Mandya
ಧರ್ಮಸ್ಥಳ ಸಂಘದಿಂದ ಬಡ ಕುಟುಂಬಕ್ಕೆ ವಾತ್ಸಲ್ಯ ಕಿಟ್ ವಿತರಣೆ
ಶ್ರೀರಂಗಪಟ್ಟಣ: ತಾಲೂಕಿನಲ್ಲಿ ಇರುವ ಸುಮಾರು 31 ಬಡ ಕುಟುಂಬಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ
ಪ್ರಾದೇಶಿಕ ನಿರ್ದೆಶಕ ಜಯಂತ್ ಪೂಜಾರಿರವರು ವಾತ್ಸಲ್ಯ ಕಿಟ್ ವಿತರಿಸಿದರು.
ಶ್ರೀ ಕ್ಷೇತ್ರದಿಂದ ವಿತರಿಸಲಾಗುತ್ತಿರುವ ಈ ವಾತ್ಸಲ್ಯ ಕಿಟ್ ಗಳು ಅವರ ಬಡತನವನ್ನು ತಾತ್ಕಲಿಕವಾಗಿ ನೀಗಿಸಿ, ಜೀವನದಲ್ಳಿ ಮುಂದೆ ಬರಲು ಉತ್ಸಾಹ ತುಂಬಲಿದೆ ಎಂದರು.

ಈ ವೇಳೆ ಪುರಸಭಾ ಸದಸ್ಯ ರಾಜು, ಜನ ಜಾಗೃತಿ ವೇದಿಕೆ ಅಧ್ಯಕ್ಷೆ ನಳಿನಿ, ಮಾಜಿ ಪುರಸಭೆ ಸದಸ್ಯ ಸುಬ್ರಮಣ್ಯ, ಕ್ಷೇತ್ರ ಯೋಜನಾಧಿಕಾರಿ ಗಣಪತಿ ಭಟ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Mandya
ಫೆ. 06 ರಂದು ಜಿಲ್ಲಾ”ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ
ಮಂಡ್ಯ: ಜಿಲ್ಲಾ “ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ” :ಅಭಿಯಾನದ ಅಂಗವಾಗಿ ನಾಳೆ(ಫೆ.06) ಮಕ್ಕಳ ಸಂರಕ್ಷಣೆ ಮತ್ತು ಕಾನೂನು ಕುರಿತು ಬೃಹತ್ ತರಬೇತಿ ಕಾರ್ಯಾಗಾರ ಹಮ್ನಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಬಾಲ ನ್ಯಾಯ ಸಮಿತಿ ಕರ್ನಾಟಕ ಉಚ್ಚ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಡ್ಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ (ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ,ಇವರ ಸಂಯುಕ್ತ ಆಶ್ರಯದಲಲ್ಲಿ ಜಿಲ್ಲೆಯನ್ನು “ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ” ಅಭಿಯಾನದ ಅಂಗವಾಗಿ ಮಕ್ಕಳ ಸಂರಕ್ಷಣೆ ಮತ್ತು ಕಾನೂನು ಕುರಿತು ಬೃಹತ್ ತರಬೇತಿ ಕಾರ್ಯಾಗಾರವನ್ನು ಫೆ. 06 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ.

ಜಿಲ್ಲಾ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಹೆಚ್. ಶಶಿಧರ ಶೆಟ್ಟಿ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಕಾರ್ಯಕ್ರಮದ ಅಧ್ಯಕತೆಯನ್ನು ವಹಿಸಲಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ.ಎಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಶಿವಪ್ರಸಾದ್ ಕೆ.ಬಿ,ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ವೆಂಕಟೇಶ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಆರ್. ನಂದಿನಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯಜಂಟಿ ನಿರ್ದೇಶಕರಾದ ನಿಶ್ಚಲ್ ಬಿ.ಹೆಚ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ನಿರ್ದೇಶಕರಾದ ಡಾ.ಸ್ನೇಹ ಸಿ.ವಿ ಕೆ.ಎ.ಎಸ್,ವಕೀಲರ ಸಂಘ,ಅಧ್ಯಕ್ಷರು ಸತ್ಯಾನಂದ.ಟಿ.ಎಸ್.,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೋಭಾರಾಣಿ ವಿ.ಜೆ,ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Mandya
ಶ್ರೀ ಸೋಮನಹಳ್ಳಿಯಲ್ಲಿ 10 ದಿನಗಳ ಕಾಲ ಅಮ್ಮನವರ ಉತ್ಸವ : 7 ದಿನಗಳ ಕಾಲ”ದನಗಳ ಜಾತ್ರೆ
ಮೇಲುಕೋಟೆ : ಚಿಣ್ಯ ಹಾಗು ಹೊನಕೆರೆ ಪಂಚಾಯತಿ ವ್ಯಾಪ್ತಿಯ 24 ಗ್ರಾಮ ಗಳ ಸಮೂಹ ಮತ್ತು ನೇತೃತ್ವದಲ್ಲಿ “ಶ್ರೀ ಸೋಮನಹಳ್ಳಿ ಅಮ್ಮನವರ ” 10 ದಿನಗಳ ಉತ್ಸವ, ತೇರು, ಕೊಂಡೋತ್ಸವ ದ ಅಂಗವಾಗಿ ಏಳು ದಿನಗಳ ಕಾಲ”ದನಗಳ ಜಾತ್ರೆ “ಯನ್ನು ತಾಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿತ್ತು. ಸುಮಾರು 465 ಜೋಡಿ ರಾಸು ಗಳ ಪ್ರದರ್ಶನ ಮತ್ತು ಮಾರಾಟ ದ ವಹಿವಾಟಾ ಯಿತು.

ಪ್ರದರ್ಶನ ದ ಅಂತಿಮ ದಿನ ವಾದ ಇಂದು ತಾಲೂಕಿನ ನಾಯಕರಾದ ಶ್ರೀಮತಿ ಶ್ರೀಚೆಲುವ ರಾಯ ಸ್ವಾಮಿ,ನಾಗಮಂಗಲ ತಾ. ಪಿ. ಎಲ್. ಡಿ.ಅಧ್ಯಕ್ಷ ಶ್ರೀ ವೆಂಕಟೇಶ್, ಶ್ರೀ ಸುನೀಲ್ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀ ಕೃಷ್ಣೆಗೌಡ, ಪ್ರದೀಪ್ ಮುಂತಾದವರು ಹಾಜರಿದ್ದು. ಗುರುತಿಸಿದ ಉತ್ತಮ ರಾಸು ಗಳಿಗೆ ಬಹುಮಾನ ವಿತರಿಸಿದರು.
Mandya
ಬೃಹತ್ ಜನಜಾಗೃತಿ ಜಾಥಾ, ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿ, ಎಸ್ಪಿ
ಮದ್ದೂರು: ಅಜ್ಞಾನ, ಅರಿವಿನ ಕೊರತೆಯಿಂದ ತಮ್ಮ ಮೇಲಿರುವ ಭಾರ ಕಳೆದುಕೊಳ್ಳಬೇಕೆಂಬ ಉದ್ದೇಶದಿಂದ 18 ವರ್ಷಕ್ಕೂ ಮೊದಲೇ ಹೆಣ್ಣು ಮಕ್ಕಳ ಮದುವೆ ಮಾಡಿಸುವ ಮೂಲಕ ಪಾಲಕರು ಅವರ ಬದುಕನ್ನು ಬಲಿ ಕೊಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಕಳವಳ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶಾನಲಯ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲಾ ಅಭಿಯಾನದ ಅಂಗವಾಗಿ ಬಾಲ್ಯ ವಿವಾಹ ವಿರೋಧಿಸಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ಜಾಥಾ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯ ವಿವಾಹವೂ ಒಂದಾಗಿದ್ದು, ಹೆಣ್ಣು ಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ ಎಂದರು.
ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು, ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಸಹ ಸಾರ್ವಜನಿಕರ ಹೊಣೆಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಕಳೆದ ಮೂರು ವರ್ಷಗಳಿಗೆ ಹೊಲಿಸಿದರೆ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲರು ಜಾಗೃತರಾಗಬೇಕೆಂದು ಕಿವಿ ಮಾತು ಹೇಳಿದರು.
ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವಾರು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯ ವಿವಾಹವೂ ಒಂದು. ಇದು ಪ್ರಮುಖವಾಗಿ ಹೆಣ್ಣು ಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ ಇಂತಹ ಪಿಡುಗಿಗೆ ಹಲವಾರು ಹೆಣ್ಣುಮಕ್ಕಳು ತುತ್ತಾಗಿದ್ದಾರೆ ಎಂದರು.
ಈ ಅನಿಷ್ಟ ಪದ್ದತಿ ಹಾಗೂ ಸಾಮಾಜಿಕ ಪಿಡುಗು ಎಂದು ಕೇಂದ್ರ ಸರ್ಕಾರ ಗುರುತಿಸಿ ಅದಕ್ಕಾಗಿಯೇ ಜಾರಿಗೆ ತಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಪ್ರಕಾರ 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ಮದುವೆ ಶಿಕ್ಷಾರ್ಹ ಅಪರಾಧವಾಗಿದೆ. ಈ ಕಾಯಿದೆ ಪ್ರಕಾರ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವ ಮೊದಲೇ ಬಾಲ್ಯ ವಿವಾಹ ಮಾಡಿದರೆ ಪಾಲಕರಿಗೆ 2 ವರ್ಷಗಳ ಕಠಿಣ ಜೈಲುವಾಸ, 1 ಲಕ್ಷ ದಂಡ ಇದೆ. ಇದು ಜಾಮೀನು ರಹಿತ ಹಾಗೂ ವಿಚಾರಣಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಆನಂದ್ ಮಾತನಾಡಿ, ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಸಾಕಷ್ಟು ಪ್ರಕರಣಗಳು ದಾಖಲಾಗಿದ್ದವು. ಆದರೆ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಕ್ಕಳ ರಕ್ಷಣಾ ನಿದರ್ೇಶನಾಲಯ, ಅಧಿಕಾರಿಗಳ ಜತೆಗೆ ಸಾಕಷ್ಟು ಜಾಥಾ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ತರಲು ಎಲ್ಲರು ಮುಂದಾಗಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ತಾಲೂಕು ಕ್ರೀಡಾಂಗಣದವರೆಗೂ ವಿವಿಧ ಶಾಲಾ, ಕಾಲೇಜು ವಿದ್ಯಾಥರ್ಿಗಳು, ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿರು, ಆಶಾ ಕಾರ್ಯಕತರ್ೆಯರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಎನ್.ಸಿ ನಳಿನಿ, ಶಾಲಾ ಶಿಕ್ಷಣ ಇಲಾಖೆ ಉಪ ನಿದರ್ೇಶಕ ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಆಶಾ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್ಪಿ ಯಶವಂತ್ ಕುಮಾರ್, ನಗರಸಭೆ ಪೌರಾಯುಕ್ತೆ ಎಸ್.ಎನ್.ರಾಧಿಕಾ, ಬಿಇಓ ಎಸ್.ಬಿ.ಧನಂಜಯ, ಸಿಡಿಪಿಓ ಅರುಣ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದಶರ್ಿ ಎಂ.ಜೆ.ಸುಮಂತ್, ಸಿಪಿಐ ನವೀನ್ ಕುಮಾರ್ ಮತ್ತಿತರರು ಇದ್ದರು.
-
Special9 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Hassan23 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Kodagu4 hours agoಫೆ. 7ಕ್ಕೆ ಕೆಎಸ್ಆರ್ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ
-
National7 hours agoಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
-
Mysore9 hours agoಫುಟ್ಪಾತ್ ವ್ಯಾಪಾರಿಗಳಿಗೆ ನಂಜನಗೂಡು ನಗರಸಭೆ ಆಯುಕ್ತ ಎಂ. ಬಸವರಾಜು ಎಚ್ಚರಿಕೆ
-
Mysore5 hours agoಪಾರಂಪರಿಕ ತಾಣದಲ್ಲಿ ಧೂಮಪಾನ: ಬಿಗ್ಬಾಸ್ ಸ್ಪರ್ಧಿ ರಜತ್ ವಿರುದ್ಧ ದೂರು
-
Chikmagalur9 hours agoವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ
-
National3 hours agoಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಎಚ್ಡಿಕೆ ಮನವಿ: ಅಶ್ವಿನಿ ವೈಷ್ಣವ್ರಿಂದ ಸಕರಾತ್ಮಕ ಪ್ರತಿಕ್ರಿಯೆ
