Chamarajanagar
ಧರ್ಶ್ ಸ್ಕೂಲ್ ಆಫ್ ಎಕ್ಸೆಲೆನ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜನೆ
ಹನೂರು : ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಧರ್ಶ್ ಸಂಸ್ಥೆಯು ಆಯೋಜನೆ ಮಾಡಿರುವ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಶಿವರಾಜು ಹೇಳಿದರು.
ಪಟ್ಟಣದ ಹೊರವಲಯದಲ್ಲಿ ಧರ್ಶ್ ಸ್ಕೂಲ್ ಆಫ್ ಎಕ್ಸೆಲೆನ್ಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಜೊತೆಗೆ ಇಂಥ ವಸ್ತು ಪ್ರದರ್ಶನ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುತ್ತದೆ. ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಪ್ರಯೋಜನವಿಲ್ಲ. ಜ್ಞಾನಕ್ಕೂ ವಿಸ್ತರಿಸಿದಾಗ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರುತ್ತದೆ ಎಂಬುದಕ್ಕೆ ಈ ವಸ್ತು ಪ್ರದರ್ಶನ ಸಾಕ್ಷಿಯಾಗಿದೆ, ಜಾಗತೀಕರಣದ ಸಂಭ್ರಮದಲ್ಲಿ ತಂತ್ರಜ್ಞಾನದ ವಿಜಯ ಪತಾಕೆ ಹಿಡಿದು ನಿಂತವರು ನಾವು, ತಾಂತ್ರಿಕ ಶಿಕ್ಷಣದಲ್ಲಿಂದು ಜಗತ್ತು ಬೆರಗಾಗುವಂತೆ ಮುನ್ನಡೆದವರು ನಾವು, ಚಂದ್ರಯಾನ ೩ ಯಶಸ್ಸಿನಿಂದ ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ನಿತ್ಯ ಜೀವನಕ್ಕೆ ಬೇಕಾದಂತಹ ಮೂಲಭೂತ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಸಾಮಾಜಿಕ ಪರಿಸರವನ್ನು ರಕ್ಷಿಸುವ ಕಾಳಜಿಯನ್ನು ಈ ವಸ್ತು ಪ್ರದರ್ಶನ ಉಂಟುಮಾಡಿದೆ. ಪಠ್ಯ ವಸ್ತುವನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಇಂತಹ ವಸ್ತು ಪ್ರದರ್ಶನಗಳು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳ ಸಂವಹನ ಕೌಶಲ್ಯ ಭಾಷಾ ಪ್ರೌಢಿಮೆ ಇಂತಹ ವಸ್ತು ಪ್ರದರ್ಶನದ ಮೂಲಕ ಬಹಳಷ್ಟು ಗಟ್ಟಿಗೊಳ್ಳುತ್ತದೆ ಪೋಷಕರು ಮತ್ತು ಸಮಾಜದ ಸ್ಪಂದನೆ ಮೆಚ್ಚುಗೆ ಪಡೆಯಿತು.
ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರೀತಿಯಲ್ಲಿ ಪುಟಾಣಿ ಮಕ್ಕಳು ಭಗವದ್ಗೀತೆಯ ಶ್ಲೋಕಗಳನ್ನು ಹೇಳಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೆಚ್ಚುಗೆ ಪಾತ್ರವಾಯಿತು.
ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಜಲ ಚಕ್ರ, ಸ್ವಚ್ ಭಾರತ್, ಮಳೆನೀರಿನ ಕೊಯ್ಲು, ಚಂದ್ರಯಾನ, ಜ್ವಲಾಮುಖಿ, ಆಹಾರ ಪಿರಮಿಡ್ ಜಲ, ವಾಯು, ಶಬ್ದ ಮಾಲಿನ್ಯ, ಸೇವ್ ಅರ್ಥ್. ಸಮುದಾಯ (ಗ್ರಾಮೀಣ, ನಗರ, ಅರಣ್ಯ ). ಪ್ರಾಣಿ ಆವಾಸಗಳು ಇನ್ನು ಹತ್ತು ಹಲವಾರು ವಸ್ತು ಪ್ರದರ್ಶನ ಮತ್ತು ಪ್ರಯೋಗಗಳನ್ನು ಪ್ರದರ್ಶನ ಮಾಡಲಾಗಿತ್ತು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್, ಜಿಲ್ಲಾ ಕರ್ನಾಟಕ ಸರ್ಕಾರ ಸಹ ಶಿಕ್ಷಕರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಇಸಿಓಗಳಾದ ಚಿನ್ನಪ್ಪಯ್ಯ, ಕಿರಣ್, ಕಂದವೇಲು, ಸಿ.ಆರ್.ಪಿ ದೇವರಾಜು, ಶಾಲೆಯ ಮುಖ್ಯಸ್ಥರಾದ ವೆಂಕಟರಣನಾಯ್ಡು, ಶ್ರೀನಿವಾಸ್, ಚಂದನ, ಶಿಕ್ಷಕರಾದ ಶ್ರೀಧರ್, ಸಹ ಶಿಕ್ಷಕರುಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

Chamarajanagar
ಹುಲಿ ಸೆರೆಗೆ ನಾಲ್ಕು ವಿಶೇಷ ತಂಡಗಳ ರಚನೆ
ಚಾಮರಾಜನಗರ: ತಾಲೂಕಿನ ನಂಜದೇವನಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡಿರುವ ಐದು ಹುಲಿಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ನಾಲ್ಕು ವಿಶೇಷ ತಂಡಗಳನ್ನು ರಚಿಸಿದೆ.
ಹುಲಿಗಳ ಇರುವಿಕೆಯನ್ನು ಪತ್ತೆಹಚ್ಚಲು ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದ್ದು, ವಿಭಾಗದ ವಿವಿಧ ವಲಯಗಳಿಂದ ಅರಣ್ಯ ಸಿಬ್ಬಂದಿಗಳನ್ನು ಕರೆಸಿಕೊಂಡು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ತುಮಕೂರು ಕೇಜ್ ಮತ್ತು ಹುಲಿ ಬೋನುಗಳನ್ನಿಟ್ಟು ಸಿಬ್ಬಂದಿಗಳ ನಾಲ್ಕು ತಂಡಗಳನ್ನು ರಚಿಸಿ ಪ್ರತೀ ತಂಡಕ್ಕೆ, ಒಂದು ಡ್ರೋನ್ ವಿತರಿಸಿ ಹುಲಿ ಕಂಡುಬಂದ ಪ್ರದೇಶದ ಸುತ್ತಮುತ್ತಲೂ ನಿಗಾವಹಿಸಲಾಗಿದೆ.
ಎರಡು ಸಾಕಾನೆಗಳನ್ನು ಬಳಸಿಕೊಂಡು ಹುಲಿಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

Chamarajanagar
ಪ್ರೋತ್ಸಾಹಧನಕ್ಕೆ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ (ಮಂಗಳಮುಖಿ) ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನಿಗಮದಿಂದ ನೀಡಲಾಗುವ 30,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಕಡ್ಡಾಯವಾಗಿ ಖಾತೆ ಹೊಂದಿದ್ದು, ಬ್ಯಾಂಕ್ ಖಾತೆಯ ಪ್ರತಿಯನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಲಿಂಕೇಜ್ ಆಗಿರಬೇಕು. ಅರ್ಜಿದಾರರು ಯಾವುದೇ ಆರ್ಥಿಕ ಸಂಸ್ಥೆ/ಬ್ಯಾಂಕುಗಳಲ್ಲಿ ಸುಸ್ತಿದಾರರಾಗಿರಬಾರದು ಎಂಬ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು.

ಆಸಕ್ತರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ 2026ರ ಜನವರಿ 15 ರೊಳಗೆ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಆಯುರ್ವೇದ ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ: ಜಿಲ್ಲೆಯ ಆಯುಷ್ ಇಲಾಖೆ ವ್ಯಾಪ್ತಿಗೆ ಬರುವ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಚಾಮರಾಜನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಆಯುರ್ವೇದ ತಜ್ಞ ವೈದ್ಯರ ಒಂದು ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮೀಸಲಾತಿ (ಪರಿಶಿಷ್ಟ ಜಾತಿ) ಮೀಸಲಾತಿ (ಸಾಮಾನ್ಯ) ವರ್ಗದ ಅಭ್ಯರ್ಥಿಗಳು ಆಯುರ್ವೇದದಲ್ಲಿ ಸ್ನಾತ್ತಕೋತ್ತರ (ಎಂ.ಎಸ್ ಇನ್ ಶೈಲತಂತ್ರ ಅಥವಾ ಎಂ.ಡಿ ಇನ್ ಪಂಚಕರ್ಮ/ಕಾಯಚಿಕಿಸ್ಟ ವಿಷಯದಲ್ಲಿ ಸ್ನಾತಕೋತ್ತರ) ಪದವಿ ಹೊಂದಿರಬೇಕು. ಅಭ್ಯರ್ಥಿಗಳು ಗರಿಷ್ಠ 45 ವರ್ಷದವರಾಗಿರಬೇಕು.

ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ (ಕೊಠಡಿ ಸಂ 304) ವಿತರಿಸಲಾಗುವುದು. ಅರ್ಜಿ ಸಲ್ಲಿಸಲು 2026ರ ಜನವರಿ 6 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
-
Kodagu18 hours agoಹೆಚ್.ಎ.ನಗ್ಮಾಭಾನು ಅವರಿಗೆ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ
-
Hassan18 hours agoಹಳ್ಳಿಮೈಸೂರು ಹೋಬಳಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಗ್ರಾಮಸ್ಥರಿಂದ ಡಿಸಿಗೆ ಮನವಿ
-
Kodagu21 hours agoಜ್ಯೋತಿ ಪ್ರಧಾನ ಕಾರ್ಯಕ್ರಮ
-
Mysore16 hours agoದೇವರಸನಹಳ್ಳಿ ಗ್ರಾಂ.ಪಂ.ನಲ್ಲಿ ವ್ಯಾಪಕ ಭ್ರಷ್ಟಾಚಾರ : ತನಿಖೆ ನಡೆಸುವಂತೆ ಮಾಜಿ ಗ್ರಾಂ.ಪಂ.ಸದಸ್ಯ ಮಹದೇವು ಆಗ್ರಹ
-
Mysore20 hours agoನಾಲ್ಕನೇ ವರ್ಷದ ಅದ್ದೂರಿ ಹನುಮ ಜಯಂತಿ
-
Hassan21 hours agoಬಂದೂಕು ಪರವಾನಗಿ ನವೀಕರಣ ವಿಳಂಬ: ಜಿಲ್ಲಾಡಳಿತ ವಿರುದ್ಧ ರೈತರ ಆಕ್ರೋಶ
-
Mysore15 hours agoತಿ.ನರಸೀಪುರ ಗುಂಜಾ ನರಸಿಂಹಸ್ವಾಮಿ ಹುಂಡಿ ಎಣಿಕೆ
-
Mysore20 hours agoಸಮಗ್ರ ಬೇಸಾಯ ಪದ್ದತಿ ಅಳವಡಿಸಿಕೊಳ್ಳಿ: ರೈತ ದಿನಾಚರಣೆಯಲ್ಲಿ ಕೃಷಿ ಎಡಿ ರೂಪ ಸಲಹೆ
