Mandya
ದೊಡ್ಡರಸಿನಕೆರೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತದಾನ
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಗ್ರಾಮದ ಮತಗಟ್ಟೆ ಸಂಖ್ಯೆ 164 ರಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತದಾನ ನಡೆಸಿದರು.
ಬಳಿಕ ಮಾತನಾಡಿದ ಆವರು, ವಿಕಸಿತ ಮಂಡ್ಯ ಹಾಗೂ ವಿಕಸಿತ ಭಾರತಕ್ಕಾಗಿ ಇಂದು ಮತ ಚಲಾಯಿಸಿದ್ದೇನೆ.
ನಾನು ನನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ನಮ್ಮ ದೇಶದ ಉತ್ತಮ ನಾಳೆಗಳಿಗಾಗಿ ನಮ್ಮ ಹಕ್ಕನ್ನು ಎಲ್ಲರುಊ ಚಲಾಯಿಸಬೇಕು. ನಿಮ್ಮ ಹತ್ತಿರದ ಮತಗಟ್ಟೆಯಲ್ಲಿ ನೀವೂ ಮತ ನೀಡಿ.
ಮತ್ತೊಮ್ಮೆಮೋದಿಸರ್ಕಾರ ಆರಿಸಿ ಬಲಿಷ್ಠ ಭಾರತವನ್ನು ಕಟ್ಟೋಣ ಎಂದು ಕರೆ ನೀಡಿದರು.
Mandya
ಮಂಡ್ಯ ಪೋಲೀಸರಿಂದ 17 ಕೆಜಿ ಮಾದಕ ವಸ್ತು ನಾಶ
ಮಂಡ್ಯ: ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಎನ್.ಡಿ.ಪಿ.ಎಸ್ ಕಾಯ್ದೆಯಡಿ 2024 ಮತ್ತು 2025 ನೇ ಇಸವಿಯ ಈವರೆಗೆ ವರದಿಯಾಗಿದ್ದ 19 ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡು ಸುಮಾರು 3,60,460 ರೂ. ಮೌಲ್ಯದ 17 ಕೆ.ಜಿ 613 ಗ್ರಾಂ. ಗಾಂಜಾವನ್ನು ನಾಶಪಡಿಸಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು Drug Disposal Committee ವತಿಯಿಂದ ನಾಶಪಡಿಸಿದ್ದಾರೆ.
ಮಂಡ್ಯ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿ ಮುಖಾಂತರ ನಾಶಪಡಿಸಲು ನ್ಯಾಯಾಲಯವು ಆದೇಶಿಸಿ ಸಮಿತಿಗೆ ನೀಡಿತ್ತು. ಅದರಂತೆ ಒಟ್ಟು 17 ಕೆ.ಜಿ 613 ಗ್ರಾಂ ಮಾದಕ ವಸ್ತು(ಗಾಂಜಾ)ವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು Drug Disposal Committee ಮಂಡ್ಯ ಜಿಲ್ಲೆ ಅಧ್ಯಕ್ಷ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ನಿಯಮಾನುಸಾರ ಬುಧವಾರ (ಜ.22) ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಗುಚ್ಚೇನಹಳ್ಳಿ ಗ್ರಾಮದ M/S GIPS Bio-Tech Incinerator waste management ನಲ್ಲಿ ನಾಶಪಡಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Mandya
ಜ. 24 ರಿಂದ 28 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ : ಶೇಖ್ ತನ್ವೀರ್ ಅಸೀಫ್
ಮಂಡ್ಯ : ಜಿಲ್ಲಾ ಪಂಚಾಯತ್, ತೋಟಗಾರಿಕಾ ಸಂಘ, ತೋಟಗಾರಿಕೆ ಇಲಾಖೆ ಇವರ ಸಹಯೋಗದಲ್ಲಿ “ಪ್ರತಿ ತುತ್ತಿಗೂ ರೈತರನ್ನು ಸ್ಮರಿಸೋಣ” ಎಂಬ ಶೀರ್ಷಿಕೆಯಡಿ ಜನವರಿ 24 ರಿಂದ 28 ರವರೆಗೆ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ-2025 ಉದ್ಘಾಟನಾ ಕರರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತಿಳಿಸಿದರು.
ತೊಟಗಾರಿಕೆ ಇಲಾಖೆ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ದಿನಗಳ ಕಾಲ ನಡೆಯುವ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ರೈತರು, ಸಾರ್ವಜನಿಕರು, ನಾಗರೀಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಫಲಪುಷ್ಪ ಪ್ರದರ್ಶನ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ತೋಟಗಾರಿಕೆ ಕಚೇರಿ ಆವರಣ ಹಾಗೂ ಕಾವೇರಿ ಉದ್ಯಾನವನದಲ್ಲಿ ಮನಸೂರೆಗೊಳ್ಳುವ ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಫಲಪುಷ್ಪ ಪ್ರದರ್ಶನದಲ್ಲಿ ನೀಡಲಾಗುವುದು ಎಂದರು.
ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತ ಎಂದರು.
ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರಿ ಕೆ.ಎನ್., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಬಿ.ಎನ್.ಸುವೇದ, ಜಿಲ್ಲಾ ತೋಟಗಾರಿಕೆ ಸಂಘದ ಜಂಟಿ ಕಾರ್ಯದರ್ಶಿ ಎಸ್.ಪಿ.ಶ್ರೀಧರ್ ಹಾಗೂ ನಿರ್ದೇಶಕರಾದ ಎಂ.ಆರ್.ಅರವಿಂದ್ ಉಪಸ್ಥಿತರಿದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.
ಜಿಲ್ಲಾಧಿಕಾರಿಗಳಿಗೆ 2024- 25 ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆಯಲಿದೆ.
ಈ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International12 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan17 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ