಲಕಿಯರ ವಿಭಾಗ ದ್ವಿತೀಯ ಬಹುಮಾನ, ಮೈಸೂರು ಜಿಲ್ಲೆಯ ಬಾಲಕರು ಮತ್ತು ಬಾಲಕಿಯರ ವಿಭಾಗ ಮೂರನೇ ಬಹುಮಾನ, ಬೀದರ್ ಜಿಲ್ಲೆಯ ಬಾಲಕರ ವಿಭಾಗದಲ್ಲಿ ನಾಲ್ಕನೇ ಬಹುಮಾನ ಹಾಗೂ ಉಡುಪಿ ಜಿಲ್ಲೆಯ ಬಾಲಕಿಯರ ವಿಭಾಗದಲ್ಲಿ ನಾಲ್ಕನೇ ಬಹುಮಾನವನ್ನು ಪಡೆದುಕೊಂಡು ಸಾಧನೆಗೈದ ಕ್ರೀಡಾಪಟುಗಳಿಗೆ ಪದಕಗಳು ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮವನ್ನು ಸಂಸ್ಕೃತ ಉಪನ್ಯಾಸಕರಾದ ಗಣೇಶ್ ಕೆ ಭಟ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ನಿರೂಪಿಸಿದರೆ, ಆಂಗ್ಲ ಉಪನ್ಯಾಸಕರಾದ ಶ್ರೀನಿವಾಸ್ ಜೆ ಎನ್ ವಂದಿಸಿದರು.

Continue Reading

Hassan

ಸಂವಿಧಾನದ ಮೌಲ್ಯಗಳನ್ನು ಉಳಿಸಲು ಮೋದಿ ಸರ್ಕಾರ ಶ್ರಮಿಸುತ್ತಿದೆ: ಲಾಲ್ ಸಿಂಗ್ ಆರ್ಯ

Published

on

ಹಾಸನ: ಪಿಎಂ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆಡಳಿತ ವ್ಯವಸ್ಥೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಮೌಲ್ಯಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ ಎಂದು ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ತಿಳಿಸಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿ ಬಳಿಯ ಖಾಸಗಿ ಹೋಟೆಲಿನ ಸಭಾಂಗಣದಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿವಸ್ ಹಾಗೂ ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಬಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಸಮಾಜ ಪರ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಸಮಾನ್ಯ ಕೊಡುಗೆಯನ್ನು ಹೃದಯಂಗಮವಾಗಿ ಸ್ಮರಿಸಿದರು. ದಲಿತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಸಮಾಜದ ನಿರ್ಗತಿಕ ವರ್ಗಗಳಿಗೆ ನ್ಯಾಯ ಹಾಗೂ ಹಕ್ಕುಗಳನ್ನು ಒದಗಿಸಲು ಅಂಬೇಡ್ಕರ್ ಮಾಡಿದ ಹೋರಾಟವನ್ನು ಅವರು ನೆನೆದು ನಮನ ಸಲ್ಲಿಸಿದರು.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶದ ಕೋಟ್ಯಾಂತರ ಜನರಿಗೆ ರಕ್ಷಣಾ ಕವಚದಂತೆ ಕೆಲಸ ಮಾಡುತ್ತಿದ್ದು, ಸಾಮಾಜಿಕ ನ್ಯಾಯವನ್ನೂ, ಅವಕಾಶಗಳ ಸಮಾನತೆಯನ್ನೂ ಒದಗಿಸಿದೆ ಎಂದು ಹೇಳಿದರು. ನಿರ್ಗತಿಕರಿಗೆ ನ್ಯಾಯ, ಬದುಕಿಲ್ಲದವರಿಗೆ ಗೌರವ, ದುರ್ಬಲರಿಗೆ ಸಾಮಾಜಿಕ ಭದ್ರತೆ ? ಇವುಗಳನ್ನು ಅಂಬೇಡ್ಕರ್ ಕನಸಿನ ಭಾರತಕ್ಕೆ ನೀಡಿದ ಮಹತ್ವದ ದಿಕ್ಕುಗಳು ಎಂದು ಕೊಂಡಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಕನಸು ಕಂಡ ದೇಶವನ್ನು ನಿರ್ಮಿಸಲು ಮೋದಿ ಸರ್ಕಾರ ಅನೇಕ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಆರ್ಯ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆಲೂರು-ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಪ್ರಾಸ್ತಾವಿಕವಾಗಿ ಮಾತನಾಡಿ, ಇಡೀ ಪ್ರಪಂಚದಲ್ಲಿ ಅತ್ಯುನ್ನತ, ಬಲಿಷ್ಠ ಮತ್ತು ಸಮಗ್ರ ಸಂವಿಧಾನವನ್ನು ದೇಶಕ್ಕೆ ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಕೊಂಡಾಡಿದರು. ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನ ಹೀಗೆ ಹಲವು ದೇಶಗಳ ಅಸ್ಥಿರ ಪರಿಸ್ಥಿತಿಯನ್ನು ಉಲ್ಲೇಖಿಸಿ, ಬಲಿಷ್ಠ ಸಂವಿಧಾನ ಒಂದು ರಾಷ್ಟ್ರವನ್ನು ಹೇಗೆ ರಕ್ಷಿಸುತ್ತದೆ ಎಂಬುದಕ್ಕೆ ಭಾರತದ ಉದಾಹರಣೆಯನ್ನು ಅವರು ಮುಂದಿಟ್ಟರು. ಸಂವಿಧಾನ ಬರೆಯುವುದು ಅಷ್ಟೇನೂ ಸುಲಭದ ಕಾರ್ಯವಲ್ಲ ಅಪಮಾನಗಳನ್ನು ಸಹಿಸಿಕೊಂಡು, ನೂರಾರು ಗ್ರಂಥಗಳನ್ನು ಓದಿ, ಅಂಬೇಡ್ಕರ್ ಸಂವಿಧಾನ ರಚಿಸಿದ ಮಹಾನುಭಾವ ಎಂದು ಹೇಳಿದರು.

ಅಂಬೇಡ್ಕರ್ ಸಂವಿಧಾನ ಬರೆಯದೆ ಹೋಗಿದ್ದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುತ್ತಿರಲಿಲ್ಲ ಅಭಿಪ್ರಾಯಪಟ್ಟರು. ಮಹಿಳೆಯರಿಗೆ ಆಸ್ತಿಯಲ್ಲಿ ಹಕ್ಕು, ಸಮಾಜದ ದುರ್ಬಲ ವರ್ಗಗಳಿಗೆ ಅವಕಾಶ ಇವೆಲ್ಲಾ ಬಾಬಾಸಾಹೇಬ್ ನೀಡಿದ ದಾರಿ ಎಂದು ಹೇಳಿದರು.

ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ಅವರು, ದೇಶಕ್ಕೆ ಸಂವಿಧಾನ ಎನ್ನುವ ಅಮೃತ ಕೊಟ್ಟು, ವಿಷವನ್ನು ಕುಡಿದ ವ್ಯಕ್ತಿ ಅಂಬೇಡ್ಕರ್ ಎಂದು ಮೋದಿ ಅವರು ಹೇಳಿದ ಮಾತುಗಳನ್ನು ಸ್ಮರಿಸಿದರು.

ಮಹಿಳೆಯರ ಮೇಲೆ ಅನ್ಯಾಯ, ದಲಿತರ ಮೇಲಿನ ಅವಮಾನ, ಧರ್ಮಾಧಾರಿತ ರಾಜಕೀಯದ ವಿರುದ್ಧ ಅಂಬೇಡ್ಕರ್ ಧೈರ್ಯವಾಗಿ ಧ್ವನಿ ಎತ್ತಿದ ಸಿದ್ಧಾಂತಗಳನ್ನು ಹಂಚಿಕೊಂಡರು. ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿರುವುದು ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ಸರ್ಕಾರದಲ್ಲಿ ಎಂದು ಅವರು ತಿಳಿಸಿದರು.

ದೇಶದಲ್ಲಿ ಒಟ್ಟು 106 ಬಾರಿ ಸಂವಿಧಾನ ತಿದ್ದುಪಡಿ ನಡೆದಿವೆ. ಇದರಲ್ಲೇ ಕಾಂಗ್ರೆಸ್ 75 ಬಾರಿ, ಕಾಂಗ್ರೆಸ್‌ಯೇತರ ಸರ್ಕಾರಗಳು 31 ಬಾರಿ ಸಂವಿಧಾನವನ್ನು ಬದಲಿಸಿದವರು. ಆದರೇ ಮೋದಿ ಅಲ್ಲ, ಕಾಂಗ್ರೆಸ್ ಸರ್ಕಾರಗಳು ಎಂದು ಹೇಳಿದರು. ನಿಜವಾದ ಪ್ರಜಾಪ್ರಭುತ್ವ ಉಳಿಸುವವರು ನರೇಂದ್ರ ಮೋದಿ, ಸಂವಿಧಾನ ಪಾಲಿಸುವವರು ಬಿಜೆಪಿ. ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ನೀಡಿರುವವರು ಮೋದಿ ಎಂದು ಶಾಸಕರು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಮೋರ್ಚಾ ಕಾರ್ಯಾಧ್ಯಕ್ಷ ಕುಮಾರ್ ನಾಯಕ್, ಜಿಲ್ಲಾ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಎಸ್.ಸಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಎಸ್.ಡಿ. ಚಂದ್ರು, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ, ಉಪಾಧ್ಯಕ್ಷ ಶ್ರೀನಿವಾಸ್, ರಾಜ್ಯ ಕಾರ್ಯದರ್ಶಿ ಓಂಕಾರ್, ಪ್ರಶಾಂತ್ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತಿ ನೀಡಿದರು. ವೇಧವತಿ ದೇಶಗೀತೆ ಹಾಡಿ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸೊಬಗು ನೀಡಿದರು. ಗಿರೀಶ್ ಸ್ವಾಗತಿಸಿದರು.

Continue Reading

Hassan

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ

Published

on

50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,

ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,

*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*

ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,

ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,

ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,

ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,

ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು

Continue Reading

Trending

error: Content is protected !!