State
ಚೆನ್ನಮ್ಮ ನಿಧನಕ್ಕೆ ಹೊಂಬುಜ ಜೈನ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ತೀವ್ರ ಸಂತಾಪ:
ಶಿವಮೊಗ್ಗ : ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಅವರು 2026ರ ಜುಲೈ 18ರಂದು 89ನೇ ವಯಸ್ಸಿನಲ್ಲಿ ನಿಧನರಾಗಿರುವುದು ಅಪಾರ ದುಃಖಕ್ಕೆ ಕಾರಣವಾಗಿದೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಲಾಗಿದೆ.

ಸಂತಾಪ ಸಂದೇಶದಲ್ಲಿ, ಚೆನ್ನಮ್ಮ ಅವರು ಸರಳತೆ, ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದರು ಎಂದು ಸ್ಮರಿಸಲಾಗಿದೆ. ಧಾರ್ಮಿಕ ಕಾರ್ಯಗಳಲ್ಲಿ ಸದಾ ತೊಡಗಿಸಿಕೊಂಡಿದ್ದ ಅವರು ಆದರ್ಶ ಗೃಹಿಣಿಯಾಗಿ ಧರ್ಮಪಾಲನೆ ಮತ್ತು ಸಂಪ್ರದಾಯಗಳ ಆಚರಣೆಯಲ್ಲಿ ಜೀವನ ಸಾಗಿಸಿದ್ದರು. ಧರ್ಮನಿಷ್ಠೆ, ಸೇವಾ ಮನೋಭಾವ ಹಾಗೂ ಸಮಾಜದೊಂದಿಗೆ ಹೊಂದಿದ್ದ ಆತ್ಮೀಯ ಬಾಂಧವ್ಯದಿಂದ ಅವರು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಹೇಳಲಾಗಿದೆ.
ನಡೆದಾಡುವ ಸರಸ್ವತಿಯಂತಿದ್ದ ಚೆನ್ನಮ್ಮ ಅವರು ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬೆಳೆಸಲು ಸದಾಕಾಲ ಶ್ರಮಿಸಿದ್ದರು. ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ ಸಮಾಜಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ಸೂಚಿಸಲಾಗಿದೆ.
ಚೆನ್ನಮ್ಮ ನಿಧನಕ್ಕೆ ಹೊಂಬುಜ ಜೈನ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ತೀವ್ರ ಸಂತಾಪ
ಸಂದೇಶದ ಅಂತ್ಯದಲ್ಲಿ, “ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಅಭೀಷ್ಟವರಪ್ರದಾಯಿನಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಅವರು ಶ್ರೀಮತಿ ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಜೊತೆಗೆ ಶ್ರೀ ಹೆಚ್.ಡಿ. ದೇವೇಗೌಡರು ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ” ಎಂದು ಪ್ರಾರ್ಥಿಸಲಾಗಿದೆ.
.
State
ಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಅವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಪ್ರಜ್ವಲ್ ರೇವಣ್ಣ ಅವರು ಪೆರೋಲ್ ಕೋರಿ ಅರ್ಜಿ ಸಲ್ಲಿಸದೇ, ವಿಡಿಯೋ ಕಾನ್ಫರೆನ್ಸ್ (ವಿ.ಸಿ.) ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮಾತ್ರ ಅನುಮತಿ ಕೋರಿದ್ದರು. ಈ ಮನವಿಯನ್ನು ಪರಿಶೀಲಿಸಿದ ಜೈಲು ಅಧಿಕಾರಿಗಳು, ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಕುಟುಂಬದ ಈ ದುಃಖದ ಸಂದರ್ಭದಲ್ಲಿ ವರ್ಚುವಲ್ ಮೂಲಕ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
State
ರಾಷ್ಟ್ರಪತಿ ಭವನದತ್ತ ಶಿರಸಿಯ ಯುವ ವಿಜ್ಞಾನಿ!
ದೇಶದ 26 ನವೋದ್ಯಮಿಗಳಲ್ಲಿ ಅಕ್ಷಯ್ ಮಾಶೇಲ್ಕರ್ಗೆ ಸ್ಥಾನ ಶಿಕ್ಷಣ ಕ್ಷೇತ್ರದ ಸಂಶೋಧನೆಗೆ ‘Grassroots Innovator Recognition – 2026’ ರಾಷ್ಟ್ರೀಯ ಗೌರವ
ಶಿರಸಿ: ಉತ್ತರ ಕನ್ನಡದ ಪುಟ್ಟ ಪಟ್ಟಣ ಶಿರಸಿಯಿಂದ ಆರಂಭವಾದ ಕನಸು ಈಗ ರಾಷ್ಟ್ರಪತಿ ಭವನದವರೆಗೆ ತಲುಪಿದೆ. ಗ್ರಾಮೀಣ ಮಕ್ಕಳಿಗೂ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ದೊರೆಯಬೇಕು ಎಂಬ ಧ್ಯೇಯದೊಂದಿಗೆ ಹಲವು ವರ್ಷಗಳಿಂದ ಸಂಶೋಧನೆ ನಡೆಸುತ್ತಿರುವ ಯುವ ವಿಜ್ಞಾನಿ ಅಕ್ಷಯ್ ಜಯವಂತ್ ಮಾಶೇಲ್ಕರ್ ಅವರಿಗೆ ದೇಶದ ಪ್ರತಿಷ್ಠಿತ ‘Grassroots Innovator Recognition – 2026’ ಗೌರವ ಲಭಿಸಿದೆ.

ನಿತಿ ಆಯೋಗದ ಅಟಲ್ ಇನೋವೇಶನ್ ಮಿಷನ್ (AIM) ವತಿಯಿಂದ ನೀಡಲಾಗುವ ಈ ರಾಷ್ಟ್ರೀಯ ಗೌರವಕ್ಕೆ ದೇಶದಾದ್ಯಂತ ಆಯ್ಕೆಯಾದ ಕೇವಲ 26 ಗ್ರಾಸ್ರೂಟ್ಸ್ ಇನೋವೇಟರ್ಗಳಲ್ಲಿ ಅಕ್ಷಯ್ ಕೂಡ ಒಬ್ಬರಾಗಿರುವುದು ಉತ್ತರ ಕನ್ನಡ ಜಿಲ್ಲೆಗೆ ಹೆಮ್ಮೆಯ ಕ್ಷಣವಾಗಿದೆ. ಜುಲೈ 31ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಯವರಿಂದ ಅವರಿಗೆ ಈ ಪ್ರಶಸ್ತಿ ಪ್ರದಾನವಾಗಲಿದೆ.
ಶಿಕ್ಷಣವನ್ನು ಬದಲಿಸುವ ಸಂಶೋಧನೆಗೆ ರಾಷ್ಟ್ರದ ಮನ್ನಣೆ
ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳಲ್ಲೇ ಸೀಮಿತಗೊಳಿಸದೆ, ಅನುಭವಾತ್ಮಕ ಹಾಗೂ ಆಸಕ್ತಿದಾಯಕವಾಗಿಸುವ ಉದ್ದೇಶದಿಂದ ಅಕ್ಷಯ್ ಹಲವು ನವೀನ ಸಂಶೋಧನೆಗಳನ್ನು ನಡೆಸಿದ್ದಾರೆ. ಶಿಕ್ಷಣ ಸಂಶೋಧನಾ ಕ್ಷೇತ್ರದಲ್ಲಿ ಅವರು ರೂಪಿಸಿರುವ ಹಲವು ತಂತ್ರಜ್ಞಾನ ಆಧಾರಿತ ಕಲಿಕಾ ಮಾದರಿಗಳು ಈ ರಾಷ್ಟ್ರೀಯ ಗೌರವಕ್ಕೆ ಅವರನ್ನು ಪಾತ್ರರನ್ನಾಗಿಸಿವೆ.
ಪ್ರಸ್ತುತ ಬೆಂಗಳೂರಿನ ಆರ್.ವಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಸಂಶೋಧನಾ ಕ್ಷೇತ್ರದಲ್ಲಿ ಪಿಎಚ್.ಡಿ. ವ್ಯಾಸಂಗ ಮಾಡುತ್ತಿರುವ ಅಕ್ಷಯ್, ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

AI, AR, VR ಮೂಲಕ ಹೊಸ ಶಿಕ್ಷಣ ಕ್ರಾಂತಿ
ಅಕ್ಷಯ್ ಅಭಿವೃದ್ಧಿಪಡಿಸಿರುವ ಶೈಕ್ಷಣಿಕ ತಂತ್ರಜ್ಞಾನಗಳಲ್ಲಿ AR (Augmented Reality), VR (Virtual Reality) ಆಧಾರಿತ ಕಲಿಕಾ ಪರಿಹಾರಗಳು, STEM ಶಿಕ್ಷಣ ಸಾಧನಗಳು, ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ಉಪಕರಣಗಳು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಹಲವು ಶಿಕ್ಷಣ ಆಟಿಕೆಗಳು ಸೇರಿವೆ. ಅವರ ಸಂಶೋಧನೆಗಳು ಮಕ್ಕಳಿಗೆ ವಿಜ್ಞಾನ ಮತ್ತು ಗಣಿತವನ್ನು ಕೇವಲ ಓದುವ ವಿಷಯವಲ್ಲ, ಅನುಭವಿಸಿ ಕಲಿಯುವ ವಿಷಯವನ್ನಾಗಿ ರೂಪಿಸುವತ್ತ ಗಮನಹರಿಸಿವೆ.
‘Geomagic’ಗೆ ನಾಲ್ಕು ಪೇಟೆಂಟ್
ಅಕ್ಷಯ್ ರೂಪಿಸಿರುವ ‘Geomagic’ ಎಂಬ ಗಣಿತ ಶಿಕ್ಷಣ ಸಂಶೋಧನೆಗೆ ಇತ್ತೀಚೆಗೆ ನಾಲ್ಕು ಪೇಟೆಂಟ್ಗಳು ದೊರೆತಿವೆ. ಆಟದ ಮೂಲಕ ಗಣಿತವನ್ನು ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ರೂಪಿಸಲಾದ ಈ ಸಂಶೋಧನೆ ಈಗಾಗಲೇ ಶಿಕ್ಷಣ ಕ್ಷೇತ್ರದ ತಜ್ಞರಿಂದ ಮೆಚ್ಚುಗೆ ಪಡೆದಿದೆ.

ಶಿರಸಿಯಿಂದ ರಾಷ್ಟ್ರಪತಿ ಭವನದವರೆಗೆ…
ಒಂದು ಸಣ್ಣ ಪಟ್ಟಣದ ಯುವ ವಿಜ್ಞಾನಿಯ ಸಂಶೋಧನೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಹೊಸ ಪ್ರೇರಣೆ. ಶಿಕ್ಷಣ ಕ್ಷೇತ್ರದಲ್ಲಿ ನವೋದ್ಯಮದ ಮೂಲಕ ಸಮಾಜದಲ್ಲಿ ಬದಲಾವಣೆ ತರಬಹುದು ಎಂಬುದನ್ನು ಅಕ್ಷಯ್ ಮಾಶೇಲ್ಕರ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಜುಲೈ 31ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಗೌರವ ಸಮಾರಂಭವು ಕೇವಲ ಅಕ್ಷಯ್ ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ವೈಜ್ಞಾನಿಕ ಪ್ರತಿಭೆಗೆ ದೊರೆತ ರಾಷ್ಟ್ರೀಯ ಮನ್ನಣೆಯೂ ಆಗಿದೆ.
Special
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ–2026ಕ್ಕೆ ನಾಮನಿರ್ದೇಶನ ಆಹ್ವಾನ!!
ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ–2026’ (Pradhan Mantri Rashtriya Bal Puraskar) ಪ್ರಶಸ್ತಿಗಾಗಿ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪೋಷಕರು, ಶಿಕ್ಷಕರು, ಸಂಸ್ಥೆಗಳು ಅಥವಾ ಮಕ್ಕಳು ಸ್ವತಃ (Self-Nomination) ಅರ್ಜಿ ಸಲ್ಲಿಸಬಹುದಾಗಿದೆ.
ಯಾವ ಕ್ಷೇತ್ರಗಳಲ್ಲಿ ಪ್ರಶಸ್ತಿ?
ಈ ಪ್ರಶಸ್ತಿಗೆ ಕೆಳಕಂಡ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳು ಅರ್ಹರಾಗಿರುತ್ತಾರೆ.
•ಶೌರ್ಯ (Bravery)
•ಸಮಾಜ ಸೇವೆ (Social Service)
•ಪರಿಸರ ಸಂರಕ್ಷಣೆ (Environment)
•ಕ್ರೀಡೆ (Games & Sports)
•ಕಲೆ ಮತ್ತು ಸಂಸ್ಕೃತಿ (Art)
•ವಿಜ್ಞಾನ ಮತ್ತು ತಂತ್ರಜ್ಞಾನ (Science & Technology)
ದೇಶಕ್ಕೆ ಮಾದರಿಯಾಗುವಂತಹ ಸಾಧನೆ ಮಾಡಿದ ಮಕ್ಕಳನ್ನು ಈ ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತದೆ.

ಅರ್ಹತಾ ಮಾನದಂಡಗಳು:
2026ರ ಜುಲೈ 31ರ ವೇಳೆಗೆ 5 ವರ್ಷಕ್ಕಿಂತ ಮೇಲ್ಪಟ್ಟು 18 ವರ್ಷ ಮೀರದ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಭಾರತೀಯ ನಾಗರಿಕರಾಗಿದ್ದು, ಭಾರತದಲ್ಲೇ ವಾಸಿಸುತ್ತಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರು Self-Nomination ಅಥವಾ ಇತರರ ಮೂಲಕ Nomination ಸಲ್ಲಿಸಬಹುದು. ಅರ್ಜಿಯನ್ನು ಆನ್ಲೈನ್ ಮೂಲಕ https://awards.gov.in ವೆಬ್ಸೈಟ್ನಲ್ಲಿ ಸಲ್ಲಿಸಬೇಕು. ಅಗತ್ಯ ದಾಖಲೆಗಳು ಹಾಗೂ ಸಾಧನೆಗೆ ಸಂಬಂಧಿಸಿದ ಮಾಹಿತಿಯನ್ನು ಅರ್ಜಿಯೊಂದಿಗೆ ಅಪ್ಲೋಡ್ ಮಾಡಬೇಕು.

ಕೊನೆಯ ದಿನಾಂಕ:
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ–2026ಕ್ಕೆ ಅರ್ಜಿ ಸಲ್ಲಿಸಲು 2026ರ ಜುಲೈ 31 ಕೊನೆಯ ದಿನವಾಗಿದೆ. ಅರ್ಹ ಮಕ್ಕಳು ಹಾಗೂ ಅವರ ಪೋಷಕರು ಅಥವಾ ಶಿಕ್ಷಣ ಸಂಸ್ಥೆಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಒಳಿತು.
ದೇಶದ ಭವಿಷ್ಯವಾಗಿರುವ ಮಕ್ಕಳ ಪ್ರತಿಭೆ, ಧೈರ್ಯ ಮತ್ತು ಸಾಮಾಜಿಕ ಬದ್ಧತೆಯನ್ನು ರಾಷ್ಟ್ರದ ಮಟ್ಟದಲ್ಲಿ ಗುರುತಿಸಿ ಗೌರವಿಸುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಇದು ತಮ್ಮ ಪ್ರತಿಭೆಯನ್ನು ದೇಶದ ಮುಂದೆ ಪ್ರದರ್ಶಿಸಲು ದೊರೆಯುವ ಅಮೂಲ್ಯ ಅವಕಾಶವಾಗಿದೆ. ಆದ್ದರಿಂದ ಅರ್ಹ ಮಕ್ಕಳನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ನಾಮನಿರ್ದೇಶನ ಸಲ್ಲಿಸಲು ಸಂಬಂಧಪಟ್ಟವರು ಮುಂದಾಗಬೇಕು.
-
State5 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Hassan19 hours agoಚೆನ್ನಮ್ಮ ಅಂತ್ಯಕ್ರಿಯೆ: ಹಾಸನದಲ್ಲಿ 5 ತಾತ್ಕಾಲಿಕ ಹೆಲಿಪ್ಯಾಡ್ಗಳ ನಿರ್ಮಾಣ
-
Chamarajanagar24 hours agoಅಕ್ರಮ ಮದ್ಯ ಸಾಗಾಟ: ಬೈಕ್, ಮಾಲು ಸಮೇತ ಆರೋಪಿ ಬಂಧನ
-
National4 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Chikmagalur18 hours agoಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ: ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
-
Kodagu22 hours agoಭಾಗಮಂಡಲ ಮೇಲ್ಸೇತುವೆ ಮತ್ತು ಸುತ್ತಲಿನ ಅಭಿವೃದ್ಧಿಗೆ 3 ಕೋಟಿ ಅನುದಾನ
-
Hassan5 hours agoಚೆನ್ನಮ್ಮ ಅಂತಿಮ ದರ್ಶನಕ್ಕೆ ಪ್ರಜ್ವಲ್ ಬರಲ್ಲ:
-
Hassan2 hours agoನೀಟ್–ಜೆಇಇ ಫಲಿತಾಂಶದಲ್ಲಿ ಹೊಸ ಇತಿಹಾಸ ಬರೆದ ಪಾಠಶಾಲಾ ನೀಟ್ ಅಕಾಡೆಮಿ
